Homeಮುಖಪುಟ3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್: ಅರ್ನಾಬ್ ಹಾದಿಯಲ್ಲಿ ಕಪಿಲ್ ಮಿಶ್ರಾ!

ಮಾಧ್ಯಮಗಳು ಸ್ವತಂತ್ರವಾಗಿ, ನಿಷ್ಪಷಪಾತವಾಗಿ, ಆಳುವ ವರ್ಗವನ್ನು ಪ್ರಶ್ನಿಸುತ್ತಾ ಜನಪರವಾಗಿ ಕೆಲಸ ಮಾಡಬೇಕೆಂದು ಬಯಸುವವರ ಮಧ್ಯೆ ಮತ್ತಷ್ಟು ಪ್ರೊಪೊಗಾಂಡಾ ಮಾಧ್ಯಮಗಳನ್ನು ತಯಾರಿಸಲು ಕಪಿಲ್ ಮಿಶ್ರಾ ಹೊರಟಂತಿದೆ.

- Advertisement -
- Advertisement -

ಲಸಿಕೆ ಅಭಿಯಾನದ ಆರಂಭದ ಈ ಸಂದರ್ಭದಲ್ಲಿ, ಭಾರತದ ಮೇಲ್ ಮಧ್ಯಮ ವರ್ಗ ಮತ್ತು ನವ ಮಧ್ಯಮ ವರ್ಗದ ಸುಶಿಕ್ಷಿತ, ಇಂಗ್ಲಿಷ್ ಚೆನ್ನಾಗಿ ಬಲ್ಲ ಟಿವಿ ವೀಕ್ಷಕರ ಕಣ್ಮಣಿಯಾಗಿದ್ದ ಪತ್ರಕರ್ತ ಅರ್ನಾಬ್‌ ಗೊಸ್ವಾಮಿಯ ವಾಟ್ಸಾಪ್ ಚಾಟ್‌ಗಳು ಲೀಕ್ ಆಗಿದ್ದು ಅವರ ದೇಶ ವಿರೋಧಿ ಕೃತ್ಯಗಳು ಹೊರ ಬೀಳುತ್ತಿರುವ ಈ ಸಂದರ್ಭದಲ್ಲಿ, ದ್ಚೇಷ ಭಾಷಣಕ್ಕೆ ಕುಖ್ಯಾತಿಯಾದ ಬಿಜೆಪಿ ಮುಖಂಡ ಕಪಿಲ್ ಮಿಶ್ರಾ 3 ತಿಂಗಳ ‘ಮೊಬೈಲ್ ಜರ್ನಲಿಸಂ’ ಕೋರ್ಸ್ ಆರಂಭಿಸಿದ್ದಾರೆ.

ದ್ವೇಷಪೂರಿತ ಭಾಷಣ, ಟ್ವೀಟ್‌ಗಳ ಕಾರಣಕ್ಕೆ ‘ಕುಖ್ಯಾತಿ’ ಪಡೆದು, ಹಲವು ಪ್ರಕರಣಗಳನ್ನು ಎದುರಿಸುತ್ತಿರುವ ಇವರು ಈಶಾನ್ಯ ದೆಹಲಿಯಲ್ಲಿ ನಡೆದ ಕೋಮುಗಲಭೆಗಳಲ್ಲಿ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದಾರೆ. ಅಲ್ಲದೆ ದ್ವೇಷ ಭಾಷಣಕ್ಕೆ ಕಪಿಲ್ ಮಿಶ್ರಾರನ್ನು ಫೇಸ್‌ಬುಕ್ ಹೆಸರಿಸಿತ್ತು.

ಅವರು ಆರಂಭಿಸುತ್ತಿರುವ ಕೋರ್ಸ್‌ನ ಸಿಲಬಸ್ ಏನೇಂದರೆ, “ಪ್ರಚಾರ-ನಿರ್ವಹಣಾ ಪತ್ರಿಕೋದ್ಯಮ” (ಪ್ರೊಪಗಂಡಾ ಹ್ಯಾಂಡ್ಲಿಂಗ್ ಜರ್ನಲಿಸಂ) ಕಲಿಸುವುದು. ಇದರಲ್ಲಿ “ಪ್ರಚಾರ ಶಬ್ದಕೋಶ” (ಪ್ರೊಪಗಂಡಾ ವೊಕಾಬುಲರಿ), “ಮಾಧ್ಯಮ-ಕಾರ್ಪೊರೇಟ್ ಸಂಬಂಧಗಳು” ಇತ್ಯಾದಿ ಕಲಿಸುತ್ತಾರಂತೆ!

ಫೇಸ್‌ಬುಕ್‌ನಲ್ಲಿ ಮಿಶ್ರಾ ಅವರ ಈ ಕುರಿತ ಪೋಸ್ಟ್, ಈ ಕೋರ್ಸ್ ಮೂಲಕ, “ನಿಮ್ಮ ಸ್ವಂತ ನಿರೂಪಣೆಯನ್ನು ಮಾಡಲು ಕಲಿಯಿರಿ” ಎಂದು ಹೇಳುತ್ತದೆ. ಮೂರು ತಿಂಗಳ ಈ ಆನ್‌ಲೈನ್ ಈ ಕೋರ್ಸ್‌ಗೆ ಮಿಶ್ರಾ ಮತ್ತು ಮಾಜಿ ಐಎಎಸ್ ಅಧಿಕಾರಿ ಸಂಜಯ್ ದೀಕ್ಷಿತ್ ಮಾರ್ಗದರ್ಶನ ನೀಡಲಿದ್ದಾರೆ. “ಪ್ರಚಾರ-ನಿರ್ವಹಣಾ ಪತ್ರಿಕೋದ್ಯಮ” ವನ್ನು ಕಲಿಸುವ ಹೊರತಾಗಿ, ಇದು ಎಡಿಟಿಂಗ್, ಯೂಟ್ಯೂಬ್‌ಗಾಗಿ ವೀಡಿಯೊಗಳನ್ನು ಮಾಡುವುದು, “ನವೀನ ಆಲೋಚನೆಗಳೊಂದಿಗೆ ಹೆಚ್ಚಿನ ಪ್ರೇಕ್ಷಕರನ್ನು ಆಕರ್ಷಿಸುವುದು” ಮತ್ತು “ಸಾಮಾಜಿಕ ಮಾಧ್ಯಮ ತಂತ್ರಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು” –ಈ ಎಲ್ಲವನ್ನೂ ಕಲಿಸಲಿದೆಯಂತೆ!

ಈ ಎಲ್ಲಾ ವಿಚಾರಗಳನ್ನು ಅರ್ನಾಬ್ ಗೋಸ್ವಾಮಿ ತಮ್ಮ ರಿಪಬ್ಲಿಕ್ ಚಾನೆಲ್ ಮೂಲಕ ಮಾಡುತ್ತಿದ್ದರು. ಆದರೆ ಅವರು ಬಾರ್ಕ್ ಸಿಇಓ ಪಾರ್ಥೋ ದಾಸ್‌ಗುಪ್ತರವರೊಂದಿಗೆ ನಡೆಸಿ ವಾಟ್ಸಾಪ್ ಚಾಟ್‌ಗಳು ಸೋರಿಕೆಯಾಗಿವೆ. ಅದರಲ್ಲಿ ಅವರು ಪುಲ್ವಾಮ ದಾಳಿಯನ್ನು ಸಂಭ್ರಮಿಸಿರುವುದು, ಬಾಲಾಕೋಟ್ ದಾಳಿ ಮೋದಿಯನ್ನು ಮತ್ತೊಮ್ಮೆ ಅಧಿಕಾರಕ್ಕೆ ತರುತ್ತದೆ ಎಂದು ಮಾತುಕತೆ ನಡೆಸಿದ್ದು ಇದು ದೇಶವಿರೋಧಿ ನಡೆ ಎಂಬುದಾಗಿ ಟೀಕೆಗೊಳಗಾಗಿದೆ.

ಮಾಧ್ಯಮಗಳು ಸ್ವತಂತ್ರವಾಗಿ, ನಿಷ್ಪಷಪಾತವಾಗಿ, ಆಳುವ ವರ್ಗವನ್ನು ಪ್ರಶ್ನಿಸುತ್ತಾ ಜನಪರವಾಗಿ ಕೆಲಸ ಮಾಡಬೇಕೆಂದು ಬಯಸುವವರ ಮಧ್ಯೆ ಮತ್ತಷ್ಟು ಪ್ರೊಪೊಗಾಂಡಾ ಮಾಧ್ಯಮಗಳನ್ನು ತಯಾರಿಸಲು ಕಪಿಲ್ ಮಿಶ್ರಾ ಹೊರಟಂತಿದೆ.


ಇದನ್ನೂ ಓದಿ: ದ್ವೇಷ ಭಾಷಣದ ಉದಾಹರಣೆಗೆ ’ಕಪಿಲ್ ಮಿಶ್ರಾ’ ಭಾಷಣವನ್ನು ಉಲ್ಲೇಖಿದ ಫೇಸ್‌ಬುಕ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...