Homeಮುಖಪುಟತಪ್ಪೊಪ್ಪಿಕೊಂಡು ಕಾಯ್ದೆ ಹಿಂಪಡೆಯಿರಿ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರಿಂದ ಪ್ರಧಾನಿಗೆ ಪತ್ರ

ತಪ್ಪೊಪ್ಪಿಕೊಂಡು ಕಾಯ್ದೆ ಹಿಂಪಡೆಯಿರಿ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರಿಂದ ಪ್ರಧಾನಿಗೆ ಪತ್ರ

ಇದನ್ನು ಮಾಡದಿದ್ದರೆ, ಪ್ರತಿಭಟನಾ ನಿರತ ರೈತರು ತಮ್ಮ ಟ್ರಾಕ್ಟರುಗಳೊಂದಿಗೆ ಗಣರಾಜ್ಯೋತ್ಸವದಂದು ದೆಹಲಿಗೆ ಪ್ರವೇಶಿಸುವ ಯೋಜನೆ ಮತ್ತು ಅಲ್ಲಿ ಪೋಲಿಸರು ತೆಗೆದುಕೊಳ್ಳುವ ಕ್ರಮವು ಮತ್ತೊಂದು ಜಲಿಯನ್ ವಾಲಾ ಬಾಗ್ ಅನ್ನು ಸೃಷ್ಟಿಸಬಹುದು - ಮಾರ್ಕಂಡೇಯ ಕಟ್ಜು

- Advertisement -
- Advertisement -

ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮಾರ್ಕಂಡೇಯ ಕಟ್ಜು ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಕೃಷಿ ಕಾನೂನುಗಳ ಬಗ್ಗೆ ಪತ್ರ ಬರೆದಿದ್ದು, “ಮಾಡಿರುವ ತಪ್ಪನ್ನು ಒಪ್ಪಿಕೊಂಡು ಕಾಯ್ದೆಗಳನ್ನು ಹಿಂಪಡೆಯಿರಿ” ಎಂದು ಒತ್ತಾಯಿಸಿದ್ದಾರೆ.

ಕೇಂದ್ರ ಸರ್ಕಾರವು ಸುಗ್ರೀವಾಜ್ಞೆಯ ಮೂಲಕ ಮೂರು ಕೃಷಿ ಕಾನೂನುಗಳನ್ನು ಜಾರಿಗೆ ತಂದಿದ್ದು, ಇದನ್ನು ವಿರೋಧಿಸಿ ರೈತರು ಸೇರಿದಂತೆ ಚಿಂತಕರು, ಹೋರಾಟಗಾರರು, ಅಧಿಕಾರಿಗಳು, ವಿರೋಧ ಪಕ್ಷಗಳು, ಕೆಲವು ಬಿಜೆಪಿ ನಾಯಕರೂ ಕೂಡ ಈ ಕಾನೂನಗಳನ್ನು ಹಿಂಪಡೆಯುವಂತೆ ಒತ್ತಾಯಿಸುತ್ತಿದ್ದಾರೆ. ಈ ನಿಟ್ಟಿನಲ್ಲಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಸುಮಾರು 2 ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ.

ಈ ಕುರಿತು ಪ್ರಧಾನಿಗೆ ಪತ್ರ ಬರೆದಿರುವ ಮಾಜಿ ನ್ಯಾಯಾಧೀಶ, “ಸರ್ಕಾರವು ಈ 3 ಕಾನೂನುಗಳನ್ನು ತಕ್ಷಣ ರದ್ದುಪಡಿಸುವ ಸುಗ್ರೀವಾಜ್ಞೆಯನ್ನು ಹೊರಡಿಸಬೇಕು. ಇದನ್ನು ಮಾಡಿದರೆ ನಿಮ್ಮನ್ನು ಎಲ್ಲರೂ ಪ್ರಶಂಸಿಸುತ್ತಾರೆ. ಮತ್ತೆ ಕಾನೂನುನನ್ನು ಯಾಕೆ ಮಾಡಿದಿರಿ ಎಂದು ಕೇಳಿದರೆ, ನಾವು ತಪ್ಪು ಮಾಡಿದ್ದೇವೆ ಎಂದು ನೀವು ಹೇಳಿ. ಈಗ ತಪ್ಪನ್ನ ಅರಿತುಕೊಂಡಿರುವುದಾಗಿಯೂ ಹೇಳಿ. ಇದನ್ನು ಒಪ್ಪಿಕೊಳ್ಳುವುದರಿಂದ ನಿಮ್ಮ ಜನಪ್ರಿಯತೆ ಹೆಚ್ಚಾಗುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೆಎಫ್‌ಸಿ ಎಂದರೆ ಏನು ಗೊತ್ತಾ…? ನಮ್ಮ ರೈತರು ಹೇಳುತ್ತಾರೆ ಕೇಳಿ..!

“ಇದನ್ನು ಮಾಡದಿದ್ದರೆ, ಪ್ರತಿಭಟನಾ ನಿರತ ಲಕ್ಷಾಂತರ ರೈತರು ತಮ್ಮ ಟ್ರ್ಯಾಕ್ಟರ್‌ಗಳೊಂದಿಗೆ ಗಣರಾಜ್ಯೋತ್ಸವದಂದು ದೆಹಲಿಗೆ ಪ್ರವೇಶಿಸುವ ಯೋಜನೆ ಮತ್ತು ಅಲ್ಲಿ ಪೋಲಿಸರು ತೆಗೆದುಕೊಳ್ಳುವ ಕ್ರಮವು ಮತ್ತೊಂದು ಜಲಿಯನ್ ವಾಲಾ ಬಾಗ್ ಅನ್ನು ಸೃಷ್ಟಿಸಬಹುದು. ಅಥವಾ ಸೇಂಟ್ ಪೀಟರ್ಸ್‌ಬರ್ಗ್‌ನ ‘ಬ್ಲಡಿ ಸಂಡೆ’‌ (ಜನವರಿ 1905) ಅಥವಾ ಪ್ಯಾರಿಸ್‌ನ 13 ವೆಂಡೆಮೈರ್‌ಗೆ (ಅಕ್ಟೋಬರ್ 1795) ಹೋಲುವಂತಹ ಹತ್ಯಾಕಾಂಡಗಳಿಗೆ ಕಾರಣವಾಗಬಹುದು. ಯಾಕೆಂದರೆ ಸರ್ಕಾರ ಈ ಟ್ರ್ಯಾಕ್ಟರ್‌ ರ್ಯಾಲಿಗೆ ಸ್ಪಷ್ಟ ಅನುಮತಿ ನೀಡಿಲ್ಲ” ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

1905 ರ ಜನವರಿ 22 ರಂದು (ಬ್ಲಡಿ ಸಂಡೆ) ಸೇಂಟ್ ಪೀಟರ್ಸ್‌ಬರ್ಗ್‌ನಲ್ಲಿ ನಿರಾಯುಧ ಪ್ರತಿಭಟನಾಕಾರರ ಮೇಲೆ ತ್ಸಾರ್ ಪಡೆಗಳು ನಡೆಸಿದ ಗುಂಡಿನ ದಾಳಿಯನ್ನು ಸೂಚಿಸುತ್ತದೆ. ಇಲ್ಲಿ ಸುಮಾರು 100 ರಿಂದ 4,000 ಜನ ಸಾವನ್ನಪ್ಪಿದ್ದರು.

13 ವೆಂಡೆಮೈರ್‌ (ಫ್ರೆಂಚ್ ರಿಪಬ್ಲಿಕನ್ ಕ್ಯಾಲೆಂಡರ್‌ನಲ್ಲಿ ಮೊದಲ ತಿಂಗಳು) ಅಥವಾ ಅಕ್ಟೋಬರ್ 5, 1795 ರಲ್ಲಿ, ನೆಪೋಲಿಯನ್ ಬೊನಪಾರ್ಟೆಯ ನೇತೃತ್ವದ ಕ್ರಾಂತಿಕಾರಿ ಪಡೆಗಳು, ಅಂದಿನ ರಾಜಮನೆತನದ ದಂಗೆಯನ್ನು ಹತ್ತಿಕ್ಕಿತು. ಈ ಹತ್ಯಾಕಾಂಡದಲ್ಲಿ ಸುಮಾರು 1,400 ರಾಜಮನೆತನದವರು ಕೊಲ್ಲಲ್ಪಟ್ಟಿದ್ದಾರೆಂದು ಅಂದಾಜಿಸಲಾಗಿದೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

“ಈಗ ಜಾತಿ ಮತ್ತು ಧರ್ಮಗಳನ್ನು ಮೀರಿ ಒಂದಾಗಿರುವ ರೈತರನ್ನು ಎದುರು ಹಾಕಿಕೊಳ್ಳುವುದರಿಂದ ಮೋದಿಗೆ ರಾಜಕೀಯವಾಗಿ ನಷ್ಟವಾಗಬಹುದು. ಮತ್ತು ಅವರ ವಿರುದ್ಧ ಹಿಂಸಾಚಾರಕ್ಕಿಳಿಯುವುದರಿಂದ ರಾಜ್ಯಗಳಲ್ಲಿ ಗಲಭೆಗಳಾಗಬಹುದು, ಜೊತೆಗೆ ಕೃಷಿ ಕುಟುಂಬಗಳಿಂದ ಬಂದಿರುವ ಸಶಸ್ತ್ರ ಪಡೆಗಳ ಮೇಲೆ ಇದು ದೊಡ್ಡ ಪರಿಣಾಮ ಬೀರಬಹುದು” ಎಂದು ಎಚ್ಚರಿಸಿದ್ದಾರೆ.

ಹಾಗಾಗಿ “ಎಲ್ಲಾ ಅಂಶಗಳನ್ನು ಗಣನೆಗೆ ತೆಗೆದುಕೊಳ್ಳುವಂತಹ ರೈತರ ಸಂಘಟನೆಗಳು, ಸರ್ಕಾರಿ ಪ್ರತಿನಿಧಿಗಳು ಮತ್ತು ಕೃಷಿ ತಜ್ಞರ ಸದಸ್ಯರ ಪ್ರತಿನಿಧಿಗಳಿರುವ ಉನ್ನತ ಮಟ್ಟದ ರೈತ ಆಯೋಗವೊಂದನ್ನು ನೇಮಿಸಬೇಕು. ಈ ರೈತ ಆಯೋಗವು ಹಲವಾರು ಸಭೆಗಳನ್ನು ನಡೆಸಬೇಕು. ಇದನ್ನು ಕೆಲವು ತಿಂಗಳುಗಳವರೆಗೆ ವಿಸ್ತರಿಸಬೇಕು. ನಂತರ ಹೊರಹೊಮ್ಮುವ ಒಮ್ಮತವನ್ನು ಎಲ್ಲರೂ ಒಪ್ಪುತ್ತಾರೆ, ಆಗ ಇದನ್ನು ಸಮಗ್ರ ಕಾನೂನಾಗಿ ಜಾರಿಗೊಳಿಸಬೇಕು” ಎಂದು ಸಲಹೆ ನೀಡಿದ್ದಾರೆ.


ಇದನ್ನೂ ಓದಿ: ರೈತಹೋರಾಟ: ರೈತರ ಮೀಸೆ, ದಾಡಿ ಚೆಂದಗೊಳಿಸಲು ಕುಂಡಲ್‌ ಸೇವೆಗೆ ಮುಂದಾದ ಗುರ್‌ಜಾನ್‌ ಸಿಂಗ್..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...