Homeಮುಖಪುಟಬೆಚ್ಚಿಬಿದ್ದ ವಾಟ್ಸಾಪ್: ಅಪ್‌ಡೇಟ್ ಮಾಡುವ ದಿನಾಂಕ ಮುಂದೂಡಿಕೆ

ಬೆಚ್ಚಿಬಿದ್ದ ವಾಟ್ಸಾಪ್: ಅಪ್‌ಡೇಟ್ ಮಾಡುವ ದಿನಾಂಕ ಮುಂದೂಡಿಕೆ

ನ್ನ ಗೌಪ್ಯತಾ ನೀತಿಗಳಲ್ಲಿ ತಂದ ಬದಲಾವಣೆಗಳಲ್ಲಿ ಕೆಲವನ್ನು ತಿದ್ದುಪಡಿ ಮಾಡುತ್ತಿದ್ದೇವೆ. ನಿಮ್ಮ ಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತವಾಗಿರಲಿವೆ, ಎಂಡ್ ಟು ಎಂಡ್ encryption 100% ಮುಂದುವರೆಯಲಿದೆ- ವಾಟ್ಸಾಪ್

- Advertisement -
- Advertisement -

ಫೇಸ್‌ಬುಕ್ ಮಾಲಿಕತ್ವದ ವಾಟ್ಸಾಪ್ ಬಳಕೆದಾರರ ವೈಯಕ್ತಿಕ ಮಾಹಿತಿಗಳನ್ನು ಕಲೆ ಹಾಕುತ್ತದೆ/ಮಾರುತ್ತದೆ, ಚಾಟ್‌ಗಳನ್ನು ನೋಡುತ್ತದೆ ಎಂಬ ಟೀಕೆಗಳ ವ್ಯಕ್ತವಾದ ಹಿನ್ನೆಲೆಯಲ್ಲಿ ಇದರ ಅಪ್‌ಡೇಟ್ ದಿನಾಂಕವನ್ನು ಮುಂದೂಡಿದೆ. ಈ ಹಿಂದೆ ಇದಕ್ಕಾಗಿ 2021ರ ಫೆಬ್ರವರಿ 8ರವರೆಗೆ ಗಡುವು ನೀಡಿದ್ದು, ಬಳಕೆದಾರರು ಈ ಷರತ್ತುಗಳನ್ನು ಒಪ್ಪಿಕೊಳ್ಳಲೇಬೇಕಿದೆ. ಇಲ್ಲದಿದ್ದಲ್ಲಿ ಅಂತಹ ವಾಟ್ಸಾಪ್ ಖಾತೆಗಳನ್ನು ಡಿಲೀಟ್ ಮಾಡುವುದಾಗಿ ಅದು ಎಚ್ಚರಿಸಿತ್ತು.

ವಾಟ್ಸ್ಆ್ಯಪ್ ಹೊಸ ಅಪ್‌ಡೇಟ್‌ನಲ್ಲಿ ಫೇಸ್‌ಬುಕ್ ಜತೆಗೆ ಬಳಕೆದಾರರ ದತ್ತಾಂಶವನ್ನು ಹಂಚಿಕೊಳ್ಳುತ್ತದೆ ಎನ್ನಲಾಗಿತ್ತು. ಇದರಿಂದ ಕೆರಳಿದ ಕೋಟ್ಯಾಂತರ ಬಳಕೆದಾರರು ವಾಟ್ಸಾಪ್ ತ್ಯಜಿಸಿ ಸಿಗ್ನಲ್ ಎಂಬ ಸುರಕ್ಷತಾ ಆಪ್‌ಗೆ ಸೇರಿಕೊಂಡಿದ್ದರು. ಹಾಗಾಗಿ ಭಾರತ ಸೇರಿದಂತೆ ಆರು ರಾಷ್ಟ್ರಗಳಲ್ಲಿ ಅತಿ ಹೆಚ್ಚು ಡೌನ್‌ಲೋಡ್‌ ಆಪ್‌ಗಳ ಪಟ್ಟಿಯಲ್ಲಿ ಸಿಗ್ನಲ್ ನಂಬರ್‌ ಒನ್ ಸ್ಥಾನಕ್ಕೇರಿತ್ತು.

ಇದನ್ನೂ ಓದಿ: ಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತ: ಸ್ಪಷ್ಟನೆ ನೀಡಿದ ವಾಟ್ಸಾಪ್!

ವಾಟ್ಸ್ಆ್ಯಪ್ ಹೊಸ ನೀತಿ ವಿವಾದಕ್ಕೆ ಕಾರಣವಾಗುತ್ತಿದ್ದಂತೆಯೇ, ಹೇಳಿಕೆ ಬಿಡುಗಡೆ ಮಾಡಿದ್ದ ವಾಟ್ಸಾಪ್, “ತನ್ನ ಗೌಪ್ಯತಾ ನೀತಿಗಳಲ್ಲಿ ತಂದ ಬದಲಾವಣೆಗಳಲ್ಲಿ ಕೆಲವನ್ನು ತಿದ್ದುಪಡಿ ಮಾಡುತ್ತಿದ್ದೇವೆ. ನಿಮ್ಮ ಸ್ನೇಹಿತರು-ಸಂಬಂಧಿಕರೊಂದಿಗಿನ ಚಾಟ್‌ಗಳು ಸುರಕ್ಷಿತವಾಗಿರಲಿವೆ, ಎಂಡ್ ಟು ಎಂಡ್ encryption 100% ಮುಂದುವರೆಯಲಿದೆ” ಎಂದು ಟ್ವೀಟ್ ಮಾಡಿತ್ತು.

ಫೆಬ್ರವರಿಯಿಂದ ಹೊಸ ಅಪ್‌ಡೇಟ್ ಮಾಡಿಕೊಳ್ಳಬೇಕು ಎಂದು‌ ಘೋಷಿಸಿದ್ದ ವಾಟ್ಸಾಪ್, ಈಗ ಮೇ ತಿಂಗಳವರೆಗೆ ಅಪ್‌ಡೇಟ್‌ ಪ್ರಕ್ರಿಯೆಯನ್ನು ಮುಂದೂಡುವುದಾಗಿ ಶುಕ್ರವಾರ ಹೇಳಿದೆ. “ಬಳಕೆದಾರರ ವ್ಯವಹಾರಗಳಿಗೆ ಸಂಬಂಧಿಸಿದ ಸಂದೇಶ ಕಳುಹಿಸಲು ಹೊಸ ಅಪ್‌ಡೇಟ್‌ ಅವಕಾಶ ನೀಡಲಿದೆ. ಇದು ವೈಯಕ್ತಿಕ ಸಂವಹನದ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ. ಎಂಡ್ ಟು ಎಂಡ್ encryption ಮುಂದುವರಿಯುತ್ತದೆ. ಹೊಸ ಅಪ್‌ಡೇಟ್‌ ಮೂಲಕ ದತ್ತಾಂಶಗಳನ್ನು ಫೇಸ್‌ಬುಕ್‌ನೊಂದಿಗೆ ಹಂಚಿಕೊಳ್ಳುವುದಿಲ್ಲ” ಎಂದು ವಾಟ್ಸಾಪ್ ಮತ್ತೊಮ್ಮೆ ಹೇಳಿಕೆ ನೀಡಿದೆ.

ಇದನ್ನೂ ಓದಿ: ವಾಟ್ಸಾಪ್ ಹಿಂದಿಕ್ಕಿ ನಂ.1 ಸ್ಥಾನಕ್ಕೇರಿದ ಸಿಗ್ನಲ್: ಭಾರತ ಸೇರಿ 7 ದೇಶಗಳಲ್ಲಿ ಸಿಗ್ನಲ್ ಪಾರುಪತ್ಯ ಶುರು

“ಪ್ರತಿಯೊಬ್ಬರೂ ಇಂದು ವಾಟ್ಸಾಪ್‌ನಲ್ಲಿ ವ್ಯವಹಾರವನ್ನು ಹೊಂದಿಲ್ಲ. ಆದರೆ, ಭವಿಷ್ಯದಲ್ಲಿ ಹೆಚ್ಚಿನ ಜನರು ವಾಟ್ಸಾಪ್‌ ಮೂಲಕ ವ್ಯವಹರಿಸಲು ಮುಂದಾಗಲಿದ್ದಾರೆ ಎಂಬುದಾಗಿ ನಾವು ಭಾವಿಸುತ್ತೇವೆ” ಎಂದು ವಾಟ್ಸಾಪ್ ಅಭಿಪ್ರಾಯ ವ್ಯಕ್ತಪಡಿಸಿದೆ.

ಒಂದು ವಾರದ ಹಿಂದೆ ವಾಟ್ಸಾಪ್ ಆಂಡ್ರಾಯ್ಡ್ ಮತ್ತು ಐಫೋನ್ ಬಳಕೆದಾರರಿಗೆ ನೋಟಿಸ್ ಮೂಲಕ ತನ್ನ ಗೌಪ್ಯತಾ ನೀತಿಗಳನ್ನು ಬದಲಿಸುತ್ತಿರುವುದಾಗಿ ಮಾಹಿತಿ ನೀಡಿತ್ತು. “ಪ್ರಸ್ತುತ ಕೆಲವು ವರ್ಗಗಳ ಮಾಹಿತಿಯನ್ನು ಫೇಸ್‌ಬುಕ್ ಕಂಪನಿಗಳೊಂದಿಗೆ ಹಂಚಿಕೊಳ್ಳುತ್ತೇವೆ. ಇತರ ಕಂಪನಿಗಳೊಂದಿಗೆ ನಾವು ಹಂಚಿಕೊಳ್ಳುವ ಮಾಹಿತಿಯು ನಿಮ್ಮ ಖಾತೆ ನೋಂದಣಿ ಮಾಹಿತಿಯನ್ನು ಒಳಗೊಂಡಿದೆ (ಉದಾಹರಣೆಗೆ ನಿಮ್ಮ ಫೋನ್ ಸಂಖ್ಯೆ), ವಹಿವಾಟು ಡೇಟಾ, ಸೇವೆ-ಸಂಬಂಧಿತ ಮಾಹಿತಿ, ನಮ್ಮ ಸೇವೆಗಳನ್ನು ಬಳಸುವಾಗ ನೀವು ಇತರರೊಂದಿಗೆ ಹೇಗೆ ವರ್ತಿಸುತ್ತೀರಿ (ವ್ಯವಹಾರಗಳು ಸೇರಿದಂತೆ), ಮೊಬೈಲ್ ಸಾಧನ ಮಾಹಿತಿ, ನಿಮ್ಮ ಐಪಿ ವಿಳಾಸ, ಮತ್ತು ಗೌಪ್ಯತೆ ನೀತಿ ವಿಭಾಗದಲ್ಲಿ ಗುರುತಿಸಲಾದ ಇತರ ಮಾಹಿತಿಯನ್ನು ‘ನಾವು ಸಂಗ್ರಹಿಸುವ ಮಾಹಿತಿ‘ ಅಥವಾ ನಿಮಗೆ ಸೂಚನೆಯ ಮೇರೆಗೆ ಅಥವಾ ನಿಮ್ಮ ಒಪ್ಪಿಗೆಯ ಆಧಾರದ ಮೇಲೆ ಪಡೆಯಲಾಗಿದೆ” ಎಂದು ವಾಟ್ಸಾಪ್ ತಿಳಿಸಿತ್ತು.


ಇದನ್ನೂ ಓದಿ: ವಾಟ್ಸಾಪ್‌ಗೆ ಗುಡ್‌ಬೈ ಹೇಳಿ, ಸಿಗ್ನಲ್‌ಗೆ ಹೆಲೋ ಹೇಳಿ: ಏನಿದು ಸಿಗ್ನಲ್ ಆಪ್?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...