Homeಚಳವಳಿರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

ಇಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಮಕ್ಕಳಿಗೆ ದಿನವೂ ಬೆಳಗ್ಗೆ ಇಂಗ್ಲೀಷ್, ಗಣಿತ, ಸಮಾಜ, ವಿಜ್ಞಾನ, ಚಿತ್ರಕಲೆ ವಿಷಯಗಳನ್ನು ಹೇಳಿಕೊಡಲಾಗುತ್ತದೆ. ಪ್ರತಿಭಟನೆಯಲ್ಲಿ ಇಷ್ಟು ಸೇವೆ ಮಾಡಲು ಅವಕಶ ಸಿಕ್ಕಿದೆ. ಅಷ್ಟು ಸಾಕು- ರಮಣೀಕ್

- Advertisement -
- Advertisement -

ಹೋರಾಟ ಸಂಘಟಿತವಾಗಲು ಯಾಕೆ ಹೋರಾಟ ನಡೆಸುತ್ತಿದ್ದೇವೆ ಎಂಬುದರ ಅರಿವು ಹೆಚ್ಚು ಅವಶ್ಯಕತೆಯಿದೆ. ಅಂತಹ ಒಂದು ಹೋರಾಟ ಗಟ್ಟಿಯಾಗಿ ನಿಲ್ಲಲು ಅದಕ್ಕೆ ಸಂವಿಧಾನ ನೀಡಿರುವ ಹಕ್ಕುಗಳ ಅರಿವಿರಬೇಕು. ಈ ಅರಿವು ತುಂಬುವ ಕೆಲಸವನ್ನು ಕಿಸಾನ್ ಗ್ರಂಥಾಲಯಗಳು ಮಾಡುತ್ತಿವೆ ಎನ್ನುತ್ತಾರೆ ಪಂಜಾಬ್‌ನ ನರೇಶ್.

ಹೌದು, ಐತಿಹಾಸಿಕ ರೈತ ಹೋರಾಟದಲ್ಲಿ ಸಿಂಘು ಗಡಿಯಲ್ಲಿ ಒಂದರಲ್ಲೇ ಪುಸ್ತಕಗಳ ಮಳಿಗೆಗಳನ್ನು ಇಟ್ಟುಕೊಂಡು, ಪ್ರತಿಭಟನಾಕಾರರಿಗೆ ಉಚಿತವಾಗಿ ಓದಲು ನೀಡುತ್ತಿರುವ ನೂರಕ್ಕೂ ಹೆಚ್ಚು ಗ್ರಂಥಾಲಯಗಳಿವೆ. ಇವುಗಳು ರೈತ ಹೋರಾಟದಲ್ಲಿ ಭಾಗವಹಿಸಿರುವವರಿಗೆ ಜ್ಞಾನದ ಎರಕ ಹೊಯ್ಯುತ್ತಿವೆ.

ಕಿಸಾನ್ ಹೋರಾಟದಲ್ಲಿ ಅಮೆರಿಕಾ ಮೂಲದ power in education international org. ಎಂಬ ಸಂಘಟನೆ ತಮ್ಮ ಗ್ರಂಥಾಲಯದಲ್ಲಿ ಸಂವಿಧಾನದ ಕುರಿತು ತಿಳವಳಿಕೆ ಮೂಡಿಸುವ ಕೆಲಸಕ್ಕೆ ಕೈ ಹಾಕಿದೆ. ಪಂಜಾಬಿ, ಹಿಂದಿ, ಆಂಗ್ಲ ಭಾಷೆಗಳಲ್ಲಿ ಸಂವಿಧಾನದ ಪ್ರತಿಗಳನ್ನು, ಪುಸ್ತಕಗಳನ್ನು ಓದಲು ನೀಡುತ್ತಿವೆ.

ಇದನ್ನೂ ಓದಿ: ಖಾಲಿಸ್ತಾನಿ, ಅಲ್‌ಖೈದ ಭಯೋತ್ಪಾದಕರನ್ನು ಹುಡುಕಿಕೊಡಿ: ದೆಹಲಿಯಲ್ಲಿ ಪೋಸ್ಟರ್ ಅಂಟಿಸಿದ ಪೊಲೀಸರು!

“ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಬರೆದಿರುವ ಸಂವಿಧಾನದ ಓದು ನಮ್ಮ ಹಕ್ಕುಗಳನ್ನು ನಮಗೆ ಮತ್ತಷ್ಟು ತಿಳಿಯಲು ಸಹಾಯಕವಾಗಿದೆ. ಹಾಗಾಗಿ ಸಂವಿಧಾನದ ಓದು ಅತೀ ಅವಶ್ಯಕವಾಗಿದೆ. ನಾವು ಸಿಂಘು ಗಡಿಯಲ್ಲಿ ಇರುವುದರಿಂದ, ಇಲ್ಲಿ ಪಂಜಾಬಿ ಮಾತನಾಡುವವರ ಸಂಖ್ಯೆ ಹೆಚ್ಚಿರುವ ಕಾರಣ ಪಂಜಾಬಿ ಭಾಷೆಯಲ್ಲಿರುವ ಸಂವಿಧಾನದ ಪ್ರತಿಗಳನ್ನು ಇಡಲಾಗಿದೆ. ಇಲ್ಲೇ ಓದುವವರಿಗೆ ಉಚಿತವಾಗಿ ನೀಡಲಾಗುತ್ತದೆ. ಟ್ಯ್ರಾಲಿಯಲ್ಲಿ ಇರುವವರಿಗೆ 2 ದಿನಗಳು ನೀಡಲಾಗುತ್ತದೆ. ಕೊಂಡುಕೊಳ್ಳುವವರಿಗೆ ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ನರೇಶ್ ಮಾಹಿತಿ ನೀಡಿದ್ದಾರೆ.

ಇದರ ಜೊತೆಗೆ ಅಂಬೇಡ್ಕರ್‌ ಸ್ಟೂಡೆಂಟ್ಸ್ ಅಸೋಸಿಯೇಷನ್ ಕೂಡ ಸಂವಿಧಾನ ಮತ್ತು ಅಂಬೇಡ್ಕರ್ ಕುರಿತ ಪುಸ್ತಕಗಳನ್ನು ಜನರಿಗೆ ನೀಡುತ್ತಿದ್ದು. ತಮ್ಮ ಟೆಂಟ್ ಹೊರಗೆಯೂ ಈ ವಿಚಾರಗಳ ಕುರಿತು ಹಲವು ಮಾಹಿತಿ ನೀಡುತ್ತಿವೆ. ಜೊತೆಗೆ ಪ್ರತಿದಿನ ವಿದ್ಯಾರ್ಥಿಗಳು ಚರ್ಚೆಗಳನ್ನು ನಡೆಸುತ್ತಾರೆ.

ಇದನ್ನೂ ಓದಿ:  ‘ಪಿಎಂಒ ಮಾತ್ರವಲ್ಲ ಎನ್‌ಎಸ್‌ಎ ಕೂಡ ಅರ್ನಾಬ್ ಜೊತೆಯಿತ್ತು’: ಅರ್ನಾಬ್ ವಾಟ್ಸಾಪ್ ಲೀಕ್ ಸಂಪೂರ್ಣ ವಿವರ

ಸಿಂಘು ಗಡಿಯಲ್ಲಿರುವ ಮತ್ತೊಂದು ವಿಶೇಷ ಗ್ರಂಥಾಲಯ ಸಾಂಜಿ ಸಾತ್. ಸಾಂಜಿ ಎಂದರೆ ಚರ್ಚೆ, ಸಾತ್ ಎಂದರೆ ಜೊತೆಗೆ ಎಂದರ್ಥ. ಒಟ್ಟಾಗಿ ಕುಳಿತು ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸ್ಥಳ ಇದಾಗಿದೆ. ಏಳು ಮಂದಿ ಯುವಕರು ಈ ಸಾಂಜಿ ಸಾತ್ ಎನ್ನುವ ಗ್ರಂಥಾಲಯ ಮತ್ತು ಚರ್ಚಾ ಸ್ಥಳವನ್ನು ಆರಂಭಿಸಿದ್ದಾರೆ.

ಮೊದಲಿಗೆ ಚಿಕ್ಕದಾಗಿ ಗ್ರಂಥಾಲಯ ಆರಂಭ ಮಾಡಿದ್ದ ಈ ತಂಡಕ್ಕೆ, ಪುಸ್ತಕಗಳು, ಹೆಚ್ಚು ದೇಣಿಗೆಯಿಂದ ಇದು ಇಂದು ದೊಡ್ಡ ಗ್ರಂಥಾಲಯವಾಗಿ ಮಾರ್ಪಟ್ಟಿದೆ. ಈ ಸ್ಥಳದಲ್ಲಿ ಪುಸ್ತಕ ಪ್ರೇಮಿಗಳು, ಚರ್ಚೆಗಳಲ್ಲಿ ಭಾಗವಹಿಸುವವರು, ಕ್ರಾಂತಿ ಗೀತೆಗಳನ್ನು ಹಾಡುವವರು, ಬರೆಯುವವರು, ಕೇಳಿಸಿಕೊಳ್ಳುವವರು ಮತ್ತು ಮಕ್ಕಳು ಎಲ್ಲರೂ ಭಾಗವಹಿಸುತ್ತಾರೆ.

“ಪ್ರತಿಭಟನೆಯಲ್ಲಿ ಭಾಗವಹಿಸಿರುವ ಸುಮಾರು 100ಕ್ಕೂ ಹೆಚ್ಚು ಮಕ್ಕಳಿಗೆ ದಿನವೂ ಬೆಳಗ್ಗೆ ಇಂಗ್ಲೀಷ್, ಗಣಿತ, ಸಮಾಜ, ವಿಜ್ಞಾನ, ಚಿತ್ರಕಲೆ ವಿಷಯಗಳನ್ನು ಹೇಳಿಕೊಡಲಾಗುತ್ತದೆ. ಸಂಜೆ 50-60 ಮಂದಿ, ‘ಪ್ರತಿಭಟನೆ ಯಾವ ರೀತಿ ನಡೆಯುತ್ತಿದೆ. ಯಾವ ರೀತಿ ನಡೆಸಬಹುದು’ ಎಂಬ ವಿಚಾರಗಳ ಜೊತೆಗೆ ಸೈದ್ಧಾಂತಿಕ ವಿಚಾರಗಳನ್ನು ಚರ್ಚೆ ಮಾಡಲಾಗುತ್ತದೆ” ಎಂದು ಸಾಂಜಿ ಸಾತ್‌ ನೋಡಿಕೊಳ್ಳುವ ರಮಣೀಕ್ ಹೇಳುತ್ತಾರೆ.

ಇದನ್ನೂ ಓದಿ: ರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ಸಾಂಜಿ ಸಾತ್ ಕಟ್ಟಿದ ಬಗ್ಗೆ ಮಾತನಾಡಿದ ರಮಣೀಕ್, “ಪ್ರತಿಭಟನೆಗೆ ಬೆಂಬಲ ನೀಡಲು ಬಂದ ನಮ್ಮ ಏಳು ಜನರ ತಂಡ, ಯಾವ ರೀತಿಯಲ್ಲಿ ಇಲ್ಲಿ ಸೇವೆ ಮಾಡುವುದು ಎಂದು ಯೋಚಿಸುತ್ತಿದ್ದೇವು. ಆಗ ನಮಗೆ ಗ್ರಂಥಾಲಯ ಇಡುವ ಯೋಜನೆ ಹೊಳೆಯಿತು. ಕೆಲವು ಪುಸ್ತಕಗಳಿಂದ ಶುರುವಾದ ಈ ಗ್ರಂಥಾಲಯ ಇಂದು ಸಾಂಜಿ ಸಾತ್ ಆಗಿ ಮಾರ್ಪಟ್ಟಿದೆ. ಇಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಮಕ್ಕಳಿಗೆ ದಿನವೂ ಬೆಳಗ್ಗೆ ಇಂಗ್ಲೀಷ್, ಗಣಿತ, ಸಮಾಜ, ವಿಜ್ಞಾನ, ಚಿತ್ರಕಲೆ ವಿಷಯಗಳನ್ನು ಹೇಳಿಕೊಡಲಾಗುತ್ತದೆ. ಪ್ರತಿಭಟನೆಯಲ್ಲಿ ಇಷ್ಟು ಸೇವೆ ಮಾಡಲು ಅವಕಶ ಸಿಕ್ಕಿದೆ. ಅಷ್ಟು ಸಾಕು” ಎನ್ನುತ್ತಾರೆ.

ಗ್ರಂಥಾಲಯಗಳಲ್ಲಿ ಹಲವು ಪುಸ್ತಕಗಳನ್ನು ಓದುಗರಿಗೆ ಉಚಿತವಾಗಿ ಹಂಚಲಾಗುತ್ತಿದೆ. ಈಗಾಗಲೇ ರೈತ ಹೋರಾಟದ ಕುರಿತು ಹಲವು ಪುಸ್ತಕಗಳು ಪ್ರಕಟವಾಗಿದ್ದು, ಇವುಗಳನ್ನು ಸ್ಟಾಲ್‌ಗಳಲ್ಲಿ ಇಡಲಾಗುತ್ತಿದೆ. ಹೊರಗಿನಿಂದ ಬಂದವರು, ಇಲ್ಲಿಯೇ ಓದುವವರಿಗೂ ಇವುಗಳನ್ನು ಹಂಚಲಾಗುತ್ತಿದೆ.

ಕೃಷಿ ಕಾನೂನುಗಳ ರದ್ದತಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ 60 ದಿನಗಳಾಗುತ್ತಾ ಬಂದರು ಇನ್ನು ತನ್ನ ಕಾವು ಕಳೆದುಕೊಳ್ಳದಿರಲು ಇರುವ ಪ್ರಮುಖ ಅಂಶಗಳಲ್ಲಿ ಈ ಗ್ರಂಥಾಲಯಗಳೂ ಪ್ರಮುಖ ಪಾತ್ರವಹಿಸಿವೆ.


ಇದನ್ನೂ ಓದಿ: ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...