Homeಮುಖಪುಟಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಬಾಲಾಕೋಟ್ ದಾಳಿಯ ಬಗ್ಗೆಯೂ ಮೂರು ದಿನಗಳ ಮೊದಲೇ ಅರ್ನಾಬ್‌ಗೆ ಗೊತ್ತಿತ್ತು ಎಂಬ ವಿಷಯ ಲೀಕ್ ಆಗಿರುವ ವಾಟ್ಸಾಪ್ ಚಾಟ್‌ಗಳಿಂದ ತಿಳಿದುಬಂದಿದೆ.

- Advertisement -
- Advertisement -

2019ರ ಫೆಬ್ರವರಿ ತಿಂಗಳಿನಲ್ಲಿ ಕಾಶ್ಮೀರದ ಪುಲ್ವಾಮ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯನ್ನು ಪತ್ರಕರ್ತ ಅರ್ನಾಬ್ ಗೋಸ್ವಾಮಿ ಸಂಭ್ರಮಿಸಿದ್ದ ಎಂಬ ಆಘಾತಕಾರಿ ಸಂಗತಿ ಹೊರಬಿದ್ದಿದೆ. ಆ ದಾಳಿಯಲ್ಲಿ 40ಕ್ಕೂ ಹೆಚ್ಚು ಭಾರತೀಯ ಯೋಧರು ಹುತಾತ್ಮರಾಗಿದ್ದರು. ಅಲ್ಲದೇ ತದನಂತರ ಭಾರತದ ಸೈನಿಕರು ನಡೆಸಿದ ಬಾಲಾಕೋಟ್ ದಾಳಿಯ ಬಗ್ಗೆಯೂ ಮೂರು ದಿನಗಳ ಮೊದಲೇ ಅರ್ನಾಬ್‌ಗೆ ಗೊತ್ತಿತ್ತು ಎಂಬ ವಿಷಯ ಲೀಕ್ ಆಗಿರುವ ವಾಟ್ಸಾಪ್ ಚಾಟ್‌ಗಳಿಂದ ತಿಳಿದುಬಂದಿದೆ. ಈ ಕುರಿತು ದೇಶಾದ್ಯಂತ ಅರ್ನಾಬ್ ಗೋಸ್ವಾಮಿ ಮತ್ತು ಕೇಂದ್ರ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಟಿಆರ್‌ಪಿ ಹಗರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ರಿಪಬ್ಲಿಕ್ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಮತ್ತು BARC ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ನಡುವಿನ ವಾಟ್ಸಾಪ್‌ ಚಾಟ್‌ಗಳ ಸುಮಾರು 500 ಪುಟಗಳನ್ನು ಬಹಿರಂಗಗೊಳಿಸಿದ್ದಾರೆ ಎಂಬ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಆದರೆ ಈ ಕುರಿತು ಯಾವುದೇ ಮುಖ್ಯವಾಹಿನಿ ಮಾಧ್ಯಮಗಳು ಸುದ್ದಿ ಮಾಡಿಲ್ಲವಾದರೂ ಸಾಮಾಜಿಕ ಜಾಲತಾಣಗಳಲ್ಲಿ ಬಹಳಷ್ಟು ಮಂದಿ ಕಿಡಿಕಾರಿದ್ದಾರೆ.

This attack we have won like crazy… ಇದು ಇಡೀ ದೇಶವನ್ನು ನಡುಗಿಸಿದ ಪುಲ್ವಾಮ ದಾಳಿಯ ಬಗ್ಗೆ ಅರ್ನಾಬ್ ಗೋಸ್ವಾಮಿ ಆಡಿದ ಮಾತುಗಳು. ಇವು ಲೀಕ್‌ ಆದ ವಾಟ್ಸಾಪ್ ಚಾಟ್‌ಗಳಲ್ಲಿ ದಾಖಲಾಗಿದೆ. ನೇಷನ್ ವಾಂಟ್ಸ್‌ ಟು ನೋ ಎಂದು ಅರಚುತ್ತಿದ್ದ ಅರ್ನಾಬ್ ಗೋಸ್ವಾಮಿಯ ದೇಶಪ್ರೇಮವೆ ಇದು? ಎಂದು ಹಲವರು ಟೀಕೆ ಮಾಡಿದ್ದಾರೆ.

ವಾಟ್ಸಾಪ್ ಚಾಟ್ ಪ್ರಕಾರ ಅರ್ನಾಬ್ ಗೋಸ್ವಾಮಿಗೆ ಬಾಲಾಕೋಟ್ ದಾಳಿಯ ಬಗ್ಗೆ ಮೂರು ದಿನಗಳ ಮೊದಲೇ ಗೊತ್ತಿತ್ತು. ಈ ಬಾರಿ ದೊಡ್ಡದೇನೋ ನಡೆಯುತ್ತದೆ ಎಂದು ಅರ್ನಾಬ್ ಹೇಳಿದರೆ, ಇದರಿಂದಾಗಿ ದೊಡ್ಡ ಮನುಷ್ಯನಿಗೆ (big man) ತುಂಬಾ ಒಳ್ಳೆಯದಾಗುತ್ತದೆ ಎನ್ನುತ್ತಾನೆ ಪಾರ್ಥೋ ದಾಸ್ ಗುಪ್ತ. ಅಷ್ಟೇ ಅಲ್ಲ, ಇದರಿಂದಾಗಿಯೇ ದೊಡ್ಡ ಮನುಷ್ಯ ಈ ಚುನಾವಣೆಯನ್ನು ಗುಡಿಸಿಕೊಂಡು (ದೊಡ್ಡ ಗೆಲುವು) ಬರುತ್ತಾನೆ ಎನ್ನುತ್ತಾನೆ. ಇದು ಮಾಮೂಲಿ ಸರ್ಜಿಕಲ್ ಸ್ಟ್ರೈಕ್ ಥರ ಅಲ್ಲ, ಅದಕ್ಕಿಂತ ದೊಡ್ಡದು. ಅಷ್ಟೇ ಅಲ್ಲ, ಕಾಶ್ಮೀರದಲ್ಲೂ ಸದ್ಯದಲ್ಲೇ ದೊಡ್ಡದೇನೋ ನಡೆಸಲಾಗುವುದು. ಜನ‌ರು ನಿಜಕ್ಕೂ ಖುಷಿಯಾಗುತ್ತಾರೆ ಎನ್ನುತ್ತಾನೆ ಅರ್ನಾಬ್.

ದೇಶದ ರಕ್ಷಣೆ, ಮಿಲಿಟರಿ ಕಾರ್ಯಾಚರಣೆಗಳಿಗೆ ಸಂಬಂಧಿಸಿದ ಅತ್ಯಂತ ರಹಸ್ಯ‌ ಮಾಹಿತಿಗಳೆಲ್ಲ ಅರ್ನಾಬ್ ಗೋಸ್ವಾಮಿಗೆ ಹೇಗೆ ಗೊತ್ತಾಗುತ್ತಿತ್ತು? ಇದು Official secrets Act ಪ್ರಕಾರ ಕ್ರಿಮಿನಲ್ ಅಪರಾಧವಲ್ಲವೇ?
ಬೇರೆ ದೇಶಗಳಲ್ಲಿ ಇಂಥದ್ದೇನಾದರೂ ನಡೆದಿದ್ದರೆ, ಇಷ್ಟೊತ್ತಿಗೆ ಅರ್ನಾಬ್ ಜೈಲಿನಲ್ಲಿರುತ್ತಿದ್ದ. ಆದರೆ ಅವನು ದೊಡ್ಡ ಮನುಷ್ಯರ‌ ಮುದ್ದಿನ ಕೂಸು. ಅವನು ಕಿಯ್ಯೋ ಎಂದು ಕೂಗಿದರೆ ಉನ್ನತ ನ್ಯಾಯಾಲಯಗಳ ಕರುಳು ಚುರುಕ್ ಎಂದು ರಕ್ಷಣೆಗೆ ನಿಲ್ಲುತ್ತವೆ! ಒಂದಂತೂ ಸತ್ಯ. ಇಡೀ ದೇಶದಲ್ಲಿ ಅತಿ ದೊಡ್ಡ AntiNational ಪತ್ರಕರ್ತ ಒಬ್ಬನಿದ್ದರೆ ಅದು ಅರ್ನಾಬ್ ಗೋಸ್ವಾಮಿಯೇ. ನಲವತ್ತು ಸೈನಿಕರ ಸಾವನ್ನು ತನ್ನ ಚಾನಲ್ ವಿಜಯಕ್ಕಾಗಿ ಸಂಭ್ರಮಿಸುವ ಇಂಥ ದೇಶದ್ರೋಹಿ ಇನ್ನೊಬ್ಬನಿರಲು ಸಾಧ್ಯವಿಲ್ಲ ಎಂದು ದಿನೇಶ್ ಕುಮಾರ್ ಎಸ್‌.ಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

BARC ಮಾಜಿ ಮುಖ್ಯಸ್ಥ ಮತ್ತು ಅರ್ನಾಬ್ ಗೋಸ್ವಾಮಿ ನಡುವೆ ನಡೆದ ವಾಟ್ಸಪ್ ಹರಟೆಗಳು ಅನೇಕ ಕಳವಳಕಾರಿ ವಿಷಯಗಳನ್ನು ಬಯಲಿಗೆಳೆದಿವೆ. ಕೆಲ ಪತ್ರಕರ್ತರು ಮತ್ತು ಸರಕಾರದ ನಡುವಣ ಅನೈತಿಕ ಸಂಬಂಧದ ಮೇಲೆ (ರಾಡಿಯಾ ಟೇಪ್ ಬಳಿಕ) ಮತ್ತೊಮ್ಮೆ ಬೆಳಕು ಚೆಲ್ಲಿದೆ. ಅರ್ನಾಬ್ ಮತ್ತು ಪ್ರಧಾನಿ ಕಚೇರಿಯ ನಡುವಣ ಸುಮಧುರ ಸಂಬಂಧ, ಅರ್ನಾಬ್ ಗೆ ಸರಕಾರದ ಮೇಲಿದ್ದ ನಿಯಂತ್ರಣ ಇವಷ್ಟೇ ಅಲ್ಲ, ನ್ಯಾಯಾಧೀಶರನ್ನು ಖರೀದಿಸುವ ಬಗ್ಗೆಯೂ ಅದರಲ್ಲಿ ಪ್ರಸ್ತಾಪವಿದೆ. ! ಇದು ತುಂಬಾ ಗಂಭೀರ ವಿಚಾರ. ಇದರ ಬಗ್ಗೆ ನ್ಯಾಯಾಲಯ ಏನು ಕ್ರಮ ತೆಗೆದುಕೊಳ್ಳುತ್ತದೆ ನೋಡಬೇಕು ಎಂದು ಶ್ರೀನಿವಾಸ ಕಾರ್ಕಳರವರು ಅಭಿಪ್ರಾಯಪಟ್ಟಿದ್ದಾರೆ.

ಬಾಲಾಕೋಟ್ ದಾಳಿ ಮೂರು ದಿನ ಮೊದಲೇ ಅರ್ನಾಬ್‌ಗೆ ಗೊತ್ತಿದ್ದರೆ, ಈ ದೇಶದ ಪ್ರಧಾನಿ, ರಕ್ಷಣಾ ಮಂತ್ರಿ, ಗೃಹಮಂತ್ರಿ ಯಾರು? ಎಂದು ಪ್ರಸಾದ್ ರಕ್ಷಿಧಿಯವರು ಪ್ರಶ್ನಿಸಿದ್ದಾರೆ.

ಅರ್ನಾಬ್ ವಾಟ್ಸಾಪ್ ಚಾಟ್ ಲೀಕ್ ಹೊಲಸು ರಾಡಿಯಾ ಟೇಪ್‌ಗಿಂತ ಹೆಚ್ಚು ಅಪಾಕಾರಿಯಾದುದು. ಆದರೆ ಆಗ ವಿಚಾರಗಳನ್ನು ಆಲಿಸುವ ಮತ್ತು ವಿಮರ್ಶಿಸುವ ಜನರಿದ್ದರು ಅವರು ಕಣ್ಮರೆಯಾಗಿದ್ದಾರೆ ಅಷ್ಟೇ ವ್ಯತ್ಯಾಸ ಎಂದು ಆದಿತ್ಯ ಭಾರದ್ವಾಜ್ ಆತಂಕ ವ್ಯಕ್ತಪಡಿಸಿದ್ದಾರೆ.

ಹಿಂದೆಯೂ ಹೇಳಿದ್ವಿ, ಇಂದೂ ಹೇಳ್ತೀವಿ, ಮುಂದೆಯೂ ಹೇಳ್ತಾನೇ ಇರ್ತೀವಿ.. ಪುಲ್ವಾಮಾ ದಾಳಿ ಒಂದು ಪೂರ್ವ ನಿಯೋಜಿತ ಕೃತ್ಯ. ಇದರಲ್ಲಿ ದೇಶದ ಪ್ರಮುಖ ವ್ಯಕ್ತಿಗಳು ಭಯೋತ್ಪಾದಕರ ಜೊತೆಗೆ ಶಾಮೀಲಾಗಿದ್ದಾರೆ. ಅದರಲ್ಲೂ ಒಂದು ನಿರ್ದಿಷ್ಟ ಪಕ್ಷದ ಪ್ರಮುಖರು ಈ ಸಂಚಿಗೆ ಮತ್ತವರ ರಾಜಕೀಯ ಹಿತಾಸಕ್ತಿಗಾಗಿ 40 ಮಂದಿ ಸೈನಿಕರನ್ನು ಬಲಿ ಪಡೆದಿದ್ದಾರೆ. 2019 ರ ಚುನಾವಣೆಯ ಗೆಲುವಿನ ಕಾರಣಕ್ಕೆ, ದೇಶದಲ್ಲಿ ಯುದ್ಧೋನ್ಮಾದ ಸೃಷ್ಟಿಸುವುದರಿಂದ ಚುನಾವಣೆಯಲ್ಲಿ ಗೆಲ್ಲಬಹುದು ಎಂಬ ಅಂಶವನ್ನೇ ಪ್ರಮುಖವಾಗಿ ಇಟ್ಟುಕೊಂಡು ಈ ದಾಳಿಗೆ ಮುಹೂರ್ತ ಇಟ್ಟಿದ್ದಾರೆ. ಪುಲ್ವಾಮಾ ದಾಳಿಯ ನಂತರದ ಬೆಳವಣಿಗೆ ಇವೆಲ್ಲಾ ಅನುಮಾನಗಳನ್ನು ಹುಟ್ಟು ಹಾಕಿತ್ತು ಮತ್ತು ಆ ಅನುಮಾನ ಬಹುತೇಕ ನಿಜ ಕೂಡಾ ಆಗಿವೆ. ಈಗ ಸಿಕ್ಕಿರುವ ಅರ್ನಬ್ ಗೋಸ್ವಾಮಿ ಚಾಟ್ ಹಿಸ್ಟರಿ ಇವೆಲ್ಲ ಆರೋಪ, ಅನುಮಾನಗಳಿಗೆ ಪುಷ್ಟಿ ಕೊಡುವಂತಿದೆ.

ಅರ್ನಬ್ ಕ್ಯಾಮೆರಾ ಮುಂದೆ ಕೂತಾಗ ದೇಶ, ಸೈನ್ಯ, ಸೈನಿಕರು, ಪಾಕಿಸ್ತಾನ, ಭಯೋತ್ಪಾದಕ, ತುಕ್ಡೆ ತುಕ್ಡೆ ಅಂತ ಅರಚಾಡುವವನು ಕ್ಯಾಮೆರಾ ಹಿಂದೆ ನಿಜವಾದ ಭಯೋತ್ಪಾದಕನಂತೆಯೇ ವರ್ತಿಸಿದ್ದಾನೆ. ಇಡೀ ದೇಶಕ್ಕೆ ದೇಶವೇ 40 ಮಂದಿ ಸೈನಿಕರ ಸಾವಿಗೆ ಮರುಗುತ್ತಿರುವಾಗ ಈತ ಇದನ್ನು “ವಿಕ್ಟರಿ” ಎಂಬಂತೆ ಸಂಭ್ರಮಿಸಿದ್ದಾನೆ. ಇಲ್ಲಿ ಅರ್ನಬ್ ಗೋಸ್ವಾಮಿ, ಆತನ ಬೆಂಬಲಿಸುವವರು, ಆತನ ಧೋರಣೆಗಳನ್ನು ಒಪ್ಪುವ ಪಕ್ಷದವರ ಉದ್ದೇಶ ಸ್ಪಷ್ಟವಾಗಿದೆ ಎಂದು ಪ್ರಗತ್ ಕೆ.ಆರ್ ಅಭಿಪ್ರಾಯಪಟ್ಟಿದ್ದಾರೆ.

ಸೋರಿಕೆಯಾದ ಚಾಟ್‌ಗಳು ಸುಮಾರು 500 ಪುಟಗಳು ಮತ್ತು 80MB ಡೇಟಾವನ್ನು ಹೊಂದಿವೆ. ಚಾಟ್‌ಗಳಲ್ಲಿ, ಪಾರ್ಥೋ ದಾಸ್ ಗುಪ್ತಾ ಅರ್ನಾಬ್‌ಗೆ ಪಿಎಂಒ ಸಹಾಯವನ್ನು ಕೇಳುವಂತೆ ಮತ್ತು ಅವರ ವ್ಯವಹಾರಕ್ಕೆ ಸಹಾಯ ಮಾಡಲು ಉನ್ನತ ಮಂತ್ರಿಗಳೊಂದಿಗೆ ಭೇಟಿಯಾಗುವಂತಗೆ ಮಾತುಕತೆ ನಡೆಸಿದ ವಿವರಗಳಿವೆ.


ಇದನ್ನೂ ಓದಿ: PMO ಕಚೇರಿಯಿಂದಲೇ ಸಹಾಯ ಕೇಳಿದ್ದ ಅರ್ನಾಬ್?: BARC ಸಿಇಒ ಜೊತೆಗಿನ ವಾಟ್ಸಾಪ್ ಚಾಟ್‌ಗಳು ಲೀಕ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಯಾವುದೇ ದೇಶದ್ರೋಹಿ ಕೆಲಸ ಮಾಡಿದರೂ ಪರವಾಗಿಲ್ಲ ……
    ಆದರೆ ಅವನು BJP ಗೆ ಬಕೆಟ್ ಹಿಡಿದ್ರೆ ಅವನು ದೇಶಪ್ರೇಮಿ…
    RSS..BJP…ಆಟವಿದು…

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...