Homeಮುಖಪುಟಟ್ರಾಕ್ಟರ್ ರ್ಯಾಲಿ ತಡೆಯುವಂತೆ PIL: ಕಾನೂನಿನಡಿ ಇರುವ ಎಲ್ಲಾ ಅಧಿಕಾರ ಬಳಸಲು ನೀವು ಸ್ವಂತಂತ್ರರು ಎಂದ...

ಟ್ರಾಕ್ಟರ್ ರ್ಯಾಲಿ ತಡೆಯುವಂತೆ PIL: ಕಾನೂನಿನಡಿ ಇರುವ ಎಲ್ಲಾ ಅಧಿಕಾರ ಬಳಸಲು ನೀವು ಸ್ವಂತಂತ್ರರು ಎಂದ ಸುಪ್ರೀಂ!

ಯಾರು ದೆಹಲಿಗೆ ಪ್ರವೇಶಿಸಬೇಕು, ಎಷ್ಟು ಜನ ಪ್ರವೇಶಿಸಬಹುದು, ಯಾರು ಪ್ರವೇಶಿಸಬಾರದು ಎಂಬುದನ್ನು ನಿರ್ಧರಿಸುವ ಪ್ರಾಥಮಿಕ ಅಧಿಕಾರ ನಮಗಿಲ್ಲ. ಅದನ್ನು ನಿರ್ಧರಿಸಬೇಕಾಗಿರುವವರು ದೆಹಲಿ ಪೊಲೀಸರು..

- Advertisement -
- Advertisement -

ಜನವರಿ 26ರ ಗಣರಾಜ್ಯೋತ್ಸವದಂದು ಪ್ರತಿಭಟನಾ ನಿರತ ರೈತರು ದೆಹಲಿ ಪ್ರವೇಶಿಸಬೇಕೆ ಅಥವಾ ಬೇಡವೆ ಎಂಬುದನ್ನು ನಿರ್ಧರಿಸುವ ಪ್ರಾಥಮಿಕ ಅಧಿಕಾರ ದೆಹಲಿ ಪೊಲೀಸರಿಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರು ಕರೆ ನೀಡಿರುವ ಜನವರಿ 26ರ ಟ್ರಾಕ್ಟರ್ ರ್ಯಾಲಿಯನ್ನು ತಡೆಯಬೇಕೆಂದು ದೆಹಲಿ ಪೋಲಿಸರು ಸಲ್ಲಿಸಿರುವ ಪಿಐಎಲ್ ಆಲಿಸುತ್ತಿರುವ ಮುಖ್ಯ ನ್ಯಾಯಮೂರ್ತಿಗಳನ್ನೊಳಗೊಂಡ ನ್ಯಾಯಪೀಠ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದೆ. ದೆಹಲಿಗೆ ಪ್ರವೇಶಿಸುವುದರಿಂದ ಉದ್ಭವಿಸುವ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ನಿರ್ಧರಿಸುವವರು ದೆಹಲಿ ಪೊಲೀಸರು ಎಂದು ನ್ಯಾಯಪೀಠ ಹೇಳಿದೆಯೆಂದು ಲೈವ್‌ಲಾ ವರದಿ ಮಾಡಿದೆ.

ಯಾರು ದೆಹಲಿಗೆ ಪ್ರವೇಶಿಸಬೇಕು, ಎಷ್ಟು ಜನ ಪ್ರವೇಶಿಸಬಹುದು, ಯಾರು ಪ್ರವೇಶಿಸಬಾರದು ಎಂಬುದನ್ನು ನಿರ್ಧರಿಸುವ ಪ್ರಾಥಮಿಕ ಅಧಿಕಾರ ನಮಗಿಲ್ಲ. ಅದನ್ನು ನಿರ್ಧರಿಸಬೇಕಾಗಿರುವವರು ದೆಹಲಿ ಪೊಲೀಸರು ಎಂದು ಅಟಾರ್ನಿ ಜನರಲ್ ಮತ್ತು ಸಾಲಿಸಿಟರ್ ಜನರಲ್‌ಗೆ ತಿಳಿಸಿದ್ದೇವೆ. ಕಾನೂನಿನಡಿ ಇರುವ ಎಲ್ಲಾ ಅಧಿಕಾರ ಬಳಸಲು ನೀವು ಸ್ವಂತಂತ್ರರು ಎಂದು ಅಟಾರ್ನಿ ಜನರಲ್‌ರವರಿಗೆ ಸಿಜೆಐ ಎಸ್‌.ಎ ಬೋಬಡೆ ಹೇಳಿದ್ದಾರೆ.

ಈ ಕುರಿತು ನ್ಯಾಯಾಲಯ ಒಂದು ಆದೇಶ ನೀಡಿದರೆ ಅದು ನಮ್ಮ ಅಧಿಕಾರವನ್ನು ಮತ್ತಷ್ಟು ಶಶಕ್ತಗೊಳಿಸುತ್ತದೆ ಅಟಾರ್ನಿ ಜನರಲ್ ಮನವಿ ಮಾಡಿದಾಗ “ಕಾನೂನಿನಡಿಯಲ್ಲಿ ನಿಮಗೆ ಆ ಅಧಿಕಾರವಿದೆ ಎಂದು ನ್ಯಾಯಾಲಯ ಹೇಳಬೇಕೆಂದು ಭಾರತ ಸರ್ಕಾರ ಬಯಸುತ್ತದೆಯೇ’ ಎಂದು ಸಿಜೆಐ ಪ್ರಶ್ನಿಸಿದ್ದಾರೆ.

ನಾವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ, ಹಾಗಾಗಿ ಕೋರ್ಟ್ ಒಂದು ಆದೇಶ ನೀಡಿದರೆ ಎಲ್ಲಾ ವಿಷಯಗಳನ್ನು ಅದು ನೋಡಿಕೊಳ್ಳಬಹುದು ಎಂದು ಅಟಾರ್ನಿ ಜನರಲ್ ಹೇಳಿದ್ದಾರೆ. ಇಲ್ಲ, ನಾವು ಎಲ್ಲಾ ವಿಷಯಗಳನ್ನು ನೋಡಿಕೊಳ್ಳಲು ಸಾಧ್ಯವಿಲ್ಲ ಪ್ರತಿಭಟನೆಯ ವಿಚಾರವನ್ನು ಮಾತ್ರ ನೋಡಿಕೊಳ್ಳುತ್ತೇವೆ. ಕೋರ್ಟ್ ಮಧ್ಯಪ್ರವೇಶವನ್ನು ತಪ್ಪು ಗ್ರಹಿಸಬೇಡಿ ಎಂದು ಸಿಜೆಐ ಸ್ಪಷ್ಟಪಡಿಸಿದ್ದಾರೆ.

ಒಂದು ಸಣ್ಣ ಪ್ರತಿಭಟನಾ ನಿರತ ರೈತ ಗುಂಪು ಜನವರಿ 26ರ ಗಣರಾಜ್ಯೋತ್ಸವದಂದು ದೆಹಲಿಗೆ ಟ್ರಾಕ್ಟರ್, ಟ್ರಾಲಿ ಪೆರೇಡ್‌ ನಡೆಸಲು ನಿರ್ಧಿರಿಸಿದೆ. ಇದರಿಂದ  ಸರ್ಕಾರದ ಪರೇಡ್‌ಗೆ ತೊಂದರೆಯಾಗಲಿದ್ದು, ಕಾನೂನು ಸುವ್ಯವಸ್ಥೆ ಹದಗೆಡಲಿದೆ ಮತ್ತು ದೇಶಕ್ಕೆ ಮುಜುಗರವಾಗಲಿದೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.

ಭಾರತ ಸರ್ಕಾರಕ್ಕೆ ಕಾನೂನು ಸುವ್ಯವಸ್ಥೆಯನ್ನು, ಸದ್ಯದ ಪರಿಸ್ಥಿತಿಯನ್ನು ನಿಭಾಯಿಸುವ ಅಧಿಕಾರವಿದೆ. ಅದನ್ನು ಕೋರ್ಟ್ ಒತ್ತಿ ಹೇಳಬೇಕಾದ ಅಗತ್ಯವಿಲ್ಲ ಎಂದು ಹೇಳಿದ ಸಿಜೆಐ ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿದ್ದಾರೆ.


ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸಿಯೆ ತೀರುತ್ತೇವೆ: ಹೋರಾಟ ನಿರತ ರೈತರು ಟ್ರಾಕ್ಟರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...