HomeUncategorizedಬಿಜೆಪಿಯ ‘ಸಶಕ್ತ ಭಾರತ’ ಕೈಪಿಡಿ ಹೊರತು ಪ್ರಣಾಳಿಕೆಯಲ್ಲ

ಬಿಜೆಪಿಯ ‘ಸಶಕ್ತ ಭಾರತ’ ಕೈಪಿಡಿ ಹೊರತು ಪ್ರಣಾಳಿಕೆಯಲ್ಲ

- Advertisement -
- Advertisement -

| ಚೈತ್ರಿಕಾ ನಾಯ್ಕ ಹರ್ಗಿ |

ಯಾವಾಗಲೂ ಆಡಳಿತ ಪಕ್ಷದ ಪ್ರಣಾಳಿಕೆ ಹೇಗಿರಬೇಕೆಂದರೆ, ಈಗಾಗಲೇ ಐದು ವರ್ಷ ಮಾಡಿದ ಕೆಲಸವನ್ನು ಪರಿಚಯಿಸಿ, ಇಷ್ಟನ್ನು ಪೂರೈಸಿದ್ದೇವೆ, ಇಷ್ಟು ಬಾಕಿ ಉಳಿದಿದೆ, ಇದು ಮುಂದಿನ ಅವಧಿಗೆ ನಮ್ಮ ಯೋಜನೆಗಳು ಎಂಬುದಾಗಿ ಪ್ರಸ್ತುತ ಮತ್ತು ಭವಿಷ್ಯತ್ತಿನ ಯೋಜನೆಯ ಮುನ್ನೋಟವನ್ನು ಜನರ ಮುಂದಿಟ್ಟು ಓಟು ಕೇಳಬೇಕು. ಹಾಗೆಯೇ ಪ್ರಣಾಳಿಕೆಯಲ್ಲಿ ಮುಂದಿನ ಯೋಜನೆಯ ಹಂಚಿಕೆ ಕುರಿತು ನಿರ್ದಿಷ್ಟ ಅಂಕಿ-ಅಂಶಗಳನ್ನು ನಮೂದಿಸಬೇಕಾಗುತ್ತದೆ. ಆದರೆ ಬಿಜೆಪಿ ಪ್ರಣಾಳಿಕೆಯಲ್ಲಿ ಎಲ್ಲವನ್ನೂ ಯಾದೃಚ್ಛಿಕವಾಗಿ ಹೇಳಲಾಗಿದೆ ಹೊರತು ಯಾವುದೂ ನಿಶ್ವಿತವಾಗಿ ಹೇಳಲಾಗಿಲ್ಲ.

ಬಿಜೆಪಿ ಸಂಕಲ್ಪ ಪತ್ರದಲ್ಲಿ ಪ್ರಸ್ತುತ ಪಡಿಸಿದ ಮುಖ್ಯಾಂಶಗಳನ್ನು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯೊಂದಿಗೆ ಹೋಲಿಸಿ ನೋಡುವುದಾದರೆ,
ಸೈನ್ಯ
ಭಯೋತ್ಪಾದನೆ ಮೇಲೆ ಶೂನ್ಯ ಸಹಿಷ್ಣುತೆ ಎಂಬುದು ಯಾವತ್ತೂ ಭಾರತ ಪಾಲಿಸಿಕೊಂಡ ಬಂದ ನಡೆಯಾದರೂ, ಬಿಜೆಪಿ ಓಟು ಸೆಳೆಯಲು ಕಿರುಚಿ ಹೇಳಬೇಕಾದುದ್ದು ಅವರ ಅಗತ್ಯ. ಆದರೆ ವಾಸ್ತವ ಏನೆಂದರೆ 2014-18 ರ ಬಜೆಟ್ ನಲ್ಲಿ ಮಿಲಿಟರಿ ಬಜೆಟನ್ನು ಬಿಜೆಪಿ ಕಡಿತಗೊಳಿಸಿತ್ತು. ಹಿಂದಿನ ಯುಪಿಎ ಸರ್ಕಾರ ಜಿಡಿಪಿಯ 26% ವನ್ನು ಮಿಲಿಟರಿ ಆಧುನೀಕರಣಕ್ಕೆ ನೀಡಿದ್ದರೆ, ಬಿಜೆಪಿಯು ಶೇ. 18% ಕ್ಕೆ ಇದನ್ನು ಕಡಿತಗೊಳಿಸಿತ್ತು. ಭಯೋತ್ಪಾದನೆ ವಿರುದ್ಧ ವಾಸ್ತವದಲ್ಲಿ ಹೋರಾಡುವ ಸೈನಿಕರ ಸಂಬಳ ಮತ್ತು ಸುರಕ್ಷತೆಯ ವೆಚ್ಚವನ್ನು ಕಡಿತಗೊಳಿಸಿ ಭಯೋತ್ಪಾದನೆ ವಿರುದ್ಧ ಮಾತನಾಡುವುದು ಓಟು ಗಿಟ್ಟಿಸುವ ತಂತ್ರವಷ್ಟೆ. ಬಿಜೆಪಿ ಸಂಕಲ್ಪ ಪತ್ರದಲ್ಲೂ ಸೈನಿಕರ ವೇತನ, ಆಧುನಿಕ ಯುದ್ಧಾಸ್ತ್ರ, ಸೈನಿಕರ ಸ್ಥಾನಮಾನದ ಬಗ್ಗೆ ಯಾವುದೇ ನಿರ್ದಿಷ್ಟತೆ ಇಲ್ಲ. ಆದರೆ ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲಿ ಇದರ ಬಗ್ಗೆ ನಿರ್ದಿಷ್ಟವಾಗಿ ನಮೂದಿಸಿದೆ. BSF CRPF ಈ ಸಿಬ್ಬಂದಿಗಳು ಹುತಾತ್ಮರಾದಾಗ ಅವರಿಗೆ ಶಹೀದ್ ಗೌರವ ನೀಡುವುದು, ಸಂಬಳ ಹೆಚ್ಚಿಸುವುದು, ಆಧುನಿಕ ಯುದ್ಧಾಸ್ತ್ರ ನೀಡುವುದು ಇತ್ಯಾದಿ.

ಉದ್ಯೋಗ ಸೃಷ್ಟಿ
ಹಿಂದಿನ ಬಾರಿ ಪ್ರಣಾಳಿಕೆಯಲ್ಲಿ ವರ್ಷಕ್ಕೆ 2 ಕೋಟಿ ಉದ್ಯೋಗ ಸೃಷ್ಟಿಸುವುದಾಗಿ ಹೇಳಿದ್ದ ಬಿಜೆಪಿ ಈಬಾರಿ ಉದ್ಯೋಗ ಸೃಷ್ಟಿಸುತ್ತೇವೆ ಎಂದಷ್ಟೆ ಹೇಳಿದೆ ಹೊರತು ಯಾವುದೇ ನಿರ್ದಿಷ್ಟ ಅಂಕಿಯನ್ನು ನಮೂದಿಸಿಲ್ಲ. ಇದು ಮುಂದೆ ಎದುರಾಗುವ ಪ್ರಶ್ನೆಯಿಂದ ನುಣುಚಿಕೊಳ್ಳುವ ತಂತ್ರ. ಡಿಮೊನಿಟೈಸೇಷನ್ ನಂತಹ ನಿರ್ಧಾರದಿಂದ 2018ರಲ್ಲಿ 11 ಮಿಲಿಯನ್ ಉದ್ಯೋಗ ನಾಶಕ್ಕೆ ಬಿಜೆಪಿ ಕಾರಣವಾಗಿತ್ತು. 45 ವರ್ಷಗಳ ಬಳಿಕ ನಿರುದ್ಯೋಗ ಪ್ರಮಾಣ ದರ ಅತ್ಯಂತ ಹೆಚ್ಚಾಗಿದ್ದು ಬಿಜೆಪಿ ಅಧಿಕಾರದಲ್ಲಿ. ಇಂತಹ ಜ್ವಲಂತ ಸಮಸ್ಯೆಗೆ ಪರಿಹಾರದ ಬಗ್ಗೆ ಸಂಕಲ್ಪ ಪತ್ರದಲ್ಲಿ ಯಾವುದೇ ನಿರ್ದಿಷ್ಟತೆ ಇಲ್ಲ. ಇನ್ನು ಯುಪಿಎ ಪ್ರಣಾಳಿಕೆ ನೋಡಿದರೆ ಸಾರ್ವಜನಿಕ ವಲಯದಲ್ಲಿ 24 ಲಕ್ಷ ಉದ್ಯೋಗ ಭರ್ತಿ ಮತ್ತು ಇದರ ಹೊರತಾಗಿ ಇತರೆ 10 ಲಕ್ಷ ಉದ್ಯೋಗ ಸೃಷ್ಟಿ ಎಂಬುದಾಗಿ ಹೇಳಿದೆ.

ಕೃಷಿ
25 ಲಕ್ಷ ಕೋಟಿ ಬಂಡವಾಳವನ್ನು ಕೃಷಿ ಕ್ಷೇತ್ರದಲ್ಲಿ ವಿನಿಯೋಗಿಸುತ್ತೇವೆ ಎಂದು ಬಿಜೆಪಿಯ ಸಂಕಲ್ಪ ಪತ್ರದಲ್ಲಿ ನಮೂದಿಲಸಲಾಗಿದೆ. ಬಿಜೆಪಿಯ 2014-2018 ಬಜೆಟ್ ನೋಡಿದರೆ ಕೃಷಿಗೆ 1.7 ಲಕ್ಷ ಕೋಟಿ ನೀಡಲಾಗಿತ್ತು. ಹೌದು ಕೃಷಿಕರು ಸಮಸ್ಯೆಯಲ್ಲಿದ್ದಾರೆ ಅವರ ಅಗತ್ಯತೆ ಪೂರೈಸಬೇಕು. ಆದರೆ ಇಷ್ಟು ಹಣ ಎಲ್ಲಿಂದ ಬರಬೇಕು ? ಹಾಗೆಯೇ ಯಾವುದೇ ಹೊಸ ಯೋಜನೆಯನ್ನು ಕೃಷಿಕರಿಗಾಗಿ ನೀಡಲಾಗಿಲ್ಲ. 2022 ರೈತರ ಆದಾಯ ದ್ವಿಗುಣಗೊಳಿಸುವುದು ಎಂಬುದು ಹಿಂದಿನ ಭರವಸೆಯಾಗಿದ್ದು ಈಗಲೂ ಅದನ್ನೇ ಹೇಳಲಾಗಿದೆ. ಇನ್ನೊಂದೆಡೆ ಕಾಂಗ್ರೆಸ್ ರೈತರಿಗಾಗಿ ಪ್ರತ್ಯೇಕ ಬಜೆಟನ್ನು ನೀಡುತ್ತೇವೆ ಎಂದು ಹೇಳಿದೆ. ಬೆಳೆಗೆ ಉತ್ತಮ ಬೆಲೆ ನೀಡುವುದಾಗಿ ಹೇಳಿದೆ.

ಸ್ವಾತಂತ್ರ್ಯ ಹೋರಾಟಗಾರರ ಹೆಸರಲ್ಲಿ ಹೊಸ ವರಸೆ
2047ಕ್ಕೆ ದೇಶಕ್ಕೆ ಸ್ವಾತಂತ್ರ್ಯ ಬಂದು 100 ವರ್ಷವಾಗುತ್ತದೆ. ಸ್ವಾತಂತ್ರ್ಯ ಹೋರಾಟಗಾರರ ಕನಸಿನಂತೆ 2047 ರಲ್ಲಿ ದೇಶ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಬೇಕು. ಅದಕ್ಕೆ ಭದ್ರ ಬುನಾದಿ ನಾವು ಹಾಕುತ್ತೇವೆ ಎಂದು ಮೋದಿ ಹೇಳಿದ್ದಾರೆ. ಇಲ್ಲಿ ಗುರಿ ಸಾಧನೆ ಕಾಲ ಮಿತಿ 5 ವರ್ಷಕ್ಕಿಂತ ಜಾಸ್ತಿ (ಸುಮಾರು 28 ವರ್ಷ) ಮುಂದೂಡಿ ಭಾವನಾತ್ಮಕವಾಗಿ ಮತದಾರರ ಹಾದಿ ತಪ್ಪಿಸಲಾಗುತ್ತಿದೆ.

ಜಿಲ್ಲೆಗೊಂದು ಮೆಡಿಕಲ್ ಕಾಲೇಜು ನಿರ್ಮಾಣ
ದೇಶದ ಎಲ್ಲಾ ಜಿಲ್ಲೆಗಳಲ್ಲೂ ವೈದ್ಯಕೀಯ ಕಾಲೇಜುಗಳನ್ನು ತೆರೆಯುತ್ತೇವೆ ಎಂಬುದಾಗಿ ಬಿಜೆಪಿ ಸಂಕಲ್ಪ ಪತ್ರದಲ್ಲಿ ಹೇಳಲಾಗಿದೆ. 2016 ರಲ್ಲಿ ದೇಶದಲ್ಲಿ 707 ಜಿಲ್ಲೆಗಳಿವೆ. 2017 ರಂತೆ ದೇಶದಲ್ಲಿ 460 ಮೆಡಿಕಲ್ ಕಾಲೇಜುಗಳಿದ್ದು 63,985 ವಿದ್ಯಾರ್ಥಿಗಳಿದ್ದರು. ವರ್ಷಕ್ಕೆ ಅಂದಾಜು 10,000 ಜಾಬ್ ಕೂಡ ವೈದ್ಯಕೀಯ ವಲಯದಲ್ಲಿ ಸೃಷ್ಟಿ ಮಾಡಲು ಸಾಧ್ಯವಿಲ್ಲ. ಅಂದ ಮೇಲೆ 2024 ರ ಹೊತ್ತಿಗೆ ವೈದ್ಯಕೀಯ ಕಾಲೇಜುಗಳನ್ನು ಹೆಚ್ಚಿಸುವ ಅಗತ್ಯ ಇದೆಯೆ ಎಂಬ ಪ್ರಶ್ನೆ ಮೂಡುತ್ತದೆ. ಕಾಂಗ್ರೆಸ್ ಪ್ರಣಾಳಿಕೆಯಲ್ಲಿ ಬಾಕಿ ಉಳಿದ ಶಿಕ್ಷಣ ಸಾಲದ ಬಡ್ಡಿಯನ್ನು ಮನ್ನಾ ಮಾಡುವುದು ಮತ್ತು ವಿದ್ಯಾರ್ಥಿ ಹಕ್ಕಿನ ಕಾಯಿದೆ, ಅರ್ಹ ವಿದ್ಯಾರ್ಥಿಗೆ ವಿದ್ಯಾರ್ಥಿ ವೇತನ ಒದಗಿಸುವುದಾಗಿ ತಿಳಿಸಿದೆ. ಇದಕ್ಕಿಂತ ಮುಖ್ಯವಾಗಿ, ವಿದ್ಯಾರ್ಥಿಗೆ ಉದ್ಯೋಗ ಸಿಗುವವರೆಗೆ ಶಿಕ್ಷಣ ಸಾಲದ ಮೇಲೆ ಬಡ್ಡಿ ವಿಧಿಸಲಾಗುವುದಿಲ್ಲ ಎಂಬುದು ಪ್ರಮುಖ ಅಂಶ.

ಸಂಕಲ್ಪ ಪತ್ರದಲ್ಲಿ ದೇಶದ ಆರ್ಥಿಕತೆಯನ್ನು 2032 ರ ಹೊತ್ತಿಗೆ ರೂ. 700 ಲಕ್ಷ ಕೋಟಿಗೆ ಏರಿಸುವುದರ ಬಗ್ಗೆ ಹೇಳಲಾಗಿದೆ. ಆದರೆ ಅದಕ್ಕೆ ಯಾವುದೇ ಕಾರ್ಯನೀತಿಯನ್ನು ತಿಳಿಸಿಲ್ಲ.
ಮುಖ್ಯವಾಗಿ ಉದ್ಯೋಗ ಸೃಷ್ಟಿ, ಜನಸಂಖ್ಯೆ ನಿಯಂತ್ರಣ, ಬಡತನ ನಿರ್ಮೂಲನೆ, ಮಾಬ್ ಲಿಂಚಿಂಗ್ ತಡೆ, ಪರಿಸರ, ಜಾಗತಿಕ ತಾಪಮಾನದ ನಿಯಂತ್ರಣಕ್ಕೆ ಯಾವುದೇ ಯೋಜನೆ ಮತ್ತು ಮುನ್ನೋಟವನ್ನು ಬಿಜೆಪಿ ಜನರ ಮುಂದಿಟ್ಟಿಲ್ಲ.

ಬದಲಾಗಿ, ಎಡಪಂಥೀಯ ವಿಚಾರ ಹತ್ತಿಕ್ಕುವುದು, 371 ವಿಧಿ ತೆಗೆದು ಹಾಕುವುದು, ರಾಮ ಮಂದಿರ ನಿರ್ಮಾಣ, ಶಬರಿ ಮಲೆ ಅಯ್ಯಪ್ಪ ದೇವಾಲಯ, ಸ್ವಾತಂತ್ರ್ಯ ಹೋರಾಟಗಾರರ ಹೆಸರು ಎತ್ತುತ್ತಿರುವುದು ಬಿಜೆಪಿ ಮತದಾರರನ್ನು ಸೆಳೆಯುವ, ಮತದಾರರನ್ನು ಬೇರ್ಪಡಿಸಿ ಮತ್ತೆ ಅಧಿಕಾರಕ್ಕೆ ಬರುವ ತಂತ್ರವೇ ಹೊರತು, ಹಿಂದಿನ ಸಬ್ಕಾ ಸಾಥ್ ಸಬ್ಕಾ ವಿಕಾಸ್ ಎಂಬ ಹುಸಿ ಘೋಷಣೆ ಈಗ ಸಂಪೂರ್ಣ ಮಾಯವಾಗಿದೆ.
ಕೊನೆಯ ಬಾರಿ ಹೇಳಿದ ಭರವಸೆಯನ್ನೆ ಈಗಲೂ ಹೇಳುತ್ತಿದ್ದಾರೆ. ಉದಾ- ಮಹಿಳಾ ಮೀಸಲಾತಿ. ಈ ಬಾರಿ ಬಿಜೆಪಿಗೆ ಬಹುಮತ ಇದ್ದಾಗ್ಯೂ ಮಹಿಳಾ ಮೀಸಲಾತಿ ಬಿಲ್ ಪಾಸ್ ಮಾಡಿಲ್ಲ. ಮತ್ತೆ ಅದೇ ಹಳಸನ್ನು ಹೊಸ ಪಾತ್ರೆಯಲ್ಲಿ ಹೊತ್ತು ಬಂದಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...