Homeಕರೋನಾ ತಲ್ಲಣವಿಶ್ವದ ಹಲವು ನಾಯಕರು ಮೊದಲ ಲಸಿಕೆ ಪಡೆದಿರುವಾಗ ಮೋದಿ ಏಕೆ ಪಡೆಯಲಿಲ್ಲ? ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ

ವಿಶ್ವದ ಹಲವು ನಾಯಕರು ಮೊದಲ ಲಸಿಕೆ ಪಡೆದಿರುವಾಗ ಮೋದಿ ಏಕೆ ಪಡೆಯಲಿಲ್ಲ? ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೆ

ವಿಶ್ವದಾದ್ಯಂತ ಹೆಚ್ಚಿನ ದೇಶಗಳಲ್ಲೂ ವ್ಯಾಕ್ಸಿನೇಷನ್ ಪ್ರಾರಂಭವಾಗಿದೆ. ಅದರಂತೆ ತಮ್ಮ ದೇಶಗಳ ಪ್ರಜೆಗಳಿಗೆ ಲಸಿಕೆಯ ಬಗ್ಗೆ ನಂಬಿಕೆ ಬರಲು ಅಲ್ಲಿನ ನಾಯಕರು ಮೊದಲಿಗೆ ಲಸಿಕೆಯನ್ನು ಪಡೆಯುತ್ತಿದ್ದಾರೆ.

- Advertisement -
- Advertisement -

ಕಳೆದ ವರ್ಷ ಪ್ರಾರಂಭವಾದ ಕೊರೊನಾ ಸಾಂಕ್ರಮಿಕಕ್ಕೆ ಕೊನೆಗೂ ಲಸಿಕೆ ತಯಾರಾಗಿದೆ. ಭಾರತದಲ್ಲಿ ಈಗಾಗಲೇ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಎರಡು ಲಸಿಕೆಗಳಿಗೆ ಅನುಮತಿ ಸಿಕ್ಕಿವೆ. ಭಾರತ್ ಬಯೋಟೆಕ್ ಅಭಿವೃದ್ದಿಪಡಿಸಿರುವ ಕೊವ್ಯಾಕ್ಸಿನ್‌ನ ಮೂರನೇ ಹಂತದ ಪ್ರಯೋಗಗಳ ಫಲಿತಾಂಶದ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಹಾಗಾಗಿ ಲಸಿಕೆ ಬಗ್ಗೆ ವಿಜ್ಞಾನಿಗಳು ಸೇರಿದಂತೆ ಕೆಲವರು ಅಪಸ್ವರ ಎತ್ತಿದ್ದಾರೆ. ಈ ನಡುವೆಯೇ ಭಾರತದಾದ್ಯಂತ ಇಂದು ಮೊದಲ ಸುತ್ತಿನ ವ್ಯಾಕ್ಸಿನೇಷನ್ ಆರಂಭವಾಗಿದ್ದು ಮೊದಲ ಹಂತದಲ್ಲಿ ಕೊರೊನಾ ವಾರಿಯರ್ಸ್‌ಗಳಿಗೆ ಲಸಿಕೆ ನೀಡಲಾಗುತ್ತಿದೆ.

ಈ ಬಗ್ಗೆ ಹೆಮ್ಮೆ ವ್ಯಕ್ತಪಡಿಸಿರುವ ಪ್ರಧಾನಿ ನರೇಂದ್ರ ಮೋದಿ ಎರಡು ದೋಸ್‌ಗಳನ್ನೂ ಮರೆಯದೆ ಪಡೆಯಿರಿ ಎಂದು ಹೇಳಿದ್ದಾರೆ. ಅದರಂತೆಯೆ ಕರ್ನಾಟಕದಲ್ಲಿ ಕೂಡಾ ಮುಖ್ಯಮಂತ್ರಿ ಯಡಿಯೂರಪ್ಪ ಅವರು ವ್ಯಾಕ್ಸಿನೇಷನ್‌ಗೆ ಚಾಲನೆ ನೀಡಿ “ವಿಕ್ಟೋರಿಯಾ ಆಸ್ಪತ್ರೆಯ ಸ್ವಚ್ಛತಾ ಸಿಬ್ಬಂದಿ ನಾಗರತ್ನ ಅವರಿಗೆ ಮೊದಲ ಲಸಿಕೆ ನೀಡುವ ಮೂಲಕ ರಾಜ್ಯಾದ್ಯಂತ ಲಸಿಕೆ ವಿತರಣೆ ಅಧಿಕೃತವಾಗಿ ಚಾಲನೆ ನೀಡಲಾಯಿತು” ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಕೊವ್ಯಾಕ್ಸಿನ್ ಟ್ರಯಲ್: ಅನಿಲ ದುರಂತ ಸಂತ್ರಸ್ತರ ಮೇಲೆ ಲಸಿಕೆ ದಾಳಿ

ವಿಶ್ವದಾದ್ಯಂತ ಹೆಚ್ಚಿನ ದೇಶಗಳಲ್ಲೂ ವ್ಯಾಕ್ಸಿನೇಷನ್ ಪ್ರಾರಂಭವಾಗಿದೆ. ಅದರಂತೆ ತಮ್ಮ ದೇಶಗಳ ಪ್ರಜೆಗಳಿಗೆ ಲಸಿಕೆಯ ಬಗ್ಗೆ ನಂಬಿಕೆ ಬರಲು ಅಲ್ಲಿನ ನಾಯಕರು ಮೊದಲಿಗೆ ಲಸಿಕೆಯನ್ನು ಪಡೆಯುತ್ತಿದ್ದಾರೆ. ಹಾಗಾಗಿ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಜನರು ಭಾರತದಲ್ಲಿ ಕೂಡಾ ನಮ್ಮ ನಾಯಕರು ಈ ಲಸಿಕೆಯನ್ನು ಮೊದಲು ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಆರ್‌ಜೆಡಿ ಮುಖಂಡ ತೇಜ್ ಪ್ರತಾಪ್ ಯಾದವ್‌, “ಮೊದಲು ಪ್ರಧಾನಿ ನರೇಂದ್ರ ಮೋದಿ ಲಸಿಕೆ ಪಡೆಯಲಿ, ಅದರ ನಂತರ ನಾವು ಪಡೆಯುತ್ತೇವೆ ಎಂದು ನೇರವಾಗಿ ಸವಾಲೆಸೆದಿದ್ದರು.

ಇದನ್ನೂ ಓದಿ: ಕೋವಿಡ್ ಲಸಿಕೆಯಷ್ಟೇ ಸಾಕೆ? ಭವಿಷ್ಯದ ಸಾಂಕ್ರಾಮಿಕಗಳನ್ನು ಎದುರಿಸಲು ನಾವು ಸಜ್ಜಾಗಿದ್ದೇವೆಯೆ?

 

ರಾಜೀವ್ ಎಂಬುವವರು ಟ್ವಿಟ್ಟರ್‌ನಲ್ಲಿ “56 ಇಂಚಿನ ಪ್ರಧಾನ ಸೇವಕ, ಭಾರತೀಯ ಇತಿಹಾಸದಲ್ಲೇ ಎಲ್ಲರಿಗಿಂತಲೂ ದೊಡ್ಡ ದೇಶಭಕ್ತ ಅಥವಾ ವಿಶ್ವಗುರು” ಎಂದು ಕೊಲಾಜ್ ಚಿತ್ರವೊಂದನ್ನು ಹಾಕಿ, ಆದರೂ ಲಸಿಕೆ ಪಡೆದಿಲ್ಲ ಎಂದು ಪ್ರಧಾನಿಯನ್ನು ಟ್ರೋಲ್ ಮಾಡಿದ್ದಾರೆ.

ಇದನ್ನೂ ಓದಿ: ಮೊದಲ ಕೋವಿಡ್ ಲಸಿಕೆ ಮೋದಿಯವರೇ ತೆಗೆದುಕೊಳ್ಳಲಿ, ನಂತರ ನಮಗೆ: ತೇಜ್ ಪ್ರತಾಪ್ ಯಾದವ್

ಅನುಷ್ಕಾ ಇನ್ಸಾನಿಯತ್‌ ಎಂಬುವವರು ಟ್ವಿಟ್ಟರ್‌ನಲ್ಲಿ, “ವ್ಯಾಕ್ಸಿನ್ ಪಡೆಯಲು 56 ಇಂಚು ಯಾಕೆ ತುಂಬಾ ಹೆದರುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

ಬಿಜೆಪಿ ಮುಕ್ತ ಕರ್ನಾಟಕ ಫೇಸ್‌ಬುಕ್ ಪೇಜ್, “ಬೇರೆ ದೇಶಗಳ ನಾಯಕರು ಕೊರೊನಾ ಲಸಿಕೆ ಮೊದಲು ಹಾಕಿಕೊಂಡರೆ , ನಮ್ಮ ಪ್ರಧಾನಿ ಮೋದಿಯನ್ನು ನೋಡಿ” ಎಂದು ವ್ಯಂಗ್ಯವಾಡಿದ್ದಾರೆ.

ಇದನ್ನೂ ಓದಿ: ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...