Homeಕರ್ನಾಟಕಸುಳ್ಳನ್ನೆ ದೇವರು ಎಂದು ನಂಬಿರುವ ಅಮಿತ್ ಶಾ ಸುಳ್ಳುಗಳ ಮೂಟೆ ಉರುಳಿಸಿದ್ದಾರೆ: ಸಿದ್ದರಾಮಯ್ಯ

ಸುಳ್ಳನ್ನೆ ದೇವರು ಎಂದು ನಂಬಿರುವ ಅಮಿತ್ ಶಾ ಸುಳ್ಳುಗಳ ಮೂಟೆ ಉರುಳಿಸಿದ್ದಾರೆ: ಸಿದ್ದರಾಮಯ್ಯ

- Advertisement -
- Advertisement -

ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ಕರ್ನಾಟಕದ ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಾಪ್ರಹಾರ ಮಾಡಿದ್ದಾರೆ. ಇತ್ತೀಚೆಗೆ ಕರ್ನಾಟಕಕ್ಕೆ ಬಂದಿದ್ದ ಅಮಿತ್‌ ಶಾ ರವರು ಕಾಂಗ್ರೆಸ್ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದರು. ಅದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ಅಂಕಿ-ಸಂಖ್ಯೆಗಳ ಸಮೇತ ಅಮಿತ್ ಶಾ ಸುಳ್ಳು ಹೇಳಿದ್ದಾರೆ ಎಂದು ಆರೋಪಿಸಿದ್ದಾರೆ.

ಸುಳ್ಳನ್ನೆ ದೇವರು ಎಂದು ನಂಬಿರುವ ಕೇಂದ್ರ ಗೃಹಸಚಿವ ಅಮಿತ್‌ ಶಾ ರಾಜ್ಯಕ್ಕೆ ಬಂದು ಮತ್ತೊಮ್ಮೆ ಸುಳ್ಳುಗಳ ಮೂಟೆ ಉರುಳಿಸಿ ಕಾಂಗ್ರೆಸ್‌ನಿಂದ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದಾರೆ. ಈಗ ನಾನು ಹೇಳುವ ಲೆಕ್ಕವನ್ನು ಅವರು ಗಮನವಿಟ್ಟು ಓದಿ, ತಾಳ್ಮೆಯಿಂದ ಉತ್ತರ ಕೊಡಬೇಕು ಎಂದು ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳ ಮೂಲಕ ಆಗ್ರಹಿಸಿದ್ದಾರೆ.

ಯುಪಿಎ ಆಡಳಿತದ ಕಾಲದಲ್ಲಿ (2010/11- 2013/14) ಹಣಕಾಸು ಆಯೋಗ ಕರ್ನಾಟಕಕ್ಕೆ‌‌ ನಿಗದಿಪಡಿಸಿದ್ದ ಕೇಂದ್ರ ತೆರಿಗೆಗಳ ಪಾಲ ರೂ.45,713 ಕೋಟಿ. ನಾವು ಪಡೆದದ್ದು ರೂ.47,036 ಕೋಟಿ. ಇದು ನಿಗದಿಪಡಿಸಿದ್ದಕ್ಕಿಂತ ರೂ.1.323 ಕೋಟಿ (ಶೇಕಡಾ 2.9ರಷ್ಟು) ಹೆಚ್ಚು. ಆದರೆ ಬಿಜೆಪಿ ಆಡಳಿತದ ಕಾಲದಲ್ಲಿ (2014/15 -2019/20) 13 ಮತ್ತು 14ನೇ ಹಣಕಾಸು ಆಯೋಗ ಕರ್ನಾಟಕಕ್ಕೆ ನಿಗದಿಪಡಿಸಿದ್ದ ತೆರಿಗೆ ಪಾಲು ರೂ.2,03,039 ಕೋಟಿ, ಸಿಕ್ಕಿದ್ದು ಕೇವಲ ರೂ.1,65 963 ಕೋಟಿ ರೂಪಾಯಿ ಮಾತ್ರ, ಅಂದರೆ ರೂ.48,768 ಕೋಟಿ (ಶೇಕಡಾ 18.2ರಷ್ಟು) ಕಡಿಮೆಯಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

2019-20ರ ವರ್ಷಕ್ಕೆ ಹಣಕಾಸು ಆಯೋಗ ಕರ್ನಾಟಕಕ್ಕೆ ನಿಗದಿಪಡಿಸಿದ್ದ ತೆರಿಗೆ ಪಾಲು ರೂ.48, 768 ಕೋಟಿ. ಆದರೆ ನಮಗೆ ಸಿಕ್ಕಿರುವುದು ರೂ.30.919 ಕೋಟಿ ಮಾತ್ರ. ಇದರ ಜೊತೆಗೆ ಪ್ರತಿ ವರ್ಷ ಹೆಚ್ಚಾಗುವ ಕೇಂದ್ರ ಸರ್ಕಾರದ ಬಜೆಟ್ ಗಾತ್ರವನ್ನು ಗಣನೆಗೆ ತೆಗೆದುಕೊಳ್ಳಬೇಕಾಗುತ್ತದೆ. ರಾಜ್ಯ ಬಜೆಟ್ ಪ್ರಕಾರ 2020-21ನೇ ವರ್ಷದಲ್ಲಿ ನಿರೀಕ್ಷಿತ ತೆರಿಗೆ ಪಾಲು ರೂ.28,591 ಕೋಟಿ. ನನ್ನ ಪ್ರಕಾರ ಪ್ರಸಕ್ತ ವರ್ಷದ ಪಾಲು ರೂ.15,017 ಕೋಟಿಗೆ ಇಳಿದರೂ ಅಚ್ಚರಿ ಇಲ್ಲ. ಹೀಗಾದರೆ ಇದು 2019-20ರ‌ ಅಂದಾಜಿಗಿಂತ ನಮ್ಮ ಪಾಲು ರೂ.33,751 ಕೋಟಿ ಕಡಿಮೆ ಯಾಗುತ್ತದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಜಿಎಸ್‌ಟಿ ಪರಿಹಾರದಲ್ಲಿ ನಮಗೆ ದೊಡ್ಡ ಅನ್ಯಾಯವಾಗಿದೆ. ಇತ್ತೀಚಿನ ಅಂದಾಜಿನಂತೆ ಜಿಎಸ್‌ಟಿ ಪರಿಹಾರದಲ್ಲಿ 25 ರಿಂದ 27 ಸಾವಿರ ಕೋಟಿ ರೂಪಾಯಿ ಖೋತಾ ಆಗಬಹುದು. ಕೇಂದ್ರ ಸರ್ಕಾರ ಇತ್ತೀಚೆಗೆ 18-19,000 ಕೋಟಿಯಷ್ಟೇ ಪರಿಹಾರ ನೀಡುವುದಾಗಿ ಹೇಳಿದೆ. ಈ ನಷ್ಟಕ್ಕೆ ಯಾರು ಹೊಣೆ ಎಂದು ಅವರು ಪ್ರಶ್ನಿಸಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯಕ್ಕೆ ನೀಡಲಿರುವ ಅನುದಾನ ರೂ.31,570 ಕೋಟಿಗಳಷ್ಟಾಗಬಹುದೆಂದು ನಿರೀಕ್ಷಿಸಲಾಗಿತ್ತು. ಈಗಿನ ಲೆಕ್ಕಾಚಾರದ ಪ್ರಕಾರ ಇದು ರೂ.17,372 ಕೋಟಿ ಮೀರಲಾರದು. ಇದರಿಂದ ರೂ.14,198 ಕೋಟಿ ಖೋತಾ ಆಗಲಿದೆ. ರಾಜ್ಯದ ಹಣಕಾಸು ಪರಿಸ್ಥಿತಿಗೆ ಇದು ಮಾರಕ ಹೊಡೆತ. ಒಟ್ಟಾರೆಯಾಗಿ ಕರ್ನಾಟಕ ರಾಜ್ಯ ಕಳೆದ ವರ್ಷಕ್ಕಿಂತ ಸುಮಾರು 50,000 ಕೋಟಿಯಷ್ಟು ಕಡಿಮೆ ಅನುದಾನ ಪಡೆಯಬಹುದು. ಇದರಿಂದಾಗಿ ಪ್ರಸಕ್ತ ಹಣಕಾಸು ವರ್ಷದ ಆದಾಯ ರೂ.1,80,217 ಕೋಟಿಯಿಂದ ರೂ.1,14,758 ಕೋಟಿಗೆ ಇಳಿಯುವ ನಿರೀಕ್ಷೆ ಇದೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ದಶಕಗಳ ನಮ್ಮ ಒಟ್ಟು ಸಾಲ ಅಂದಾಜು ರೂ.3.2ಲಕ್ಷ ಕೋಟಿ. ಆದರೆ ಈಗಿನ ಒಂದೇ ವರ್ಷದಲ್ಲಿ ಬಿ.ಎಸ್ ಯಡಿಯೂರಪ್ಪ ಸುಮಾರು ರೂ.90,000 ಕೋಟಿ ಸಾಲ ಪಡೆಯಲು ನಿರ್ಧರಿಸಿದ್ದಾರೆ. ಈ ಮೂಲಕ ಬಿಜೆಪಿ
ಸರ್ಕಾರ ಕರ್ನಾಟಕವನ್ನು ಶಾಶ್ವತ ಸಾಲಗಾರ ರಾಜ್ಯವನ್ನಾಗಿ ಮಾಡಲು ಹೊರಟಿದೆ. ಕರ್ನಾಟಕಕ್ಕೆ ವಿಶೇಷ ಅನುದಾನ ರೂ.5,495 ಕೋಟಿ ನೀಡಬೇಕೆಂದು ಹಣಕಾಸು ಆಯೋಗ ಶಿಫಾರಸು ಮಾಡಿತ್ತು. ಈ ಅನುದಾನಕ್ಕೆ ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಈಗಿನ ಹಣಕಾಸು ಸಚಿವೆ ‌ನಿರ್ಮಲಾ ಸೀತಾರಾಮನ್
ಅಡ್ಡಗಾಲು ಹಾಕಿದ್ದಾರೆ. ಇದು ಅಮಿತ್‌ ಶಾರವರ ಗಮನಕ್ಕೆ ಬಂದಿಲ್ಲವೇ ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಕರ್ನಾಟಕ ಪ್ರತಿವರ್ಷ ತೆರಿಗೆ-ಸುಂಕ ಮೂಲಕ ಕೇಂದ್ರಕ್ಕೆ ಪಾವತಿಸುವ ಅಂದಾಜು ಮೊತ್ತ ರೂ.2,20,000 ಕೋಟಿ‌. ಹಣಕಾಸು ಆಯೋಗದ ಶಿಫಾರಸಿನಂತೆ ಅದರಲ್ಲಿ 42% ಹಣವನ್ನು ರಾಜ್ಯಕ್ಕೆ ಕೇಂದ್ರ ಹಿಂದಿರುಗಿಸಬೇಕು. ಬಿಜೆಪಿ ಆಡಳಿತದ ಕಾಲದಲ್ಲಿ ನಮಗೆಂದೂ ಅಷ್ಟು ಪಾಲು ಸಿಕ್ಕಿಲ್ಲ ಎಂದು ಸಿದ್ದರಾಮಯ್ಯ ದೂರಿದ್ದಾರೆ.


ಇದನ್ನೂ ಓದಿ: ಲಯ ತಪ್ಪಿದ ಸಾರ್ವಜನಿಕ ಗ್ರಂಥಾಲಯ ಇಲಾಖೆ?: ವಿಶೇಷ ವರದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...