Homeಕರ್ನಾಟಕNRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು...

NRBC_5A ಜಾರಿಗಾಗಿ 4 ಗ್ರಾ.ಪಂ ಚುನಾವಣೆ ಬಹಿಷ್ಕಾರ: ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸಲು ರೈತರ ನಿರ್ಧಾರ

30 ಗ್ರಾಮಗಳ 77 ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಒಂದೂ ನಾಮಪತ್ರ ಸಲ್ಲಿಸದೆ ಗ್ರಾಮಸ್ಥರು ಸರ್ವಾನುಮತದಿಂದ ಚುನಾವಣೆ ಬಹಿಷ್ಕಾರ ಮಾಡಿ ಸಾಂವಿಧಾನಿಕ ಬಿಕ್ಕಟ್ಟು ಉಂಟು ಮಾಡಿದ್ದಾರೆ.

- Advertisement -
- Advertisement -

ರಾಯಚೂರು ಜಿಲ್ಲೆಯ ಮಸ್ಕಿ ತಾಲ್ಲೂಕಿನ ಹಲವಾರು ಗ್ರಾಮಗಳು ಬರಪೀಡಿತವಾಗಿದ್ದು, ನೀರಾವರಿ ಸೌಲಭ್ಯಕ್ಕಾಗಿ ದಶಕಗಳಿಂದ ನಿರಂತರ ಹೋರಾಟ ಮಾಡುತ್ತಿದ್ದಾರೆ. ಕೃಷ್ಣಾ ನೀರಿನ ನಾರಾಯಣಪುರ ಬಲದಂಡೆ 5ಎ ವಿತರಣಾ ಕಾಲುವೆ ಯೋಜನೆ (NRBC_5A ನಾಲಾ ಯೋಜನೆ) ಅನುಷ್ಠಾನಕ್ಕಾಗಿ ನೂರಾರು ಪ್ರತಿಭಟನೆ – ಧರಣಿ ನಡೆಸಿದ್ದಾರೆ. ಕೊನೆಗೂ ಈ ರೈತರ ಹೋರಾಟಕ್ಕೆ ಸ್ಪಂದಿಸಿ ಇಂದು ಬೆಂಗಳೂರಿನಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮ ನಿಯಮಿತ ಮಂಡಳಿಯ ವತಿಯಿಂದ ಯೋಜನೆಯ ತಾಂತ್ರಿಕ ಕಾರ್ಯಸಾಧ್ಯತೆಯ ಪರಿಶೀಲನಾ ಸಮಿತಿ ಸಭೆ ಕರೆಯಲಾಗಿತ್ತು. ಆದರೆ ಇದು ಕಾಟಾಚಾರದ ಸಭೆ ಎಂದು ಆರೋಪಿಸಿರುವ ರೈತ ಮುಖಂಡರು ಸಭೆಯಿಂದ ಹೊರನಡೆದು ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಯಚೂರು ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ ನಾರಾಯಣಪೂರ ಬಲದಂಡೆ ಕಾಲುವೆ 5(ಎ) ಪಾಮನ ಕಲ್ಲೂರು ಶಾಲಾ ಕಾಲುವೆ ಯೋಜನೆಯ ತಾಂತ್ರಿಕ ಕಾರ್ಯಸಾಧ್ಯತೆಯ ಪರಿಶೀಲಾನ ಸಮಿತಿಯ ಇಂದಿನ ಸಭೆಗೆ ಇಬ್ಬರು ಪ್ರಮುಖ ಅಧಿಕಾರಿಗಳು ಗೈರು ಹಾಜರಾಗಿದ್ದಾರೆ. ಅಲ್ಲದೇ ಉಳಿದ ಅಧಿಕಾರಿಗಳು ಸಹ ಯೋಜನೆಯ ಅನುಷ್ಠಾನದ ಬಗ್ಗೆ ಚರ್ಚಿಸದೆ ನಂದವಾಡಗಿ ಎರಡನೇ ಹಂತ ಮತ್ತು ಹನಿ ನೀರಾವರಿ ಪದ್ಧತಿ ಪರ ವಾದ ಮಂಡಿಸುತ್ತಿರುವುದನ್ನು ವಿರೋಧಿಸಿ ಸಭೆ ಧಿಕ್ಕರಿಸಲಾಯಿತು ಎಂದು ರೈತರು ತಿಳಿಸಿದ್ದಾರೆ.

ಏನಿದು NRBC_5A ಯೋಜನೆ?

ಮಸ್ಕಿ ತಾಲ್ಲೂಕಿನ ಬರಪೀಡಿತ 58 ಹಳ್ಳಿಗಳ ಗ್ರಾಮಸ್ಥರು, ರೈತರು ಕಳೆದ 12 ವರ್ಷಗಳಿಂದ ತಮ್ಮ ಗ್ರಾಮಕ್ಕೆ ನೀರಾವರಿ ಯೋಜನೆ ಬೇಕೆಂದು ಆಗ್ರಹಿಸಿ ಹೋರಾಟ ಆರಂಭಿಸಿದ್ದಾರೆ. ಕರ್ನಾಟಕ ನೀರಾವರಿ ಸಂಘ ಕಟ್ಟಿ ತಮ್ಮೂರಿಗೆ ಕಾಲುವೇ ನೀರು ಬಿಡಬೇಕೆಂದು ನೂರಾರು ಪ್ರತಿಭಟನೆಗಳನ್ನು ನಡೆಸಿದ್ದಾರೆ. ಈ 12 ವರ್ಷಗಳ ಅವಧಿಯಲ್ಲಿ ನಾಲ್ಕು ಸರ್ಕಾರಗಳು ಬದಲಾಗಿವೆ. ಎಲ್ಲಾ ಸರ್ಕಾರಗಳು ಭರವಸೆ ನೀಡಿವೆಯೇ ಹೊರತು ಒಬ್ಬರು ಕಾರ್ಯರೂಪಕ್ಕೆ ತಂದಿಲ್ಲ ಎಂದು ರೈತರು ಆರೋಪಿಸುತ್ತಾರೆ.

ಈ ಬಾರಿ 4 ಗ್ರಾಮ ಪಂಚಾಯ್ತಿಗಳಲ್ಲಿ ಚುನಾವಣೆ ಬಹಿಷ್ಕಾರ

ಹೋರಾಟವನ್ನು ತೀವ್ರಗೊಳಿಸುವ ಸಲುವಾಗಿ 2020ರ ಡಿಸೆಂಬರ್‌ನಲ್ಲಿ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲಿ ಇಡೀ ರಾಜ್ಯವೇ ಉತ್ಸಾಹದಿಂದ ಭಾಗವಹಿಸಿದರೆ ಮಸ್ಕಿ ವ್ಯಾಪ್ತಿಯ ನಾಲ್ಕು ಗ್ರಾಮ ಪಂಚಾಯ್ತಿಗಳಿಗೆ ಚುನಾವಣೆಯೇ ನಡೆಯಲಿಲ್ಲ! 30 ಗ್ರಾಮಗಳ 77 ಗ್ರಾ.ಪಂ ಸದಸ್ಯ ಸ್ಥಾನಗಳಿಗೆ ಒಂದೂ ನಾಮಪತ್ರ ಸಲ್ಲಿಕೆಯಾಗಲಿಲ್ಲ. ಅಷ್ಟೋಂದು ತೀವ್ರವಾಗಿ ಈ ಗ್ರಾಮಗಳ ಜನರು ಸರ್ವಾನುಮತದಿಂದ ಚುನಾವಣೆ ಬಹಿಷ್ಕಾರ ಮಾಡಿ ಸಾಂವಿಧಾನಿಕ ಬಿಕ್ಕಟ್ಟು ಉಂಟು ಮಾಡಿದ್ದಾರೆ.

ಉಪ ಚುನಾವಣೆಯಲ್ಲಿ ಪ್ರತಾಪ್ ಗೌಡ ಪಾಟೀಲರನ್ನು ಸೋಲಿಸುತ್ತೇವೆ

ಮಸ್ಕಿ ವಿಧಾನಸಭಾ ಕ್ಷೇತ್ರದಿಂದ ಇದುವರೆಗೂ ಹಾಲಿ ಸಚಿವ ಪ್ರತಾಪ್ ಗೌಡ ಪಾಟೀಲರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಆದರೆ ಪ್ರತಿಬಾರಿಯೂ ರೈತ ವಿರೋಧಿಯಾಗಿ ವರ್ತಿಸಿದ್ದಾರೆ ಎಂದು ಆರೋಪಿಸಿರುವ ರೈತರು ಈ ಬಾರಿ ಅವರನ್ನು ಸೋಲಿಸಲು ಕರೆ ನೀಡಿದ್ದಾರೆ.

ನಾನುಗೌರಿ.ಕಾಂ ಜೊತೆ ಮಾತನಾಡಿದ NRBC_5A ಯೋಜನೆ ಜಾರಿ ಹೋರಾಟ ಸಮಿತಿಯ ಕಾರ್ಯದರ್ಶಿ ನಾಗರಡ್ಡೆಪ್ಪ ದೇವರಮನಿ “ನಾವು ಕಳೆದ 58 ದಿನಗಳಿಂದ ನಿರಂತರವಾಗಿ ಹೋರಾಟ ಮಾಡುತ್ತಿದ್ದೇವೆ. ಗ್ರಾಮ ಪಂಚಾಯ್ತಿ ಚುನಾವಣೆಯನ್ನೇ ಬಹಿಷ್ಕರಿಸಿದ್ದೇವೆ. ಚುನಾವಣೆ ನಡೆಸಲು ಎಸಿ, ತಹಶೀಲ್ದಾರ್ ಸೇರಿ ಎಲ್ಲರೂ ಏನೇ ಪ್ರಯತ್ನ ಮಾಡಿದರೂ ಈ 30 ಗ್ರಾಮಗಳ ಜನರ ಒಗ್ಗಟ್ಟು ಮುರಿಯಲಾಗಿಲ್ಲ. ನಾಲೆಗೆ ನೀರು ಹರಿಯಬೇಕು ಎಂಬುದು ನಮ್ಮ ಹಕ್ಕೊತ್ತಾಯ. ಅದು ಕಾರ್ಯಸಾಧ್ಯವಾದುದು. ಆದರೆ ಈ ವಿಚಾರದಲ್ಲಿ ನಮ್ಮ ಶಾಸಕರು ನಮಗೆ ದ್ರೋಹ ಮಾಡಿದ್ದಾರೆ. ಹಾಗಾಗಿ ನಾವು ಈ ವಿಧಾನಸಭಾ ಉಪಚುನಾವಣೆಯಲ್ಲಿ ಮತದಾನ ಬಹಿಷ್ಕರಿಸುವುದಿಲ್ಲ, ಬದಲಿಗೆ ಪ್ರತಾಪ್‌ ಗೌಡ ಪಾಟೀಲರನ್ನು ಸೋಲಿಸುತ್ತೇವೆ ಮತ್ತು ಹೋರಾಟ ಮುಂದುವರೆಸುತ್ತೇವೆ” ಎಂದಿದ್ದಾರೆ.

NRBC_5A ಯೋಜನೆ ಜಾರಿ ಹೋರಾಟ ಸಮಿತಿಯ ಅಧ್ಯಕ್ಷರಾದ ಬಸವರಾಜಪ್ಪಗೌಡ ಹರ್ನಾಪೂರ ಮಾತನಾಡಿ “ನಾಲ್ಕು ಜನ ಮುಖ್ಯಮಂತ್ರಿಗಳು ಸುಳ್ಳು ಭರವಸೆ ನೀಡಿದ್ದಾರೆ. ನಾವು ಗ್ರಾಮ ಪಂಚಾಯ್ತಿ ಚುನಾವಣೆ ಬಹಿಷ್ಕರಿಸಿ ಹೋರಾಟ ನಡೆಸಿದ್ದರಿಂದ ಇಂದು ಸಭೆ ಕರೆದಿದ್ದರು. ಆದರೆ ಸಭೆಯಲ್ಲಿ ನಂದವಾಡಗಿ ಏತನೀರಾವರಿ ಯೋಜನೆ ಜಾರಿಗೊಳಿಸುವುದರ ಬಗ್ಗೆ ಮತ್ತು ಹನಿ ನೀರಾವರಿ ಮಾಡಿಕೊಳ್ಳಿ ಎಂದು ಅಧಿಕಾರಿಗಳು ನಮಗೆ ಉಪದೇಶ ನೀಡುತ್ತಿದ್ದಾರೆ. ನಂದವಾಡಗಿ ಯೋಜನೆಯಿಂದ ನಮ್ಮ ಗ್ರಾಮಗಳಿಗೆ ನೀರು ಬರುವುದಿಲ್ಲ. ಹಾಗಾಗಿ ಎನ್‌ಆರ್‌ಬಿಸಿ 5ಎ ಯೋಜನೆ ಜಾರಿಗೊಳಿಸಿ ಎಂದು ಪಟ್ಟು ಹಿಡಿದ ನಾವು ಸಭೆ ಬಹಿಷ್ಕರಿಸಿದ್ದೇವೆ. ನಮ್ಮ ಹೋರಾಟ ಮುಂದುವರೆಸುತ್ತೇವೆ. ಉಪಚುನಾವಣೆಯಲ್ಲಿ ರಾಜಕಾರಣಿಗಳು ಓಟು ಕೇಳಿಕೊಂಡು ಬರಲಿ ಬುದ್ದಿ ಕಲಿಸುತ್ತೇವೆ” ಎಂದರು.

ಒಟ್ಟಿನಲ್ಲಿ ಮಳೆಯೂ ಬಾರದೆ, ಕೃಷಿಯೂ ಸಾಗದೇ ನೀರಾವರಿ ಯೋಜನೆಗಾಗಿ 12 ವರ್ಷದಿಂದ ಹೋರಾಡುತ್ತಿರುವ ಈ ಭಾಗದ ರೈತರಿಗೆ ಇಂದು ಸಹ ಅನ್ಯಾಯವಾಗಿದೆ. ಅವರು ಹೋರಾಟ ಮುಂದುವರೆಸುವುದಾಗಿ ಘೋಷಿಸಿದ್ದಾರೆ.


ಇದನ್ನೂ ಓದಿ: ತಪ್ಪೊಪ್ಪಿಕೊಂಡು ಕಾಯ್ದೆ ಹಿಂಪಡೆಯಿರಿ: ಸುಪ್ರೀಂ ಕೋರ್ಟ್ ಮಾಜಿ ನ್ಯಾಯಾಧೀಶರಿಂದ ಪ್ರಧಾನಿಗೆ ಪತ್ರತಪ್ಪೊಪ್ಪಿಕೊಂಡು, ಕಾಯ್ದೆ ಹಿಂಪಡೆಯಲು ಸುಗ್ರೀವಾಜ್ಞೆ ಹೊರಡಿಸಿ: ಪ್ರಧಾನಿಗೆ ಪತ್ರ ಬರೆದ ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಾಧೀಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...