Homeಮುಖಪುಟಟ್ರಾಕ್ಟರ್ ರ್ಯಾಲಿ ತಡೆಯುವಂತೆ PIL: ಕಾನೂನಿನಡಿ ಇರುವ ಎಲ್ಲಾ ಅಧಿಕಾರ ಬಳಸಲು ನೀವು ಸ್ವಂತಂತ್ರರು ಎಂದ...

ಟ್ರಾಕ್ಟರ್ ರ್ಯಾಲಿ ತಡೆಯುವಂತೆ PIL: ಕಾನೂನಿನಡಿ ಇರುವ ಎಲ್ಲಾ ಅಧಿಕಾರ ಬಳಸಲು ನೀವು ಸ್ವಂತಂತ್ರರು ಎಂದ ಸುಪ್ರೀಂ!

ಯಾರು ದೆಹಲಿಗೆ ಪ್ರವೇಶಿಸಬೇಕು, ಎಷ್ಟು ಜನ ಪ್ರವೇಶಿಸಬಹುದು, ಯಾರು ಪ್ರವೇಶಿಸಬಾರದು ಎಂಬುದನ್ನು ನಿರ್ಧರಿಸುವ ಪ್ರಾಥಮಿಕ ಅಧಿಕಾರ ನಮಗಿಲ್ಲ. ಅದನ್ನು ನಿರ್ಧರಿಸಬೇಕಾಗಿರುವವರು ದೆಹಲಿ ಪೊಲೀಸರು..

- Advertisement -
- Advertisement -

ಜನವರಿ 26ರ ಗಣರಾಜ್ಯೋತ್ಸವದಂದು ಪ್ರತಿಭಟನಾ ನಿರತ ರೈತರು ದೆಹಲಿ ಪ್ರವೇಶಿಸಬೇಕೆ ಅಥವಾ ಬೇಡವೆ ಎಂಬುದನ್ನು ನಿರ್ಧರಿಸುವ ಪ್ರಾಥಮಿಕ ಅಧಿಕಾರ ದೆಹಲಿ ಪೊಲೀಸರಿಗಿದೆ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಕೃಷಿ ಕಾಯ್ದೆಗಳ ವಿರುದ್ಧ ಪ್ರತಿಭಟಿಸುತ್ತಿರುವ ರೈತರು ಕರೆ ನೀಡಿರುವ ಜನವರಿ 26ರ ಟ್ರಾಕ್ಟರ್ ರ್ಯಾಲಿಯನ್ನು ತಡೆಯಬೇಕೆಂದು ದೆಹಲಿ ಪೋಲಿಸರು ಸಲ್ಲಿಸಿರುವ ಪಿಐಎಲ್ ಆಲಿಸುತ್ತಿರುವ ಮುಖ್ಯ ನ್ಯಾಯಮೂರ್ತಿಗಳನ್ನೊಳಗೊಂಡ ನ್ಯಾಯಪೀಠ ಮೇಲಿನ ಅಭಿಪ್ರಾಯ ವ್ಯಕ್ತಪಡಿಸಿದೆ. ದೆಹಲಿಗೆ ಪ್ರವೇಶಿಸುವುದರಿಂದ ಉದ್ಭವಿಸುವ ಕಾನೂನು ಸುವ್ಯವಸ್ಥೆ ಪರಿಸ್ಥಿತಿಯನ್ನು ನಿರ್ಧರಿಸುವವರು ದೆಹಲಿ ಪೊಲೀಸರು ಎಂದು ನ್ಯಾಯಪೀಠ ಹೇಳಿದೆಯೆಂದು ಲೈವ್‌ಲಾ ವರದಿ ಮಾಡಿದೆ.

ಯಾರು ದೆಹಲಿಗೆ ಪ್ರವೇಶಿಸಬೇಕು, ಎಷ್ಟು ಜನ ಪ್ರವೇಶಿಸಬಹುದು, ಯಾರು ಪ್ರವೇಶಿಸಬಾರದು ಎಂಬುದನ್ನು ನಿರ್ಧರಿಸುವ ಪ್ರಾಥಮಿಕ ಅಧಿಕಾರ ನಮಗಿಲ್ಲ. ಅದನ್ನು ನಿರ್ಧರಿಸಬೇಕಾಗಿರುವವರು ದೆಹಲಿ ಪೊಲೀಸರು ಎಂದು ಅಟಾರ್ನಿ ಜನರಲ್ ಮತ್ತು ಸಾಲಿಸಿಟರ್ ಜನರಲ್‌ಗೆ ತಿಳಿಸಿದ್ದೇವೆ. ಕಾನೂನಿನಡಿ ಇರುವ ಎಲ್ಲಾ ಅಧಿಕಾರ ಬಳಸಲು ನೀವು ಸ್ವಂತಂತ್ರರು ಎಂದು ಅಟಾರ್ನಿ ಜನರಲ್‌ರವರಿಗೆ ಸಿಜೆಐ ಎಸ್‌.ಎ ಬೋಬಡೆ ಹೇಳಿದ್ದಾರೆ.

ಈ ಕುರಿತು ನ್ಯಾಯಾಲಯ ಒಂದು ಆದೇಶ ನೀಡಿದರೆ ಅದು ನಮ್ಮ ಅಧಿಕಾರವನ್ನು ಮತ್ತಷ್ಟು ಶಶಕ್ತಗೊಳಿಸುತ್ತದೆ ಅಟಾರ್ನಿ ಜನರಲ್ ಮನವಿ ಮಾಡಿದಾಗ “ಕಾನೂನಿನಡಿಯಲ್ಲಿ ನಿಮಗೆ ಆ ಅಧಿಕಾರವಿದೆ ಎಂದು ನ್ಯಾಯಾಲಯ ಹೇಳಬೇಕೆಂದು ಭಾರತ ಸರ್ಕಾರ ಬಯಸುತ್ತದೆಯೇ’ ಎಂದು ಸಿಜೆಐ ಪ್ರಶ್ನಿಸಿದ್ದಾರೆ.

ನಾವು ಸಂದಿಗ್ಧ ಪರಿಸ್ಥಿತಿಯನ್ನು ಎದುರಿಸುತ್ತಿದ್ದೇವೆ, ಹಾಗಾಗಿ ಕೋರ್ಟ್ ಒಂದು ಆದೇಶ ನೀಡಿದರೆ ಎಲ್ಲಾ ವಿಷಯಗಳನ್ನು ಅದು ನೋಡಿಕೊಳ್ಳಬಹುದು ಎಂದು ಅಟಾರ್ನಿ ಜನರಲ್ ಹೇಳಿದ್ದಾರೆ. ಇಲ್ಲ, ನಾವು ಎಲ್ಲಾ ವಿಷಯಗಳನ್ನು ನೋಡಿಕೊಳ್ಳಲು ಸಾಧ್ಯವಿಲ್ಲ ಪ್ರತಿಭಟನೆಯ ವಿಚಾರವನ್ನು ಮಾತ್ರ ನೋಡಿಕೊಳ್ಳುತ್ತೇವೆ. ಕೋರ್ಟ್ ಮಧ್ಯಪ್ರವೇಶವನ್ನು ತಪ್ಪು ಗ್ರಹಿಸಬೇಡಿ ಎಂದು ಸಿಜೆಐ ಸ್ಪಷ್ಟಪಡಿಸಿದ್ದಾರೆ.

ಒಂದು ಸಣ್ಣ ಪ್ರತಿಭಟನಾ ನಿರತ ರೈತ ಗುಂಪು ಜನವರಿ 26ರ ಗಣರಾಜ್ಯೋತ್ಸವದಂದು ದೆಹಲಿಗೆ ಟ್ರಾಕ್ಟರ್, ಟ್ರಾಲಿ ಪೆರೇಡ್‌ ನಡೆಸಲು ನಿರ್ಧಿರಿಸಿದೆ. ಇದರಿಂದ  ಸರ್ಕಾರದ ಪರೇಡ್‌ಗೆ ತೊಂದರೆಯಾಗಲಿದ್ದು, ಕಾನೂನು ಸುವ್ಯವಸ್ಥೆ ಹದಗೆಡಲಿದೆ ಮತ್ತು ದೇಶಕ್ಕೆ ಮುಜುಗರವಾಗಲಿದೆ ಎಂದು ದೆಹಲಿ ಪೊಲೀಸರು ಆರೋಪಿಸಿದ್ದಾರೆ.

ಭಾರತ ಸರ್ಕಾರಕ್ಕೆ ಕಾನೂನು ಸುವ್ಯವಸ್ಥೆಯನ್ನು, ಸದ್ಯದ ಪರಿಸ್ಥಿತಿಯನ್ನು ನಿಭಾಯಿಸುವ ಅಧಿಕಾರವಿದೆ. ಅದನ್ನು ಕೋರ್ಟ್ ಒತ್ತಿ ಹೇಳಬೇಕಾದ ಅಗತ್ಯವಿಲ್ಲ ಎಂದು ಹೇಳಿದ ಸಿಜೆಐ ಪ್ರಕರಣದ ಮುಂದಿನ ವಿಚಾರಣೆಯನ್ನು ಜನವರಿ 20ಕ್ಕೆ ಮುಂದೂಡಿದ್ದಾರೆ.


ಇದನ್ನೂ ಓದಿ: ಟ್ರಾಕ್ಟರ್‌‌ ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸಿಯೆ ತೀರುತ್ತೇವೆ: ಹೋರಾಟ ನಿರತ ರೈತರು ಟ್ರಾಕ್ಟರ್‌‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...