Homeಚಳವಳಿರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

ರೈತ ಹೋರಾಟದಲ್ಲಿ ಜ್ಞಾನ ಪ್ರಸರಣ: ಗಮನ ಸೆಳೆದ ಕಿಸಾನ್ ಗ್ರಂಥಾಲಯಗಳು!

ಇಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಮಕ್ಕಳಿಗೆ ದಿನವೂ ಬೆಳಗ್ಗೆ ಇಂಗ್ಲೀಷ್, ಗಣಿತ, ಸಮಾಜ, ವಿಜ್ಞಾನ, ಚಿತ್ರಕಲೆ ವಿಷಯಗಳನ್ನು ಹೇಳಿಕೊಡಲಾಗುತ್ತದೆ. ಪ್ರತಿಭಟನೆಯಲ್ಲಿ ಇಷ್ಟು ಸೇವೆ ಮಾಡಲು ಅವಕಶ ಸಿಕ್ಕಿದೆ. ಅಷ್ಟು ಸಾಕು- ರಮಣೀಕ್

- Advertisement -
- Advertisement -

ಹೋರಾಟ ಸಂಘಟಿತವಾಗಲು ಯಾಕೆ ಹೋರಾಟ ನಡೆಸುತ್ತಿದ್ದೇವೆ ಎಂಬುದರ ಅರಿವು ಹೆಚ್ಚು ಅವಶ್ಯಕತೆಯಿದೆ. ಅಂತಹ ಒಂದು ಹೋರಾಟ ಗಟ್ಟಿಯಾಗಿ ನಿಲ್ಲಲು ಅದಕ್ಕೆ ಸಂವಿಧಾನ ನೀಡಿರುವ ಹಕ್ಕುಗಳ ಅರಿವಿರಬೇಕು. ಈ ಅರಿವು ತುಂಬುವ ಕೆಲಸವನ್ನು ಕಿಸಾನ್ ಗ್ರಂಥಾಲಯಗಳು ಮಾಡುತ್ತಿವೆ ಎನ್ನುತ್ತಾರೆ ಪಂಜಾಬ್‌ನ ನರೇಶ್.

ಹೌದು, ಐತಿಹಾಸಿಕ ರೈತ ಹೋರಾಟದಲ್ಲಿ ಸಿಂಘು ಗಡಿಯಲ್ಲಿ ಒಂದರಲ್ಲೇ ಪುಸ್ತಕಗಳ ಮಳಿಗೆಗಳನ್ನು ಇಟ್ಟುಕೊಂಡು, ಪ್ರತಿಭಟನಾಕಾರರಿಗೆ ಉಚಿತವಾಗಿ ಓದಲು ನೀಡುತ್ತಿರುವ ನೂರಕ್ಕೂ ಹೆಚ್ಚು ಗ್ರಂಥಾಲಯಗಳಿವೆ. ಇವುಗಳು ರೈತ ಹೋರಾಟದಲ್ಲಿ ಭಾಗವಹಿಸಿರುವವರಿಗೆ ಜ್ಞಾನದ ಎರಕ ಹೊಯ್ಯುತ್ತಿವೆ.

ಕಿಸಾನ್ ಹೋರಾಟದಲ್ಲಿ ಅಮೆರಿಕಾ ಮೂಲದ power in education international org. ಎಂಬ ಸಂಘಟನೆ ತಮ್ಮ ಗ್ರಂಥಾಲಯದಲ್ಲಿ ಸಂವಿಧಾನದ ಕುರಿತು ತಿಳವಳಿಕೆ ಮೂಡಿಸುವ ಕೆಲಸಕ್ಕೆ ಕೈ ಹಾಕಿದೆ. ಪಂಜಾಬಿ, ಹಿಂದಿ, ಆಂಗ್ಲ ಭಾಷೆಗಳಲ್ಲಿ ಸಂವಿಧಾನದ ಪ್ರತಿಗಳನ್ನು, ಪುಸ್ತಕಗಳನ್ನು ಓದಲು ನೀಡುತ್ತಿವೆ.

ಇದನ್ನೂ ಓದಿ: ಖಾಲಿಸ್ತಾನಿ, ಅಲ್‌ಖೈದ ಭಯೋತ್ಪಾದಕರನ್ನು ಹುಡುಕಿಕೊಡಿ: ದೆಹಲಿಯಲ್ಲಿ ಪೋಸ್ಟರ್ ಅಂಟಿಸಿದ ಪೊಲೀಸರು!

“ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಬರೆದಿರುವ ಸಂವಿಧಾನದ ಓದು ನಮ್ಮ ಹಕ್ಕುಗಳನ್ನು ನಮಗೆ ಮತ್ತಷ್ಟು ತಿಳಿಯಲು ಸಹಾಯಕವಾಗಿದೆ. ಹಾಗಾಗಿ ಸಂವಿಧಾನದ ಓದು ಅತೀ ಅವಶ್ಯಕವಾಗಿದೆ. ನಾವು ಸಿಂಘು ಗಡಿಯಲ್ಲಿ ಇರುವುದರಿಂದ, ಇಲ್ಲಿ ಪಂಜಾಬಿ ಮಾತನಾಡುವವರ ಸಂಖ್ಯೆ ಹೆಚ್ಚಿರುವ ಕಾರಣ ಪಂಜಾಬಿ ಭಾಷೆಯಲ್ಲಿರುವ ಸಂವಿಧಾನದ ಪ್ರತಿಗಳನ್ನು ಇಡಲಾಗಿದೆ. ಇಲ್ಲೇ ಓದುವವರಿಗೆ ಉಚಿತವಾಗಿ ನೀಡಲಾಗುತ್ತದೆ. ಟ್ಯ್ರಾಲಿಯಲ್ಲಿ ಇರುವವರಿಗೆ 2 ದಿನಗಳು ನೀಡಲಾಗುತ್ತದೆ. ಕೊಂಡುಕೊಳ್ಳುವವರಿಗೆ ಕಡಿಮೆ ದರದಲ್ಲಿ ಮಾರಾಟ ಮಾಡಲಾಗುತ್ತದೆ ಎಂದು ನರೇಶ್ ಮಾಹಿತಿ ನೀಡಿದ್ದಾರೆ.

ಇದರ ಜೊತೆಗೆ ಅಂಬೇಡ್ಕರ್‌ ಸ್ಟೂಡೆಂಟ್ಸ್ ಅಸೋಸಿಯೇಷನ್ ಕೂಡ ಸಂವಿಧಾನ ಮತ್ತು ಅಂಬೇಡ್ಕರ್ ಕುರಿತ ಪುಸ್ತಕಗಳನ್ನು ಜನರಿಗೆ ನೀಡುತ್ತಿದ್ದು. ತಮ್ಮ ಟೆಂಟ್ ಹೊರಗೆಯೂ ಈ ವಿಚಾರಗಳ ಕುರಿತು ಹಲವು ಮಾಹಿತಿ ನೀಡುತ್ತಿವೆ. ಜೊತೆಗೆ ಪ್ರತಿದಿನ ವಿದ್ಯಾರ್ಥಿಗಳು ಚರ್ಚೆಗಳನ್ನು ನಡೆಸುತ್ತಾರೆ.

ಇದನ್ನೂ ಓದಿ:  ‘ಪಿಎಂಒ ಮಾತ್ರವಲ್ಲ ಎನ್‌ಎಸ್‌ಎ ಕೂಡ ಅರ್ನಾಬ್ ಜೊತೆಯಿತ್ತು’: ಅರ್ನಾಬ್ ವಾಟ್ಸಾಪ್ ಲೀಕ್ ಸಂಪೂರ್ಣ ವಿವರ

ಸಿಂಘು ಗಡಿಯಲ್ಲಿರುವ ಮತ್ತೊಂದು ವಿಶೇಷ ಗ್ರಂಥಾಲಯ ಸಾಂಜಿ ಸಾತ್. ಸಾಂಜಿ ಎಂದರೆ ಚರ್ಚೆ, ಸಾತ್ ಎಂದರೆ ಜೊತೆಗೆ ಎಂದರ್ಥ. ಒಟ್ಟಾಗಿ ಕುಳಿತು ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸುವ ಸ್ಥಳ ಇದಾಗಿದೆ. ಏಳು ಮಂದಿ ಯುವಕರು ಈ ಸಾಂಜಿ ಸಾತ್ ಎನ್ನುವ ಗ್ರಂಥಾಲಯ ಮತ್ತು ಚರ್ಚಾ ಸ್ಥಳವನ್ನು ಆರಂಭಿಸಿದ್ದಾರೆ.

ಮೊದಲಿಗೆ ಚಿಕ್ಕದಾಗಿ ಗ್ರಂಥಾಲಯ ಆರಂಭ ಮಾಡಿದ್ದ ಈ ತಂಡಕ್ಕೆ, ಪುಸ್ತಕಗಳು, ಹೆಚ್ಚು ದೇಣಿಗೆಯಿಂದ ಇದು ಇಂದು ದೊಡ್ಡ ಗ್ರಂಥಾಲಯವಾಗಿ ಮಾರ್ಪಟ್ಟಿದೆ. ಈ ಸ್ಥಳದಲ್ಲಿ ಪುಸ್ತಕ ಪ್ರೇಮಿಗಳು, ಚರ್ಚೆಗಳಲ್ಲಿ ಭಾಗವಹಿಸುವವರು, ಕ್ರಾಂತಿ ಗೀತೆಗಳನ್ನು ಹಾಡುವವರು, ಬರೆಯುವವರು, ಕೇಳಿಸಿಕೊಳ್ಳುವವರು ಮತ್ತು ಮಕ್ಕಳು ಎಲ್ಲರೂ ಭಾಗವಹಿಸುತ್ತಾರೆ.

“ಪ್ರತಿಭಟನೆಯಲ್ಲಿ ಭಾಗವಹಿಸಿರುವ ಸುಮಾರು 100ಕ್ಕೂ ಹೆಚ್ಚು ಮಕ್ಕಳಿಗೆ ದಿನವೂ ಬೆಳಗ್ಗೆ ಇಂಗ್ಲೀಷ್, ಗಣಿತ, ಸಮಾಜ, ವಿಜ್ಞಾನ, ಚಿತ್ರಕಲೆ ವಿಷಯಗಳನ್ನು ಹೇಳಿಕೊಡಲಾಗುತ್ತದೆ. ಸಂಜೆ 50-60 ಮಂದಿ, ‘ಪ್ರತಿಭಟನೆ ಯಾವ ರೀತಿ ನಡೆಯುತ್ತಿದೆ. ಯಾವ ರೀತಿ ನಡೆಸಬಹುದು’ ಎಂಬ ವಿಚಾರಗಳ ಜೊತೆಗೆ ಸೈದ್ಧಾಂತಿಕ ವಿಚಾರಗಳನ್ನು ಚರ್ಚೆ ಮಾಡಲಾಗುತ್ತದೆ” ಎಂದು ಸಾಂಜಿ ಸಾತ್‌ ನೋಡಿಕೊಳ್ಳುವ ರಮಣೀಕ್ ಹೇಳುತ್ತಾರೆ.

ಇದನ್ನೂ ಓದಿ: ರೈತಹೋರಾಟದ ಮೈಲಿಗಲ್ಲುಗಳು ಈ ಪಿಲ್ಲರ್‌ ನಂಬರ್‌ಗಳು: ರೈತರ ಹೊಸ ಪಿಲ್ಲರ್‌ ವಿಳಾಸಗಳ ಬಗ್ಗೆ ನಿಮಗೆ ಗೊತ್ತೆ?

ಸಾಂಜಿ ಸಾತ್ ಕಟ್ಟಿದ ಬಗ್ಗೆ ಮಾತನಾಡಿದ ರಮಣೀಕ್, “ಪ್ರತಿಭಟನೆಗೆ ಬೆಂಬಲ ನೀಡಲು ಬಂದ ನಮ್ಮ ಏಳು ಜನರ ತಂಡ, ಯಾವ ರೀತಿಯಲ್ಲಿ ಇಲ್ಲಿ ಸೇವೆ ಮಾಡುವುದು ಎಂದು ಯೋಚಿಸುತ್ತಿದ್ದೇವು. ಆಗ ನಮಗೆ ಗ್ರಂಥಾಲಯ ಇಡುವ ಯೋಜನೆ ಹೊಳೆಯಿತು. ಕೆಲವು ಪುಸ್ತಕಗಳಿಂದ ಶುರುವಾದ ಈ ಗ್ರಂಥಾಲಯ ಇಂದು ಸಾಂಜಿ ಸಾತ್ ಆಗಿ ಮಾರ್ಪಟ್ಟಿದೆ. ಇಲ್ಲಿ ಹಲವು ವಿಚಾರಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ಮಕ್ಕಳಿಗೆ ದಿನವೂ ಬೆಳಗ್ಗೆ ಇಂಗ್ಲೀಷ್, ಗಣಿತ, ಸಮಾಜ, ವಿಜ್ಞಾನ, ಚಿತ್ರಕಲೆ ವಿಷಯಗಳನ್ನು ಹೇಳಿಕೊಡಲಾಗುತ್ತದೆ. ಪ್ರತಿಭಟನೆಯಲ್ಲಿ ಇಷ್ಟು ಸೇವೆ ಮಾಡಲು ಅವಕಶ ಸಿಕ್ಕಿದೆ. ಅಷ್ಟು ಸಾಕು” ಎನ್ನುತ್ತಾರೆ.

ಗ್ರಂಥಾಲಯಗಳಲ್ಲಿ ಹಲವು ಪುಸ್ತಕಗಳನ್ನು ಓದುಗರಿಗೆ ಉಚಿತವಾಗಿ ಹಂಚಲಾಗುತ್ತಿದೆ. ಈಗಾಗಲೇ ರೈತ ಹೋರಾಟದ ಕುರಿತು ಹಲವು ಪುಸ್ತಕಗಳು ಪ್ರಕಟವಾಗಿದ್ದು, ಇವುಗಳನ್ನು ಸ್ಟಾಲ್‌ಗಳಲ್ಲಿ ಇಡಲಾಗುತ್ತಿದೆ. ಹೊರಗಿನಿಂದ ಬಂದವರು, ಇಲ್ಲಿಯೇ ಓದುವವರಿಗೂ ಇವುಗಳನ್ನು ಹಂಚಲಾಗುತ್ತಿದೆ.

ಕೃಷಿ ಕಾನೂನುಗಳ ರದ್ದತಿಗೆ ಆಗ್ರಹಿಸಿ ನಡೆಯುತ್ತಿರುವ ಹೋರಾಟ 60 ದಿನಗಳಾಗುತ್ತಾ ಬಂದರು ಇನ್ನು ತನ್ನ ಕಾವು ಕಳೆದುಕೊಳ್ಳದಿರಲು ಇರುವ ಪ್ರಮುಖ ಅಂಶಗಳಲ್ಲಿ ಈ ಗ್ರಂಥಾಲಯಗಳೂ ಪ್ರಮುಖ ಪಾತ್ರವಹಿಸಿವೆ.


ಇದನ್ನೂ ಓದಿ: ಹೋರಾಟ ನಿರತ ರೈತರ ಸೇವೆಗಾಗಿ ವಿದೇಶಿ ಕೆಲಸದ ಅವಕಾಶ ತೊರೆದ ಯುವಕ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...