Homeಮುಖಪುಟಅರ್ನಾಬ್ ವಾಟ್ಸಪ್ ಚಾಟ್‌‌‌‌: ಬಿಜೆಪಿಯ ರಾಷ್ಟ್ರೀಯತೆ ಪರೀಕ್ಷಿಸಬೇಕೆಂದ ಶಿವಸೇನೆ

ಅರ್ನಾಬ್ ವಾಟ್ಸಪ್ ಚಾಟ್‌‌‌‌: ಬಿಜೆಪಿಯ ರಾಷ್ಟ್ರೀಯತೆ ಪರೀಕ್ಷಿಸಬೇಕೆಂದ ಶಿವಸೇನೆ

- Advertisement -
- Advertisement -

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಾಬ್ ಗೋಸ್ವಾಮಿಯ ವಾಟ್ಸಾಪ್ ಚಾಟ್‌‌ಗಳ ಬಗ್ಗೆ ಶಿವಸೇನೆ ಕೇಂದ್ರ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿದ್ದು, ವಾಟ್ಸಪ್‌‌ ಚಾಟ್‌ಗಳಲ್ಲಿ ದೇಶದ ಆಂತರಿಕ ಭದ್ರತೆಯ ಉಲ್ಲಂಘನೆಯಾಗಿದೆ ಮತ್ತು ಅರ್ನಾಬ್‌ ವಿರುದ್ಧ ಕ್ರಮಕೈಗೊಳ್ಳಬೇಕೆಂದು ಅದು ಒತ್ತಾಯಿಸಿದೆ.

ಫೆಬ್ರವರಿ 26, 2019 ರಂದು ಬಾಲಕೋಟ್‌‌ನ ಭಯೋತ್ಪಾದಕ ಶಿಬಿರದ ಮೇಲೆ ಭಾರತೀಯ ಏರ್‌ ಫೋರ್ಸ್ ಬಾಂಬ್ ಸ್ಫೋಟಿಸಿದೆ ಎನ್ನಲಾದ ಈ ಯೋಜನೆಯು ಗೌಪ್ಯವಾಗಿತ್ತು ಕೇಂದ್ರ ಸರ್ಕಾರ ಹೇಳಿತ್ತು. ಆದರೆ ಅರ್ನಾಬ್‌‌‌‌‌ ಮತ್ತು ಆಗಿನ ಬಾರ್ಕ್‌‌ನ ಮುಖ್ಯ ಕಾರ್ಯನಿರ್ವಾಹಕ ಪಾರ್ಥೋ ದಾಸ್‌ಗುಪ್ತಾ ನಡುವೆ ನಡೆದಿರುವ ವಾಟ್ಸಾಪ್ ಸಂಭಾಷಣೆಯಲ್ಲಿ, ಭಾರತೀಯ ವಾಯುಸೇನೆ ನಡೆಸಲಿರುವ ಬಾಲಕೋಟ್ ವಾಯುದಾಳಿಯ ಬಗ್ಗೆ ದಾಳಿಗಿಂತಲೂ ಮೂರು ದಿನ ಮೊದಲೇ ಚರ್ಚಿಸಿದ್ದರು. ಇದು ದೇಶಾದ್ಯಂತ ಕೋಲಾಹಲ ಸೃಷ್ಟಿಸಿದೆ.

ಇದನ್ನೂ ಓದಿ: ‘ಪಿಎಂಒ ಮಾತ್ರವಲ್ಲ ಎನ್‌ಎಸ್‌ಎ ಕೂಡ ಅರ್ನಾಬ್ ಜೊತೆಯಿತ್ತು’: ಅರ್ನಾಬ್ ವಾಟ್ಸಾಪ್ ಲೀಕ್ ಸಂಪೂರ್ಣ ವಿವರ ಇಲ್ಲಿದೆ

ಈ ಚಾಟ್‌ಗಳು ರಾಷ್ಟ್ರೀಯ ಭದ್ರತೆಗೆ ಅಪಾಯವನ್ನು ಒಡ್ಡಿದೆ ಎಂದಿರುವ ಶಿವಸೇನೆಯ ನಾಯಕ ಸಂಜಯ್ ರಾವತ್‌, “ಇದು ದೇಶದ ಆಂತರಿಕ ಭದ್ರತೆಗೆ ಅಪಾಯ ಎಂದು ನಾನು ಭಾವಿಸುತ್ತೇನೆ. ಕೆಲವೊಮ್ಮೆ, ಇಂತಹ ಮಿಲಿಟರಿ ರಹಸ್ಯಗಳು ಉನ್ನತ ಅಧಿಕಾರಿಗಳಿಗೆ ತಿಳಿದಿರುವುದಿಲ್ಲ. ಒಂದು ವೇಳೆ ಸೈನಿಕರು ಇಂತಹ ಯಾವುದೇ ರಹಸ್ಯಗಳನ್ನು ಅಥವಾ ದಾಖಲೆಗಳನ್ನು ಹೊಂದಿರುವುದು ಕಂಡುಬಂದರೆ, ಅವರನ್ನು ವಿಚಾರಣೆ ನಡೆಸಲಾಗುತ್ತದೆ ಎಂದಿದ್ದಾರೆ.

ಆದರೆ ಈ ಘಟನೆಯಲ್ಲಿ, ಬಾಲಕೋಟ್‌ನಲ್ಲಿ ವಾಯುದಾಳಿ ಸಂಭವಿಸುತ್ತದೆ ಎಂದು ಅರ್ನಾಬ್‌‌ಗೆ ತಿಳಿದಿತ್ತು. ಇದರರ್ಥ ರಾಷ್ಟ್ರೀಯ ಭದ್ರತೆಯ ಉಲ್ಲಂಘನೆಯಾಗಿದೆ. ದೇಶದ ಗೃಹ ಸಚಿವರು ಮತ್ತು ರಕ್ಷಣಾ ಸಚಿವರು ಈ ಬಗ್ಗೆ ಯಾವ ಕ್ರಮ ತೆಗೆದುಕೊಳ್ಳುತ್ತಾರೆ? ಇದು ರಕ್ಷಣೆಗೆ ಸಂಬಂಧಿಸಿದ ವಿಷಯವಾಗಿದೆ. ನೀವು ಅವರನ್ನು ಕೋರ್ಟ್ ಮಾರ್ಷಲ್ ಮಾಡುತ್ತೀರಾ?’’ ಎಂದು ಪ್ರಶ್ನಿಸಿದ್ದಾರೆ.

ಶಿವಸೇನೆ ಸೋಮವಾರ ತನ್ನ ಮುಖವಾಣಿ ಸಾಮ್ನಾದಲ್ಲಿ ಬಿಜೆಪಿಯನ್ನು ಗುರಿಯಾಗಿಸಿಕೊಂಡಿದೆ. “ರಾಷ್ಟ್ರೀಯ ರಹಸ್ಯಗಳನ್ನು ಹಂಚಿಕೊಳ್ಳುವುದು ರಾಷ್ಟ್ರ ವಿರೋಧಿ ಅಲ್ಲ ಎಂದು ಬಿಜೆಪಿಯ ಜನರು ಭಾವಿಸಿದರೆ, ರಾಷ್ಟ್ರೀಯತೆಯ ಬಗ್ಗೆಗಿನ ಅವರ ವ್ಯಾಖ್ಯಾನವನ್ನು ಪರೀಕ್ಷಿಸುವುದು ಅಗತ್ಯವಾಗಿದೆ” ಎಂದು ಬರೆದಿದ್ದಾರೆ.

ಸಾಮ್ನಾ ಸಂಪಾದಕೀಯವು ಟಿಆರ್‌ಪಿ ಹಗರಣವನ್ನು ಭೇದಿಸಿದ ಮುಂಬೈ ಪೊಲೀಸರನ್ನು ಶ್ಲಾಘಿಸಿದ್ದು, ಅವರಿಗೆ “ಜೀವಮಾನದ ಸಾಧನೆ ಪ್ರಶಸ್ತಿ” ನೀಡಬೇಕು ಎಂದು ಹೇಳಿದೆ.


ಇದನ್ನೂ ಓದಿ: ಭಾರತೀಯ ಸೈನಿಕರ ಸಾವನ್ನು ಸಂಭ್ರಮಿಸಿದ್ದ ಅರ್ನಾಬ್: ಉನ್ನತ ತನಿಖೆಗೆ ಒತ್ತಾಯಿಸಿದ ವಿರೋಧ ಪಕ್ಷಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...