Homeಕರ್ನಾಟಕNRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು...

NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ

30 ಗ್ರಾಮಗಳ 77 ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಒಂದೂ ನಾಮಪತ್ರ ಸಲ್ಲಿಸದೆ ಗ್ರಾಮಸ್ಥರು ಸರ್ವಾನುಮತದಿಂದ ಚುನಾವಣೆ ಬಹಿಷ್ಕಾರ ಮಾಡಿ ಸಾಂವಿಧಾನಿಕ ಬಿಕ್ಕಟ್ಟು ಉಂಟು ಮಾಡಿದ್ದಾರೆ.

- Advertisement -
- Advertisement -

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಹಲವಾರು ಗ್ರಾಮಗಳು ಬರಪೀಡಿತವಾಗಿದ್ದು, ನೀರಾವರಿ ಸೌಲಭ್ಯಕ್ಕಾಗಿ ದಶಕಗಳಿಂದ ನಿರಂತರ ಹೋರಾಟ ಮಾಡುತ್ತಿದ್ದಾರೆ. ಕೃಷ್ಣಾ ನೀರಿನ ನಾರಾಯಣಪುರ ಬಲದಂಡೆ 5ಎ ವಿತರಣಾ ಕಾಲುವೆ ಯೋಜನೆ (NRBC_5A ನಾಲಾ ಯೋಜನೆ) ಅನುಷ್ಠಾನಕ್ಕಾಗಿ ನೂರಾರು ಪ್ರತಿಭಟನೆ – ಧರಣಿ ನಡೆಸಿದ್ದಾರೆ. ಕೊನೆಗೂ ಈ ರೈತರ ಹೋರಾಟಕ್ಕೆ ಸ್ಪಂದಿಸಿ ಇಂದು ಬೆಂಗಳೂರಿನಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಮಂಡಳಿಯ ವತಿಯಿಂದ ಯೋಜನೆಯ ತಾಂತ್ರಿಕ ಕಾರ್ಯಸಾಧ್ಯತೆಯ ಪರಿಶೀಲನಾ ಸಮಿತಿ ಸಭೆ ಕರೆಯಲಾಗಿತ್ತು. ಆದರೆ ಇದು ಕಾಟಾಚಾರದ ಸಭೆ ಎಂದು ಆರೋಪಿಸಿರುವ ರೈತ ಮುಖಂಡರು ಸಭೆಯಿಂದ ಹೊರನಡೆದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಯಚೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ನಾರಾಯಣಪೂರ ಬಲದಂಡೆ ಕಾಲುವೆ 5(ಎ) ಪಾಮನ ಕಲ್ಲೂರು ಶಾಲಾ ಕಾಲುವೆ ಯೋಜನೆಯ ತಾಂತ್ರಿಕ ಕಾರ್ಯಸಾಧ್ಯತೆಯ ಪರಿಶೀಲಾನ ಸಮಿತಿಯ ಇಂದಿನ ಸಭೆಗೆ ಇಬ್ಬರು ಪ್ರಮುಖ ಅಧಿಕಾರಿಗಳು ಗೈರು ಹಾಜರಾಗಿದ್ದಾರೆ. ಅಲ್ಲದೇ ಉಳಿದ ಅಧಿಕಾರಿಗಳು ಸಹ ಯೋಜನೆಯ ಅನುಷ್ಠಾನದ ಬಗ್ಗೆ ಚರ್ಚಿಸದೆ ನಂದವಾಡಗಿ ಎರಡನೇ ಹಂತ ಮತ್ತು ಹನಿ ನೀರಾವರಿ ಪದ್ಧತಿ ಪರ ವಾದ ಮಂಡಿಸುತ್ತಿರುವುದನ್ನು ವಿರೋಧಿಸಿ ಸಭೆ ಧಿಕ್ಕರಿಸಲಾಯಿತು ಎಂದು ರೈತರು ತಿಳಿಸಿದ್ದಾರೆ.

ಏನಿದು NRBC_5A ಯೋಜನೆ?

ಮಸ್ಕಿ ತಾಲ್ಲೂಕಿನ ಬರಪೀಡಿತ 58 ಹಳ್ಳಿಗಳ ಗ್ರಾಮಸ್ಥರು, ರೈತರು ಕಳೆದ 12 ವರ್ಷಗಳಿಂದ ತಮ್ಮ ಗ್ರಾಮಕ್ಕೆ ನೀರಾವರಿ ಯೋಜನೆ ಬೇಕೆಂದು ಆಗ್ರಹಿಸಿ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕ ನೀರಾವರಿ ಸಂಘ ಕಟ್ಟಿ ತಮ್ಮೂರಿಗೆ ಕಾಲುವೇ ನೀರು ಬಿಡಬೇಕೆಂದು ನೂರಾರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಈ 12 ವರ್ಷಗಳ ಅವಧಿಯಲ್ಲಿ ನಾಲ್ಕು ಸರ್ಕಾರಗಳು ಬದಲಾಗಿವೆ. ಎಲ್ಲಾ ಸರ್ಕಾರಗಳು ಭರವಸೆ ನೀಡಿವೆಯೇ ಹೊರತು ಒಬ್ಬರು ಕಾರ್ಯರೂಪಕ್ಕೆ ತಂದಿಲ್ಲ ಎಂದು ರೈತರು ಆರೋಪಿಸುತ್ತಾರೆ.

ಈ ಬಾರಿ 4 ಗ್ರಾಮ ಪಂಚಾಯ್ತಿಗಳಲ್ಲಿ ಚುನಾವಣೆ ಬಹಿಷ್ಕಾರ

ಹೋರಾಟವನ್ನು ತೀವ್ರಗೊಳಿಸುವ ಸಲುವಾಗಿ 2020ರ ಡಿಸೆಂಬರ್‌ನಲ್ಲಿ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಇಡೀ ರಾಜ್ಯವೇ ಉತ್ಸಾಹದಿಂದ ಭಾಗವಹಿಸಿದರೆ ಮಸ್ಕಿ ವ್ಯಾಪ್ತಿಯ ನಾಲ್ಕು ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆಯೇ ನಡೆಯಲಿಲ್ಲ! 30 ಗ್ರಾಮಗಳ 77 ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಒಂದೂ ನಾಮಪತ್ರ ಸಲ್ಲಿಕೆಯಾಗಲಿಲ್ಲ. ಅಷ್ಟೋಂದು ತೀವ್ರವಾಗಿ ಈ ಗ್ರಾಮಗಳ ಜನರು ಸರ್ವಾನುಮತದಿಂದ ಚುನಾವಣೆ ಬಹಿಷ್ಕಾರ ಮಾಡಿ ಸಾಂವಿಧಾನಿಕ ಬಿಕ್ಕಟ್ಟು ಉಂಟು ಮಾಡಿದ್ದಾರೆ.

ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸುತ್ತೇವೆ

ಮಸ್ಕಿ ವಿಧಾನಸಭಾ ಕ್ಷೇತ್ರದಿಂದ ಇದುವರೆಗೂ ಹಾಲಿ ಸಚಿವ ಪ್ರತಾಪ್ ಗೌಡ ಪಾಟೀಲರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ ಪ್ರತಿಬಾರಿಯೂ ರೈತ ವಿರೋಧಿಯಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿರುವ ರೈತರು ಈ ಬಾರಿ ಅವರನ್ನು ಸೋಲಿಸಲು ಕರೆ ನೀಡಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ NRBC_5A ಯೋಜನೆ ಜಾರಿ ಹೋರಾಟ ಸಮಿತಿಯ ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ “ನಾವು ಕಳೆದ 58 ದಿನಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದೇವೆ. ಗ್ರಾಮ ಪಂಚಾಯ್ತಿ ಚುನಾವಣೆಯನ್ನೇ ಬಹಿಷ್ಕರಿಸಿದ್ದೇವೆ. ಚುನಾವಣೆ ನಡೆಸಲು ಎಸಿ, ತಹಶೀಲ್ದಾರ್ ಸೇರಿ ಎಲ್ಲರೂ ಏನೇ ಪ್ರಯತ್ನ ಮಾಡಿದರೂ ಈ 30 ಗ್ರಾಮಗಳ ಜನರ ಒಗ್ಗಟ್ಟು ಮುರಿಯಲಾಗಿಲ್ಲ. ನಾಲೆಗೆ ನೀರು ಹರಿಯಬೇಕು ಎಂಬುದು ನಮ್ಮ ಹಕ್ಕೊತ್ತಾಯ. ಅದು ಕಾರ್ಯಸಾಧ್ಯವಾದುದು. ಆದರೆ ಈ ವಿಚಾರದಲ್ಲಿ ನಮ್ಮ ಶಾಸಕರು ನಮಗೆ ದ್ರೋಹ ಮಾಡಿದ್ದಾರೆ. ಹಾಗಾಗಿ ನಾವು ಈ ವಿಧಾನಸಭಾ ಉಪಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಿಲ್ಲ, ಬದಲಿಗೆ ಪ್ರತಾಪ್‌ ಗೌಡ ಪಾಟೀಲರನ್ನು ಸೋಲಿಸುತ್ತೇವೆ ಮತ್ತು ಹೋರಾಟ ಮುಂದುವರೆಸುತ್ತೇವೆ” ಎಂದಿದ್ದಾರೆ.

NRBC_5A ಯೋಜನೆ ಜಾರಿ ಹೋರಾಟ ಸಮಿತಿಯ ಅಧ್ಯಕ್ಷರಾದ ಬಸವರಾಜಪ್ಪಗೌಡ ಹರ್ನಾಪೂರ ಮಾತನಾಡಿ “ನಾಲ್ಕು ಜನ ಮುಖ್ಯಮಂತ್ರಿಗಳು ಸುಳ್ಳು ಭರವಸೆ ನೀಡಿದ್ದಾರೆ. ನಾವು ಗ್ರಾಮ ಪಂಚಾಯ್ತಿ ಚುನಾವಣೆ ಬಹಿಷ್ಕರಿಸಿ ಹೋರಾಟ ನಡೆಸಿದ್ದರಿಂದ ಇಂದು ಸಭೆ ಕರೆದಿದ್ದರು. ಆದರೆ ಸಭೆಯಲ್ಲಿ ನಂದವಾಡಗಿ ಏತನೀರಾವರಿ ಯೋಜನೆ ಜಾರಿಗೊಳಿಸುವುದರ ಬಗ್ಗೆ ಮತ್ತು ಹನಿ ನೀರಾವರಿ ಮಾಡಿಕೊಳ್ಳಿ ಎಂದು ಅಧಿಕಾರಿಗಳು ನಮಗೆ ಉಪದೇಶ ನೀಡುತ್ತಿದ್ದಾರೆ. ನಂದವಾಡಗಿ ಯೋಜನೆಯಿಂದ ನಮ್ಮ ಗ್ರಾಮಗಳಿಗೆ ನೀರು ಬರುವುದಿಲ್ಲ. ಹಾಗಾಗಿ ಎನ್‌ಆರ್‌ಬಿಸಿ 5ಎ ಯೋಜನೆ ಜಾರಿಗೊಳಿಸಿ ಎಂದು ಪಟ್ಟು ಹಿಡಿದ ನಾವು ಸಭೆ ಬಹಿಷ್ಕರಿಸಿದ್ದೇವೆ. ನಮ್ಮ ಹೋರಾಟ ಮುಂದುವರೆಸುತ್ತೇವೆ. ಉಪಚುನಾವಣೆಯಲ್ಲಿ ರಾಜಕಾರಣಿಗಳು ಓಟು ಕೇಳಿಕೊಂಡು ಬರಲಿ ಬುದ್ದಿ ಕಲಿಸುತ್ತೇವೆ” ಎಂದರು.

ಒಟ್ಟಿನಲ್ಲಿ ಮಳೆಯೂ ಬಾರದೆ, ಕೃಷಿಯೂ ಸಾಗದೇ ನೀರಾವರಿ ಯೋಜನೆಗಾಗಿ 12 ವರ್ಷದಿಂದ ಹೋರಾಡುತ್ತಿರುವ ಈ ಭಾಗದ ರೈತರಿಗೆ ಇಂದು ಸಹ ಅನ್ಯಾಯವಾಗಿದೆ. ಅವರು ಹೋರಾಟ ಮುಂದುವರೆಸುವುದಾಗಿ ಘೋಷಿಸಿದ್ದಾರೆ.


ಇದನ್ನೂ ಓದಿ: ತಪ್ಪೊಪ್ಪಿಕೊಂಡು ಕಾಯ್ದೆ ಹಿಂಪಡೆಯಿರಿ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರಿಂದ ಪ್ರಧಾನಿಗೆ ಪತ್ರತಪ್ಪೊಪ್ಪಿಕೊಂಡು, ಕಾಯ್ದೆ ಹಿಂಪಡೆಯಲು ಸುಗ್ರೀವಾಜ್ಞೆ ಹೊರಡಿಸಿ: ಪ್ರಧಾನಿಗೆ ಪತ್ರ ಬರೆದ ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಾಧೀಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...