Homeಮುಖಪುಟನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

ನೋಟು ರದ್ದತಿಯ ಸಂದರ್ಭದಲ್ಲಿ 35-40% ಕಮೀಷನ್‍ ಪಡೆದ ಅಮಿತ್‍ಷಾ?

- Advertisement -
- Advertisement -

ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಮತ್ತು ಸುಪ್ರೀಂಕೋರ್ಟ್‍ನ ಹಿರಿಯ ವಕೀಲ ಕಪಿಲ್ ಸಿಬಲ್ ಇಂದು ಪತ್ರಿಕಾಗೋಷ್ಠಿಯಲ್ಲಿ ಕುಟುಕು ಕಾರ್ಯಾಚರಣೆಯಲ್ಲಿ ಬಯಲಾದ ಭಾರೀ ಬೃಹತ್ ಎನ್ನಬಹುದಾದ ಹಗರಣವೊಂದರ ವಿವರಗಳನ್ನು ನೀಡಿದ್ದಾರೆ. ಇದಕ್ಕೆ ಸಂಬಂಧಿಸಿದಂತೆ ಹಲವು ವಿಡಿಯೋ ತುಣುಕುಗಳನ್ನೂ ಪ್ರದರ್ಶಿಸಿದ್ದಲ್ಲದೇ, ಸುದೀರ್ಘವಾದ ವಿಡಿಯೋವನ್ನೂ ಪತ್ರಕರ್ತರ ಮುಂದಿಟ್ಟಿದ್ದಾರೆ. ಪಿಟಿಐ ಸುದ್ದಿ ಸಂಸ್ಥೆಯಿಂದ ಪಡೆದ ಮಾಹಿತಿಯನ್ನು ಆಧಾರವಾಗಿಟ್ಟುಕೊಂಡು ಹಲವು ಸುದ್ದಿ ಸಂಸ್ಥೆಗಳು ಈ ಸುದ್ದಿಯನ್ನು ದೇಶದ ಮುಂದಿಟ್ಟಿದ್ದಾರೆ.

ನೋಟು ರದ್ದತಿಯ ಸಂದರ್ಭದಲ್ಲಿ ಸರ್ಕಾರೀ ಅಧಿಕಾರಿಗಳು, ಬ್ಯಾಂಕ್ ಅಧಿಕಾರಿಗಳು ಮತ್ತು ಬಿಜೆಪಿಯ ನಾಯಕರ ಒಂದು ಜಾಲ ಕಾನೂನು ಬಾಹಿರವಾಗಿ ನೋಟುಗಳನ್ನು ಬದಲಿಸಿಕೊಂಡರೆಂದು ಅದು ಹೇಳುತ್ತದೆ. ಕ್ಯಾಬಿನೆಟ್ ಸಚಿವಾಲಯದ ಸಿಬ್ಬಂದಿಯೆಂದು ಹೇಳಲಾದ ರಾಹುಲ್ ರಾತ್ರೇಕರ್ ಎಂಬಾತನ ಪ್ರಕಾರ ಬಿಜೆಪಿ ಅಧ್ಯಕ್ಷ ಅಮಿತ್‍ಷಾ ನೇತೃತ್ವದ ತಂಡವು 35-40% ಕಮೀಷನ್ ಪಡೆದುಕೊಂಡು ಇವೆಲ್ಲವನ್ನೂ ಮಾಡಿದೆ. ವಿವಿಧ ಮಂತ್ರಿಗಳು ಮತ್ತು ಉದ್ದಿಮೆಪತಿಗಳ ಭಾರೀ ಮೊತ್ತದ ಹಣವನ್ನು ವಿಮಾನಗಳಲ್ಲಿ ಹಿಂಡನ್ ಏರ್‍ಬೇಸ್‍ಗೆ ತರಲಾಯಿತು ಮತ್ತು ಅಲ್ಲಿಂದ ರಿಸರ್ವ್ ಬ್ಯಾಂಕ್‍ಗೆ ಕೊಂಡೊಯ್ಯಲಾಯಿತು, ಸುಮಾರು 20,000 ಕೋಟಿ ರೂ.ಗಳಷ್ಟು ವಹಿವಾಟನ್ನು ತಾನೇ ಖುದ್ದು ನೋಡಿದ್ದಾಗಿ ಆತ ಹೇಳುತ್ತಾನೆ.

ಕಪಿಲ್ ಸಿಬಲ್ ಅವರು ಹೇಳುವಂತೆ ‘ಆರ್‍ಬಿಐನಲ್ಲಿ ವಹಿವಾಟನ್ನು ಪುನರಪಿ ಮಾಡಲು ಜಿಯೋದಿಂದ ಪಡೆದುಕೊಂಡ ಡಾಟಾಬೇಸ್‍ಅನ್ನು ದುರ್ಬಳಕೆ ಮಾಡಿಕೊಳ್ಳಲಾಯಿತು ಮತ್ತು -ಹಿಂದೆಯೂ ಸುದ್ದಿಯಾಗಿರುವ -ಊರ್ಜಿತ್ ಪಟೇಲರ ಸಹಿ ಇದ್ದ 2000 ರೂ.ಗಳ ನೋಟುಗಳನ್ನು 6 ತಿಂಗಳ ಹಿಂದೆಯೇ ಮುದ್ರಿಸಲಾಗಿತ್ತೆಂದು ರಾಹುಲ್ ರಾತ್ರೇಕರ್ ವಿವರಿಸುತ್ತಾನೆ’.

ಇಂಡಸ್‍ಇಂಡ್ ಬ್ಯಾಂಕ್‍ನ ಅಧಿಕಾರ ಸಂಜಯ್ ಚನ್ನೇ ಎಂಬಾತನೆಂದು ಹೇಳಲಾಗುವ ವ್ಯಕ್ತಿ ಇರುವ ಇನ್ನೊಂದಷ್ಟು ವಿಡಿಯೋಗಳಲ್ಲಿ ಮತ್ತಷ್ಟು ಘಾತುಕವಾದ ಸಂಗತಿಗಳಿವೆ. ಸಿಸಿಟಿವಿ ಕ್ಯಾಮೆರಾಗಳೂ ಇಲ್ಲದ ಮುಂಬೈ ಮತ್ತು ಗುಜರಾತ್‍ನ ಕೆಲವು ಗೋದಾಮುಗಳ ವಿಚಾರ ಅಲ್ಲಿ ಬರುತ್ತದೆ. ಹಳೆಯ ನೋಟುಗಳು ಮತ್ತು ಹೊಸದಾಗಿ ಮುದ್ರಿತವಾದ 2,000 ರೂ.ಗಳಿಂದ ತುಂಬಿರುವ ದೊಡ್ಡ ದೊಡ್ಡ ಬಾಕ್ಸ್‍ಗಳನ್ನು ಆತ ತೋರಿಸುತ್ತಾನೆ. ಆತ ಜಯ್‍ಷಾ (ಅಮಿತ್‍ಷಾ ಮಗ), ನಿತಿನ್ ಪಟೇಲ್ (ಗುಜರಾತಿನ ಉಪಮುಖ್ಯಮಂತ್ರಿ) ರಿಂದ ತಾನು 100 ಕೋಟಿಗಳಷ್ಟು ಹಳೆಯ ನೋಟುಗಳನ್ನು ಪಡೆದು, ನಂತರ ಆರ್‍ಟಿಜಿಎಸ್ ಮೂಲಕ ಹಿಂತಿರುಗಿಸಿದ್ದಾಗಿ ಹೇಳುತ್ತಾನೆ.

ಕಪಿಲ್ ಸಿಬಲ್ ಪ್ರಕಾರ ‘ನೋಟು ರದ್ದತಿ ಎಂಬುದು ಭಾರತದ ಇತಿಹಾದ ಅತ್ಯಂತ ದೊಡ್ಡ ಹಗರಣ. ಆದರೆ, ನಮ್ಮ ತನಿಖಾ ಸಂಸ್ಥೆಗಳು ವಿರೋಧ ಪಕ್ಷದವರ ಮೇಲೆ ದಾಳಿ ನಡೆಸುತ್ತವೆ. ಅಧಿಕಾರದಲ್ಲಿರುವವರನ್ನಲ್ಲ’.
ನೋಟು ರದ್ದತಿಯ ಕುರಿತು ಇಂತಹ ಹಲವು ಆರೋಪಗಳು ಕೇಳಿ ಬಂದವಾದರೂ, ನಿರ್ದಿಷ್ಟವಾದ ‘ಪುರಾವೆ’ಗಳು ಇರಲಿಲ್ಲ. ಈಗ ಒಂದು ಕುಟುಕು ಕಾರ್ಯಾಚರಣೆಯ ವಿಡಿಯೋ ಹೊರಬಂದಿದೆ. ಇದರ ಕುರಿತು ಉನ್ನತ ಮಟ್ಟದ ನಿಷ್ಪಕ್ಷಪಾತ ತನಿಖೆಯಂತೂ ಆಗಲೇಬೇಕಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...