Homeಮುಖಪುಟರೈತ ಮಹಿಳಾ ದಿನ: IMF, WTO ಪ್ರತಿಕೃತಿ ಸುಟ್ಟು ಪ್ರತಿಭಟಿಸಿದ ರೈತ ಮಹಿಳೆಯರು

ರೈತ ಮಹಿಳಾ ದಿನ: IMF, WTO ಪ್ರತಿಕೃತಿ ಸುಟ್ಟು ಪ್ರತಿಭಟಿಸಿದ ರೈತ ಮಹಿಳೆಯರು

ಸಾಮಾನ್ಯವಾಗಿ ಅಕ್ಟೋಬರ್ 15 ಅನ್ನು ಪ್ರತಿವರ್ಷ ರೈತ ಮಹಿಳಾ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಆದರೆ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಹಿನ್ನಲೆಯಲ್ಲಿ, ಇಂದು ಜಾಥ ನಡೆಸುವ ಮೂಲಕ ರೈತ ಮಹಿಳಾ ದಿನವನ್ನು ಆಚರಿಸಲಾಗಿದೆ.

- Advertisement -
- Advertisement -

ಸಂಯುಕ್ತ ಕಿಸಾನ್ ಮೋರ್ಚಾ ಸೇರಿದಂತೆ ದೇಶದ ವಿವಿಧ ಮಹಿಳಾ ರೈತ ಸಂಘಟನೆಗಳು ಸೇರಿ ಇಂದು (ಜನವರಿ 18) ರೈತ ಮಹಿಳಾ ದಿನಾಚರಣೆ ಆಚರಿಸುತ್ತಿದ್ದು, ದೆಹಲಿಯ ಟಿಕ್ರಿ ಗಡಿಯಲ್ಲಿ ಅಂತರಾಷ್ಟ್ರೀಯ ಹಣಕಾಸು ನಿಧಿ (IMF), ವಿಶ್ವ ವ್ಯಾಪಾರ ಸಂಘಟನೆ (WTO) ಮತ್ತು ವಿಶ್ವ ಬ್ಯಾಂಕಿನ ಪ್ರತಿಕೃತಿಗಳನ್ನು ಸುಟ್ಟು ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

ಈ ಕುರಿತ ವೀಡಿಯೋವೊಂದನ್ನು ಕರ್ನಾಟಕದ AICCTU ಟ್ವೀಟ್ ಮಾಡಿದೆ.

 

ಸಾಮಾನ್ಯವಾಗಿ ಅಕ್ಟೋಬರ್ 15 ಅನ್ನು ಪ್ರತಿವರ್ಷ ರೈತ ಮಹಿಳಾ ದಿನಾಚರಣೆಯಾಗಿ ಆಚರಿಸಲಾಗುತ್ತದೆ. ಆದರೆ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸುವ ಹಿನ್ನಲೆಯಲ್ಲಿ, ಇಂದೇ ಜಾಥ ನಡೆಸುವ ಮೂಲಕ ರೈತ ಮಹಿಳಾ ದಿನವನ್ನು ಆಚರಿಸಲಾಗಿದೆ.

ಇದನ್ನೂ ಓದಿ: ದೆಹಲಿ ಚಲೋ: ಹೋರಾಟದಲ್ಲಿ ತಮ್ಮದೆ ಛಾಪು ಮೂಡಿಸಿದ ರೈತ ಮಹಿಳೆಯರು!

ರೈತ ಹೋರಾಟವನ್ನು ಬೆಂಬಲಿಸಿ #WomenFarmersAgainstFarmLaws ಎನ್ನುವ ಹ್ಯಾಶ್‌ಟ್ಯಾಗ್ ಟ್ವಿಟರ್‌ನಲ್ಲಿ ಟ್ರೆಂಡಿಂಗ್ ಆಗುತ್ತಿದೆ. ಇದನ್ನು ಬಳಸಿ ಸಾವಿರಾರು ಜನ ಟ್ವೀಟ್ ಮಾಡಿದ್ದಾರೆ.

ಪಂಜಾಬ್ ವುಮೆನ್ ಕಲೆಕ್ಟೀವ್ ಟ್ವೀಟ್ ಮಾಡಿ, “ಭಾರತದ ರೈತ ಮಹಿಳೆಯರೊಂದಿಗೆ ಒಗ್ಗಟ್ಟನಿಂದ ನಿಂತಿದ್ದೇವೆ” ಎಂದು ಟ್ವೀಟ್ ಮಾಡಿದೆ.

ಮಂದೀಪ್ ಜಸ್ಸಿ ಟ್ವೀಟ್ ಮಾಡಿ, “ಇಂದು ನಮ್ಮ ತಾಯಂದಿರು ಮತ್ತು ಸಹೋದರಿಯರು ಎಲ್ಲಾ ಕ್ಷೇತ್ರಗಳಲ್ಲಿಯೂ ಸಮಾನ ಕೊಡುಗೆ ನೀಡುತ್ತಿದ್ದಾರೆ” ಎಂದು ಬರೆದುಕೊಂಡಿದ್ದಾರೆ.

ಇದನ್ನೂ ಓದಿ: ರೈತ ಮಹಿಳಾ ದಿನ: ‘ರೈತ ಮಹಿಳೆ’ಯ ಅಸ್ತಿತ್ವ, ಅಸ್ಮಿತೆಗಾಗಿ ಹೋರಾಟ ನಡೆಸುತ್ತಿರುವ ‘ಮಕಾಮ್’

ಸರ್ದಾರ್ ರಜಿಂದರ್ ಸಿಂಗ್ ಟ್ವೀಟ್ ಮಾಡಿ, “ದಬ್ಬಾಳಿಕೆ ಮತ್ತು ಅನ್ಯಾಯದ ವಿರುದ್ಧದ ಈ ಯುದ್ಧದಲ್ಲಿ ಮಹಿಳೆಯರ ಶಕ್ತಿ ಮತ್ತು ಕೊಡುಗೆಯನ್ನು ಸಂಭ್ರಮಿಸೋಣ. ಮಹಿಳಾ ಕಿಸಾನ್ ದಿವಸ್ ಆಚರಿಸೋಣ” ಎಂದು ಬರೆದುಕೊಂಡಿದ್ದಾರೆ.

“ದೆಹಲಿ ಗಡಿಯಲ್ಲಿರುವ 5 ಪ್ರತಿಭಟನಾ ಸ್ಥಳಗಳಲ್ಲಿ ಶುದ್ಧ ಕುಡಿಯುವ ನೀರು, ತಾತ್ಕಾಲಿಕ ಶೌಚಾಲಯ ಮತ್ತು ನೈರ್ಮಲ್ಯದ ಕೊರತೆಯು ಮಹಿಳೆಯರ ಆರೋಗ್ಯದ ಮೇಲೆ ಗಂಭೀರ ಅಪಾಯವನ್ನುಂಟುಮಾಡುತ್ತದೆ. #WomenFarmersAgainstFarmlaws #MahilaKisanDiwas #Tractor2Twitter” ಎಂದು ಟ್ವೀಟ್ ಮಾಡಲಾಗಿದೆ.

ಕಳೆದ ಎರಡು ತಿಂಗಳಿನಿಂದ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟದಲ್ಲಿಯೂ ಮಹಿಳಾ ರೈತರು ಸಕ್ರಿಯವಾಗಿ ಪಾಲ್ಗೊಂಡಿದ್ದಾರೆ. ಜನವರಿ 26 ರಂದು ನಡೆಯಲಿರುವ ಟ್ಯ್ರಾಕ್ಟರ್ ಪರೇಡ್‌ನಲ್ಲಿಯೂ ರೈತ ಮಹಿಳೆಯರು ಭಾಗವಹಿಸಲು ತಾಲೀಮು ನಡೆಸಿದ್ದಾರೆ. ಈಗಾಗಲೇ ನೂರಾರು ರೈತ ಪುತ್ರಿಯರು ಟ್ರಾಕ್ಟರ್ ಚಲಾಯಿಸುವುದನ್ನು ಕಲಿಯುತ್ತಿದ್ದಾರೆ.

ಇದನ್ನೂ ಓದಿ: ಕ್ಷಮೆ ಕೇಳುತ್ತಲೇ ರೈತ ಮಹಿಳೆಯ ಮೇಲೆ ಆರೋಪಗಳ ಸುರಿಮಳೆಗೈದ ಮಾಧುಸ್ವಾಮಿ!

ಕೃಷಿ ಕಾಯ್ದೆಗಳನ್ನು ರದ್ದುಪಡಿಸುವುದು, ಸಾಲ ಮನ್ನಾ, ಆರೋಗ್ಯ ಸೇವೆಗಳು, ಕಿರು ಬಂಡವಾಳ ಸಂಸ್ಥೆಗಳ ಕಿರುಕುಳದ ವಿರುದ್ಧ ಕ್ರಮ ಕೈಗೊಳ್ಳುವುದು ಸೇರಿದಂತೆ ರೈತ ಹೋರಾಟಕ್ಕೆ ಬೆಂಬಲ ಸೂಚಿಸುವುದು ಸೇರಿದಂತೆ ವಿವಿಧ ವಿಷಯಗಳನ್ನಿಟ್ಟುಕೊಂಡು ಇಂದು ಹೋರಾಟ ನಡೆಸುತ್ತಿದ್ದಾರೆ.

ಈ ಜಾಥದಲ್ಲಿ ಭಾರತೀಯ ಮಹಿಳಾ ಒಕ್ಕೂಟ (ಎನ್ಎಫ್ಐಡಬ್ಯೂ), ಅಖಿಲ ಭಾರತ ಪ್ರಜಾಪ್ರಭುತ್ವ ಮಹಿಳಾ ಸಂಘ (ಎಐಡಿಡಬ್ಲ್ಯೂಎ), ಅಖಿಲ ಭಾರತ ಮಹಿಳಾ ಪ್ರಗತಿಶೀಲ ಸಂಘ (ಎಐಪಿಡಬ್ಲ್ಯೂಎ) ಮತ್ತು ಅಖಿಲ ಭಾರತ ಮಹಿಳಾ ಸಾಂಸ್ಕೃತಿಕ ಸಂಘಟನೆಗಳು (ಎಐಎಂಎಸ್ಎಸ್) ಭಾಗವಹಿಸಿವೆ.

ಎಐಡಿಡಬ್ಲ್ಯೂಎ ಅಧ್ಯಕ್ಷರಾದ ಮರಿಯಂ ದವಾಲೆ ಅವರು, “ನಾವು ದೇಶದಾದ್ಯಂತ ಪ್ರತಿಭಟನೆಯನ್ನು ಆಯೋಜಸುತ್ತಿದ್ದೇವೆ. ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಪ್ರತಿಭಟನೆಗಳು ನಡೆಯಲಿದ್ದು, ಕೇರಳ, ತಮಿಳುನಾಡು ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಹಿಳಾ ಪ್ರತಿಭಟನಾಕಾರರು ರಾಜ್‌ಭವನದತ್ತ ಮೆರವಣಿಗೆ ನಡೆಸಲಿದ್ದಾರೆ” ಎಂದಿದ್ದಾರೆ.

ಅಖಿಲ ಭಾರತ ಕಿಸಾನ್‌ ಸಭಾದ (ಎಐಕೆಎಸ್) ಅಧ್ಯಕ್ಷರಾದ ಅಶೋಕ್‌ ದವಾಲೆ ಮಾತನಾಡಿ “ಇಂದು ನಡೆಯಲಿರುವ ಜಾಥದಲ್ಲಿ ಪುರುಷರು ಮತ್ತು ಮಹಿಳೆಯರೆಲ್ಲರೂ ಭಾವಹಿಸಲಿದ್ದು, ಕೃಷಿ ಕಾನೂನುಗಳನ್ನು ರದ್ದುಗೊಳಿಸಬೇಕು ಎಂದು ಆಗ್ರಹಿಸಲಿದ್ದಾರೆ” ಎಂದರು.

ರೈತ ಮಹಿಳಾ ದಿನದ ಕುರಿತು ದೆಹಲಿಯ ಸಿಂಘು ಗಡಿಯಲ್ಲಿನ ಹೋರಾಟಗಾರ್ತಿಯ ಮಾತುಗಳನ್ನು ಇಲ್ಲಿ ಕೇಳಿ…


ಇದನ್ನೂ ಓದಿ: ರೈತ ಮಹಿಳಾ ದಿನ: ರೈತರಿಗೆ ಬೆಂಬಲ ಘೋಷಿಸಿ ದೇಶವ್ಯಾಪಿ‌ ಪ್ರತಿಭಟನೆ ನಡೆಸಲು ಮಹಿಳೆಯರ ನಿರ್ಧಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...