Homeಕರ್ನಾಟಕಮುಷ್ತಾಕ್ ಅಲಿ ಟ್ರೋಫಿ: ಚಾಂಪಿಯನ್ ಕರ್ನಾಟಕ ನಾಕ್ ‌ಔಟ್ ಹಂತದತ್ತ...

ಮುಷ್ತಾಕ್ ಅಲಿ ಟ್ರೋಫಿ: ಚಾಂಪಿಯನ್ ಕರ್ನಾಟಕ ನಾಕ್ ‌ಔಟ್ ಹಂತದತ್ತ…

- Advertisement -
- Advertisement -

ಸತತ ಎರಡು ಸಲ ಟಿ-20 ಚಾಂಪಿಯನ್ ಪಟ್ಟ ಗಿಟ್ಟಿಸಿರುವ ಕರ್ನಾಟಕ ತಂಡ ಈಗ ನಾಕ್‌ ಔಟ್ ಹಂತ ಪ್ರವೇಶಿಸುತ್ತಿದೆ.
ಇವತ್ತು ಬೆಂಗಳೂರಿನಲ್ಲಿ ನಡೆದ ಪಂದ್ಯದಲ್ಲಿ ಉತ್ತರಪ್ರದೇಶ ತಂಡವನ್ನು 5 ವಿಕೆಟ್‌ಗಳಿಂದ ಸೋಲಿಸಿದ ಕರ್ನಾಟಕ ತಂಡ ಸಯ್ಯದ್ ಮುಷ್ತಾಕ್ ಅಲಿ ಟ್ರೋಫಿಯ ನಾಕ್‌ಔಟ್ (ಎಂಟರ ಘಟ್ಟ) ಹಂತ ತಲುಪುವತ್ತ ಮುನ್ನಡೆದಿದೆ.

2019-20 ಮತ್ತು 2020-21 ರ ಸಾಲಿನಲ್ಲಿ ಸತತವಾಗಿ ಚಾಂಪಿಯನ್ ಪಟ್ಟ ಧರಿಸಿದ್ದ ಕರ್ನಾಟಕ ಈಗ ಮೂರನೇ ಟ್ರೋಫಿ ಎತ್ತಿಹಿಡಿಯುವತ್ತ ಸಾಗಿದೆ.

ಕಳೆದ ವರ್ಷ ವಿಜಯ್ ಹಜಾರೆ ಟ್ರೋಫಿಯನ್ನೂ (ಒನ್‌ಡೇ ಚಾಂಪಿಯನ್‌ಶಿಪ್) ರಾಜ್ಯ ತಂಡ ಗೆಲ್ಲುವ ಮೂಲಕ ಒಂದೇ ಸೀಸನ್ನಿನಲ್ಲಿ ಎರಡೂ ಟ್ರೋಫಿ ಗೆದ್ದ ಮೊದಲ ತಂಡ ಎಂಬ ಹೆಗ್ಗಳಿಕೆಗೆ ಪಾತ್ರವಾಗಿತ್ತು.

ಯುಪಿ ತಂಡದ ಸುರೇಶ್ ರೈನಾ ಮತ್ತು ಭುವನೇಶ್ವರ್ ಕುಮಾರ್ ಬೌಲಿಂಗ್ ದಾಳಿಯನ್ನು ಸಮರ್ಥವಾಗಿ ಎದುರಿಸಿದ ಕರ್ನಾಟಕ ಯುವಪಡೆ 5 ವಿಕೆಟ್‌ಗಳ ಜಯ ಸಾಧಿಸಿದೆ. ಸದ್ಯ 16 ಅಂಕ ಗಳಿಸುವ ಮೂಲಕ ಎಲೈಟ್ ಎ ಗ್ರೂಪ್‌ನಲ್ಲಿ 2ನೇ ಸ್ಥಾನದಲ್ಲಿದೆ. ಮೊದಲ ಹಂತದ ಎಲ್ಲ ಐದೂ ಪಂದ್ಯ ಆಡಿರುವ ರಾಜ್ಯ ತಂಡ ನಾಲ್ಕರಲ್ಲಿ ಗೆದ್ದು 16 ಅಂಕ ಗಳಿಸಿದೆ.

ಇದನ್ನೂ ಓದಿ: À la lanterne 2.0? ಚೈನಾದ ಇತ್ತೀಚಿನ ವಿದ್ಯಮಾನದ ಕುರಿತು ರಾಜಾರಾಂ ತಲ್ಲೂರು

ಹಿಂದಿನ ರೈಲ್ವೇಸ್ ವಿರುದ್ಧದ ಪಂದ್ಯದಲ್ಲಿ 10 ಓವರ್‌ಗಳಲ್ಲಿ 75 ರನ್‌ಗೆ 5 ವಿಕೆಟ್ ಕಳೆದುಕೊಂಡು ಸೋಲಿನತ್ತ ಮುಖ ಮಾಡಿದ್ದ ತಂಡಕ್ಕೆ, ಗದುಗಿನ ಅನಿರುದ್ಧ ಜೋಶಿಯ ಬಿರುಸಿನ ಆಟ (40 ಎಸೆತ, ಅಜೇಯ 64 ರನ್) ಗೆಲವು ತಂದಿತ್ತು.

ಕೆ.ಎಲ್ ರಾಹುಲ್, ಮನೀಷ್ ಪಾಂಡೆ ಮತ್ತು ಮಯಾಂಕ್ ಅಗರ್‌ವಾಲ್ ಅನುಪಸ್ಥಿತಿಯಲ್ಲಿ ಕರ್ನಾಟಕ ಉತ್ತಮ ಪ್ರದರ್ಶನ ನೀಡುತ್ತಿದೆಯಾದರೂ, ನಾಯಕ ಕರುಣ್ ನಾಯರ್, ಉಪನಾಯಕ ಪವನ್ ದೇಶಪಾಂಡೆ ಇಲ್ಲಿವರೆಗೆ ಬ್ಯಾಟಿಂಗ್ ಲಯ ಕಂಡುಕೊಂಡಿಲ್ಲ. ದೇವದತ್ತ ಪಡಿಕ್ಕಲ್ ಮಾತ್ರ ಸ್ಥಿರವಾದ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ.

ಅಭಿಮನ್ಯು, ಮಿಥುನ್, ಶ್ರೇಯಸ್ ಗೋಪಾಲ್, ರೋಹನ್ ಕದಂ, ಪ್ರವೀಣ ದುಬೆ ಉತ್ತಮ ಪ್ರದರ್ಶನ ನೀಡುತ್ತಿದ್ದಾರೆ. ಸ್ಪಿನ್ನರ್ ಕೆ.ಗೌತಮ್ ಅವರಿಂದ ತಂಡ ಹೆಚ್ಚಿನದನ್ನು ನಿರೀಕ್ಷಿಸುತ್ತಿದೆ. ಕರ್ನಾಟಕ ಹ್ಯಾಟ್ರಿಕ್ ಸಾಧನೆ ಮಾಡಲಿದೆಯೇ ಎಂಬುದು ಈಗ ಕುತೂಹಲ ಹೆಚ್ಚಲು ಕಾರಣವಾಗಿದೆ.


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿ ನಮ್ಮ ಸಾಂವಿಧಾನಿಕ ಹಕ್ಕು: ಸುಪ್ರೀಂಗೆ ಪರೋಕ್ಷ ಸಂದೇಶ ರವಾನಿಸಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...