Homeಕರ್ನಾಟಕಹಿಂದಿ ಹೇರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಬಿಎಸ್‌ವೈ, ಅಮಿತ್‌ ಶಾ ವಿರುದ್ಧ ಕಿಡಿ

ಹಿಂದಿ ಹೇರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಬಿಎಸ್‌ವೈ, ಅಮಿತ್‌ ಶಾ ವಿರುದ್ಧ ಕಿಡಿ

ಕನ್ನಡಿಗರೆಲ್ಲರೂ ಈ ದುಷ್ಟ ಹುನ್ನಾರಗಳ ವಿರುದ್ಧ ಹೋರಾಡೋಣ. ನಾವು ಹಿಂದಿ ಗುಲಾಮರಲ್ಲ‌ ಎಂದು ಸಾರೋಣ. ಹಿಂದಿ ಸಾಮ್ರಾಜ್ಯಶಾಹಿಯ ರಣಕೇಕೆಯನ್ನು ಹಿಮ್ಮೆಟ್ಟಿಸೋಣ ಟಿ.ಎ.ನಾರಾಯಣಗೌಡ ಕರೆ ನೀಡಿದ್ದಾರೆ.

- Advertisement -
- Advertisement -

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸಮೀಪ ರಾಜ್ಯ ಸರ್ಕಾರದ ವತಿಯಿಂದ ನಡೆದ ಕ್ಷಿಪ್ರ ಕಾರ್ಯಪಡೆ ಬೆಟಾಲಿಯನ್ ಸ್ಥಾಪನೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಿ ಹಿಂದಿಯಲ್ಲಿ ಬ್ಯಾನರ್, ನಿರೂಪಣೆ ಸೇರಿದಂತೆ ಇಡೀ ಕಾರ್ಯಕ್ರಮ ನಡೆಸಿದ್ದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿದೆ.

ಕಾರ್ಯಕ್ರಮದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಡಾ. ಅಶ್ವತ್ಥ್ ನಾರಾಯಣ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ, ಶಾಸಕ ಸಂಗಮೇಶ್ ಭಾಗವಹಿಸಿದ್ದು ಅಮಿತ್‌ ಶಾರನ್ನು ಒಲೈಸಲು ಕನ್ನಡಿಗರ ಹಿತಾಸಕ್ತಿ ಬಲಿಕೊಟ್ಟು ಹಿಂದಿಯಲ್ಲಿ ಕಾರ್ಯಕ್ರಮ ನಡೆಸಲಾಗಿದೆ ಎಂದು ಕನ್ನಡಿಗರು ಕಿಡಿಕಾರಿದ್ದಾರೆ.

ಬಹಳ ವರ್ಷಗಳಿಂದಲೂ ಕರ್ನಾಟಕದಲ್ಲಿ ಹಿಂದಿ ಹೇರಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಆದರೆ ವಿಶೇಷವಾಗಿ ಬಿಜೆಪಿ ಪಕ್ಷವು ಕನ್ನಡಿಗರ ತೀವ್ರ ವಿರೋಧವನ್ನು ಲೆಕ್ಕಿಸದೇ ಪದೇ ಪದೇ ಹಿಂದಿ ಹೇರಿಕೆ ಮಾಡುತ್ತಿದೆ. ನಿನ್ನೆಯ ಕಾರ್ಯಕ್ರಮವು ಅದರ ಮುಂದುವರೆದ ಭಾಗವಾಗಿದೆ. ಇದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಇಂದು ಸಂಜೆ 5 ಗಂಟೆಗೆ #ಹಿಂದಿಗುಲಾಮಗಿರಿಬೇಡ #No‌ToHindiSlavery ಹ್ಯಾಷ್‌ಟ್ಯಾಗ್ ಹೆಸರಿನಲ್ಲಿ ಟ್ವಿಟರ್ ಟ್ರೆಂಡಿಂಗ್‌ಗೆ ಕರೆ ಕೊಡಲಾಗಿದೆ.

ಶಿವಮೊಗ್ಗದಲ್ಲಿ ನಡೆದ ಸಿಆರ್‌ಪಿಎಫ್ ಸಂಬಂಧಿಸಿದ ಕಾರ್ಯಕ್ರಮದಲ್ಲಿ ಸಂಪೂರ್ಣ ಹಿಂದಿ ಬ್ಯಾನರುಗಳನ್ನು ಬಳಸಿ, ಹಿಂದಿಯಲ್ಲೇ ನಿರೂಪಣೆ ಮಾಡಿರುವುದನ್ನು ಗಮನಿಸಿದೆ. ಇದು ಬೇರೇನೂ ಅಲ್ಲ, ಕನ್ನಡಿಗರ ಮೇಲೆ ಹಿಂದಿ ಸಾಮ್ರಾಜ್ಯಶಾಹಿಗಳು ಹೂಡಿರುವ ಪರೋಕ್ಷ ಯುದ್ಧ. ಕನ್ನಡತನವನ್ನು ನಾಶಗೊಳಿಸುವ ವ್ಯವಸ್ಥಿತ ದಾಳಿ. ಇದನ್ನು ಕನ್ನಡಿಗರೆಲ್ಲರೂ ಒಟ್ಟಾಗಿ ಖಂಡಿಸಬೇಕಿದೆ ಎಂದು ಕರವೇ ರಾಜ್ಯಾಧ್ಯಕ್ಷ ಟಿ.ಎ ನಾರಾಯಣಗೌಡ ತಿಳಿಸಿದ್ದಾರೆ.

ಕನ್ನಡನಾಡಲ್ಲಿ ಕನ್ನಡವನ್ನೇ ಬಳಸಬೇಕೆಂಬುದು ಯಾವುದೇ ಸರ್ಕಾರಕ್ಕೆ ಇರಬೇಕಾದ ಸಾಮಾನ್ಯ ಪ್ರಜ್ಞೆ. ಇದು ಅವರಿಗೆ ಗೊತ್ತಿಲ್ಲವೆಂದೇನಿಲ್ಲ. ಉದ್ದೇಶಪೂರ್ವಕವಾಗಿಯೇ ಕನ್ನಡಿಗರ ಮೇಲೆ ಹಿಂದಿಯನ್ನು ಹೇರುತ್ತಿರುವ ಈ ದುರಹಂಕಾರವನ್ನು ಕನ್ನಡಿಗರು ಸಹಿಸಬೇಕಿಲ್ಲ. ನಾವು ಸಹಸ್ರಾರು ವರ್ಷಗಳಿಂದ ಕನ್ನಡಿಗರು, ಇಂಥ ಹುನ್ನಾರಗಳಿಗೆ ತಲೆಬಾಗುವುದಿಲ್ಲ ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಕನ್ನಡಿಗರು ಜಾತಿ, ಮತ, ಧರ್ಮ, ಪಂಥ, ಪಕ್ಷಗಳನ್ನು ಬದಿಗಿಟ್ಟು ಒಂದಾಗಬೇಕಾದ ಕಾಲವಿದು. ಈಗ ನಾವು ಮೈಮರೆತು ಕುಳಿತರೆ ನಮಗೆ ಉಳಿಗಾಲವಿಲ್ಲ. ಕನ್ನಡಿಗರೆಲ್ಲರೂ ಈ ದುಷ್ಟ ಹುನ್ನಾರಗಳ ವಿರುದ್ಧ ಹೋರಾಡೋಣ. ನಾವು ಹಿಂದಿ ಗುಲಾಮರಲ್ಲ‌ ಎಂದು ಸಾರೋಣ. ಹಿಂದಿ ಸಾಮ್ರಾಜ್ಯಶಾಹಿಯ ರಣಕೇಕೆಯನ್ನು ಹಿಮ್ಮೆಟ್ಟಿಸೋಣ ಟಿ.ಎ.ನಾರಾಯಣಗೌಡ ಕರೆ ನೀಡಿದ್ದಾರೆ.

ಮಾಜಿ ಸಿಎಂ ಎಚ್.‌ಡಿ ಕುಮಾರಸ್ವಾಮಿ ಸಹ ರಾಜ್ಯ ಸರ್ಕಾರದ ನಡೆಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. “ಗೃಹಸಚಿವರಾದ ಅಮಿತ್ ಷಾ ಅವರು ಶಂಕುಸ್ಥಾಪನೆ ನೆರವೇರಿಸಿದ ಅಡಿಗಲ್ಲು ಫಲಕಗಳು ಹಿಂದಿ ಮತ್ತು ಆಂಗ್ಲಭಾಷೆಯಲ್ಲಿವೆ. ಇಲ್ಲಿ ಕನ್ನಡದ ಅವಗಣನೆ ನಿಚ್ಚಳವಾಗಿ ಕಾಣುತ್ತದೆ. ವೈವಿಧ್ಯಮಯ ಭಾರತ ತ್ರಿಭಾಷಾ ಸೂತ್ರ ಅಳವಡಿಸಿಕೊಂಡಿದ್ದು, ಆಯಾ ರಾಜ್ಯ ಭಾಷೆ ಗೌರವಿಸುವುದು ಕೇಂದ್ರ ಸರ್ಕಾರದ ಕರ್ತವ್ಯ. ಗೃಹ ಸಚಿವರೆ ತ್ರಿಭಾಷಾ ಸೂತ್ರವನ್ನು ಧಿಕ್ಕರಿಸಿರುವುದು ಕನ್ನಡಕ್ಕೆ, ಕನ್ನಡಿಗರಿಗೆ ಮಾಡಿದ ಅಗೌರವ. ಈ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ನಾಡು-ನುಡಿಯ ಘನತೆಯನ್ನು ಮರೆತದ್ದು ಅತ್ಯಂತ ಖಂಡನೀಯ ಎಂದು ಹಿಂದಿ-ಆಂಗ್ಲ ಭಾಷೆಯ ನಿಷ್ಠ ಧೋರಣೆಯಲ್ಲಿ ಕನ್ನಡ ಭಾಷೆಯನ್ನು ಅವಗಣನೆ ಮಾಡಿರುವ ಅಮಿತ್ ಷಾ ಅವರ ಧೋರಣೆ ಕನ್ನಡ ವಿರೋಧಿತನವನ್ನು ತೋರಿಸುತ್ತದೆ. ಇದು ಕನ್ನಡಿಗರ ಸ್ವಾಭಿಮಾನಕ್ಕೆ ಮಾಡಿದ ಅವಮಾನ” ಎಂದು ಎಚ್‌ಡಿಕೆ ಕಿಡಿಕಾರಿದ್ದಾರೆ.

ಕೇಂದ್ರ ಸರ್ಕಾರದ ಅಧೀನದಲ್ಲಿರುವ RAF ಘಟಕ ಸ್ಥಾಪನೆಗೆ ಕನ್ನಡದ ನೆಲವನ್ನೆ ಕೊಟ್ಟಿದ್ದು, ಈ ಪರಿಜ್ಞಾನವಿಲ್ಲದೆ ಕನ್ನಡದಲ್ಲಿ ಅಡಿಗಲ್ಲು ಫಲಕ ಇಲ್ಲದಿರುವುದು ಅಕ್ಷಮ್ಯ. ಅಮಿತ್ ಷಾ ಅವರು ತ್ರಿಭಾಷಾ ಸೂತ್ರ ಉಲ್ಲಂಘಿಸಿರುವುದಕ್ಕೆ ಕನ್ನಡಿಗರಿಗೆ ಸ್ಪಷ್ಟನೆ ನೀಡಬೇಕು. ನಾಡು-ನುಡಿಯ ಘನತೆಗೆ ಚ್ಯುತಿ ಬಂದಾಗ ಸಹಿಸಿಕೊಳ್ಳುವವರಿಗೆ ಈ ರಾಜ್ಯದ ಆಡಳಿತ ನಡೆಸುವ ಅರ್ಹತೆ ಇಲ್ಲ. ಕೇಂದ್ರದ ಗೃಹಸಚಿವರು, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳ ನಡೆ ಕನ್ನಡಕ್ಕೆ ಬಗೆದ ದ್ರೋಹವಾಗಿದೆ ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.


ಇದನ್ನೂ ಓದಿ: ಹಿಂದಿ ಹೇರಿಕೆಗೆ ವಿಭಿನ್ನ ವಿರೋಧ: ಪವನ್ ಕುಮಾರ್ ನಿರ್ದೇಶನದ ’ಏನ್ ಮಾಡೋದು..?’ ಕಿರುಚಿತ್ರ ವೈರಲ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...