Homeಕರ್ನಾಟಕಹಿಂದಿ ಹೇರಿಕೆಗೆ ತೀವ್ರ ವಿರೋಧ: ಹಿಂದಿಗುಲಾಮಗಿರಿಬೇಡ ನ್ಯಾಷನಲ್ ಟ್ರೆಂಡಿಂಗ್‌!

ಹಿಂದಿ ಹೇರಿಕೆಗೆ ತೀವ್ರ ವಿರೋಧ: ಹಿಂದಿಗುಲಾಮಗಿರಿಬೇಡ ನ್ಯಾಷನಲ್ ಟ್ರೆಂಡಿಂಗ್‌!

ಡಾ.ಬಿ.ಆರ್ ಅಂಬೇಡ್ಕರ್, ಕುವೆಂಪು, ಪೂರ್ಣಚಂದ್ರ ತೇಜಸ್ವಿ, ಜಿ.ಪಿ ರಾಜರತ್ನಂ ಸೇರಿದಂತೆ ಹಲವು ಮಹಾನೀಯರು ಹೇಳಿಕೆಗಳನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

- Advertisement -
- Advertisement -

ಕರ್ನಾಟಕದಲ್ಲಿ ಹಿಂದಿ ಹೇರಿಕೆ ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕರೆ ನೀಡಿದ್ದ ಟ್ವಿಟರ್ ಅಭಿಯಾನಕ್ಕೆ ಭಾರೀ ಬೆಂಬಲ ವ್ಯಕ್ತವಾಗಿದೆ. ಕೇಂದ್ರ-ರಾಜ್ಯ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಕಿಡಿಕಾರಿರುವ ಕನ್ನಡಿಗರು ಹಿಂದಿಗುಲಾಮಗಿರಿಬೇಡ ಹೆಸರಿನಲ್ಲಿ ನ್ಯಾಷನಲ್ ಟ್ರೆಂಡಿಂಗ್ ಮಾಡಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಸಮೀಪ ರಾಜ್ಯ ಸರ್ಕಾರದ ವತಿಯಿಂದ ನಡೆದ ಕ್ಷಿಪ್ರ ಕಾರ್ಯಪಡೆ ಬೆಟಾಲಿಯನ್ ಸ್ಥಾಪನೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಕನ್ನಡ ಕಡೆಗಣಿಸಿ ಹಿಂದಿಯಲ್ಲಿ ಬ್ಯಾನರ್, ನಿರೂಪಣೆ ಸೇರಿದಂತೆ ಇಡೀ ಕಾರ್ಯಕ್ರಮ ನಡೆಸಿದ್ದಕ್ಕೆ ತೀವ್ರ ಖಂಡನೆ ವ್ಯಕ್ತವಾಗಿತ್ತು. ಅದನ್ನು ಖಂಡಿಸಿ #ಹಿಂದಿಗುಲಾಮಗಿರಿಬೇಡ #No‌ToHindiSlavery ಹ್ಯಾಷ್‌ಟ್ಯಾಗ್ ಹೆಸರಿನಲ್ಲಿ ಟ್ವಿಟರ್ ಟ್ರೆಂಡಿಂಗ್‌ಗೆ ಕರವೇ ಕರೆ ನೀಡಿತ್ತು. #ಹಿಂದಿಗುಲಾಮಗಿರಿಬೇಡ ಹ್ಯಾಷ್‌ಟ್ಯಾಗ್ ರಾಷ್ಟ್ರಮಟ್ಟದಲ್ಲಿಯೇ 3 ನೇ ಸ್ಥಾನದಲ್ಲಿ ಟ್ರೆಂಡಿಂಗ್‌ ಆಗುತ್ತಿದ್ದು, ಕೇವಲ ಒಂದೂವರೆ ಗಂಟೆ ಸಮಯದಲ್ಲಿಯೇ 16 ಸಾವಿರಕ್ಕೂ ಹೆಚ್ಚು ಟ್ವೀಟ್‌ಗಳು ದಾಖಲಾಗಿವೆ.

ಭಾರತ ಬಹುಭಾಷಿಕರ ದೇಶ. ವಿವಿಧ ಭಾಷಾ‌ಸಮುದಾಯಗಳ ಮೇಲೆ ಹಿಂದಿಯನ್ನು ಹೇರುವುದು ದೇಶ ಒಡೆಯುವ ನೀಚತನ.‌ ಇದಕ್ಕಿಂತ ದೊಡ್ಡ ದೇಶದ್ರೋಹ ಇನ್ನೊಂದಿಲ್ಲ. ದೇಶ ಬಹುತ್ವದೊಂದಿಗೆ ಒಂದಾಗಿರಲು‌ ಬಿಡಿ. ಭಾರತ ಒಕ್ಕೂಟ ಬಲಗೊಳಿಸುವ ಕೆಲಸ ಮಾಡಿ. #ಹಿಂದಿಗುಲಾಮಗಿರಿಬೇಡ #No‌ToHindiSlavery ಎಂದು ಕರವೇ ರಾಜ್ಯಾಧ್ಯಕ್ಷರಾದ ಟಿ.ಎ ನಾರಾಯಣಗೌಡ ಟ್ವೀಟ್ ಮಾಡಿದ್ದಾರೆ.

ಗುಜರಾತಿನ ಕಾರ್ಯಕ್ರಮದಲ್ಲಿ ಗುಜರಾತಿ ಭಾಷೆಯನ್ನು, ತಮಿಳುನಾಡಿನಲ್ಲಿ ತಮಿಳು ಭಾಷೆಯಲ್ಲಿ ಬ್ಯಾನರ್ ಮತ್ತು ಕಾರ್ಯಕ್ರಮ ನಡೆಸುವುದಾರೆ ಕರ್ನಾಟಕದಲ್ಲಿ ಕನ್ನಡ ಭಾಷೆಯಲ್ಲಿ ನಡೆಸಲು ಏಕೆ ಸಾಧ್ಯವಿಲ್ಲ ಎಂದು ಅನಂತ್ ಮಹಾಜನ್ ಪ್ರಶ್ನಿಸಿದ್ದಾರೆ.

ನಮ್ಮ ರಾಜ್ಯದಲ್ಲಿ ನಮ್ಮ ಭಾಷೆಯಲ್ಲಿ ಮಾತನಾಡಲು ಮತ್ತು ಜೀವಿಸುದಕ್ಕಾಗಿ ಹೋರಾಟ ಮಾಡಬೇಕಿರುವುದು ದುರಂತ. ಕರ್ನಾಟಕದಲ್ಲಿದ್ದಾಗ ಕನ್ನಡ ಕಲಿಯಿರಿ ಮತ್ತು ಮಾತನಾಡಿ. ಇದು ಕೇವಲ ಭಾವನೆಗಳ ವಿಷಯ ಮಾತ್ರವಲ್ಲ, ಹಿಂದಿ ಹೇರಿಕೆಯಿಂದಾಗಿ ಕಳೆದುಹೋದ ಉದ್ಯೋಗಗಳಿಗಾಗಿಯೂ ನಮ್ಮ ಹೋರಾಟದವಿದೆ ಎಂದು ಲಾವಣ್ಯ ಬಲ್ಲಾಳ್‌ರವರು ಟ್ವೀಟ್ ಮಾಡಿದ್ದಾರೆ.

ನೆಹರೂ ಕನ್ನಡಕ್ಕಿಂತ ದೊಡ್ಡವರಲ್ಲ. ಅವರು ಬೇಕಿದ್ದರೆ ಕನ್ನಡ ಕಲಿಯಲಿ ಅಥವಾ ಅವರ ಭಾಷಣಗಳನ್ನು ಕನ್ನಡಕ್ಕೆ ಭಾಷಾಂತರಿಸಲಿ ಎಂಬ ಕುವೆಂಪು ಹೇಳಿಕೆಯನ್ನು ಉಲ್ಲೇಖಿಸಿ ದಿನೇಶ್ ಕುಮಾರ್ ದಿನೂ ಟ್ವೀಟ್‌ ಮಾಡಿದ್ದಾರೆ. ಅದೇ ರೀತಿಯಾಗಿ ಡಾ.ಬಿ.ಆರ್ ಅಂಬೇಡ್ಕರ್, ಪೂರ್ಣಚಂದ್ರ ತೇಜಸ್ವಿ, ಜಿ.ಪಿ ರಾಜರತ್ನಂ ಸೇರಿದಂತೆ ಹಲವು ಮಹಾನೀಯರು ಹೇಳಿಕೆಗಳನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಳ್ಳಲಾಗುತ್ತಿದೆ.

ಆರ್ಟಿಕಲ್ 343 ಒಕ್ಕೂಟ ಸರ್ಕಾರದ ಅಧಿಕೃತ ಭಾಷೆ ದೇವನಾಗರಿ ಲಿಪಿಯಲ್ಲಿ ಹಿಂದಿಯಾಗಿರಬೇಕು ಎಂದು ಹೇಳುತ್ತದೆ. ಕೇವಲ ಹಿಂದಿ ಮಾತ್ರವೇ ಏಕೆ? ಆರ್ಟಿಕಲ್ 343 ಅನ್ನು ತಿದ್ದುಪಡಿ ಮಾಡಿ ಮತ್ತು ಎಲ್ಲಾ ಭಾರತೀಯ ಭಾಷೆಗಳನ್ನು 8 ನೇ ಶೆಡ್ಯೂಲ್‌ನಲ್ಲಿ ಅಧಿಕೃತ ಭಾಷೆಯಾಗಿ ಗುರುತಿಸಬೇಕು ಎಂದು ಅರುಣ್ ಜಾವಗಲ್ ಒತ್ತಾಯಿಸಿದ್ದಾರೆ.

ಕೆಲವು ಗಮನ ಸೆಳೆದ ಟ್ವೀಟ್‌ಗಳು ಇಲ್ಲಿವೆ.


ಇದನ್ನೂ ಓದಿ: ಹಿಂದಿ ಹೇರಿಕೆ ವಿರುದ್ಧ ಭುಗಿಲೆದ್ದ ಆಕ್ರೋಶ: ಬಿಎಸ್‌ವೈ, ಅಮಿತ್‌ ಶಾ ವಿರುದ್ಧ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...