Homeಚಳವಳಿಭಯೋತ್ಪಾದಕ ಸಂಘಟನೆಗಳ ನಂಟಿನ ಆರೋಪ: ರೈತ ಹೋರಾಟಗಾರರಿಗೆ NIA ನೋಟಿಸ್

ಭಯೋತ್ಪಾದಕ ಸಂಘಟನೆಗಳ ನಂಟಿನ ಆರೋಪ: ರೈತ ಹೋರಾಟಗಾರರಿಗೆ NIA ನೋಟಿಸ್

ಎನ್‌ಐಎ ಮೂಲಕ ಸಮನ್ಸ್ ನೀಡಿ ರೈತರನ್ನು ಹೆದರಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇದಕ್ಕೆ ನಾವು ಹೆದರುವುದಿಲ್ಲ ಎಂದು ಹೋರಾಟಗಾರರು ಹೇಳಿದ್ದಾರೆ.

- Advertisement -
- Advertisement -

ಅಮೆರಿಕ ಮೂಲದ ಖಾಲಿಸ್ತಾನಿ ಪರ ಸಂಘಟನೆ ಸಿಖ್ಸ್ ಫಾರ್ ಜಸ್ಟೀಸ್ (ಎಸ್‌ಎಫ್‌ಜೆ) ವಿರುದ್ಧ ದಾಖಲಾದ ಎಫ್‌ಐಆರ್‌ಗೆ ಸಂಬಂಧಿಸಿದಂತೆ, ರೈತ ಹೋರಾಟದಲ್ಲಿ ಪಾಲ್ಗೊಳ್ಳುವ 12 ಕ್ಕಿಂತಲೂ ಪಂಜಾಬಿ ಮತ್ತು ಸಿಖ್ ಸಾಮಾಜಿಕ ಕಾರ್ಯಕರ್ತರಿಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ನೋಟಿಸ್ ನೀಡಿದೆ. ಇಂತಹ ನೋಟಿಸ್‌ಗಳನ್ನು ಸ್ವೀಕರಿಸಿದವರ ಸಂಖ್ಯೆ 40 ಕ್ಕಿಂತ ಹೆಚ್ಚಾಗುವ ನಿರೀಕ್ಷೆಯಿದೆ.

ಅಮೆರಿಕ ಮೂಲದ ಗುರ್‌ಪತ್ವಂತ್ ಸಿಂಗ್ ಪನ್ನು, ಯುನೈಟೆಡ್ ಕಿಂಗ್‌ಡಮ್ ಮೂಲದ ಪರಮ್‌ಜಿತ್ ಸಿಂಗ್ ಪಮ್ಮಾ ಮತ್ತು ಕೆನಡಾದ ಹರ್‌ದೀಪ್ ಸಿಂಗ್ ನಿಜ್ಜಾರ್ ಸೇರಿದಂತೆ ಒಟ್ಟು ಮೂವರ ವಿರುದ್ಧ ಎನ್‌ಐಎ 2020 ರ ಡಿಸೆಂಬರ್ 15 ರಂದು ದೆಹಲಿಯಲ್ಲಿ ಎಫ್‌ಐಆರ್ ದಾಖಲಿಸಿತ್ತು. ಗುರ್‌ಪತ್ವಂತ್ ಸಿಂಗ್ ಪನ್ನು ಎಸ್‌ಎಫ್‌ಜೆ ಮುಖ್ಯಸ್ಥರಾಗಿದ್ದಾರೆ.

ಇದನ್ನೂ ಓದಿ: ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ಎಫ್‌ಐಆ‌ರ್‌‌ನಲ್ಲಿ, “ಸಿಖ್ಸ್ ಫಾರ್‌ ಜಸ್ಟಿಸ್‌ ಎಂಬ ಸಂಘಟನೆಯು ಇತರ ಖಾಲಿಸ್ತಾನಿ ಭಯೋತ್ಪಾದಕ ಸಂಘಟನೆಗಳಾದ ಬಬ್ಬರ್ ಖಾಲ್ಸಾ ಇಂಟರ್ನ್ಯಾಷನಲ್, ಖಲಿಸ್ತಾನ್ ಟೈಗರ್ ಫೋರ್ಸ್ ಮತ್ತು ಖಾಲಿಸ್ತಾನ್ ಜಿಂದಾಬಾದ್ ಫೋರ್ಸ್ ಸಂಘಟನೆಗಳೊಂದಿಗೆ ಯುಎಪಿಎ ಅಡಿಯಲ್ಲಿ ಕಾನೂನು ಬಾಹಿರ ಚಟುವಟಿಕೆಯಲ್ಲಿ ತೊಡಗಿದೆ ಎಂಬ ಮಾಹಿತಿ ಕೇಂದ್ರ ಸರ್ಕಾರ ಪಡೆದಿದೆ. ಈ ಸಂಘಟನೆಗಳು ಭಯ ಮತ್ತು ಅರಾಜಕತೆಯ ವಾತಾವರಣವನ್ನು ಸೃಷ್ಟಿಸುವ ಹಾಗೂ ಜನರಲ್ಲಿ ಅಸಮಾಧಾನ ಉಂಟುಮಾಡಿ ಭಾರತ ಸರ್ಕಾರದ ವಿರುದ್ಧ ದಂಗೆ ಏಳುವಂತೆ ಪ್ರಚೋದಿಸುವ ಪಿತೂರಿ ಮಾಡಿದೆ” ಎಂದು ಹೇಳಲಾಗಿದೆ.

“ಭಾರತದ ಜನರಲ್ಲಿ ಭಯೋತ್ಪಾದನೆಯನ್ನು ಬಿತ್ತಲು ಮತ್ತು ಪ್ರಭಾವಶಾಲಿ ಯುವಕರನ್ನು ಪ್ರಚೋದಿಸಲು ಎನ್‌‌ಜಿಒಗಳ ಮೂಲಕ ಭಾರತ ಮೂಲದ ಖಾಲಿಸ್ತಾನಿ ಪರ ಸಂಘಟನೆಗಳಿಗೆ ದೊಡ್ಡ ಪ್ರಮಾಣದ ಹಣವನ್ನು ಸಂಗ್ರಹಿಸಿ ಕಳುಹಿಸಲಾಗುತ್ತಿದೆ” ಎಂದು ಎಫ್ಐಆರ್ ಹೇಳುತ್ತದೆ.

ಇದನ್ನೂ ಓದಿ: ದೆಹಲಿ ಗಡಿಯಲ್ಲಿ ಹೋರಾಟದ ಹೊಸ ಭಾಷ್ಯ ಬರೆಯುತ್ತಿರುವ ದೇಶದ ರೈತರು: ಡಾ. ಪುರುಷೋತ್ತಮ ಬಿಳಿಮಲೆ

ಲೋಕ್ ಭಾಲೈ ಇನ್ಸಾಫ್ ವೆಲ್ಫೇರ್ ಸೊಸೈಟಿ (ಎಲ್‌ಬಿಐಡಬ್ಲ್ಯುಎಸ್) ಅಧ್ಯಕ್ಷ ಬಾಲ್‌ದೇವ್ ಸಿಂಗ್ ಸಿರ್ಸಾ ಮತ್ತು ಚಿತ್ರ ನಟ ದೀಪ್ ಸಿಧು ಅವರ ಸಹೋದರ ಮಂದೀಪ್ ಸಿಂಗ್ ಅವರಿಗೆ ತನಿಖಾ ಸಂಸ್ಥೆಯು ನೋಟಿಸ್ ನೀಡಿದೆ.

ಜಲಂಧರ್ ಮೂಲದ ಬರಹಗಾರ ಮತ್ತು ನಿರೂಪಕ ಬಲ್ವಿಂದರ್ ಪಾಲ್ ಸಿಂಗ್, ಪತ್ರಕರ್ತ ಬಾಲ್ತೆಜ್ ಪನ್ನು, ಅಕಾಲಿ ನಾಯಕ ಪರ್ಮ್‌ಜಿತ್ ಸಿಂಗ್ ಅಕಾಲಿ, ಮೊಗಾದ ಪಾಲ್ವಿಂದರ್ ಸಿಂಗ್, ಹೋಶಿಯಾರ್‌ಪುರದ ನೊಬೆಲ್ಜಿತ್ ಸಿಂಗ್, ಸಿಖ್ ಯೂತ್ ಫೆಡರೇಶನ್ ಭಿಂದರ್‌ವಾಲಾ (ಎಸ್‌ವೈಎಫ್‌ಬಿ) ಉಪಾಧ್ಯಕ್ಷ ರಂಜಿತ್ ಸಿಂಗ್ ದಮ್‌ದಮಿ ತಕ್ಸಲ್, ಸುರಿಂದರ್ ಸಿಂಗ್ ಥಿಕ್ರಿವಾಲಾ ಸೇರಿದಂತೆ ಅಮೃತಸರ, ಲುಧಿಯಾನ ಮತ್ತು ಹೋಶಿಯಾರ್‌ಪುರ ಮೂಲದ ಸಿಖ್ ಸಾಮಾಜಿಕ ಕಾರ್ಯಕರ್ತರು ಸೇರಿದಂತೆ ಪಂಜಾಬಿ ಬರಹಗಾರರು, ಕಲಾವಿದರು, ಪತ್ರಕರ್ತರು ಕೂಡ ನೋಟಿಸ್ ಪಡೆದಿದ್ದಾರೆ.

‘ಪ್ರತಿಭಟನೆಗೆ ಸಹಾಯ ಮಾಡುವವರನ್ನು ಟಾರ್ಗೇಟ್’

ಪ್ರತಿಭಟನಾ ಸ್ಥಳಗಳಿಗೆ ಜನರನ್ನು ಕರೆದೊಯ್ಯಲು ಬಸ್ಸುಗಳನ್ನು ನೀಡಿದ ಟ್ರಾನ್ಸ್‌‌ಪೋರ್ಟ್‌ ಸಂಸ್ಥೆಗಳನ್ನೂ ಎನ್ಐಎ ಗುರಿಯಾಗಿಸುತ್ತಿದೆ ಎಂದು ಸಂಯುಕ್ತಾ ಕಿಸಾನ್ ಮೋರ್ಚಾ (ಎಸ್ಕೆಎಂ) ಪ್ರತಿನಿಧಿಗಳು ತಿಳಿಸಿದ್ದಾರೆ. ಅಲ್ಲದೆ, ಕೆಲವು ಕೇಬಲ್ ಚಾನೆಲ್ ಆಪರೇಟರ್‌ಗಳಿಗೆ ನೋಟಿಸ್ ಕಳುಹಿಸಲಾಗಿದೆ. ಹೋರಾಟಕ್ಕೆ ಸಂಬಂಧಿಸಿದಂತೆ ಸಮನ್ಸ್ ಕಳುಹಿಸಲಾಗಿರುವ ಎಲ್ಲ ಜನರನ್ನು ನವದೆಹಲಿಯ ಪ್ರಧಾನ ಕಚೇರಿಯಲ್ಲಿ ಹಾಜರಾಗುವಂತೆ ಎನ್ಐಎ ಕೇಳಿದೆ.

ಇದನ್ನೂ ಓದಿ: ಕೃಷಿ ಕಾಯ್ದೆಗಳ ಸಮರ್ಥನೆ: ತೊಂದರೆಗೊಳಗಾದವರಿಗೆ ರಕ್ಷಣೆ ಅಗತ್ಯವೆಂದ IMF

ಪ್ರತಿಭಟನೆಯನ್ನು ಮುಗಿಸಲು ಸರ್ಕಾರ ಈಗ ಎನ್ಐಎಯನ್ನು ಬಳಸುತ್ತಿದೆ ಎಂದು ಬಾಲ್‌ದೇವ್ ಸಿಂಗ್ ಸಿರ್ಸಾ ತಿಳಿಸಿದ್ದಾರೆಂದು ’ಫೆಡರಲ್’ ವರದಿ ಮಾಡಿದೆ.

“ನಮ್ಮ ಹೋರಾಟವನ್ನು ಧಮನಿಸಲು ಸುಪ್ರೀಂಕೋರ್ಟ್ ಸೇರಿದಂತೆ ಪ್ರತಿಯೊಂದು ತಂತ್ರವನ್ನು ಬಳಸಲಾಯಿತು, ಆದರೆ ಸರ್ಕಾರಕ್ಕೆ ನಮ್ಮ ಪ್ರತಿಭಟನೆಯನ್ನು ಕೊನೆಗೊಳಿಸಲು ಸಾಧ್ಯವಾಗಲಿಲ್ಲ. ದೆಹಲಿಯ ಗಡಿಯಲ್ಲಿ ರೈತರ ಸಂಖ್ಯೆ ದಿನೇ ದಿನ ಹೆಚ್ಚುತ್ತಿದೆ. ಎನ್‌ಐಎ ಮೂಲಕ ಸಮನ್ಸ್‌ ನೀಡಿ ರೈತರನ್ನು ಹೆದರಿಸುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಆದರೆ ಇದಕ್ಕೆ ನಾವು ಹೆದರುವುದಿಲ್ಲ, ನಮ್ಮ ಹಕ್ಕುಗಳಿಗಾಗಿ ನಾವು ನಿರಂತರವಾಗಿ ಹೋರಾಡುತ್ತೇವೆ” ಎಂದು ಬಾಲ್‌ದೇವ್ ಸಿಂಗ್ ಸಿರ್ಸಾ ಹೇಳಿದ್ದಾರೆ.

ರೈತ ಪ್ರತಿಭಟನೆಗೆ ಸಹಾಯ ಮಾಡುವವರನ್ನು ಗುರಿಯಾಗಿಸಿ ಎನ್ಐಎ ಬಳಸುವುದನ್ನು ನಿಲ್ಲಿಸುವಂತೆ, ಜನವರಿ 15 ರಂದು ನಡೆದ 9 ನೇ ಸುತ್ತಿನ ಮಾತುಕತೆಯ ಸಂದರ್ಭದಲ್ಲಿ ಸಂಯುಕ್ತಾ ಕಿಸಾನ್ ಮೋರ್ಚಾ ಸರ್ಕಾರವನ್ನು ಒತ್ತಾಯಿಸಿದೆ. ನಾವು ಖಾಲಿಸ್ತಾನಿ ಪರ ಗುಂಪು ಎಸ್‌ಎಫ್‌ಜೆ ಜೊತೆ ಯಾವುದೇ ರೀತಿಯಿಂದ ಸಂಪರ್ಕ ಹೊಂದಿಲ್ಲ ಎಂದು ಅದು ಹೇಳಿದೆ.

ಇದನ್ನೂ ಓದಿ: ಹೋರಾಟವನ್ನು ಬೆಚ್ಚಗಿರಿಸುತ್ತಿರುವ ‘ಟ್ರ್ಯಾಲಿ’ ಎಂಬ ರೈತರ ಬದುಕಿನ ಬಂಡಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...