Homeಮುಖಪುಟಟ್ರ್ಯಾಕ್ಟರ್ ರ್‍ಯಾಲಿ ನಮ್ಮ ಸಾಂವಿಧಾನಿಕ ಹಕ್ಕು: ಸುಪ್ರೀಂಗೆ ಪರೋಕ್ಷ ಸಂದೇಶ ರವಾನಿಸಿದ ರೈತರು

ಟ್ರ್ಯಾಕ್ಟರ್ ರ್‍ಯಾಲಿ ನಮ್ಮ ಸಾಂವಿಧಾನಿಕ ಹಕ್ಕು: ಸುಪ್ರೀಂಗೆ ಪರೋಕ್ಷ ಸಂದೇಶ ರವಾನಿಸಿದ ರೈತರು

ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಅಡ್ಡಿಯಾಗದಂತೆ ನಾವು ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸುತ್ತೇವೆ. ನಾವು ನಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸುತ್ತೇವೆ. ಜೊತೆಗೆ ನಾವು ಖಂಡಿತವಾಗಿಯೂ ದೆಹಲಿಗೆ ಪ್ರವೇಶಿಸಲಿದ್ದೇವೆ- ರೈತ ಮುಖಂಡರು

- Advertisement -
- Advertisement -

“ರೈತರ ಹೋರಾಟದ ಭಾಗವಾಗಿ ಗಣರಾಜ್ಯೋತ್ಸವ ದಿನದಂದು ನಡೆಯಲಿರುವ ಟ್ರ್ಯಾಕ್ಟರ್ ರ್‍ಯಾಲಿಯನ್ನು ನಡೆಸುವುದು ನಮ್ಮ ಸಾಂವಿಧಾನಿಕ ಹಕ್ಕು” ಎಂದು ರೈತ ನಾಯಕರು ಹೇಳಿದ್ದು, ಜನವರಿ 26 ರಂದು ನಡೆಯುವ ಈ ಬೃಹತ್ ರ್‍ಯಾಲಿಯಲ್ಲಿ ಸಾವಿರಾರು ಜನರು ಭಾಗವಹಿಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಪ್ರತಿಭಟನಾ ನಿರತ ರೈತರು ಟ್ರ್ಯಾಕ್ಟರ್ ರ್‍ಯಾಲಿ ನಡೆಸಬಹುದೇ ಬೇಡವೇ? ಎಂಬುದನ್ನು ದೆಹಲಿ ಪೊಲೀಸರೇ ನಿರ್ಧರಿಸಲಿ ಎಂದು ಸೋಮವಾರ ಸುಪ್ರೀಂ ಕೋರ್ಟ್ ಹೇಳಿದೆ. ಈ ಹಿನ್ನೆಲೆಯಲ್ಲಿ ರೈತರ ಹೇಳಿಕೆ ಸುಪ್ರೀಂ ಕೋರ್ಟ್‌ಗೆ ನೀಡಿದ ಉತ್ತರದಂತಿದೆ.

ಭಾರತೀಯ ಕಿಸಾನ್ ಯೂನಿಯನ್‌ನ (ಲಖೋವಾಲ್) ಪಂಜಾಬ್ ಪ್ರಧಾನ ಕಾರ್ಯದರ್ಶಿ ಪರಮಜಿತ್ ಸಿಂಗ್ ಮಾತನಾಡಿ, “ನಾವು ರ್‍ಯಾಲಿಯನ್ನು ರಾಜ್‌ಪತ್ ಅಥವಾ ಇನ್ನಿತರ ಭದ್ರತಾ ಸೂಕ್ಷ್ಮ ಪ್ರದೇಶಗಳಲ್ಲಿ ನಡೆಸುವುದಿಲ್ಲ. ದೆಹಲಿಯ ಹೊರ ವರ್ತುಲ (Outer RingRoad) ರಸ್ತೆಯಲ್ಲಿ ಮಾತ್ರ ಈ ರ್‍ಯಾಲಿಯನ್ನು ನಡೆಸುತ್ತೇವೆ. ಜೊತೆಗೆ ಗಣರಾಜ್ಯೋತ್ಸವದ ಮೆರವಣಿಗೆಗೆ ಯಾವುದೇ ಅಡ್ಡಿಪಡಿಸುವುದಿಲ್ಲ” ಎಂದು ಸ್ಪಷ್ಟಪಡಿಸಿದರು.

ಇದನ್ನೂ ಓದಿ: ಜನವರಿ 26 ಕ್ಕೆ ಬೃಹತ್ ಟ್ರ್ಯಾಕ್ಟರ್ ರ್‍ಯಾಲಿ: ಬೆದರಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಕೇಂದ್ರ ಸರ್ಕಾರ!

“ನಾವು ದೆಹಲಿ ಗಡಿಯಲ್ಲಿ ಸಿಕ್ಕಿಕೊಂಡಿದ್ದೇವೆ. ಇಲ್ಲಿ ಕುಳಿತುಕೊಳ್ಳಲು ನಾವು ನಿರ್ಧರಿಸಿಲ್ಲ. ಬದಲಿಗೆ ನಾವು ದೆಹಲಿಗೆ ಪ್ರವೇಶಿಸುವುದನ್ನು ತಡೆಯಲಾಗಿದೆ. ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಅಡ್ಡಿಯಾಗದಂತೆ ನಾವು ರ್‍ಯಾಲಿಯನ್ನು ಶಾಂತಿಯುತವಾಗಿ ನಡೆಸುತ್ತೇವೆ. ನಾವು ನಮ್ಮ ಸಾಂವಿಧಾನಿಕ ಹಕ್ಕನ್ನು ಚಲಾಯಿಸುತ್ತೇವೆ. ಜೊತೆಗೆ ನಾವು ಖಂಡಿತವಾಗಿಯೂ ದೆಹಲಿಗೆ ಪ್ರವೇಶಿಸಲಿದ್ದೇವೆ” ಎಂದು ಪರಮಜಿತ್ ಸಿಂಗ್ ತಿಳಿಸಿದ್ದಾರೆ.

ಸ್ವರಾಜ್ ಇಂಡಿಯಾದ ಮುಖಂಡ ಯೋಗೇಂದ್ರ ಯಾದವ್ ಮಾತನಾಡಿ, “ಗಣರಾಜ್ಯೋತ್ಸವದಂದ ನಡೆಯಲಿರುವ ಶಾಂತಿಯುತ ರ್‍ಯಾಲಿಯಲ್ಲಿ ಪ್ರತಿಯೊಂದು ಟ್ರ್ಯಾಕ್ಟರ್‌ ಮೇಲೆ ಭಾರತದ ತ್ರಿವರ್ಣ ಧ್ವಜ ಹಾರಾಡಲಿದೆ” ಎಂದು ಹೇಳಿದ್ದರು.

ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ: ದಿಟ್ಟ ರೈತ ಹೋರಾಟದ ಗಮನಸೆಳೆದ 10 ಫೋಟೊಗಳು

ಇನ್ನು ಪ್ರತಿಭಟನೆ ಮಾಡುತ್ತಿರುವ ಎಲ್ಲಾ ರೈತ ಸಂಘಟನೆಗಳೂ ಸಹ ಇದೇ ಹೇಳಿಕೆಯನ್ನು ನೀಡುತ್ತಿದ್ದು, ರ್‍ಯಾಲಿ ಮಾಡುವುದು ನಮ್ಮ ಸಾಂವಿಧಾನಿಕ ಹಕ್ಕು ಎಂದು ಹೇಳುತ್ತಿದ್ದಾರೆ.

ಕೇಂದ್ರ ಸರ್ಕಾರದ ಮೂರು ಕೃಷಿ ಕಾನೂನುಗಳನ್ನು ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಕಳೆದ ಎರಡು ತಿಂಗಳಿನಿಂದ ಪ್ರತಿಭಟನೆ ಮಾಡುತ್ತಿದ್ದಾರೆ. ಈ ಬಿಕ್ಕಟ್ಟಿನ ಕುರಿತು ಕೇಂದ್ರ ಸರ್ಕಾರ ಮತ್ತು ರೈತರ ನಡುವೆ 9 ಸುತ್ತಿನ ಮಾತುಕತೆಗಳು ನಡೆದಿದ್ದು, ಎಲ್ಲವೂ ವಿಫಲವಾಗಿವೆ. ಕಾಯ್ದೆಗಳನ್ನು ಹಿಂತೆಗೆದುಕೊಳ್ಳಬೆಕು ಎಂದು ರೈತರು ಒತ್ತಾಯಿಸುತ್ತಿದ್ದರೆ, ಸರ್ಕಾರ ತನ್ನ ನಿರ್ಧಾರದಿಂದ ಹಿಂದೆ ಸರಿಯುತ್ತಿಲ್ಲ.

ಹಾಗಾಗಿ ರೈತರು ತಮ್ಮ ಪ್ರತಿಭಟನೆಯನ್ನು ತೀವ್ರಗೊಳಿಸುತ್ತಲೇ ಇದ್ದಾರೆ. ಇದರ ಭಾಗವಾಗಿಯೇ ಈ ಟ್ರ್ಯಾಕ್ಟರ್ ರ್‍ಯಾಲಿಯನ್ನು ಹಮ್ಮಿಕೊಳ್ಳಲಾಗಿದೆ.


ಇದನ್ನೂ ಓದಿ: ಟ್ರ್ಯಾಕ್ಟರ್ ಚಲಾಯಿಸಿಕೊಂಡು ದೆಹಲಿಯತ್ತ ದಾಪುಗಾಲಿಡುತ್ತಿರುವ ‘ರೈತ ಪುತ್ರಿಯರು’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...