Homeಮುಖಪುಟತಪ್ಪೊಪ್ಪಿಕೊಂಡು ಕಾಯ್ದೆ ಹಿಂಪಡೆಯಿರಿ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರಿಂದ ಪ್ರಧಾನಿಗೆ ಪತ್ರ

ತಪ್ಪೊಪ್ಪಿಕೊಂಡು ಕಾಯ್ದೆ ಹಿಂಪಡೆಯಿರಿ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರಿಂದ ಪ್ರಧಾನಿಗೆ ಪತ್ರ

ಇದನ್ನು ಮಾಡದಿದ್ದರೆ, ಪ್ರತಿಭಟನಾ ನಿರತ ರೈತರು ತಮ್ಮ ಟ್ರಾಕ್ಟರುಗಳೊಂದಿಗೆ ಗಣರಾಜ್ಯೋತ್ಸವದಂದು ದೆಹಲಿಗೆ ಪ್ರವೇಶಿಸುವ ಯೋಜನೆ ಮತ್ತು ಅಲ್ಲಿ ಪೋಲಿಸರು ತೆಗೆದುಕೊಳ್ಳುವ ಕ್ರಮವು ಮತ್ತೊಂದು ಜಲಿಯನ್ ವಾಲಾ ಬಾಗ್ ಅನ್ನು ಸೃಷ್ಟಿಸಬಹುದು - ಮಾರ್ಕಂಡೇಯ ಕಟ್ಜು

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮಾರ್ಕಂಡೇಯ ಕಟ್ಜು ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃಷಿ ಕಾನೂನುಗಳ ಬಗ್ಗೆ ಪತ್ರ ಬರೆದಿದ್ದು, “ಮಾಡಿರುವ ತಪ್ಪನ್ನು ಒಪ್ಪಿಕೊಂಡು ಕಾಯ್ದೆಗಳನ್ನು ಹಿಂಪಡೆಯಿರಿ” ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರವು ಸುಗ್ರೀವಾಜ್ಞೆಯ ಮೂಲಕ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿದ್ದು, ಇದನ್ನು ವಿರೋಧಿಸಿ ರೈತರು ಸೇರಿದಂತೆ ಚಿಂತಕರು, ಹೋರಾಟಗಾರರು, ಅಧಿಕಾರಿಗಳು, ವಿರೋಧ ಪಕ್ಷಗಳು, ಕೆಲವು ಬಿಜೆಪಿ ನಾಯಕರೂ ಕೂಡ ಈ ಕಾನೂನಗಳನ್ನು ಹಿಂಪಡೆಯುವಂತೆ ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಸುಮಾರು 2 ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ.

ಈ ಕುರಿತು ಪ್ರಧಾನಿಗೆ ಪತ್ರ ಬರೆದಿರುವ ಮಾಜಿ ನ್ಯಾಯಾಧೀಶ, “ಸರ್ಕಾರವು ಈ 3 ಕಾನೂನುಗಳನ್ನು ತಕ್ಷಣ ರದ್ದುಪಡಿಸುವ ಸುಗ್ರೀವಾಜ್ಞೆಯನ್ನು ಹೊರಡಿಸಬೇಕು. ಇದನ್ನು ಮಾಡಿದರೆ ನಿಮ್ಮನ್ನು ಎಲ್ಲರೂ ಪ್ರಶಂಸಿಸುತ್ತಾರೆ. ಮತ್ತೆ ಕಾನೂನುನನ್ನು ಯಾಕೆ ಮಾಡಿದಿರಿ ಎಂದು ಕೇಳಿದರೆ, ನಾವು ತಪ್ಪು ಮಾಡಿದ್ದೇವೆ ಎಂದು ನೀವು ಹೇಳಿ. ಈಗ ತಪ್ಪನ್ನ ಅರಿತುಕೊಂಡಿರುವುದಾಗಿಯೂ ಹೇಳಿ. ಇದನ್ನು ಒಪ್ಪಿಕೊಳ್ಳುವುದರಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

“ಇದನ್ನು ಮಾಡದಿದ್ದರೆ, ಪ್ರತಿಭಟನಾ ನಿರತ ಲಕ್ಷಾಂತರ ರೈತರು ತಮ್ಮ ಟ್ರ್ಯಾಕ್ಟರ್‌ಗಳೊಂದಿಗೆ ಗಣರಾಜ್ಯೋತ್ಸವದಂದು ದೆಹಲಿಗೆ ಪ್ರವೇಶಿಸುವ ಯೋಜನೆ ಮತ್ತು ಅಲ್ಲಿ ಪೋಲಿಸರು ತೆಗೆದುಕೊಳ್ಳುವ ಕ್ರಮವು ಮತ್ತೊಂದು ಜಲಿಯನ್ ವಾಲಾ ಬಾಗ್ ಅನ್ನು ಸೃಷ್ಟಿಸಬಹುದು. ಅಥವಾ ಸೇಂಟ್ ಪೀಟರ್ಸ್‌ಬರ್ಗ್‌ನ ‘ಬ್ಲಡಿ ಸಂಡೆ’‌ (ಜನವರಿ 1905) ಅಥವಾ ಪ್ಯಾರಿಸ್‌ನ 13 ವೆಂಡೆಮೈರ್‌ಗೆ (ಅಕ್ಟೋಬರ್ 1795) ಹೋಲುವಂತಹ ಹತ್ಯಾಕಾಂಡಗಳಿಗೆ ಕಾರಣವಾಗಬಹುದು. ಯಾಕೆಂದರೆ ಸರ್ಕಾರ ಈ ಟ್ರ್ಯಾಕ್ಟರ್‌ ರ್ಯಾಲಿಗೆ ಸ್ಪಷ್ಟ ಅನುಮತಿ ನೀಡಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

1905 ರ ಜನವರಿ 22 ರಂದು (ಬ್ಲಡಿ ಸಂಡೆ) ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ನಿರಾಯುಧ ಪ್ರತಿಭಟನಾಕಾರರ ಮೇಲೆ ತ್ಸಾರ್ ಪಡೆಗಳು ನಡೆಸಿದ ಗುಂಡಿನ ದಾಳಿಯನ್ನು ಸೂಚಿಸುತ್ತದೆ. ಇಲ್ಲಿ ಸುಮಾರು 100 ರಿಂದ 4,000 ಜನ ಸಾವನ್ನಪ್ಪಿದ್ದರು.

13 ವೆಂಡೆಮೈರ್‌ (ಫ್ರೆಂಚ್ ರಿಪಬ್ಲಿಕನ್ ಕ್ಯಾಲೆಂಡರ್‌ನಲ್ಲಿ ಮೊದಲ ತಿಂಗಳು) ಅಥವಾ ಅಕ್ಟೋಬರ್ 5, 1795 ರಲ್ಲಿ, ನೆಪೋಲಿಯನ್ ಬೊನಪಾರ್ಟೆಯ ನೇತೃತ್ವದ ಕ್ರಾಂತಿಕಾರಿ ಪಡೆಗಳು, ಅಂದಿನ ರಾಜಮನೆತನದ ದಂಗೆಯನ್ನು ಹತ್ತಿಕ್ಕಿತು. ಈ ಹತ್ಯಾಕಾಂಡದಲ್ಲಿ ಸುಮಾರು 1,400 ರಾಜಮನೆತನದವರು ಕೊಲ್ಲಲ್ಪಟ್ಟಿದ್ದಾರೆಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

“ಈಗ ಜಾತಿ ಮತ್ತು ಧರ್ಮಗಳನ್ನು ಮೀರಿ ಒಂದಾಗಿರುವ ರೈತರನ್ನು ಎದುರು ಹಾಕಿಕೊಳ್ಳುವುದರಿಂದ ಮೋದಿಗೆ ರಾಜಕೀಯವಾಗಿ ನಷ್ಟವಾಗಬಹುದು. ಮತ್ತು ಅವರ ವಿರುದ್ಧ ಹಿಂಸಾಚಾರಕ್ಕಿಳಿಯುವುದರಿಂದ ರಾಜ್ಯಗಳಲ್ಲಿ ಗಲಭೆಗಳಾಗಬಹುದು, ಜೊತೆಗೆ ಕೃಷಿ ಕುಟುಂಬಗಳಿಂದ ಬಂದಿರುವ ಸಶಸ್ತ್ರ ಪಡೆಗಳ ಮೇಲೆ ಇದು ದೊಡ್ಡ ಪರಿಣಾಮ ಬೀರಬಹುದು” ಎಂದು ಎಚ್ಚರಿಸಿದ್ದಾರೆ.

ಹಾಗಾಗಿ “ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳುವಂತಹ ರೈತರ ಸಂಘಟನೆಗಳು, ಸರ್ಕಾರಿ ಪ್ರತಿನಿಧಿಗಳು ಮತ್ತು ಕೃಷಿ ತಜ್ಞರ ಸದಸ್ಯರ ಪ್ರತಿನಿಧಿಗಳಿರುವ ಉನ್ನತ ಮಟ್ಟದ ರೈತ ಆಯೋಗವೊಂದನ್ನು ನೇಮಿಸಬೇಕು. ಈ ರೈತ ಆಯೋಗವು ಹಲವಾರು ಸಭೆಗಳನ್ನು ನಡೆಸಬೇಕು. ಇದನ್ನು ಕೆಲವು ತಿಂಗಳುಗಳವರೆಗೆ ವಿಸ್ತರಿಸಬೇಕು. ನಂತರ ಹೊರಹೊಮ್ಮುವ ಒಮ್ಮತವನ್ನು ಎಲ್ಲರೂ ಒಪ್ಪುತ್ತಾರೆ, ಆಗ ಇದನ್ನು ಸಮಗ್ರ ಕಾನೂನಾಗಿ ಜಾರಿಗೊಳಿಸಬೇಕು” ಎಂದು ಸಲಹೆ ನೀಡಿದ್ದಾರೆ.


ಇದನ್ನೂ ಓದಿ: ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...