Homeಕರ್ನಾಟಕNRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು...

NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ

30 ಗ್ರಾಮಗಳ 77 ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಒಂದೂ ನಾಮಪತ್ರ ಸಲ್ಲಿಸದೆ ಗ್ರಾಮಸ್ಥರು ಸರ್ವಾನುಮತದಿಂದ ಚುನಾವಣೆ ಬಹಿಷ್ಕಾರ ಮಾಡಿ ಸಾಂವಿಧಾನಿಕ ಬಿಕ್ಕಟ್ಟು ಉಂಟು ಮಾಡಿದ್ದಾರೆ.

- Advertisement -
- Advertisement -

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಹಲವಾರು ಗ್ರಾಮಗಳು ಬರಪೀಡಿತವಾಗಿದ್ದು, ನೀರಾವರಿ ಸೌಲಭ್ಯಕ್ಕಾಗಿ ದಶಕಗಳಿಂದ ನಿರಂತರ ಹೋರಾಟ ಮಾಡುತ್ತಿದ್ದಾರೆ. ಕೃಷ್ಣಾ ನೀರಿನ ನಾರಾಯಣಪುರ ಬಲದಂಡೆ 5ಎ ವಿತರಣಾ ಕಾಲುವೆ ಯೋಜನೆ (NRBC_5A ನಾಲಾ ಯೋಜನೆ) ಅನುಷ್ಠಾನಕ್ಕಾಗಿ ನೂರಾರು ಪ್ರತಿಭಟನೆ – ಧರಣಿ ನಡೆಸಿದ್ದಾರೆ. ಕೊನೆಗೂ ಈ ರೈತರ ಹೋರಾಟಕ್ಕೆ ಸ್ಪಂದಿಸಿ ಇಂದು ಬೆಂಗಳೂರಿನಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಮಂಡಳಿಯ ವತಿಯಿಂದ ಯೋಜನೆಯ ತಾಂತ್ರಿಕ ಕಾರ್ಯಸಾಧ್ಯತೆಯ ಪರಿಶೀಲನಾ ಸಮಿತಿ ಸಭೆ ಕರೆಯಲಾಗಿತ್ತು. ಆದರೆ ಇದು ಕಾಟಾಚಾರದ ಸಭೆ ಎಂದು ಆರೋಪಿಸಿರುವ ರೈತ ಮುಖಂಡರು ಸಭೆಯಿಂದ ಹೊರನಡೆದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಯಚೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ನಾರಾಯಣಪೂರ ಬಲದಂಡೆ ಕಾಲುವೆ 5(ಎ) ಪಾಮನ ಕಲ್ಲೂರು ಶಾಲಾ ಕಾಲುವೆ ಯೋಜನೆಯ ತಾಂತ್ರಿಕ ಕಾರ್ಯಸಾಧ್ಯತೆಯ ಪರಿಶೀಲಾನ ಸಮಿತಿಯ ಇಂದಿನ ಸಭೆಗೆ ಇಬ್ಬರು ಪ್ರಮುಖ ಅಧಿಕಾರಿಗಳು ಗೈರು ಹಾಜರಾಗಿದ್ದಾರೆ. ಅಲ್ಲದೇ ಉಳಿದ ಅಧಿಕಾರಿಗಳು ಸಹ ಯೋಜನೆಯ ಅನುಷ್ಠಾನದ ಬಗ್ಗೆ ಚರ್ಚಿಸದೆ ನಂದವಾಡಗಿ ಎರಡನೇ ಹಂತ ಮತ್ತು ಹನಿ ನೀರಾವರಿ ಪದ್ಧತಿ ಪರ ವಾದ ಮಂಡಿಸುತ್ತಿರುವುದನ್ನು ವಿರೋಧಿಸಿ ಸಭೆ ಧಿಕ್ಕರಿಸಲಾಯಿತು ಎಂದು ರೈತರು ತಿಳಿಸಿದ್ದಾರೆ.

ಏನಿದು NRBC_5A ಯೋಜನೆ?

ಮಸ್ಕಿ ತಾಲ್ಲೂಕಿನ ಬರಪೀಡಿತ 58 ಹಳ್ಳಿಗಳ ಗ್ರಾಮಸ್ಥರು, ರೈತರು ಕಳೆದ 12 ವರ್ಷಗಳಿಂದ ತಮ್ಮ ಗ್ರಾಮಕ್ಕೆ ನೀರಾವರಿ ಯೋಜನೆ ಬೇಕೆಂದು ಆಗ್ರಹಿಸಿ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕ ನೀರಾವರಿ ಸಂಘ ಕಟ್ಟಿ ತಮ್ಮೂರಿಗೆ ಕಾಲುವೇ ನೀರು ಬಿಡಬೇಕೆಂದು ನೂರಾರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಈ 12 ವರ್ಷಗಳ ಅವಧಿಯಲ್ಲಿ ನಾಲ್ಕು ಸರ್ಕಾರಗಳು ಬದಲಾಗಿವೆ. ಎಲ್ಲಾ ಸರ್ಕಾರಗಳು ಭರವಸೆ ನೀಡಿವೆಯೇ ಹೊರತು ಒಬ್ಬರು ಕಾರ್ಯರೂಪಕ್ಕೆ ತಂದಿಲ್ಲ ಎಂದು ರೈತರು ಆರೋಪಿಸುತ್ತಾರೆ.

ಈ ಬಾರಿ 4 ಗ್ರಾಮ ಪಂಚಾಯ್ತಿಗಳಲ್ಲಿ ಚುನಾವಣೆ ಬಹಿಷ್ಕಾರ

ಹೋರಾಟವನ್ನು ತೀವ್ರಗೊಳಿಸುವ ಸಲುವಾಗಿ 2020ರ ಡಿಸೆಂಬರ್‌ನಲ್ಲಿ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಇಡೀ ರಾಜ್ಯವೇ ಉತ್ಸಾಹದಿಂದ ಭಾಗವಹಿಸಿದರೆ ಮಸ್ಕಿ ವ್ಯಾಪ್ತಿಯ ನಾಲ್ಕು ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆಯೇ ನಡೆಯಲಿಲ್ಲ! 30 ಗ್ರಾಮಗಳ 77 ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಒಂದೂ ನಾಮಪತ್ರ ಸಲ್ಲಿಕೆಯಾಗಲಿಲ್ಲ. ಅಷ್ಟೋಂದು ತೀವ್ರವಾಗಿ ಈ ಗ್ರಾಮಗಳ ಜನರು ಸರ್ವಾನುಮತದಿಂದ ಚುನಾವಣೆ ಬಹಿಷ್ಕಾರ ಮಾಡಿ ಸಾಂವಿಧಾನಿಕ ಬಿಕ್ಕಟ್ಟು ಉಂಟು ಮಾಡಿದ್ದಾರೆ.

ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸುತ್ತೇವೆ

ಮಸ್ಕಿ ವಿಧಾನಸಭಾ ಕ್ಷೇತ್ರದಿಂದ ಇದುವರೆಗೂ ಹಾಲಿ ಸಚಿವ ಪ್ರತಾಪ್ ಗೌಡ ಪಾಟೀಲರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ ಪ್ರತಿಬಾರಿಯೂ ರೈತ ವಿರೋಧಿಯಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿರುವ ರೈತರು ಈ ಬಾರಿ ಅವರನ್ನು ಸೋಲಿಸಲು ಕರೆ ನೀಡಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ NRBC_5A ಯೋಜನೆ ಜಾರಿ ಹೋರಾಟ ಸಮಿತಿಯ ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ “ನಾವು ಕಳೆದ 58 ದಿನಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದೇವೆ. ಗ್ರಾಮ ಪಂಚಾಯ್ತಿ ಚುನಾವಣೆಯನ್ನೇ ಬಹಿಷ್ಕರಿಸಿದ್ದೇವೆ. ಚುನಾವಣೆ ನಡೆಸಲು ಎಸಿ, ತಹಶೀಲ್ದಾರ್ ಸೇರಿ ಎಲ್ಲರೂ ಏನೇ ಪ್ರಯತ್ನ ಮಾಡಿದರೂ ಈ 30 ಗ್ರಾಮಗಳ ಜನರ ಒಗ್ಗಟ್ಟು ಮುರಿಯಲಾಗಿಲ್ಲ. ನಾಲೆಗೆ ನೀರು ಹರಿಯಬೇಕು ಎಂಬುದು ನಮ್ಮ ಹಕ್ಕೊತ್ತಾಯ. ಅದು ಕಾರ್ಯಸಾಧ್ಯವಾದುದು. ಆದರೆ ಈ ವಿಚಾರದಲ್ಲಿ ನಮ್ಮ ಶಾಸಕರು ನಮಗೆ ದ್ರೋಹ ಮಾಡಿದ್ದಾರೆ. ಹಾಗಾಗಿ ನಾವು ಈ ವಿಧಾನಸಭಾ ಉಪಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಿಲ್ಲ, ಬದಲಿಗೆ ಪ್ರತಾಪ್‌ ಗೌಡ ಪಾಟೀಲರನ್ನು ಸೋಲಿಸುತ್ತೇವೆ ಮತ್ತು ಹೋರಾಟ ಮುಂದುವರೆಸುತ್ತೇವೆ” ಎಂದಿದ್ದಾರೆ.

NRBC_5A ಯೋಜನೆ ಜಾರಿ ಹೋರಾಟ ಸಮಿತಿಯ ಅಧ್ಯಕ್ಷರಾದ ಬಸವರಾಜಪ್ಪಗೌಡ ಹರ್ನಾಪೂರ ಮಾತನಾಡಿ “ನಾಲ್ಕು ಜನ ಮುಖ್ಯಮಂತ್ರಿಗಳು ಸುಳ್ಳು ಭರವಸೆ ನೀಡಿದ್ದಾರೆ. ನಾವು ಗ್ರಾಮ ಪಂಚಾಯ್ತಿ ಚುನಾವಣೆ ಬಹಿಷ್ಕರಿಸಿ ಹೋರಾಟ ನಡೆಸಿದ್ದರಿಂದ ಇಂದು ಸಭೆ ಕರೆದಿದ್ದರು. ಆದರೆ ಸಭೆಯಲ್ಲಿ ನಂದವಾಡಗಿ ಏತನೀರಾವರಿ ಯೋಜನೆ ಜಾರಿಗೊಳಿಸುವುದರ ಬಗ್ಗೆ ಮತ್ತು ಹನಿ ನೀರಾವರಿ ಮಾಡಿಕೊಳ್ಳಿ ಎಂದು ಅಧಿಕಾರಿಗಳು ನಮಗೆ ಉಪದೇಶ ನೀಡುತ್ತಿದ್ದಾರೆ. ನಂದವಾಡಗಿ ಯೋಜನೆಯಿಂದ ನಮ್ಮ ಗ್ರಾಮಗಳಿಗೆ ನೀರು ಬರುವುದಿಲ್ಲ. ಹಾಗಾಗಿ ಎನ್‌ಆರ್‌ಬಿಸಿ 5ಎ ಯೋಜನೆ ಜಾರಿಗೊಳಿಸಿ ಎಂದು ಪಟ್ಟು ಹಿಡಿದ ನಾವು ಸಭೆ ಬಹಿಷ್ಕರಿಸಿದ್ದೇವೆ. ನಮ್ಮ ಹೋರಾಟ ಮುಂದುವರೆಸುತ್ತೇವೆ. ಉಪಚುನಾವಣೆಯಲ್ಲಿ ರಾಜಕಾರಣಿಗಳು ಓಟು ಕೇಳಿಕೊಂಡು ಬರಲಿ ಬುದ್ದಿ ಕಲಿಸುತ್ತೇವೆ” ಎಂದರು.

ಒಟ್ಟಿನಲ್ಲಿ ಮಳೆಯೂ ಬಾರದೆ, ಕೃಷಿಯೂ ಸಾಗದೇ ನೀರಾವರಿ ಯೋಜನೆಗಾಗಿ 12 ವರ್ಷದಿಂದ ಹೋರಾಡುತ್ತಿರುವ ಈ ಭಾಗದ ರೈತರಿಗೆ ಇಂದು ಸಹ ಅನ್ಯಾಯವಾಗಿದೆ. ಅವರು ಹೋರಾಟ ಮುಂದುವರೆಸುವುದಾಗಿ ಘೋಷಿಸಿದ್ದಾರೆ.


ಇದನ್ನೂ ಓದಿ: ತಪ್ಪೊಪ್ಪಿಕೊಂಡು ಕಾಯ್ದೆ ಹಿಂಪಡೆಯಿರಿ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರಿಂದ ಪ್ರಧಾನಿಗೆ ಪತ್ರತಪ್ಪೊಪ್ಪಿಕೊಂಡು, ಕಾಯ್ದೆ ಹಿಂಪಡೆಯಲು ಸುಗ್ರೀವಾಜ್ಞೆ ಹೊರಡಿಸಿ: ಪ್ರಧಾನಿಗೆ ಪತ್ರ ಬರೆದ ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಾಧೀಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...