Homeಮುಖಪುಟನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

ನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

- Advertisement -
- Advertisement -

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಸುಪ್ರೀಂಕೋರ್ಟ್‍ನ ಹಿರಿಯ ವಕೀಲ ಕಪಿಲ್ ಸಿಬಲ್ ಇಂದು ಪತ್ರಿಕಾಗೋಷ್ಠಿಯಲ್ಲಿ ಕುಟುಕು ಕಾರ್ಯಾಚರಣೆಯಲ್ಲಿ ಬಯಲಾದ ಭಾರೀ ಬೃಹತ್ ಎನ್ನಬಹುದಾದ ಹಗರಣವೊಂದರ ವಿವರಗಳನ್ನು ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹಲವು ವಿಡಿಯೋ ತುಣುಕುಗಳನ್ನೂ ಪ್ರದರ್ಶಿಸಿದ್ದಲ್ಲದೇ, ಸುದೀರ್ಘವಾದ ವಿಡಿಯೋವನ್ನೂ ಪತ್ರಕರ್ತರ ಮುಂದಿಟ್ಟಿದ್ದಾರೆ. ಪಿಟಿಐ ಸುದ್ದಿ ಸಂಸ್ಥೆಯಿಂದ ಪಡೆದ ಮಾಹಿತಿಯನ್ನು ಆಧಾರವಾಗಿಟ್ಟುಕೊಂಡು ಹಲವು ಸುದ್ದಿ ಸಂಸ್ಥೆಗಳು ಈ ಸುದ್ದಿಯನ್ನು ದೇಶದ ಮುಂದಿಟ್ಟಿದ್ದಾರೆ.

ನೋಟು ರದ್ದತಿಯ ಸಂದರ್ಭದಲ್ಲಿ ಸರ್ಕಾರೀ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು ಮತ್ತು ಬಿಜೆಪಿಯ ನಾಯಕರ ಒಂದು ಜಾಲ ಕಾನೂನು ಬಾಹಿರವಾಗಿ ನೋಟುಗಳನ್ನು ಬದಲಿಸಿಕೊಂಡರೆಂದು ಅದು ಹೇಳುತ್ತದೆ. ಕ್ಯಾಬಿನೆಟ್ ಸಚಿವಾಲಯದ ಸಿಬ್ಬಂದಿಯೆಂದು ಹೇಳಲಾದ ರಾಹುಲ್ ರಾತ್ರೇಕರ್ ಎಂಬಾತನ ಪ್ರಕಾರ ಬಿಜೆಪಿ ಅಧ್ಯಕ್ಷ ಅಮಿತ್‍ಷಾ ನೇತೃತ್ವದ ತಂಡವು 35-40% ಕಮೀಷನ್ ಪಡೆದುಕೊಂಡು ಇವೆಲ್ಲವನ್ನೂ ಮಾಡಿದೆ. ವಿವಿಧ ಮಂತ್ರಿಗಳು ಮತ್ತು ಉದ್ದಿಮೆಪತಿಗಳ ಭಾರೀ ಮೊತ್ತದ ಹಣವನ್ನು ವಿಮಾನಗಳಲ್ಲಿ ಹಿಂಡನ್ ಏರ್‍ಬೇಸ್‍ಗೆ ತರಲಾಯಿತು ಮತ್ತು ಅಲ್ಲಿಂದ ರಿಸರ್ವ್ ಬ್ಯಾಂಕ್‍ಗೆ ಕೊಂಡೊಯ್ಯಲಾಯಿತು, ಸುಮಾರು 20,000 ಕೋಟಿ ರೂ.ಗಳಷ್ಟು ವಹಿವಾಟನ್ನು ತಾನೇ ಖುದ್ದು ನೋಡಿದ್ದಾಗಿ ಆತ ಹೇಳುತ್ತಾನೆ.

ಕಪಿಲ್ ಸಿಬಲ್ ಅವರು ಹೇಳುವಂತೆ ‘ಆರ್‍ಬಿಐನಲ್ಲಿ ವಹಿವಾಟನ್ನು ಪುನರಪಿ ಮಾಡಲು ಜಿಯೋದಿಂದ ಪಡೆದುಕೊಂಡ ಡಾಟಾಬೇಸ್‍ಅನ್ನು ದುರ್ಬಳಕೆ ಮಾಡಿಕೊಳ್ಳಲಾಯಿತು ಮತ್ತು -ಹಿಂದೆಯೂ ಸುದ್ದಿಯಾಗಿರುವ -ಊರ್ಜಿತ್ ಪಟೇಲರ ಸಹಿ ಇದ್ದ 2000 ರೂ.ಗಳ ನೋಟುಗಳನ್ನು 6 ತಿಂಗಳ ಹಿಂದೆಯೇ ಮುದ್ರಿಸಲಾಗಿತ್ತೆಂದು ರಾಹುಲ್ ರಾತ್ರೇಕರ್ ವಿವರಿಸುತ್ತಾನೆ’.

ಇಂಡಸ್‍ಇಂಡ್ ಬ್ಯಾಂಕ್‍ನ ಅಧಿಕಾರ ಸಂಜಯ್ ಚನ್ನೇ ಎಂಬಾತನೆಂದು ಹೇಳಲಾಗುವ ವ್ಯಕ್ತಿ ಇರುವ ಇನ್ನೊಂದಷ್ಟು ವಿಡಿಯೋಗಳಲ್ಲಿ ಮತ್ತಷ್ಟು ಘಾತುಕವಾದ ಸಂಗತಿಗಳಿವೆ. ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದ ಮುಂಬೈ ಮತ್ತು ಗುಜರಾತ್‍ನ ಕೆಲವು ಗೋದಾಮುಗಳ ವಿಚಾರ ಅಲ್ಲಿ ಬರುತ್ತದೆ. ಹಳೆಯ ನೋಟುಗಳು ಮತ್ತು ಹೊಸದಾಗಿ ಮುದ್ರಿತವಾದ 2,000 ರೂ.ಗಳಿಂದ ತುಂಬಿರುವ ದೊಡ್ಡ ದೊಡ್ಡ ಬಾಕ್ಸ್‍ಗಳನ್ನು ಆತ ತೋರಿಸುತ್ತಾನೆ. ಆತ ಜಯ್‍ಷಾ (ಅಮಿತ್‍ಷಾ ಮಗ), ನಿತಿನ್ ಪಟೇಲ್ (ಗುಜರಾತಿನ ಉಪಮುಖ್ಯಮಂತ್ರಿ) ರಿಂದ ತಾನು 100 ಕೋಟಿಗಳಷ್ಟು ಹಳೆಯ ನೋಟುಗಳನ್ನು ಪಡೆದು, ನಂತರ ಆರ್‍ಟಿಜಿಎಸ್ ಮೂಲಕ ಹಿಂತಿರುಗಿಸಿದ್ದಾಗಿ ಹೇಳುತ್ತಾನೆ.

ಕಪಿಲ್ ಸಿಬಲ್ ಪ್ರಕಾರ ‘ನೋಟು ರದ್ದತಿ ಎಂಬುದು ಭಾರತದ ಇತಿಹಾದ ಅತ್ಯಂತ ದೊಡ್ಡ ಹಗರಣ. ಆದರೆ, ನಮ್ಮ ತನಿಖಾ ಸಂಸ್ಥೆಗಳು ವಿರೋಧ ಪಕ್ಷದವರ ಮೇಲೆ ದಾಳಿ ನಡೆಸುತ್ತವೆ. ಅಧಿಕಾರದಲ್ಲಿರುವವರನ್ನಲ್ಲ’.
ನೋಟು ರದ್ದತಿಯ ಕುರಿತು ಇಂತಹ ಹಲವು ಆರೋಪಗಳು ಕೇಳಿ ಬಂದವಾದರೂ, ನಿರ್ದಿಷ್ಟವಾದ ‘ಪುರಾವೆ’ಗಳು ಇರಲಿಲ್ಲ. ಈಗ ಒಂದು ಕುಟುಕು ಕಾರ್ಯಾಚರಣೆಯ ವಿಡಿಯೋ ಹೊರಬಂದಿದೆ. ಇದರ ಕುರಿತು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆಯಂತೂ ಆಗಲೇಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...