Homeಮುಖಪುಟತಪ್ಪೊಪ್ಪಿಕೊಂಡು ಕಾಯ್ದೆ ಹಿಂಪಡೆಯಿರಿ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರಿಂದ ಪ್ರಧಾನಿಗೆ ಪತ್ರ

ತಪ್ಪೊಪ್ಪಿಕೊಂಡು ಕಾಯ್ದೆ ಹಿಂಪಡೆಯಿರಿ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರಿಂದ ಪ್ರಧಾನಿಗೆ ಪತ್ರ

ಇದನ್ನು ಮಾಡದಿದ್ದರೆ, ಪ್ರತಿಭಟನಾ ನಿರತ ರೈತರು ತಮ್ಮ ಟ್ರಾಕ್ಟರುಗಳೊಂದಿಗೆ ಗಣರಾಜ್ಯೋತ್ಸವದಂದು ದೆಹಲಿಗೆ ಪ್ರವೇಶಿಸುವ ಯೋಜನೆ ಮತ್ತು ಅಲ್ಲಿ ಪೋಲಿಸರು ತೆಗೆದುಕೊಳ್ಳುವ ಕ್ರಮವು ಮತ್ತೊಂದು ಜಲಿಯನ್ ವಾಲಾ ಬಾಗ್ ಅನ್ನು ಸೃಷ್ಟಿಸಬಹುದು - ಮಾರ್ಕಂಡೇಯ ಕಟ್ಜು

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮಾರ್ಕಂಡೇಯ ಕಟ್ಜು ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃಷಿ ಕಾನೂನುಗಳ ಬಗ್ಗೆ ಪತ್ರ ಬರೆದಿದ್ದು, “ಮಾಡಿರುವ ತಪ್ಪನ್ನು ಒಪ್ಪಿಕೊಂಡು ಕಾಯ್ದೆಗಳನ್ನು ಹಿಂಪಡೆಯಿರಿ” ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರವು ಸುಗ್ರೀವಾಜ್ಞೆಯ ಮೂಲಕ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿದ್ದು, ಇದನ್ನು ವಿರೋಧಿಸಿ ರೈತರು ಸೇರಿದಂತೆ ಚಿಂತಕರು, ಹೋರಾಟಗಾರರು, ಅಧಿಕಾರಿಗಳು, ವಿರೋಧ ಪಕ್ಷಗಳು, ಕೆಲವು ಬಿಜೆಪಿ ನಾಯಕರೂ ಕೂಡ ಈ ಕಾನೂನಗಳನ್ನು ಹಿಂಪಡೆಯುವಂತೆ ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಸುಮಾರು 2 ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ.

ಈ ಕುರಿತು ಪ್ರಧಾನಿಗೆ ಪತ್ರ ಬರೆದಿರುವ ಮಾಜಿ ನ್ಯಾಯಾಧೀಶ, “ಸರ್ಕಾರವು ಈ 3 ಕಾನೂನುಗಳನ್ನು ತಕ್ಷಣ ರದ್ದುಪಡಿಸುವ ಸುಗ್ರೀವಾಜ್ಞೆಯನ್ನು ಹೊರಡಿಸಬೇಕು. ಇದನ್ನು ಮಾಡಿದರೆ ನಿಮ್ಮನ್ನು ಎಲ್ಲರೂ ಪ್ರಶಂಸಿಸುತ್ತಾರೆ. ಮತ್ತೆ ಕಾನೂನುನನ್ನು ಯಾಕೆ ಮಾಡಿದಿರಿ ಎಂದು ಕೇಳಿದರೆ, ನಾವು ತಪ್ಪು ಮಾಡಿದ್ದೇವೆ ಎಂದು ನೀವು ಹೇಳಿ. ಈಗ ತಪ್ಪನ್ನ ಅರಿತುಕೊಂಡಿರುವುದಾಗಿಯೂ ಹೇಳಿ. ಇದನ್ನು ಒಪ್ಪಿಕೊಳ್ಳುವುದರಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

“ಇದನ್ನು ಮಾಡದಿದ್ದರೆ, ಪ್ರತಿಭಟನಾ ನಿರತ ಲಕ್ಷಾಂತರ ರೈತರು ತಮ್ಮ ಟ್ರ್ಯಾಕ್ಟರ್‌ಗಳೊಂದಿಗೆ ಗಣರಾಜ್ಯೋತ್ಸವದಂದು ದೆಹಲಿಗೆ ಪ್ರವೇಶಿಸುವ ಯೋಜನೆ ಮತ್ತು ಅಲ್ಲಿ ಪೋಲಿಸರು ತೆಗೆದುಕೊಳ್ಳುವ ಕ್ರಮವು ಮತ್ತೊಂದು ಜಲಿಯನ್ ವಾಲಾ ಬಾಗ್ ಅನ್ನು ಸೃಷ್ಟಿಸಬಹುದು. ಅಥವಾ ಸೇಂಟ್ ಪೀಟರ್ಸ್‌ಬರ್ಗ್‌ನ ‘ಬ್ಲಡಿ ಸಂಡೆ’‌ (ಜನವರಿ 1905) ಅಥವಾ ಪ್ಯಾರಿಸ್‌ನ 13 ವೆಂಡೆಮೈರ್‌ಗೆ (ಅಕ್ಟೋಬರ್ 1795) ಹೋಲುವಂತಹ ಹತ್ಯಾಕಾಂಡಗಳಿಗೆ ಕಾರಣವಾಗಬಹುದು. ಯಾಕೆಂದರೆ ಸರ್ಕಾರ ಈ ಟ್ರ್ಯಾಕ್ಟರ್‌ ರ್ಯಾಲಿಗೆ ಸ್ಪಷ್ಟ ಅನುಮತಿ ನೀಡಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

1905 ರ ಜನವರಿ 22 ರಂದು (ಬ್ಲಡಿ ಸಂಡೆ) ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ನಿರಾಯುಧ ಪ್ರತಿಭಟನಾಕಾರರ ಮೇಲೆ ತ್ಸಾರ್ ಪಡೆಗಳು ನಡೆಸಿದ ಗುಂಡಿನ ದಾಳಿಯನ್ನು ಸೂಚಿಸುತ್ತದೆ. ಇಲ್ಲಿ ಸುಮಾರು 100 ರಿಂದ 4,000 ಜನ ಸಾವನ್ನಪ್ಪಿದ್ದರು.

13 ವೆಂಡೆಮೈರ್‌ (ಫ್ರೆಂಚ್ ರಿಪಬ್ಲಿಕನ್ ಕ್ಯಾಲೆಂಡರ್‌ನಲ್ಲಿ ಮೊದಲ ತಿಂಗಳು) ಅಥವಾ ಅಕ್ಟೋಬರ್ 5, 1795 ರಲ್ಲಿ, ನೆಪೋಲಿಯನ್ ಬೊನಪಾರ್ಟೆಯ ನೇತೃತ್ವದ ಕ್ರಾಂತಿಕಾರಿ ಪಡೆಗಳು, ಅಂದಿನ ರಾಜಮನೆತನದ ದಂಗೆಯನ್ನು ಹತ್ತಿಕ್ಕಿತು. ಈ ಹತ್ಯಾಕಾಂಡದಲ್ಲಿ ಸುಮಾರು 1,400 ರಾಜಮನೆತನದವರು ಕೊಲ್ಲಲ್ಪಟ್ಟಿದ್ದಾರೆಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

“ಈಗ ಜಾತಿ ಮತ್ತು ಧರ್ಮಗಳನ್ನು ಮೀರಿ ಒಂದಾಗಿರುವ ರೈತರನ್ನು ಎದುರು ಹಾಕಿಕೊಳ್ಳುವುದರಿಂದ ಮೋದಿಗೆ ರಾಜಕೀಯವಾಗಿ ನಷ್ಟವಾಗಬಹುದು. ಮತ್ತು ಅವರ ವಿರುದ್ಧ ಹಿಂಸಾಚಾರಕ್ಕಿಳಿಯುವುದರಿಂದ ರಾಜ್ಯಗಳಲ್ಲಿ ಗಲಭೆಗಳಾಗಬಹುದು, ಜೊತೆಗೆ ಕೃಷಿ ಕುಟುಂಬಗಳಿಂದ ಬಂದಿರುವ ಸಶಸ್ತ್ರ ಪಡೆಗಳ ಮೇಲೆ ಇದು ದೊಡ್ಡ ಪರಿಣಾಮ ಬೀರಬಹುದು” ಎಂದು ಎಚ್ಚರಿಸಿದ್ದಾರೆ.

ಹಾಗಾಗಿ “ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳುವಂತಹ ರೈತರ ಸಂಘಟನೆಗಳು, ಸರ್ಕಾರಿ ಪ್ರತಿನಿಧಿಗಳು ಮತ್ತು ಕೃಷಿ ತಜ್ಞರ ಸದಸ್ಯರ ಪ್ರತಿನಿಧಿಗಳಿರುವ ಉನ್ನತ ಮಟ್ಟದ ರೈತ ಆಯೋಗವೊಂದನ್ನು ನೇಮಿಸಬೇಕು. ಈ ರೈತ ಆಯೋಗವು ಹಲವಾರು ಸಭೆಗಳನ್ನು ನಡೆಸಬೇಕು. ಇದನ್ನು ಕೆಲವು ತಿಂಗಳುಗಳವರೆಗೆ ವಿಸ್ತರಿಸಬೇಕು. ನಂತರ ಹೊರಹೊಮ್ಮುವ ಒಮ್ಮತವನ್ನು ಎಲ್ಲರೂ ಒಪ್ಪುತ್ತಾರೆ, ಆಗ ಇದನ್ನು ಸಮಗ್ರ ಕಾನೂನಾಗಿ ಜಾರಿಗೊಳಿಸಬೇಕು” ಎಂದು ಸಲಹೆ ನೀಡಿದ್ದಾರೆ.


ಇದನ್ನೂ ಓದಿ: ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...

ಬಿಜು ಪಟ್ನಾಯಕ್ ವಿರುದ್ಧ ಹೇಳಿಕೆ : ಬೇಷರತ್ ಕ್ಷಮೆಯಾಚಿಸಿದ ಬಿಜೆಪಿ ಸಂಸದ ನಿಶಿಕಾಂತ್ ದುಬೆ

ಒಡಿಶಾದ ಮಾಜಿ ಮುಖ್ಯಮಂತ್ರಿ ಬಿಜು ಪಟ್ನಾಯಕ್ ಅವರ ಕುರಿತು ನೀಡಿದ ಹೇಳಿಕೆ ವಿರುದ್ದ ದೇಶದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾದ ಹಿನ್ನೆಲೆ, ಬಿಜೆಪಿ ಸಂಸದ ನಿಶಿಕಾಂತ್ ದುಬೆ ಬುಧವಾರ (ಏ.1) ಬೇಷರತ್ ಕ್ಷಮೆಯಾಚಿಸಿದ್ದಾರೆ. "ಬಿಜು ಬಾಬು...

ಮಹಾರಾಷ್ಟ್ರ: ‘ನಿನ್ನ ಮಗಳನ್ನು ನನ್ನ ಬಳಿ ಕಳುಹಿಸು’; ಬಂಧಿತ ಮಹಿಳಾ ಆರೋಪಿಗೆ ಲೈಂಗಿಕ ಕಿರುಕುಳ ನೀಡಿದ್ದ ಪೊಲೀಸ್ ಅಮಾನತು 

ಮಹಾರಾಷ್ಟ್ರ: ಅಕೋಲಾದಲ್ಲಿ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಕಸ್ಟಡಿಯಲ್ಲಿರುವ ಮಹಿಳೆಯೊಬ್ಬರಿಂದ ಲೈಂಗಿಕ ಕಿರುಕುಳಕ್ಕೆ ಬೇಡಿಕೆ ಇಟ್ಟಿದ್ದ ಮತ್ತು ಆಕೆಯ ಮಗಳನ್ನು ತನ್ನ ಬಳಿಗೆ ಕಳುಹಿಸುವಂತೆ ಕೇಳಿದ್ದಕ್ಕಾಗಿ ಸಹಾಯಕ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ಒಬ್ಬರನ್ನು ಅಮಾನತುಗೊಳಿಸಲಾಗಿದೆ.  80...