Homeಮುಖಪುಟಅರ್ನಾಬ್‌ ಜೊತೆಗಿನ ವಾಟ್ಸಾಪ್ ಚಾಟ್ ಲೀಕ್ ಬೆನ್ನಲ್ಲೆ ಬಾರ್ಕ್‌ ಮಾಜಿ ಸಿಇಒ ದಾಸ್‌ಗುಪ್ತ ಐಸಿಯುಗೆ ದಾಖಲು

ಅರ್ನಾಬ್‌ ಜೊತೆಗಿನ ವಾಟ್ಸಾಪ್ ಚಾಟ್ ಲೀಕ್ ಬೆನ್ನಲ್ಲೆ ಬಾರ್ಕ್‌ ಮಾಜಿ ಸಿಇಒ ದಾಸ್‌ಗುಪ್ತ ಐಸಿಯುಗೆ ದಾಖಲು

- Advertisement -
- Advertisement -

ಟಿಆರ್‌ಪಿ ಹಗರಣದಲ್ಲಿ ಬಂಧನವಾಗಿದ್ದ ಬಾರ್ಕ್‌ನ ಮಾಜಿ ಮುಖ್ಯಸ್ಥ ಪಾರ್ಥೋ ದಾಸ್‌ಗುಪ್ತಾ ಶುಕ್ರವಾರ ಮುಂಬೈನ ಜೆಜೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಟಿಆರ್‌ಪಿ ಹಗರಣದಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಿರುವ ಮುಂಬೈ ಪೊಲೀಸರು ಇವರನ್ನು ಡಿಸಂಬರ್ 24 ರಂದು ಬಂಧಿಸಿದ್ದರು.

ದಾಸ್‌ಗುಪ್ತ ಆಸ್ಪತ್ರೆಗೆ ದಾಖಲಾಗಿರುವ ಕುರಿತು ಎಎನ್‌ಐ ವರದಿ ಮಾಡಿದೆ. “ಟಿಆರ್‌ಪಿ ಹಗರಣದ ಪ್ರಮುಖ ಆರೋಪಿ ಬಾರ್ಕ್‌ನ ಮಾಜಿ ಸಿಇಒ ಪಾರ್ಥೋ ದಾಸ್‌ಗುಪ್ತ ಕಳೆದ ರಾತ್ರಿ ಮುಂಬೈನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸದ್ಯಕ್ಕೆ ಇವರು ತುರ್ತು ನಿಗಾ ಘಟಕದಲ್ಲಿ ಕೃತಕ ಉಸಿರಾಟದ ಬೆಂಬಲದಲ್ಲಿದ್ದಾರೆ” ಎಂದು ಟ್ವೀಟ್ ಮಾಡಿದೆ.

ಇದನ್ನೂ ಓದಿ: ಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

ಟಿಆರ್‌ಪಿ ಹಗರಣ ಭಾಗಿಯಾಗಿದ್ದಾರೆಂದು ಮುಂಬೈ ಪೊಲೀಸರು ಬಾರ್ಕ್(ರೇಟಿಂಗ್ ಏಜೆನ್ಸಿ ಬ್ರಾಡ್‌ಕಾಸ್ಟ್ ಆಡಿಯನ್ಸ್ ರಿಸರ್ಚ್ ಕೌನ್ಸಿಲ್)ನ ಮಾಜಿ ಸಿಇಒ ಪಾರ್ಥೋ ದಾಸ್‌ ಗುಪ್ತಾ ಅವರ ಬಂಧನದ ನಂತರ ಪ್ರಕರಣದಲ್ಲಿ ಹಲವು ಮಹತ್ವದ ಸುಳಿವುಗಳನ್ನು ಪಡೆದಿದ್ದರು.

ಇದನ್ನೂ ಓದಿ: PMO ಕಚೇರಿಯಿಂದಲೇ ಸಹಾಯ ಕೇಳಿದ್ದ ಅರ್ನಾಬ್?: BARC ಸಿಇಒ ಜೊತೆಗಿನ ವಾಟ್ಸಾಪ್ ಚಾಟ್‌ಗಳು ಲೀಕ್!

ಟಿಆರ್‌ಪಿ ತಿರುಚುವಿಕೆಯು 2016 ರಿಂದಲೇ ನಡೆಯುತ್ತಿದ್ದು, ಒಂದನೇ ಸ್ಥಾನದಲ್ಲಿದ್ದ ಟೈಮ್ಸ್ ನೌ ಚಾನೆಲ್ ಅನ್ನು ಎರಡನೇ ಸ್ಥಾನಕ್ಕೆ ತಳ್ಳಿ ಅರ್ನಾಬ್ ಗೋಸ್ವಾಮಿ ಅವರ ರಿಪಬ್ಲಿಕ್ ಟಿವಿಯನ್ನು ಒಂದನೇ ಸ್ಥಾನಕ್ಕೆ ತರಲಾಗಿದೆ ಎಂದು ಮುಂಬೈ ಜಂಟಿ ಪೊಲೀಸ್ ಆಯುಕ್ತ ಮಿಲಿಂದ್ ಭರಂಬೆ ತಿಳಿಸಿದ್ದಾರೆ.

ಈ ಕಾರಣಕ್ಕೆ ಪೊಲೀಸರು ದಾಸ್‌ಗುಪ್ತ ಅವರನ್ನು ವಿಚಾರಣೆ ನಡೆಸುತ್ತಿದ್ದರು. ಮುಂಬೈ ಪೊಲೀಸರು ಶುಕ್ರವಾರ ಅರ್ನಾಬ್ ಗೋಸ್ವಾಮಿ ಮತ್ತು ದಾಸ್‌ಗುಪ್ತ ಅವರ ನಡುವಿನ ವಾಟ್ಸಾಪ್ ಸಂದೇಶಗಳ ದಾಖಲೆಯನ್ನು ಬಿಡುಗಡೆ ಮಾಡಿದ್ದರು. ಇದರಲ್ಲಿ ಹತ್ತಾರು ಸ್ಫೋಟಕ ಮಾಹಿತಿಗಳು ಹೊರ ಬಂದಿದ್ದವು.

ಟಿಆರ್‌ಪಿ ಹಗರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಮತ್ತು BARC ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ನಡುವಿನ ವಾಟ್ಸಾಪ್‌ ಚಾಟ್‌ಗಳ ಸುಮಾರು 500 ಪುಟಗಳನ್ನು ಬಹಿರಂಗಗೊಳಿಸಿದ್ದಾರೆ ಎಂಬುದರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ.


ಇದನ್ನೂ ಓದಿ: Arnab Goswami’s leaked Whatsapp chats and the TRP Manipulation Scam

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...