Homeಮುಖಪುಟಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ಕಂಗನಾ ಕುರಿತು ಅಶ್ಲೀಲವಾಗಿ ಪ್ರತಿಕ್ರಿಯಿಸಿದ್ದ ಅರ್ನಾಬ್: ರಿಪಬ್ಲಿಕ್ ಟಿಆರ್‌ಪಿ ದಾಹಕ್ಕೆ ಕಂಗನಾ ಬಲಿಪಶು?

ರಿಪಬ್ಲಿಕ್ ಟಿವಿಯ ಟಿಆರ್‌ಪಿಗಾಗಿ ಒಂದು ಕಡೆ ತನ್ನ ಪ್ರೈಮ್ ಡಿಬೇಟ್‌ಗಳಲ್ಲಿ ಕಂಗನಾರನ್ನು ಕೂರಿಸಿಕೊಂಡು ಗಂಟೆಗಟ್ಟಲೆ ಚರ್ಚಿಸುವ, ಆಕೆಯನ್ನು ವೈಭವೀಕರಿಸುವ ಅರ್ನಾಬ್, ತನ್ನ ಮನಸ್ಸಿನಲ್ಲಿ ಆಕೆಯ ಬಗ್ಗೆ ಕೆಟ್ಟ ಭಾವನೆ ಹೊಂದಿದ್ದಾರೆ.

- Advertisement -
- Advertisement -

ಟಿಆರ್‌ಪಿ ಹಗರಣದ ತನಿಖೆ ನಡೆಸುತ್ತಿರುವ ಮುಂಬೈ ಪೊಲೀಸರು ರಿಪಬ್ಲಿಕ್ ಟಿವಿ ಮುಖ್ಯಸ್ಥ ಅರ್ನಾಬ್ ಗೋಸ್ವಾಮಿ ಮತ್ತು BARC ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ನಡುವಿನ ವಾಟ್ಸಾಪ್‌ ಚಾಟ್‌ಗಳ ಸುಮಾರು 500 ಪುಟಗಳನ್ನು ಬಹಿರಂಗಗೊಳಿಸಿದ್ದಾರೆ ಎಂಬುದರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದೆ. ಅದರಲ್ಲಿ ಅರ್ನಾಬ್ ಗೋಸ್ವಾಮಿ ಬಾಲಿವುಡ್ ನಟಿ ಕಂಗನಾ ರಾಣಾವತ್ ಕುರಿತು ಅಶ್ಲೀಲವಾಗಿ ಮಾತನಾಡಿರುವ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.

ಒಬ್ಬ ಮಹಿಳೆಗೆ ತನ್ನದೇ ಖಾಸಗಿತನ ಹಕ್ಕಿದೆ, ತನಗನಿಸಿದ್ದನ್ನು ಮಾಡುವ ಅಧಿಕಾರವಿದೆ ಎಂಬುದನ್ನು ಮರೆತು ಅರ್ನಾಬ್ ಗೋಸ್ವಾಮಿ ಕೊಳಕಾಗಿ ಕಂಗನಾ ಕುರಿತು ಮಾತನಾಡಿದ್ದಾರೆ. ಒಂದು ಕಡೆ ತನ್ನ ಚಾನೆಲ್‌ಗೆ ಆಕೆಯನ್ನು ಕರೆಸಿ ದೇಶಪ್ರೇಮ, ರಾಷ್ಟ್ರಭಕ್ತಿಯ ಕುರಿತು ಉದ್ರೇಕಕಾರಿಯಾಗಿ ಮಾತನಾಡಿಸುವ ಅರ್ನಾಬ್ ಅದೇ ಸಮಯದಲ್ಲಿ ಆಕೆಯ ಕುರಿತು ಬಾರ್ಕ್ ಸಿಇಒ ಜೊತೆ ಅಶ್ಲೀಲವಾಗಿ ಮಾತನಾಡಿರುವುದು ನೆಟ್ಟಿಗರಲ್ಲಿ ಆಕ್ರೋಶ ಹುಟ್ಟಿಸಿದೆ.

BARC ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ಕಂಗಾನ ಕುರಿತು ಸಂಭಾಷಣೆ ಆರಂಭಿಸಿದ್ದು, ಆಕೆ ಬಾಲಿವುಡ್ ನಟ ಹೃತಿಕ್ ರೋಷನ್ ಕಡೆ ಆಕರ್ಷಿತಳಾಗುತ್ತಿದ್ದಾಳೆ ಎಂದರೆ ಅದಕ್ಕೆ ಹೌದೆಂದಿರುವ ಅರ್ನಾಬ್ ಅಶ್ಲೀಲವಾಗಿ ಮಾತಾಡಿದ್ದಾರೆ. ಮುಂದುವರೆದು ‘ಎಲ್ಲಾ ಮುಗಿದಿದೆ, ನನ್ನ ಪ್ರಕಾರ ಆಕೆ ಕೊನೆಯಾಗುತ್ತಾಳೆ’ ಎಂದು ದಾಸ್ ಗುಪ್ತಾ ಹೇಳಿದರೆ, ‘ಆಕೆ ತನ್ನ ಮಿತಿ ಮೀರಿ ತನ್ನ ಗೆರೆ ದಾಟುತ್ತಿದ್ದಾಳೆ’ ಎಂದು ಅರ್ನಾಬ್ ಹೇಳುತ್ತಾರೆ!. ‘ಜನಕ್ಕೆ ಆಕೆಯನ್ನು ಕಂಡರೆ ಭಯ’ ಎಂದು ದಾಸ್ ಗುಪ್ತಾ ಹೇಳಿದರೆ ‘ಆಕೆಯನ್ನು ಜನ ಬಾಯ್ಕಾಟ್ ಮಾಡುತ್ತಾರೆ’ ಎಂದು ಅರ್ನಾಬ್ ಹೇಳಿದ್ದಾರೆ!.

ರಿಪಬ್ಲಿಕ್ ಟಿವಿಯ ಟಿಆರ್‌ಪಿಗಾಗಿ ಒಂದು ಕಡೆ ತನ್ನ ಪ್ರೈಮ್ ಡಿಬೇಟ್‌ಗಳಲ್ಲಿ ಕಂಗನಾರನ್ನು ಕೂರಿಸಿಕೊಂಡು ಗಂಟೆಗಟ್ಟಲೆ ಚರ್ಚಿಸುವ, ಆಕೆಯನ್ನು ವೈಭವೀಕರಿಸುವ ಅರ್ನಾಬ್, ತನ್ನ ಮನಸ್ಸಿನಲ್ಲಿ ಆಕೆಯ ಬಗ್ಗೆ ಕೆಟ್ಟ ಭಾವನೆ ಹೊಂದಿದ್ದಾರೆ. ಅಷ್ಟು ಮಾತ್ರವಲ್ಲ ಆಕೆಯನ್ನು ಜನ ಮುಗಿಸುತ್ತಾರೆ, ಬಾಯ್ಕಾಟ್ ಮಾಡುತ್ತಾರೆ ಎನ್ನುವ ಮೂಲಕ ಆಕೆ ತುಳಿತಕ್ಕೊಳಕ್ಕಾದರೆ ತನಗೇನು ತೊಂದರೆಯಿಲ್ಲ ಎನ್ನುವಂತೆ ವರ್ತಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ಮತ್ತು ವ್ಯಂಗ್ಯ ವ್ಯಕ್ತವಾಗಿದೆ.

ಅಲ್ಲದೆ 2019ರ ಫೆಬ್ರವರಿ ತಿಂಗಳಿನಲ್ಲಿ ಕಾಶ್ಮೀರದ ಪುಲ್ವಾಮ ಮೇಲೆ ಭಯೋತ್ಪಾದಕರು ನಡೆಸಿದ ದಾಳಿಯನ್ನು ಪತ್ರಕರ್ತ ಅರ್ನಾಬ್ ಗೋಸ್ವಾಮಿ ಸಂಭ್ರಮಿಸಿದ್ದ ಎಂಬ ಆಘಾತಕಾರಿ ಸಂಗತಿ ಹೊರಬಿದ್ದಿದೆ. ಆ ದಾಳಿಯಲ್ಲಿ 40ಕ್ಕೂ ಹೆಚ್ಚು ಭಾರತೀಯ ಯೋಧರು ಹುತಾತ್ಮರಾಗಿದ್ದರು. ಅಲ್ಲದೇ ತದನಂತರ ಭಾರತದ ಸೈನಿಕರು ನಡೆಸಿದ ಬಾಲಾಕೋಟ್ ದಾಳಿಯ ಬಗ್ಗೆಯೂ ಮೂರು ದಿನಗಳ ಮೊದಲೇ ಅರ್ನಾಬ್‌ಗೆ ಗೊತ್ತಿತ್ತು ಎಂಬ ವಿಷಯ ಲೀಕ್ ಆಗಿರುವ ವಾಟ್ಸಾಪ್ ಚಾಟ್‌ಗಳಿಂದ ತಿಳಿದುಬಂದಿದೆ.


ಇದನ್ನೂ ಓದಿ: ಪುಲ್ವಾಮ ದಾಳಿಯನ್ನು ಸಂಭ್ರಮಿಸಿದ್ದ ಅರ್ನಾಬ್: ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...