Homeಮುಖಪುಟಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಬಾಲಾಕೋಟ್ ದಾಳಿಯ ಬಗ್ಗೆಯೂ ಮೂರು ದಿನಗಳ ಮೊದಲೇ ಅರ್ನಾಬ್‌ಗೆ ಗೊತ್ತಿತ್ತು ಎಂಬ ವಿಷಯ ಲೀಕ್ ಆಗಿರುವ ವಾಟ್ಸಾಪ್ ಚಾಟ್‌ಗಳಿಂದ ತಿಳಿದುಬಂದಿದೆ.

- Advertisement -
- Advertisement -

2019ರ ಫೆಬ್ರವರಿ ತಿಂಗಳಿನಲ್ಲಿ ಕಾಶ್ಮೀರದ ಪುಲ್ವಾಮ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯನ್ನು ಪತ್ರಕರ್ತ ಅರ್ನಾಬ್ ಗೋಸ್ವಾಮಿ ಸಂಭ್ರಮಿಸಿದ್ದ ಎಂಬ ಆಘಾತಕಾರಿ ಸಂಗತಿ ಹೊರಬಿದ್ದಿದೆ. ಆ ದಾಳಿಯಲ್ಲಿ 40ಕ್ಕೂ ಹೆಚ್ಚು ಭಾರತೀಯ ಯೋಧರು ಹುತಾತ್ಮರಾಗಿದ್ದರು. ಅಲ್ಲದೇ ತದನಂತರ ಭಾರತದ ಸೈನಿಕರು ನಡೆಸಿದ ಬಾಲಾಕೋಟ್ ದಾಳಿಯ ಬಗ್ಗೆಯೂ ಮೂರು ದಿನಗಳ ಮೊದಲೇ ಅರ್ನಾಬ್‌ಗೆ ಗೊತ್ತಿತ್ತು ಎಂಬ ವಿಷಯ ಲೀಕ್ ಆಗಿರುವ ವಾಟ್ಸಾಪ್ ಚಾಟ್‌ಗಳಿಂದ ತಿಳಿದುಬಂದಿದೆ. ಈ ಕುರಿತು ದೇಶಾದ್ಯಂತ ಅರ್ನಾಬ್ ಗೋಸ್ವಾಮಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಟಿಆರ್‌ಪಿ ಹಗರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ರಿಪಬ್ಲಿಕ್ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಮತ್ತು BARC ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ನಡುವಿನ ವಾಟ್ಸಾಪ್‌ ಚಾಟ್‌ಗಳ ಸುಮಾರು 500 ಪುಟಗಳನ್ನು ಬಹಿರಂಗಗೊಳಿಸಿದ್ದಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಆದರೆ ಈ ಕುರಿತು ಯಾವುದೇ ಮುಖ್ಯವಾಹಿನಿ ಮಾಧ್ಯಮಗಳು ಸುದ್ದಿ ಮಾಡಿಲ್ಲವಾದರೂ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಮಂದಿ ಕಿಡಿಕಾರಿದ್ದಾರೆ.

This attack we have won like crazy… ಇದು ಇಡೀ ದೇಶವನ್ನು ನಡುಗಿಸಿದ ಪುಲ್ವಾಮ ದಾಳಿಯ ಬಗ್ಗೆ ಅರ್ನಾಬ್ ಗೋಸ್ವಾಮಿ ಆಡಿದ ಮಾತುಗಳು. ಇವು ಲೀಕ್‌ ಆದ ವಾಟ್ಸಾಪ್ ಚಾಟ್‌ಗಳಲ್ಲಿ ದಾಖಲಾಗಿದೆ. ನೇಷನ್ ವಾಂಟ್ಸ್‌ ಟು ನೋ ಎಂದು ಅರಚುತ್ತಿದ್ದ ಅರ್ನಾಬ್ ಗೋಸ್ವಾಮಿಯ ದೇಶಪ್ರೇಮವೆ ಇದು? ಎಂದು ಹಲವರು ಟೀಕೆ ಮಾಡಿದ್ದಾರೆ.

ವಾಟ್ಸಾಪ್ ಚಾಟ್ ಪ್ರಕಾರ ಅರ್ನಾಬ್ ಗೋಸ್ವಾಮಿಗೆ ಬಾಲಾಕೋಟ್ ದಾಳಿಯ ಬಗ್ಗೆ ಮೂರು ದಿನಗಳ ಮೊದಲೇ ಗೊತ್ತಿತ್ತು. ಈ ಬಾರಿ ದೊಡ್ಡದೇನೋ ನಡೆಯುತ್ತದೆ ಎಂದು ಅರ್ನಾಬ್ ಹೇಳಿದರೆ, ಇದರಿಂದಾಗಿ ದೊಡ್ಡ ಮನುಷ್ಯನಿಗೆ (big man) ತುಂಬಾ ಒಳ್ಳೆಯದಾಗುತ್ತದೆ ಎನ್ನುತ್ತಾನೆ ಪಾರ್ಥೋ ದಾಸ್ ಗುಪ್ತ. ಅಷ್ಟೇ ಅಲ್ಲ, ಇದರಿಂದಾಗಿಯೇ ದೊಡ್ಡ ಮನುಷ್ಯ ಈ ಚುನಾವಣೆಯನ್ನು ಗುಡಿಸಿಕೊಂಡು (ದೊಡ್ಡ ಗೆಲುವು) ಬರುತ್ತಾನೆ ಎನ್ನುತ್ತಾನೆ. ಇದು ಮಾಮೂಲಿ ಸರ್ಜಿಕಲ್ ಸ್ಟ್ರೈಕ್ ಥರ ಅಲ್ಲ, ಅದಕ್ಕಿಂತ ದೊಡ್ಡದು. ಅಷ್ಟೇ ಅಲ್ಲ, ಕಾಶ್ಮೀರದಲ್ಲೂ ಸದ್ಯದಲ್ಲೇ ದೊಡ್ಡದೇನೋ ನಡೆಸಲಾಗುವುದು. ಜನ‌ರು ನಿಜಕ್ಕೂ ಖುಷಿಯಾಗುತ್ತಾರೆ ಎನ್ನುತ್ತಾನೆ ಅರ್ನಾಬ್.

ದೇಶದ ರಕ್ಷಣೆ, ಮಿಲಿಟರಿ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ಅತ್ಯಂತ ರಹಸ್ಯ‌ ಮಾಹಿತಿಗಳೆಲ್ಲ ಅರ್ನಾಬ್ ಗೋಸ್ವಾಮಿಗೆ ಹೇಗೆ ಗೊತ್ತಾಗುತ್ತಿತ್ತು? ಇದು Official secrets Act ಪ್ರಕಾರ ಕ್ರಿಮಿನಲ್ ಅಪರಾಧವಲ್ಲವೇ?
ಬೇರೆ ದೇಶಗಳಲ್ಲಿ ಇಂಥದ್ದೇನಾದರೂ ನಡೆದಿದ್ದರೆ, ಇಷ್ಟೊತ್ತಿಗೆ ಅರ್ನಾಬ್ ಜೈಲಿನಲ್ಲಿರುತ್ತಿದ್ದ. ಆದರೆ ಅವನು ದೊಡ್ಡ ಮನುಷ್ಯರ‌ ಮುದ್ದಿನ ಕೂಸು. ಅವನು ಕಿಯ್ಯೋ ಎಂದು ಕೂಗಿದರೆ ಉನ್ನತ ನ್ಯಾಯಾಲಯಗಳ ಕರುಳು ಚುರುಕ್ ಎಂದು ರಕ್ಷಣೆಗೆ ನಿಲ್ಲುತ್ತವೆ! ಒಂದಂತೂ ಸತ್ಯ. ಇಡೀ ದೇಶದಲ್ಲಿ ಅತಿ ದೊಡ್ಡ AntiNational ಪತ್ರಕರ್ತ ಒಬ್ಬನಿದ್ದರೆ ಅದು ಅರ್ನಾಬ್ ಗೋಸ್ವಾಮಿಯೇ. ನಲವತ್ತು ಸೈನಿಕರ ಸಾವನ್ನು ತನ್ನ ಚಾನಲ್ ವಿಜಯಕ್ಕಾಗಿ ಸಂಭ್ರಮಿಸುವ ಇಂಥ ದೇಶದ್ರೋಹಿ ಇನ್ನೊಬ್ಬನಿರಲು ಸಾಧ್ಯವಿಲ್ಲ ಎಂದು ದಿನೇಶ್ ಕುಮಾರ್ ಎಸ್‌.ಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

BARC ಮಾಜಿ ಮುಖ್ಯಸ್ಥ ಮತ್ತು ಅರ್ನಾಬ್ ಗೋಸ್ವಾಮಿ ನಡುವೆ ನಡೆದ ವಾಟ್ಸಪ್ ಹರಟೆಗಳು ಅನೇಕ ಕಳವಳಕಾರಿ ವಿಷಯಗಳನ್ನು ಬಯಲಿಗೆಳೆದಿವೆ. ಕೆಲ ಪತ್ರಕರ್ತರು ಮತ್ತು ಸರಕಾರದ ನಡುವಣ ಅನೈತಿಕ ಸಂಬಂಧದ ಮೇಲೆ (ರಾಡಿಯಾ ಟೇಪ್ ಬಳಿಕ) ಮತ್ತೊಮ್ಮೆ ಬೆಳಕು ಚೆಲ್ಲಿದೆ. ಅರ್ನಾಬ್ ಮತ್ತು ಪ್ರಧಾನಿ ಕಚೇರಿಯ ನಡುವಣ ಸುಮಧುರ ಸಂಬಂಧ, ಅರ್ನಾಬ್ ಗೆ ಸರಕಾರದ ಮೇಲಿದ್ದ ನಿಯಂತ್ರಣ ಇವಷ್ಟೇ ಅಲ್ಲ, ನ್ಯಾಯಾಧೀಶರನ್ನು ಖರೀದಿಸುವ ಬಗ್ಗೆಯೂ ಅದರಲ್ಲಿ ಪ್ರಸ್ತಾಪವಿದೆ. ! ಇದು ತುಂಬಾ ಗಂಭೀರ ವಿಚಾರ. ಇದರ ಬಗ್ಗೆ ನ್ಯಾಯಾಲಯ ಏನು ಕ್ರಮ ತೆಗೆದುಕೊಳ್ಳುತ್ತದೆ ನೋಡಬೇಕು ಎಂದು ಶ್ರೀನಿವಾಸ ಕಾರ್ಕಳರವರು ಅಭಿಪ್ರಾಯಪಟ್ಟಿದ್ದಾರೆ.

ಬಾಲಾಕೋಟ್ ದಾಳಿ ಮೂರು ದಿನ ಮೊದಲೇ ಅರ್ನಾಬ್‌ಗೆ ಗೊತ್ತಿದ್ದರೆ, ಈ ದೇಶದ ಪ್ರಧಾನಿ, ರಕ್ಷಣಾ ಮಂತ್ರಿ, ಗೃಹಮಂತ್ರಿ ಯಾರು? ಎಂದು ಪ್ರಸಾದ್ ರಕ್ಷಿಧಿಯವರು ಪ್ರಶ್ನಿಸಿದ್ದಾರೆ.

ಅರ್ನಾಬ್ ವಾಟ್ಸಾಪ್ ಚಾಟ್ ಲೀಕ್ ಹೊಲಸು ರಾಡಿಯಾ ಟೇಪ್‌ಗಿಂತ ಹೆಚ್ಚು ಅಪಾಕಾರಿಯಾದುದು. ಆದರೆ ಆಗ ವಿಚಾರಗಳನ್ನು ಆಲಿಸುವ ಮತ್ತು ವಿಮರ್ಶಿಸುವ ಜನರಿದ್ದರು ಅವರು ಕಣ್ಮರೆಯಾಗಿದ್ದಾರೆ ಅಷ್ಟೇ ವ್ಯತ್ಯಾಸ ಎಂದು ಆದಿತ್ಯ ಭಾರದ್ವಾಜ್ ಆತಂಕ ವ್ಯಕ್ತಪಡಿಸಿದ್ದಾರೆ.

ಹಿಂದೆಯೂ ಹೇಳಿದ್ವಿ, ಇಂದೂ ಹೇಳ್ತೀವಿ, ಮುಂದೆಯೂ ಹೇಳ್ತಾನೇ ಇರ್ತೀವಿ.. ಪುಲ್ವಾಮಾ ದಾಳಿ ಒಂದು ಪೂರ್ವ ನಿಯೋಜಿತ ಕೃತ್ಯ. ಇದರಲ್ಲಿ ದೇಶದ ಪ್ರಮುಖ ವ್ಯಕ್ತಿಗಳು ಭಯೋತ್ಪಾದಕರ ಜೊತೆಗೆ ಶಾಮೀಲಾಗಿದ್ದಾರೆ. ಅದರಲ್ಲೂ ಒಂದು ನಿರ್ದಿಷ್ಟ ಪಕ್ಷದ ಪ್ರಮುಖರು ಈ ಸಂಚಿಗೆ ಮತ್ತವರ ರಾಜಕೀಯ ಹಿತಾಸಕ್ತಿಗಾಗಿ 40 ಮಂದಿ ಸೈನಿಕರನ್ನು ಬಲಿ ಪಡೆದಿದ್ದಾರೆ. 2019 ರ ಚುನಾವಣೆಯ ಗೆಲುವಿನ ಕಾರಣಕ್ಕೆ, ದೇಶದಲ್ಲಿ ಯುದ್ಧೋನ್ಮಾದ ಸೃಷ್ಟಿಸುವುದರಿಂದ ಚುನಾವಣೆಯಲ್ಲಿ ಗೆಲ್ಲಬಹುದು ಎಂಬ ಅಂಶವನ್ನೇ ಪ್ರಮುಖವಾಗಿ ಇಟ್ಟುಕೊಂಡು ಈ ದಾಳಿಗೆ ಮುಹೂರ್ತ ಇಟ್ಟಿದ್ದಾರೆ. ಪುಲ್ವಾಮಾ ದಾಳಿಯ ನಂತರದ ಬೆಳವಣಿಗೆ ಇವೆಲ್ಲಾ ಅನುಮಾನಗಳನ್ನು ಹುಟ್ಟು ಹಾಕಿತ್ತು ಮತ್ತು ಆ ಅನುಮಾನ ಬಹುತೇಕ ನಿಜ ಕೂಡಾ ಆಗಿವೆ. ಈಗ ಸಿಕ್ಕಿರುವ ಅರ್ನಬ್ ಗೋಸ್ವಾಮಿ ಚಾಟ್ ಹಿಸ್ಟರಿ ಇವೆಲ್ಲ ಆರೋಪ, ಅನುಮಾನಗಳಿಗೆ ಪುಷ್ಟಿ ಕೊಡುವಂತಿದೆ.

ಅರ್ನಬ್ ಕ್ಯಾಮೆರಾ ಮುಂದೆ ಕೂತಾಗ ದೇಶ, ಸೈನ್ಯ, ಸೈನಿಕರು, ಪಾಕಿಸ್ತಾನ, ಭಯೋತ್ಪಾದಕ, ತುಕ್ಡೆ ತುಕ್ಡೆ ಅಂತ ಅರಚಾಡುವವನು ಕ್ಯಾಮೆರಾ ಹಿಂದೆ ನಿಜವಾದ ಭಯೋತ್ಪಾದಕನಂತೆಯೇ ವರ್ತಿಸಿದ್ದಾನೆ. ಇಡೀ ದೇಶಕ್ಕೆ ದೇಶವೇ 40 ಮಂದಿ ಸೈನಿಕರ ಸಾವಿಗೆ ಮರುಗುತ್ತಿರುವಾಗ ಈತ ಇದನ್ನು “ವಿಕ್ಟರಿ” ಎಂಬಂತೆ ಸಂಭ್ರಮಿಸಿದ್ದಾನೆ. ಇಲ್ಲಿ ಅರ್ನಬ್ ಗೋಸ್ವಾಮಿ, ಆತನ ಬೆಂಬಲಿಸುವವರು, ಆತನ ಧೋರಣೆಗಳನ್ನು ಒಪ್ಪುವ ಪಕ್ಷದವರ ಉದ್ದೇಶ ಸ್ಪಷ್ಟವಾಗಿದೆ ಎಂದು ಪ್ರಗತ್ ಕೆ.ಆರ್ ಅಭಿಪ್ರಾಯಪಟ್ಟಿದ್ದಾರೆ.

ಸೋರಿಕೆಯಾದ ಚಾಟ್‌ಗಳು ಸುಮಾರು 500 ಪುಟಗಳು ಮತ್ತು 80MB ಡೇಟಾವನ್ನು ಹೊಂದಿವೆ. ಚಾಟ್‌ಗಳಲ್ಲಿ, ಪಾರ್ಥೋ ದಾಸ್ ಗುಪ್ತಾ ಅರ್ನಾಬ್‌ಗೆ ಪಿಎಂಒ ಸಹಾಯವನ್ನು ಕೇಳುವಂತೆ ಮತ್ತು ಅವರ ವ್ಯವಹಾರಕ್ಕೆ ಸಹಾಯ ಮಾಡಲು ಉನ್ನತ ಮಂತ್ರಿಗಳೊಂದಿಗೆ ಭೇಟಿಯಾಗುವಂತಗೆ ಮಾತುಕತೆ ನಡೆಸಿದ ವಿವರಗಳಿವೆ.


ಇದನ್ನೂ ಓದಿ: PMO ಕಚೇರಿಯಿಂದಲೇ ಸಹಾಯ ಕೇಳಿದ್ದ ಅರ್ನಾಬ್?: BARC ಸಿಇಒ ಜೊತೆಗಿನ ವಾಟ್ಸಾಪ್ ಚಾಟ್‌ಗಳು ಲೀಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವುದೇ ದೇಶದ್ರೋಹಿ ಕೆಲಸ ಮಾಡಿದರೂ ಪರವಾಗಿಲ್ಲ ……
    ಆದರೆ ಅವನು BJP ಗೆ ಬಕೆಟ್ ಹಿಡಿದ್ರೆ ಅವನು ದೇಶಪ್ರೇಮಿ…
    RSS..BJP…ಆಟವಿದು…

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...