Homeಮುಖಪುಟರೈತ ಮಹಿಳಾ ದಿನ: IMF, WTO ಪ್ರತಿಕೃತಿ ಸುಟ್ಟು ಪ್ರತಿಭಟಿಸಿದ ರೈತ ಮಹಿಳೆಯರು

ರೈತ ಮಹಿಳಾ ದಿನ: IMF, WTO ಪ್ರತಿಕೃತಿ ಸುಟ್ಟು ಪ್ರತಿಭಟಿಸಿದ ರೈತ ಮಹಿಳೆಯರು

ಸಾಮಾನ್ಯವಾಗಿ ಅಕ್ಟೋಬರ್ 15 ಅನ್ನು ಪ್ರತಿವರ್ಷ ರೈತ ಮಹಿಳಾ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಆದರೆ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಹಿನ್ನಲೆಯಲ್ಲಿ, ಇಂದು ಜಾಥ ನಡೆಸುವ ಮೂಲಕ ರೈತ ಮಹಿಳಾ ದಿನವನ್ನು ಆಚರಿಸಲಾಗಿದೆ.

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಸೇರಿದಂತೆ ದೇಶದ ವಿವಿಧ ಮಹಿಳಾ ರೈತ ಸಂಘಟನೆಗಳು ಸೇರಿ ಇಂದು (ಜನವರಿ 18) ರೈತ ಮಹಿಳಾ ದಿನಾಚರಣೆ ಆಚರಿಸುತ್ತಿದ್ದು, ದೆಹಲಿಯ ಟಿಕ್ರಿ ಗಡಿಯಲ್ಲಿ ಅಂತರಾಷ್ಟ್ರೀಯ ಹಣಕಾಸು ನಿಧಿ (IMF), ವಿಶ್ವ ವ್ಯಾಪಾರ ಸಂಘಟನೆ (WTO) ಮತ್ತು ವಿಶ್ವ ಬ್ಯಾಂಕಿನ ಪ್ರತಿಕೃತಿಗಳನ್ನು ಸುಟ್ಟು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಈ ಕುರಿತ ವೀಡಿಯೋವೊಂದನ್ನು ಕರ್ನಾಟಕದ AICCTU ಟ್ವೀಟ್ ಮಾಡಿದೆ.

 

ಸಾಮಾನ್ಯವಾಗಿ ಅಕ್ಟೋಬರ್ 15 ಅನ್ನು ಪ್ರತಿವರ್ಷ ರೈತ ಮಹಿಳಾ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಆದರೆ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಹಿನ್ನಲೆಯಲ್ಲಿ, ಇಂದೇ ಜಾಥ ನಡೆಸುವ ಮೂಲಕ ರೈತ ಮಹಿಳಾ ದಿನವನ್ನು ಆಚರಿಸಲಾಗಿದೆ.

ಇದನ್ನೂ ಓದಿ: ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ರೈತ ಹೋರಾಟವನ್ನು ಬೆಂಬಲಿಸಿ #WomenFarmersAgainstFarmLaws ಎನ್ನುವ ಹ್ಯಾಶ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದೆ. ಇದನ್ನು ಬಳಸಿ ಸಾವಿರಾರು ಜನ ಟ್ವೀಟ್ ಮಾಡಿದ್ದಾರೆ.

ಪಂಜಾಬ್ ವುಮೆನ್ ಕಲೆಕ್ಟೀವ್ ಟ್ವೀಟ್ ಮಾಡಿ, “ಭಾರತದ ರೈತ ಮಹಿಳೆಯರೊಂದಿಗೆ ಒಗ್ಗಟ್ಟನಿಂದ ನಿಂತಿದ್ದೇವೆ” ಎಂದು ಟ್ವೀಟ್ ಮಾಡಿದೆ.

ಮಂದೀಪ್ ಜಸ್ಸಿ ಟ್ವೀಟ್ ಮಾಡಿ, “ಇಂದು ನಮ್ಮ ತಾಯಂದಿರು ಮತ್ತು ಸಹೋದರಿಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಸಮಾನ ಕೊಡುಗೆ ನೀಡುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರೈತ ಮಹಿಳಾ ದಿನ: ‘ರೈತ ಮಹಿಳೆ’ಯ ಅಸ್ತಿತ್ವ, ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ‘ಮಕಾಮ್’

ಸರ್ದಾರ್ ರಜಿಂದರ್ ಸಿಂಗ್ ಟ್ವೀಟ್ ಮಾಡಿ, “ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧದ ಈ ಯುದ್ಧದಲ್ಲಿ ಮಹಿಳೆಯರ ಶಕ್ತಿ ಮತ್ತು ಕೊಡುಗೆಯನ್ನು ಸಂಭ್ರಮಿಸೋಣ. ಮಹಿಳಾ ಕಿಸಾನ್ ದಿವಸ್ ಆಚರಿಸೋಣ” ಎಂದು ಬರೆದುಕೊಂಡಿದ್ದಾರೆ.

“ದೆಹಲಿ ಗಡಿಯಲ್ಲಿರುವ 5 ಪ್ರತಿಭಟನಾ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯ ಮತ್ತು ನೈರ್ಮಲ್ಯದ ಕೊರತೆಯು ಮಹಿಳೆಯರ ಆರೋಗ್ಯದ ಮೇಲೆ ಗಂಭೀರ ಅಪಾಯವನ್ನುಂಟುಮಾಡುತ್ತದೆ. #WomenFarmersAgainstFarmlaws #MahilaKisanDiwas #Tractor2Twitter” ಎಂದು ಟ್ವೀಟ್ ಮಾಡಲಾಗಿದೆ.

ಕಳೆದ ಎರಡು ತಿಂಗಳಿನಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿಯೂ ಮಹಿಳಾ ರೈತರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಜನವರಿ 26 ರಂದು ನಡೆಯಲಿರುವ ಟ್ಯ್ರಾಕ್ಟರ್ ಪರೇಡ್‌ನಲ್ಲಿಯೂ ರೈತ ಮಹಿಳೆಯರು ಭಾಗವಹಿಸಲು ತಾಲೀಮು ನಡೆಸಿದ್ದಾರೆ. ಈಗಾಗಲೇ ನೂರಾರು ರೈತ ಪುತ್ರಿಯರು ಟ್ರಾಕ್ಟರ್ ಚಲಾಯಿಸುವುದನ್ನು ಕಲಿಯುತ್ತಿದ್ದಾರೆ.

ಇದನ್ನೂ ಓದಿ: ಕ್ಷಮೆ ಕೇಳುತ್ತಲೇ ರೈತ ಮಹಿಳೆಯ ಮೇಲೆ ಆರೋಪಗಳ ಸುರಿಮಳೆಗೈದ ಮಾಧುಸ್ವಾಮಿ!

ಕೃಷಿ ಕಾಯ್ದೆಗಳನ್ನು ರದ್ದುಪಡಿಸುವುದು, ಸಾಲ ಮನ್ನಾ, ಆರೋಗ್ಯ ಸೇವೆಗಳು, ಕಿರು ಬಂಡವಾಳ ಸಂಸ್ಥೆಗಳ ಕಿರುಕುಳದ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿದಂತೆ ರೈತ ಹೋರಾಟಕ್ಕೆ ಬೆಂಬಲ ಸೂಚಿಸುವುದು ಸೇರಿದಂತೆ ವಿವಿಧ ವಿಷಯಗಳನ್ನಿಟ್ಟುಕೊಂಡು ಇಂದು ಹೋರಾಟ ನಡೆಸುತ್ತಿದ್ದಾರೆ.

ಈ ಜಾಥದಲ್ಲಿ ಭಾರತೀಯ ಮಹಿಳಾ ಒಕ್ಕೂಟ (ಎನ್ಎಫ್ಐಡಬ್ಯೂ), ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ (ಎಐಡಿಡಬ್ಲ್ಯೂಎ), ಅಖಿಲ ಭಾರತ ಮಹಿಳಾ ಪ್ರಗತಿಶೀಲ ಸಂಘ (ಎಐಪಿಡಬ್ಲ್ಯೂಎ) ಮತ್ತು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಗಳು (ಎಐಎಂಎಸ್ಎಸ್) ಭಾಗವಹಿಸಿವೆ.

ಎಐಡಿಡಬ್ಲ್ಯೂಎ ಅಧ್ಯಕ್ಷರಾದ ಮರಿಯಂ ದವಾಲೆ ಅವರು, “ನಾವು ದೇಶದಾದ್ಯಂತ ಪ್ರತಿಭಟನೆಯನ್ನು ಆಯೋಜಸುತ್ತಿದ್ದೇವೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳು ನಡೆಯಲಿದ್ದು, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಹಿಳಾ ಪ್ರತಿಭಟನಾಕಾರರು ರಾಜ್‌ಭವನದತ್ತ ಮೆರವಣಿಗೆ ನಡೆಸಲಿದ್ದಾರೆ” ಎಂದಿದ್ದಾರೆ.

ಅಖಿಲ ಭಾರತ ಕಿಸಾನ್‌ ಸಭಾದ (ಎಐಕೆಎಸ್) ಅಧ್ಯಕ್ಷರಾದ ಅಶೋಕ್‌ ದವಾಲೆ ಮಾತನಾಡಿ “ಇಂದು ನಡೆಯಲಿರುವ ಜಾಥದಲ್ಲಿ ಪುರುಷರು ಮತ್ತು ಮಹಿಳೆಯರೆಲ್ಲರೂ ಭಾವಹಿಸಲಿದ್ದು, ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಲಿದ್ದಾರೆ” ಎಂದರು.

ರೈತ ಮಹಿಳಾ ದಿನದ ಕುರಿತು ದೆಹಲಿಯ ಸಿಂಘು ಗಡಿಯಲ್ಲಿನ ಹೋರಾಟಗಾರ್ತಿಯ ಮಾತುಗಳನ್ನು ಇಲ್ಲಿ ಕೇಳಿ…


ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...