Homeಮುಖಪುಟದೇವಾಲಯಗಳ ಮೇಲೆ TDP, BJP ಕಾರ್ಯಕರ್ತರ ದಾಳಿ: ಆಂಧ್ರಪ್ರದೇಶದ DGP ಗೌತಮ್ ಸೇವಾಂಗ್ ಗಂಭೀರ ಆರೋಪ

ದೇವಾಲಯಗಳ ಮೇಲೆ TDP, BJP ಕಾರ್ಯಕರ್ತರ ದಾಳಿ: ಆಂಧ್ರಪ್ರದೇಶದ DGP ಗೌತಮ್ ಸೇವಾಂಗ್ ಗಂಭೀರ ಆರೋಪ

ದೇವಾಲಯ ದಾಳಿ ಪ್ರಕರಣಗಳಲ್ಲಿ 13 ಮಂದಿ ಟಿಡಿಪಿ ಕಾರ್ಯಕರ್ತರು ಮತ್ತು ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಅವರು ಹೇಳಿದ್ದಾರೆ.

- Advertisement -
- Advertisement -

ಆಂಧ್ರಪ್ರದೇಶದಲ್ಲಿ ಭಾರತೀಯ ಜನತಾ ಪಕ್ಷ ಮತ್ತು ತೆಲುಗು ದೇಶಂ ಪಕ್ಷದ ಕಾರ್ಯಕರ್ತರು ದೇವಾಲಯಗಳ ಮೇಲೆ ದಾಳಿ ನಡೆಸಿ ಧಾರ್ಮಿಕ ಗುಂಪುಗಳ ನಡುವೆ ಸುಳ್ಳುಸುದ್ದಿ ಹರಡಿ ಕೋಮುಗಲಭೆ ಸೃಷ್ಟಿಸುವ ಸಂಚು ರೂಪಿಸಿದ್ದಾರೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಗೌರಮ್ ಸೇವಾಂಗ್ ನೀಡಿರುವ ಹೇಳಿಕೆ ಉಲ್ಲೇಖಿಸಿ ದಿವೈರ್.ಇನ್ ವರದಿ ಮಾಡಿದೆ. ಡಿಜಿಪಿ ಮಾಡಿರುವ ಆರೋಪ ಚರ್ಚೆಯ ಕಿಡಿ ಹೊತ್ತಿಸಿದೆ.

ಈ ಸಂಬಂಧ ಅಮರಾವತಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿರುವ ಗೌತಮ್ ಸೇವಾಂಗ್, ಟಿಡಿಪಿ ಮತ್ತು ಬಿಜೆಪಿ ಕಾರ್ಯಕರ್ತರು ದೇವಾಲಯ ದಾಳಿ ಪ್ರಕರಣಗಳಲ್ಲಿ ಭಾಗಿಯಾಗಿದ್ದಾರೆ. 15 ಮಂದಿ ಟಿಡಿಪಿ ಮತ್ತು 4 ಮಂದಿ ಬಿಜೆಪಿ ಕಾರ್ಯಕರ್ತರು ಪಾಲ್ಗೊಂಡಿದ್ದಾರೆ. ದೇವಾಲಯ ದಾಳಿ ಪ್ರಕರಣಗಳಲ್ಲಿ 13 ಮಂದಿ ಟಿಡಿಪಿ ಕಾರ್ಯಕರ್ತರು ಮತ್ತು ಇಬ್ಬರು ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಹೈದರಾಬಾದ್ ಪಾಲಿಕೆ ಚುನಾವಣೆಯಲ್ಲಿ ಹಿಂದುತ್ವ ಶಕ್ತಿಗಳು ಮೇಲುಗೈ ಪಡೆದಿದ್ದು ಹೇಗೆ?

ಕಳೆದ ಕೆಲವು ತಿಂಗಳುಗಳ ಹಿಂದ ಆಂಧ್ರಪ್ರದೇಶಾದ್ಯಂತ ಹಿಂದೂ ದೇವಾಲಯಗಳು ಮತ್ತು ಧಾರ್ಮಿಕ ಸ್ಥಳಗಳ ಮೇಲೆ ದಾಳಿ ನಡೆದಿತ್ತು. ದಾಳಿಕೋರರು ದೇವರಮೂರ್ತಿಗಳನ್ನು ಭಗ್ನಗೊಳಿಸಿ ಧಾರ್ಮಿಕ ಸ್ಥಳವನ್ನು ಧ್ವಂಸ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷ ಟಿಡಿಪಿ ಮತ್ತು ಬಿಜೆಪಿ ಮುಖಂಡರು ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ಕ್ರಿಶ್ಚಿಯನ್ ಕಾರ್ಯಕ್ರಮಗಳಲ್ಲಿ ಭಾಗಿಯಾಗುತ್ತಿದ್ದಾರೆ ಎಂದು ಆರೋಪಿಸಿದ್ದರು.

ಈ ಆರೋಪ ಕೇಳಿಬಂದ ಕೆಲವೇ ದಿನಗಳ ನಂತರ ಡಿಜಿಪಿ ಗೌತಮ್ ಸೇವಾಂಗ್ ದೇವಾಲಯಗಳ ಮೇಲಿನ ದಾಳಿಗೆ ಟಿಡಿಪಿ ಮತ್ತು ಬಿಜೆಪಿ ಕಾರ್ಯಕರ್ತರು ಕಾರಣ ಎಂದು ಗಂಭೀರ ಆರೋಪ ಮಾಡಿರುವುದು ಚರ್ಚೆಗೆ ಗ್ರಾಸವಾಗಿದೆ.

ಟಿಡಿಪಿ ಮತ್ತು ಬಿಜೆಪಿ ಕಾರ್ಯಕರ್ತರು ಮದ್ಯ ಸೇವಿಸಿ ಈ ಕೃತ್ಯ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಮುಖ್ಯಮಂತ್ರಿ ವೈ.ಎಸ್.ಜಗನ್ ಮೋಹನ್ ರೆಡ್ಡಿ ತೆಗೆದುಕೊಳ್ಳುತ್ತಿರುವ ಸಾರ್ವಜನಿಕ ತೀರ್ಮಾನಗಳು ದಾಳಿಗೆ ಕಾರಣ. ಇದು ಸರ್ಕಾರದ ಕಲ್ಯಾಣ ಯೋಜನೆಗಳಿಗೆ ಅಡ್ಡಿಪಡಿಸುವುದು ಮತ್ತು ಸರ್ಕಾರದ ವಿರುದ್ಧ ಪಿತೂರಿ ಮತ್ತು ರಾಜಕೀಯ ಗೆರಿಲ್ಲಾ ಯುದ್ದದ ಭಾಗವಾಗಿದೆ ಎಂಬುದು ಗೌತಮ್ ಅವರ ಅಭಿಪ್ರಾಯವಾಗಿದೆ ಎಂದು ವರದಿ ಮಾಡಿದೆ.

ಇದನ್ನೂ ಓದಿ: ಆಂಧ್ರ ಪ್ರದೇಶ: ನಿಗೂಢ ಕಾಯಿಲೆಗೆ ಕೀಟನಾಶಕಗಳ ತ್ಯಾಜ್ಯ ಕಾರಣ-ಏಮ್ಸ್

ರಾಜ್ಯದಲ್ಲಿ ಕೋಮು ಸೌಹಾರ್ದತೆಯನ್ನು ಹಾಳುಮಾಡಲು ಕೆಲ ರಾಜಕೀಯ ಪಕ್ಷಗಳು ಯತ್ನಿಸುತ್ತಿವೆ ಎಂದು ಗೌತಮ್ ಸೇವಾಂಗ್ ಶುಕ್ರವಾರ ಆರೋಪಿಸಿದ್ದರು. ಕೆಲವು ದುರುದ್ಧೇಶಪೂರಿತ ಗುಂಪುಗಳು ಕೃತ್ಯದಲ್ಲಿ ಭಾಗಿಯಾಗಿದ್ದು ತನಿಖೆ ಮುಂದುವರಿದಿದೆ. ಕೆಲ ರಾಜಕೀಯ ಪಕ್ಷಗಳು ಸುಳ್ಳು ಸುದ್ದಿಗಳನ್ನು ಹರಡಲು ಯತ್ನಿಸುತ್ತಿರುವುದು ಈ ದಾಳಿಯ ಹಿಂದಿದೆ. ರಾಜ್ಯದಲ್ಲಿ ವದಂತಿಗಳನ್ನು ಹರಡಿ ಕೋಮುಸೌಹಾರ್ದತೆಯನ್ನು ಹಾಳುಗೆಡವುತ್ತ ತಮ್ಮ ಅಸ್ತಿತ್ವವನ್ನು ಉಳಿಸಿಕೊಳ್ಳಲು ಯತ್ನಿಸುತ್ತಿವೆ. 9 ಪ್ರಕರಣಗಳಲ್ಲಿ ಟಿಡಿಪಿ ಮತ್ತು ಬಿಜೆಪಿ ಸದಸ್ಯತ್ವ ಪಡೆದಿರುವವರು ಭಾಗಿಯಾಗಿರುವುದನ್ನು ಅಂಕಿಅಂಶಗಳು ದೃಢಪಡಿಸಿವೆ.

ಬಿಜೆಪಿಯ ಇಬ್ಬರು ಮತ್ತು ಟಿಡಿಪಿಯ ಇಬ್ಬರು ಸದಸ್ಯರು ಸೆಪ್ಟೆಂಬರ್ 2020 ರಲ್ಲಿ ಬೊಮ್ಮೂರು ಗ್ರಾಮದಲ್ಲಿ ವಿನಾಯಕ ಮೂರ್ತಿಗೆ ಹಾನಿ ಮಾಡಲಾಗಿದೆ ಎಂದು ಸುಳ್ಳು ಸುದ್ದಿ ಹರಡಿದ್ದರು. ಬಡವೆಲ್‌‌ನಲ್ಲಿ ಆಂಜನೇಯ ಮೂರ್ತಿಗೆ ಟಿಡಿಪಿ ಕಾರ್ಯಕರ್ತನೊಬ್ಬ ಚಪ್ಪಲಿ ಹಾರವನ್ನು ಹಾಕಿದ್ದ ಎಂಬ ಆರೋಪವೂ ಇದೆ. ಜನರಲ್ಲಿ ಗೊಂದಲ ಮೂಡಿಸಲು ಇಂತಹ ಸುದ್ಧಿಗಳನ್ನು ಹಬ್ಬಿಸುತ್ತಿದ್ದರು ಎಂದು ಆರೋಪಿಸಲಾಗಿದ್ದು, ಈ ಸಂಬಂಧ ನಾಲ್ವರು ಟಿಡಿಪಿ ಕಾರ್ಯಕರ್ತರು ಸೇರಿದಂತೆ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: ಅದಾನಿಗೆ 6 ವಿಮಾನ ನಿಲ್ದಾಣಗಳ ನಿರ್ವಹಣೆ ನೀಡುವುದರ ವಿರುದ್ಧ ದನಿಯೆತ್ತಿದ್ದ ಹಣಕಾಸು ಇಲಾಖೆ, ನೀತಿ ಆಯೋಗ! ಕಾರಣವೇನು?

ರಾಜ್ಯದ 180 ದೇವಾಲಯಗಳ ಧ್ವಂಸ ಅಪರಾಧ ಪ್ರಕರಣಗಳಲ್ಲಿ 337 ಆರೋಪಿಗಳನ್ನು ಬಂಧಿಸಲಾಗಿದೆ. ಕೃತ್ಯದಲ್ಲಿ ಭಾಗಿಯಾದ ಆರೋಪ ಇವರ ಮೇಲಿದೆ. 4643 ಆರೋಪಿಗಳು ಕೋಮುಗಲಭೆಯನ್ನು ಸೃಷ್ಟಿಸಲು ಯತ್ನಿಸಿದ್ದಾರೆ ಎಂದು ಡಿಜಿಪಿ ಗೌತಮ್ ಹೇಳಿದ್ದಾರೆಂದು ದಿವೈರ್.ಇನ್ ವರದಿ ಮಾಡಿದೆ.

ರಾಜಕೀಯ ಪಕ್ಷಗಳಿಗೆ ಮನವಿ ಮಾಡುತ್ತೇನೆ. ಧಾರ್ಮಿಕ ದ್ವೇಷವನ್ನು ಕೆರಳಿಸಬೇಡಿ. ಸಾಮಾಜಿಕ ಜಾಲತಾಣಗಳ ಮೂಲಕ ವದಂತಿಗಳನ್ನು ಹರಡಬೇಡಿ. ನೀವು ಇಂತಹ ಕೆಲಸ ಮಾಡಿದರೆ ನಾವು ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಗೌತಮ್ ಎಚ್ಚರಿಕೆ ನೀಡಿದ್ದಾರೆ.

ಡಿಜಿಪಿ ಗೌತಮ್ ಆರೋಪದ ಬೆನ್ನಿಗೇ ಟಿಡಿಪಿ ಮತ್ತು ಬಿಜೆಪಿ ಮುಖಂಡರು ವಾಗ್ದಾಳಿ ನಡೆಸಿದ್ದು ಡಿಜಿಪಿ ವೈ.ಎಸ್. ಜಗನ್ ಏಜೆಂಟ್ ಎಂದು ದೂರಿದ್ದಾರೆ. ಅವರು “ನೀವು ವೈಎಸ್ಆರ್‌ಸಿ ಪಕ್ಷದ ವಕ್ತಾರರಾಗಲು ಲಾಯಕ್ಕು’’ ಎಂದು ಟಿಡಿಪಿ ಪಕ್ಷದ ರಾಜ್ಯಾಧ್ಯಕ್ಷರು ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಆಂಧ್ರಪ್ರದೇಶ ಸಿಎಂ ಜಗನ್ ‘ಸೈಕೋ’ನಂತೆ ವರ್ತಿಸುತ್ತಿದ್ದಾರೆ: ಸಿಎಂ ವಿರುದ್ಧ ಮಾಜಿ ಸಿಎಂ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...