Homeಮುಖಪುಟದೇವಾಲಯಗಳ ಮೇಲೆ TDP, BJP ಕಾರ್ಯಕರ್ತರ ದಾಳಿ: ಆಂಧ್ರಪ್ರದೇಶದ DGP ಗೌತಮ್ ಸೇವಾಂಗ್ ಗಂಭೀರ ಆರೋಪ

ದೇವಾಲಯಗಳ ಮೇಲೆ TDP, BJP ಕಾರ್ಯಕರ್ತರ ದಾಳಿ: ಆಂಧ್ರಪ್ರದೇಶದ DGP ಗೌತಮ್ ಸೇವಾಂಗ್ ಗಂಭೀರ ಆರೋಪ

ದೇವಾಲಯ ದಾಳಿ ಪ್ರಕರಣಗಳಲ್ಲಿ 13 ಮಂದಿ ಟಿಡಿಪಿ ಕಾರ್ಯಕರ್ತರು ಮತ್ತು ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಮತ್ತು ತೆಲುಗು ದೇಶಂ ಪಕ್ಷದ ಕಾರ್ಯಕರ್ತರು ದೇವಾಲಯಗಳ ಮೇಲೆ ದಾಳಿ ನಡೆಸಿ ಧಾರ್ಮಿಕ ಗುಂಪುಗಳ ನಡುವೆ ಸುಳ್ಳುಸುದ್ದಿ ಹರಡಿ ಕೋಮುಗಲಭೆ ಸೃಷ್ಟಿಸುವ ಸಂಚು ರೂಪಿಸಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಗೌರಮ್ ಸೇವಾಂಗ್ ನೀಡಿರುವ ಹೇಳಿಕೆ ಉಲ್ಲೇಖಿಸಿ ದಿವೈರ್.ಇನ್ ವರದಿ ಮಾಡಿದೆ. ಡಿಜಿಪಿ ಮಾಡಿರುವ ಆರೋಪ ಚರ್ಚೆಯ ಕಿಡಿ ಹೊತ್ತಿಸಿದೆ.

ಈ ಸಂಬಂಧ ಅಮರಾವತಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಗೌತಮ್ ಸೇವಾಂಗ್, ಟಿಡಿಪಿ ಮತ್ತು ಬಿಜೆಪಿ ಕಾರ್ಯಕರ್ತರು ದೇವಾಲಯ ದಾಳಿ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. 15 ಮಂದಿ ಟಿಡಿಪಿ ಮತ್ತು 4 ಮಂದಿ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ದೇವಾಲಯ ದಾಳಿ ಪ್ರಕರಣಗಳಲ್ಲಿ 13 ಮಂದಿ ಟಿಡಿಪಿ ಕಾರ್ಯಕರ್ತರು ಮತ್ತು ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೈದರಾಬಾದ್ ಪಾಲಿಕೆ ಚುನಾವಣೆಯಲ್ಲಿ ಹಿಂದುತ್ವ ಶಕ್ತಿಗಳು ಮೇಲುಗೈ ಪಡೆದಿದ್ದು ಹೇಗೆ?

ಕಳೆದ ಕೆಲವು ತಿಂಗಳುಗಳ ಹಿಂದ ಆಂಧ್ರಪ್ರದೇಶಾದ್ಯಂತ ಹಿಂದೂ ದೇವಾಲಯಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿ ನಡೆದಿತ್ತು. ದಾಳಿಕೋರರು ದೇವರಮೂರ್ತಿಗಳನ್ನು ಭಗ್ನಗೊಳಿಸಿ ಧಾರ್ಮಿಕ ಸ್ಥಳವನ್ನು ಧ್ವಂಸ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷ ಟಿಡಿಪಿ ಮತ್ತು ಬಿಜೆಪಿ ಮುಖಂಡರು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಕ್ರಿಶ್ಚಿಯನ್ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಆರೋಪಿಸಿದ್ದರು.

ಈ ಆರೋಪ ಕೇಳಿಬಂದ ಕೆಲವೇ ದಿನಗಳ ನಂತರ ಡಿಜಿಪಿ ಗೌತಮ್ ಸೇವಾಂಗ್ ದೇವಾಲಯಗಳ ಮೇಲಿನ ದಾಳಿಗೆ ಟಿಡಿಪಿ ಮತ್ತು ಬಿಜೆಪಿ ಕಾರ್ಯಕರ್ತರು ಕಾರಣ ಎಂದು ಗಂಭೀರ ಆರೋಪ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಟಿಡಿಪಿ ಮತ್ತು ಬಿಜೆಪಿ ಕಾರ್ಯಕರ್ತರು ಮದ್ಯ ಸೇವಿಸಿ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ತೆಗೆದುಕೊಳ್ಳುತ್ತಿರುವ ಸಾರ್ವಜನಿಕ ತೀರ್ಮಾನಗಳು ದಾಳಿಗೆ ಕಾರಣ. ಇದು ಸರ್ಕಾರದ ಕಲ್ಯಾಣ ಯೋಜನೆಗಳಿಗೆ ಅಡ್ಡಿಪಡಿಸುವುದು ಮತ್ತು ಸರ್ಕಾರದ ವಿರುದ್ಧ ಪಿತೂರಿ ಮತ್ತು ರಾಜಕೀಯ ಗೆರಿಲ್ಲಾ ಯುದ್ದದ ಭಾಗವಾಗಿದೆ ಎಂಬುದು ಗೌತಮ್ ಅವರ ಅಭಿಪ್ರಾಯವಾಗಿದೆ ಎಂದು ವರದಿ ಮಾಡಿದೆ.

ಇದನ್ನೂ ಓದಿ: ಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಕೀಟನಾಶಕಗಳ ತ್ಯಾಜ್ಯ ಕಾರಣ-ಏಮ್ಸ್

ರಾಜ್ಯದಲ್ಲಿ ಕೋಮು ಸೌಹಾರ್ದತೆಯನ್ನು ಹಾಳುಮಾಡಲು ಕೆಲ ರಾಜಕೀಯ ಪಕ್ಷಗಳು ಯತ್ನಿಸುತ್ತಿವೆ ಎಂದು ಗೌತಮ್ ಸೇವಾಂಗ್ ಶುಕ್ರವಾರ ಆರೋಪಿಸಿದ್ದರು. ಕೆಲವು ದುರುದ್ಧೇಶಪೂರಿತ ಗುಂಪುಗಳು ಕೃತ್ಯದಲ್ಲಿ ಭಾಗಿಯಾಗಿದ್ದು ತನಿಖೆ ಮುಂದುವರಿದಿದೆ. ಕೆಲ ರಾಜಕೀಯ ಪಕ್ಷಗಳು ಸುಳ್ಳು ಸುದ್ದಿಗಳನ್ನು ಹರಡಲು ಯತ್ನಿಸುತ್ತಿರುವುದು ಈ ದಾಳಿಯ ಹಿಂದಿದೆ. ರಾಜ್ಯದಲ್ಲಿ ವದಂತಿಗಳನ್ನು ಹರಡಿ ಕೋಮುಸೌಹಾರ್ದತೆಯನ್ನು ಹಾಳುಗೆಡವುತ್ತ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಯತ್ನಿಸುತ್ತಿವೆ. 9 ಪ್ರಕರಣಗಳಲ್ಲಿ ಟಿಡಿಪಿ ಮತ್ತು ಬಿಜೆಪಿ ಸದಸ್ಯತ್ವ ಪಡೆದಿರುವವರು ಭಾಗಿಯಾಗಿರುವುದನ್ನು ಅಂಕಿಅಂಶಗಳು ದೃಢಪಡಿಸಿವೆ.

ಬಿಜೆಪಿಯ ಇಬ್ಬರು ಮತ್ತು ಟಿಡಿಪಿಯ ಇಬ್ಬರು ಸದಸ್ಯರು ಸೆಪ್ಟೆಂಬರ್ 2020 ರಲ್ಲಿ ಬೊಮ್ಮೂರು ಗ್ರಾಮದಲ್ಲಿ ವಿನಾಯಕ ಮೂರ್ತಿಗೆ ಹಾನಿ ಮಾಡಲಾಗಿದೆ ಎಂದು ಸುಳ್ಳು ಸುದ್ದಿ ಹರಡಿದ್ದರು. ಬಡವೆಲ್‌‌ನಲ್ಲಿ ಆಂಜನೇಯ ಮೂರ್ತಿಗೆ ಟಿಡಿಪಿ ಕಾರ್ಯಕರ್ತನೊಬ್ಬ ಚಪ್ಪಲಿ ಹಾರವನ್ನು ಹಾಕಿದ್ದ ಎಂಬ ಆರೋಪವೂ ಇದೆ. ಜನರಲ್ಲಿ ಗೊಂದಲ ಮೂಡಿಸಲು ಇಂತಹ ಸುದ್ಧಿಗಳನ್ನು ಹಬ್ಬಿಸುತ್ತಿದ್ದರು ಎಂದು ಆರೋಪಿಸಲಾಗಿದ್ದು, ಈ ಸಂಬಂಧ ನಾಲ್ವರು ಟಿಡಿಪಿ ಕಾರ್ಯಕರ್ತರು ಸೇರಿದಂತೆ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಅದಾನಿಗೆ 6 ವಿಮಾನ ನಿಲ್ದಾಣಗಳ ನಿರ್ವಹಣೆ ನೀಡುವುದರ ವಿರುದ್ಧ ದನಿಯೆತ್ತಿದ್ದ ಹಣಕಾಸು ಇಲಾಖೆ, ನೀತಿ ಆಯೋಗ! ಕಾರಣವೇನು?

ರಾಜ್ಯದ 180 ದೇವಾಲಯಗಳ ಧ್ವಂಸ ಅಪರಾಧ ಪ್ರಕರಣಗಳಲ್ಲಿ 337 ಆರೋಪಿಗಳನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾದ ಆರೋಪ ಇವರ ಮೇಲಿದೆ. 4643 ಆರೋಪಿಗಳು ಕೋಮುಗಲಭೆಯನ್ನು ಸೃಷ್ಟಿಸಲು ಯತ್ನಿಸಿದ್ದಾರೆ ಎಂದು ಡಿಜಿಪಿ ಗೌತಮ್ ಹೇಳಿದ್ದಾರೆಂದು ದಿವೈರ್.ಇನ್ ವರದಿ ಮಾಡಿದೆ.

ರಾಜಕೀಯ ಪಕ್ಷಗಳಿಗೆ ಮನವಿ ಮಾಡುತ್ತೇನೆ. ಧಾರ್ಮಿಕ ದ್ವೇಷವನ್ನು ಕೆರಳಿಸಬೇಡಿ. ಸಾಮಾಜಿಕ ಜಾಲತಾಣಗಳ ಮೂಲಕ ವದಂತಿಗಳನ್ನು ಹರಡಬೇಡಿ. ನೀವು ಇಂತಹ ಕೆಲಸ ಮಾಡಿದರೆ ನಾವು ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಗೌತಮ್ ಎಚ್ಚರಿಕೆ ನೀಡಿದ್ದಾರೆ.

ಡಿಜಿಪಿ ಗೌತಮ್ ಆರೋಪದ ಬೆನ್ನಿಗೇ ಟಿಡಿಪಿ ಮತ್ತು ಬಿಜೆಪಿ ಮುಖಂಡರು ವಾಗ್ದಾಳಿ ನಡೆಸಿದ್ದು ಡಿಜಿಪಿ ವೈ.ಎಸ್. ಜಗನ್ ಏಜೆಂಟ್ ಎಂದು ದೂರಿದ್ದಾರೆ. ಅವರು “ನೀವು ವೈಎಸ್ಆರ್‌ಸಿ ಪಕ್ಷದ ವಕ್ತಾರರಾಗಲು ಲಾಯಕ್ಕು’’ ಎಂದು ಟಿಡಿಪಿ ಪಕ್ಷದ ರಾಜ್ಯಾಧ್ಯಕ್ಷರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಆಂಧ್ರಪ್ರದೇಶ ಸಿಎಂ ಜಗನ್ ‘ಸೈಕೋ’ನಂತೆ ವರ್ತಿಸುತ್ತಿದ್ದಾರೆ: ಸಿಎಂ ವಿರುದ್ಧ ಮಾಜಿ ಸಿಎಂ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...