Homeಕರ್ನಾಟಕಮುಷ್ತಾಕ್ ಅಲಿ ಟ್ರೋಫಿ: ಚಾಂಪಿಯನ್ ಕರ್ನಾಟಕ ನಾಕ್ ‌ಔಟ್ ಹಂತದತ್ತ...

ಮುಷ್ತಾಕ್ ಅಲಿ ಟ್ರೋಫಿ: ಚಾಂಪಿಯನ್ ಕರ್ನಾಟಕ ನಾಕ್ ‌ಔಟ್ ಹಂತದತ್ತ…

- Advertisement -
- Advertisement -

ಸತತ ಎರಡು ಸಲ ಟಿ-20 ಚಾಂಪಿಯನ್ ಪಟ್ಟ ಗಿಟ್ಟಿಸಿರುವ ಕರ್ನಾಟಕ ತಂಡ ಈಗ ನಾಕ್‌ ಔಟ್ ಹಂತ ಪ್ರವೇಶಿಸುತ್ತಿದೆ.
ಇವತ್ತು ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಉತ್ತರಪ್ರದೇಶ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿದ ಕರ್ನಾಟಕ ತಂಡ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ ನಾಕ್‌ಔಟ್ (ಎಂಟರ ಘಟ್ಟ) ಹಂತ ತಲುಪುವತ್ತ ಮುನ್ನಡೆದಿದೆ.

2019-20 ಮತ್ತು 2020-21 ರ ಸಾಲಿನಲ್ಲಿ ಸತತವಾಗಿ ಚಾಂಪಿಯನ್ ಪಟ್ಟ ಧರಿಸಿದ್ದ ಕರ್ನಾಟಕ ಈಗ ಮೂರನೇ ಟ್ರೋಫಿ ಎತ್ತಿಹಿಡಿಯುವತ್ತ ಸಾಗಿದೆ.

ಕಳೆದ ವರ್ಷ ವಿಜಯ್ ಹಜಾರೆ ಟ್ರೋಫಿಯನ್ನೂ (ಒನ್‌ಡೇ ಚಾಂಪಿಯನ್‌ಶಿಪ್) ರಾಜ್ಯ ತಂಡ ಗೆಲ್ಲುವ ಮೂಲಕ ಒಂದೇ ಸೀಸನ್ನಿನಲ್ಲಿ ಎರಡೂ ಟ್ರೋಫಿ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು.

ಯುಪಿ ತಂಡದ ಸುರೇಶ್ ರೈನಾ ಮತ್ತು ಭುವನೇಶ್ವರ್ ಕುಮಾರ್ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಕರ್ನಾಟಕ ಯುವಪಡೆ 5 ವಿಕೆಟ್‌ಗಳ ಜಯ ಸಾಧಿಸಿದೆ. ಸದ್ಯ 16 ಅಂಕ ಗಳಿಸುವ ಮೂಲಕ ಎಲೈಟ್ ಎ ಗ್ರೂಪ್‌ನಲ್ಲಿ 2ನೇ ಸ್ಥಾನದಲ್ಲಿದೆ. ಮೊದಲ ಹಂತದ ಎಲ್ಲ ಐದೂ ಪಂದ್ಯ ಆಡಿರುವ ರಾಜ್ಯ ತಂಡ ನಾಲ್ಕರಲ್ಲಿ ಗೆದ್ದು 16 ಅಂಕ ಗಳಿಸಿದೆ.

ಇದನ್ನೂ ಓದಿ: À la lanterne 2.0? ಚೈನಾದ ಇತ್ತೀಚಿನ ವಿದ್ಯಮಾನದ ಕುರಿತು ರಾಜಾರಾಂ ತಲ್ಲೂರು

ಹಿಂದಿನ ರೈಲ್ವೇಸ್ ವಿರುದ್ಧದ ಪಂದ್ಯದಲ್ಲಿ 10 ಓವರ್‌ಗಳಲ್ಲಿ 75 ರನ್‌ಗೆ 5 ವಿಕೆಟ್ ಕಳೆದುಕೊಂಡು ಸೋಲಿನತ್ತ ಮುಖ ಮಾಡಿದ್ದ ತಂಡಕ್ಕೆ, ಗದುಗಿನ ಅನಿರುದ್ಧ ಜೋಶಿಯ ಬಿರುಸಿನ ಆಟ (40 ಎಸೆತ, ಅಜೇಯ 64 ರನ್) ಗೆಲವು ತಂದಿತ್ತು.

ಕೆ.ಎಲ್ ರಾಹುಲ್, ಮನೀಷ್ ಪಾಂಡೆ ಮತ್ತು ಮಯಾಂಕ್ ಅಗರ್‌ವಾಲ್ ಅನುಪಸ್ಥಿತಿಯಲ್ಲಿ ಕರ್ನಾಟಕ ಉತ್ತಮ ಪ್ರದರ್ಶನ ನೀಡುತ್ತಿದೆಯಾದರೂ, ನಾಯಕ ಕರುಣ್ ನಾಯರ್, ಉಪನಾಯಕ ಪವನ್ ದೇಶಪಾಂಡೆ ಇಲ್ಲಿವರೆಗೆ ಬ್ಯಾಟಿಂಗ್ ಲಯ ಕಂಡುಕೊಂಡಿಲ್ಲ. ದೇವದತ್ತ ಪಡಿಕ್ಕಲ್ ಮಾತ್ರ ಸ್ಥಿರವಾದ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ.

ಅಭಿಮನ್ಯು, ಮಿಥುನ್, ಶ್ರೇಯಸ್ ಗೋಪಾಲ್, ರೋಹನ್ ಕದಂ, ಪ್ರವೀಣ ದುಬೆ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಸ್ಪಿನ್ನರ್ ಕೆ.ಗೌತಮ್ ಅವರಿಂದ ತಂಡ ಹೆಚ್ಚಿನದನ್ನು ನಿರೀಕ್ಷಿಸುತ್ತಿದೆ. ಕರ್ನಾಟಕ ಹ್ಯಾಟ್ರಿಕ್ ಸಾಧನೆ ಮಾಡಲಿದೆಯೇ ಎಂಬುದು ಈಗ ಕುತೂಹಲ ಹೆಚ್ಚಲು ಕಾರಣವಾಗಿದೆ.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ ನಮ್ಮ ಸಾಂವಿಧಾನಿಕ ಹಕ್ಕು: ಸುಪ್ರೀಂಗೆ ಪರೋಕ್ಷ ಸಂದೇಶ ರವಾನಿಸಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...