Homeಚಳವಳಿ’ಪಂಜಾಬ್‌‌ಗೆ ಬಂದು ಕೃಷಿ ಕಾನೂನನ್ನು ವಿವರಿಸಿ’- BJP ಸಂಸದೆ ಹೇಮಾ ಮಾಲಿನಿಯನ್ನು ಆಹ್ವಾನಿಸಿದ ರೈತರು

’ಪಂಜಾಬ್‌‌ಗೆ ಬಂದು ಕೃಷಿ ಕಾನೂನನ್ನು ವಿವರಿಸಿ’- BJP ಸಂಸದೆ ಹೇಮಾ ಮಾಲಿನಿಯನ್ನು ಆಹ್ವಾನಿಸಿದ ರೈತರು

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳು ರೈತರಿಗೆ ಹೇಗೆ ಪ್ರಯೋಜನಕಾರಿ ಎಂಬುವುದನ್ನು ವಿವರಿಸಲು ಸಂಸದೆ ಹೇಮಾ ಮಾಲಿನಿ ಅವರನ್ನು ’ಕಂಡಿ ಕಿಸಾನ್ ಸಂಘರ್ಷ್ ಸಮಿತಿ’ಯು ಪಂಜಾಬ್‌ಗೆ ಆಹ್ವಾನಿಸಿದೆ. ಸಂಸದೆಗೆ ಪತ್ರ ಬರೆದಿರುವ ಸಮಿತಿಯು, ಅವರಿಗೆ ಒಂದು ವಾರ ಪಂಚತಾರಾ ಹೋಟೆಲ್‌ನಲ್ಲಿ ಉಳಿದುಕೊಳ್ಳಲು ಮತ್ತು ವಿಮಾನಯಾನದ ಶುಲ್ಕದ ವೆಚ್ಚವನ್ನು ತಾವೇ ಭರಿಸುವುದಾಗಿ ಪ್ರಸ್ತಾಪಿಸಿದೆ.

ಸಮಿತಿಯ ಅಧ್ಯಕ್ಷರಾದ ಭೂಪಿಂದರ್ ಸಿಂಗ್ ಘುಮಾನ್ ಮತ್ತು ಉಪಾಧ್ಯಕ್ಷ ಜರ್ನೈಲ್ ಸಿಂಗ್ ಗರ್ದಿವಾಲ್ ಅವರು, “ಪಂಜಾಬಿಗಳು ಹೇಮಾ ಮಾಲಿನಿಯನ್ನು ಗೌರವದಿಂದ ನೋಡುತ್ತಿದ್ದಾರೆ. ಯಾಕೆಂದರೆ ಅವರು ರಾಜ್ಯದ ಜನರಿಂದ ಪ್ರೀತಿಸಲ್ಪಟ್ಟಿರುವ ಧರ್ಮೇಂದ್ರ ಅವರ ಪತ್ನಿ” ಎಂದು ಸಂಸದೆಗೆ ಕಳುಹಿಸಿದ ಪತ್ರದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರೈತರಿಗೆ ತಮಗೇನು ಬೇಕೆಂದು ಗೊತ್ತಿಲ್ಲ; ಅವರನ್ನು ಯಾರೋ ಪ್ರಚೋದಿಸುತ್ತಿದ್ದಾರೆ: ಹೇಮಾ ಮಾಲಿನಿ

“ಈ ಆಂದೋಲನದಲ್ಲಿ ಈಗಾಗಲೇ 100 ಜನರು ಸಾವನ್ನಪ್ಪಿದ್ದಾರೆ. ಆದರೆ ರೈತರಿಗೆ ಕಾನೂನುಗಳನ್ನು ಅರ್ಥಮಾಡಿಕೊಳ್ಳಲು ಸಾಧ್ಯವಾಗಿಲ್ಲ ಎಂದು ನೀವು ಹೇಳಿದ್ದು ನೋವುಂಟುಮಾಡಿದೆ. ನಮ್ಮ ಸಮಿತಿಯು ನಿಮ್ಮನ್ನು ಪಂಜಾಬ್‌ಗೆ ಆಹ್ವಾನಿಸಲು ನಿರ್ಧರಿಸಿದೆ. ಇದರಿಂದಾಗಿ ಕಾನೂನುಗಳ ಬಗ್ಗೆ ನೀವು ತಿಳಿದುಕೊಂಡಿರುವುದನ್ನು ರೈತರಿಗೆ ವಿವರಿಸಬಹುದು” ಪತ್ರದಲ್ಲಿ ತಿಳಿಸಲಾಗಿದೆ.

“ನಮ್ಮ ಸ್ಥಿತಿಗೆ ಅನುಗುಣವಾಗಿ ಪಂಚತಾರಾ ಹೋಟೆಲ್‌ನಲ್ಲಿ ನಿಮ್ಮ ವಾಸ್ತವ್ಯವನ್ನು ವ್ಯವಸ್ಥೆಗೊಳಿಸಬೇಕೆಂದು ನಾವು ನಿರ್ಧರಿಸಿದ್ದೇವೆ. ಇದಕ್ಕೆ ಹಣವನ್ನು ರೈತರು ಮತ್ತು ಕಾರ್ಮಿಕರು ಪಾವತಿಸುತ್ತಾರೆ” ಎಂದು ತಿಳಿಸಲಾಗಿದೆ.

“ಪಂಜಾಬ್‌ನ ಮಕ್ಕಳು ಸಹ ಪಂಜಾಬ್ ಅನ್ನು ನಾಶಮಾಡಲು ರೂಪಿಸಲಾದ ಕೃಷಿ ಕಾನೂನುಗಳ ಉದ್ದೇಶವನ್ನು ಅರ್ಥಮಾಡಿಕೊಂಡಿದ್ದಾರೆ. ಆದರೆ ನೀವು ವಿಭಿನ್ನ ದೃಷ್ಟಿಕೋನವನ್ನು ಹೊಂದಿದ್ದೀರಿ. ಆದ್ದರಿಂದ ನೀವು ಪಂಜಾಬ್‌ಗೆ ಬಂದು ಅದನ್ನು ಜನರಿಗೆ ವಿವರಿಸಬೇಕೆಂದು ನಾವು ವಿನಂತಿಸುತ್ತೇವೆ. ಇದರಿಂದಾಗಿ ನಮ್ಮ ಜನರು ದೆಹಲಿಯ ಗಡಿಗಳಲ್ಲಿ ಕೊರೆಯುವ ಚಳಿಯಿಂದಾಗಿ ಪ್ರಾಣ ಕಳೆದುಕೊಳ್ಳುವುದು ತಪ್ಪುತ್ತದೆ” ಎಂದು ಪತ್ರದಲ್ಲಿ ತಿಳಿಸಲಾಗಿದೆ.

ಹೇಮಾ ಮಾಲಿನಿ ಇತ್ತೀಚೆಗೆ, “ಇಷ್ಟೆಲ್ಲಾ ಮಾತುಕತೆಗಳು ನಡೆದ ನಂತರವೂ ರೈತರು ಸಹಮತಕ್ಕೆ ಬರುತ್ತಿಲ್ಲ. ಅವರಿಗೇನು ಬೇಕೆಂದು ಅಥವಾ ಈ ಕಾನೂನುಗಳಲ್ಲಿ ಏನು ಸಮಸ್ಯೆಯಿದೆ ಎಂಬುದು ಅವರಿಗೆ ತಿಳಿದಿಲ್ಲ. ಇದರರ್ಥ ಅವರನ್ನು ಯಾರೋ ಪ್ರಚೋದಿಸುತ್ತಿದ್ದಾರೆ” ಎಂದು ಹೇಳಿದ್ದರು.

ಇದನ್ನೂ ಓದಿ: ಬಾಲಿವುಡ್ ಡ್ರಗ್ ಮಾಫಿಯಾ: ಜಯಾ ಬಚ್ಚನ್ ಪರ ನಿಂತ ನಟಿ, ಬಿಜೆಪಿ ಸಂಸದೆ ಹೇಮಾ ಮಾಲಿನಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...