Homeಕರ್ನಾಟಕ'ಬ್ರಾಹ್ಮಣ' ಮಾಧ್ಯಮಗಳ ಕುರಿತು ದೇವೇಗೌಡರ ಸಿಟ್ಟು ಸಮರ್ಥನೀಯವಲ್ಲವೇ?

‘ಬ್ರಾಹ್ಮಣ’ ಮಾಧ್ಯಮಗಳ ಕುರಿತು ದೇವೇಗೌಡರ ಸಿಟ್ಟು ಸಮರ್ಥನೀಯವಲ್ಲವೇ?

- Advertisement -
- Advertisement -

ನೀವು ಗೂಗಲ್‍ನಲ್ಲಿ ಸಾಕಷ್ಟು ಹುಡುಕಿದರೂ ಈ ಸುದ್ದಿ ಎರಡು ಕಡೆ ಬಿಟ್ಟರೆ ಎಲ್ಲೂ ಕಾಣುವುದಿಲ್ಲ. ಅದರಲ್ಲೂ ಮಾಧ್ಯಮಗಳ ಕ್ಯಾಮೆರಾದ ಮುಂದೆ ನಡೆದ ಈ ವಿದ್ಯಮಾನದ ವಿಡಿಯೋದ ತುಣುಕೂ ಸಹಾ ಇಂಟರ್‍ನೆಟ್‍ನಲ್ಲಿ ಸುಲಭಕ್ಕೆ ಸಿಗುವುದಿಲ್ಲ. ಆದರೆ ಸಮಕಾಲೀನ ಸಂಧರ್ಭದ ಬಹುಮುಖ್ಯ ಹೇಳಿಕೆಯಾದ ಈ ಸುದ್ದಿ ಮತ್ತು ಅದರ ಕುರಿತ ವಿಶ್ಲೇಷಣೆಯನ್ನು ಮಾಡದಿದ್ದರೆ ಅದು ಪತ್ರಿಕಾಧರ್ಮಕ್ಕೇ ಅಪಚಾರ.

ಟಿವಿ 18 ಮತ್ತು ಡೆಕ್ಕನ್ ನ್ಯೂಸ್‍ಗಳಲ್ಲಿ ಬಂದಿರುವ ಈ ಸುದ್ದಿಯ ವಿವರ ಕೆಳಕಂಡಂತಿದೆ.

ಹಾಸನ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿಕೆ, ಕನ್ನಡ ದೃಶ್ಯ ಮಾಧ್ಯಮಗಳ ಮೇಲೆ ಸಿಡಿಮಿಡಿಗೊಂಡ ಮಾಜಿ ಪ್ರಧಾನಿ, ಈ ರಾಜ್ಯದಲ್ಲಿ ಕನ್ನಡ ದೃಶ್ಯ ಮಾಧ್ಯಮಗಳು ಎಷ್ಟು ಉಪಕಾರ ಮಾಡುತ್ತಿವೆ, ಒಂದು ಪ್ರಾದೇಶಿಕ ಪಕ್ಷ ಉಳಿಯೋದಕ್ಕೆ ಎಷ್ಟು ಉಪಕಾರ ಮಾಡುತ್ತಿವೆ ನಿಮಗೆ ಧನ್ಯವಾದಗಳು. ನಾನು ಟಿವಿನೇ ನೋಡ್ಲಿಲ್ಲಾ ರೀ. ನಾನು ಭಾಷಣ ಮಾಡಿದ್ದನ್ನ ಬರೆಯಬೇಕು ಅಂತಾನೂ ಇಲ್ಲಾ ನೀವು ಬರೀರಿ ಇಲ್ಲಾ ಬಿಡಿ. ನನಗೆ 60 ವರ್ಷದ ರಾಜಕೀಯ ಜೀವನದಲ್ಲಿ ಇಷ್ಟು ಸಣ್ಣ ಮಟ್ಟಕ್ಕೆ ಟಿಬೇಟ್ ಮಾಡೋದನ್ನ ನಾನು ನೋಡಿಲ್ಲಾ ನಡೀರಿ ನಡೀರಿ. ಈ ದೇಶದ ಪ್ರಧಾನಿಯದು ಸಣ್ಣದು ಸಿಕ್ಕಲಿ ಅದು ಹೇಗೆ ಬರುತ್ತೆ? ನಾನು ಶೂದ್ರ ಅಷ್ಟೇನೇ, ಗೊತ್ತಿದೆ ನನಗೆ. ನಡೀರಿ ಎಂದು ಎದ್ದು ಮನೆಯೊಳಗೆ ಹೋದ ದೇವೇಗೌಡ. ಮಾಧ್ಯಮಗಳ ಮೇಲೆ ಬಾರೀ ಆಕ್ರೋಶಗೊಂಡ ದೇವೇಗೌಡ.
ಇದು ಸುದ್ದಿ. ಅವರ ಹೇಳಿಕೆಯನ್ನು ಸಮರ್ಥಿಸುವ ರೀತಿಯಲ್ಲಿ ಯಾವೊಂದು ಪತ್ರಿಕೆಯೂ ಇದನ್ನು ವರದಿ ಮಾಡಲಿಲ್ಲ. ಟಿವಿ 18 ಈ ಸುದ್ದಿಯನ್ನು ಹಾಕಿದ್ದರೂ, ಅದರೊಂದಿಗಿರುವ ದೇವೇಗೌಡರು ಮಾತಾಡುವ ವಿಡಿಯೋದಲ್ಲಿ ಈ ಭಾಗ ಇಲ್ಲ. ಆದರೆ, ಹಾಸನದಲ್ಲಿ ಗೌಡರು ಆಡಿದ ಈ ಮಾತನ್ನು ಅಲ್ಲಿನ ಎಲ್ಲಾ ವರದಿಗಾರರೂ ಕೇಳಿಸಿಕೊಂಡಿದ್ದಾರೆ, ರೆಕಾರ್ಡ್ ಸಹಾ ಮಾಡಿಕೊಂಡಿದ್ದಾರೆ.

ವಿಡಿಯೋ ನೋಡಿ

ಇರಲಿ, ಆದರೆ ದೇವೇಗೌಡರು ಹೇಳಿರುವ ಈ ಮಾತು ತಪ್ಪೇ? ಮಾಧ್ಯಮಗಳ ಮೇಲೆ ಈ ರೀತಿಯ ಜಾತಿ ಆರೋಪ ಮಾಡುವುದು ಸರಿಯೇ? ಕರ್ನಾಟಕದ ವಿವಿಧ ಮಾಧ್ಯಮ ಸಂಸ್ಥೆಗಳ ಮೇಲೆ ಯಾರ ಹಿಡಿತ ಇದೆ ಎಂದು ಅರಿಯಲು, ಹವ್ಯಕ ಬ್ರಾಹ್ಮಣರ ಸಮ್ಮೇಳನದಲ್ಲಿ ವಿಶ್ವೇಶ್ವರಭಟ್ ಮಾಡಿದ, ವೈರಲ್ ಆದ ಆಡಿಯೋ ಕೇಳಿದರೆ ಗೊತ್ತಾಗುತ್ತದೆ. ಕರ್ನಾಟಕದ ಪತ್ರಿಕಾ ಮಾಧ್ಯಮವನ್ನು ತಮ್ಮ ಕೈಯ್ಯಾರೆ ಹಾಳು ಮಾಡಿದ, ಅದನ್ನು ಬಿಜೆಪಿ ವಿರೋಧಿಗಳ ವಿರುದ್ಧ ಮಾಬ್ ಹಿಸ್ಟೀರಿಯಾ ಮೂಡಿಸಲು ಯತ್ನಿಸಿದವರು ಅವರು. ಇಂದು ಕನ್ನಡದ ಯಾವುದೇ ಮಾಧ್ಯಮ ಸಂಸ್ಥೆಗೆ ಹೋದರೆ ಅಲ್ಲೆಲ್ಲಾ ಹವ್ಯಕ ಬ್ರಾಹ್ಮಣ ಹುಡುಗರೇ ಕಾಣುತ್ತಾರೆ, ಇವರ ಸಂಖ್ಯೆ ಇನ್ನೂ ಹೆಚ್ಚಾಗಬೇಕು ಎಂದು ಅವರು ವಿವರವಾಗಿ ಮಾತನಾಡುತ್ತಾರೆ. ಕೆಳಹಂತದಲ್ಲಿ ಮಾತ್ರವಲ್ಲದೇ, ಕರ್ನಾಟಕದ ಇಂದಿನ ರಾಜ್ಯಮಟ್ಟದ ಹೆಚ್ಚಿನ ಪತ್ರಿಕೆಗಳು ಮತ್ತು ಚಾನೆಲ್‍ಗಳ ಮುಖ್ಯಸ್ಥರು ಬ್ರಾಹ್ಮಣರಾಗಿದ್ದಾರೆ. ಅವರಲ್ಲೂ ಶೇ.90ರಷ್ಟು ಹವ್ಯಕ ಬ್ರಾಹ್ಮಣರಾಗಿದ್ದಾರೆ.

ಹವ್ಯಕ ಬ್ರಾಹ್ಮಣರೆಂದರೆ ಗೊತ್ತಿರದವರಿಗೆ – ರಾಮಚಂದ್ರಾಪುರ ಮಠದ ರಾಘವೇಶ್ವರ ಸ್ವಾಮಿ ಪ್ರತಿನಿಧಿಸುವ ಜಾತಿ ಇದು. ಬ್ರಾಹ್ಮಣರಲ್ಲಿ ತೀರಾ ಇತ್ತೀಚಿನವರೆಗೂ ಕೃಷಿಯೇ ಪ್ರಧಾನ ಕಸುಬಾಗಿಸಿಕೊಂಡಿದ್ದ ಸಮುದಾಯವಿದು. ಇತ್ತೀಚೆಗೆ ಕಡಿಮೆಯಾಗುತ್ತಿದ್ದರೂ, ಈಗಲೂ ಕೃಷಿಯಲ್ಲಿ ತೊಡಗಿರುವವರ ಸಂಖ್ಯೆ ಗಣನೀಯವೇ ಆಗಿದೆ.
ಯಾವುದೋ ಸಾಂಧರ್ಭಿಕ ಅಥವಾ ಐತಿಹಾಸಿಕ ಕಾರಣಗಳಿಂದಾಗಿ ನಿರ್ದಿಷ್ಟ ಜಾತಿ ಮತ್ತು ಉಪಜಾತಿಗಳು ನಿರ್ದಿಷ್ಟ ಕ್ಷೇತ್ರವೊಂದರಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಅದನ್ನು ಆ ಜಾತಿಯದ್ದೇ ತಪ್ಪು ಎನ್ನಲಾಗುವುದಿಲ್ಲ. ಆದರೆ, ಅವರು ಅಲ್ಲಿದ್ದು ಏನು ಮಾಡುತ್ತಿದ್ದಾರೆ ಎಂಬುದು ಹೆಚ್ಚು ಮುಖ್ಯವಾದುದು. ನಿಸ್ಸಂದೇಹವಾಗಿ ಹೇಳಬಹುದಾದ ಒಂದು ಸಂಗತಿಯೆಂದರೆ, ಬಹುಪಾಲು ಮಾಧ್ಯಮಗಳು ಶೂದ್ರ ರಾಜಕಾರಣಿಗಳು, ಶೂದ್ರ ರಾಜಕಾರಣವನ್ನು ಹಣಿಯುತ್ತಿವೆ. ಬಿಜೆಪಿಯಲ್ಲಿ ಬೇರೆ ಬೇರೆ ಸಮುದಾಯಗಳಿಗೆ ಸೇರಿದವರು ಇದ್ದಾರಾದರೂ, ಅದು ವೈದಿಕ ಶ್ರೇಷ್ಠತೆಯನ್ನು ಎತ್ತಿಹಿಡಿಯುವ ಸಿದ್ಧಾಂತ ಮತ್ತು ರಾಜಕಾರಣ ಮಾಡುತ್ತಿರುವುದರಿಂದ, ಶೇ.90ರಷ್ಟು ಅದರ ಪರವಾಗಿ ನಿಲ್ಲುತ್ತಾರೆ. ದಲಿತ ಮುಖ್ಯಮಂತ್ರಿಯ ಪ್ರಶ್ನೆಯನ್ನು ಎತ್ತುವುದೂ ಸಹಾ ಶೂದ್ರರಾದ ಸಿದ್ದರಾಮಯ್ಯನವರನ್ನು ಹಣಿಯಲೇ ಆಗಿರುತ್ತದೆ.

ತೀರಾ ಇತ್ತೀಚೆಗಿನ ಒಂದು ಉದಾಹರಣೆ ನೀಡುವುದಾದರೆ, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯ ಮೇಲೆ ‘ಮೀಟೂ’ ಆರೋಪಗಳು ಬಂದವು. ಸರ್ವಾಜನಿಕವಾಗಿ ಚರ್ಚೆಯಾಗಿದ್ದಕ್ಕಿಂತ ಹೆಚ್ಚು ಮಾಹಿತಿ ಈ ಮಾಧ್ಯಮಗಳಲ್ಲಿರುವವರ ಕೈಯ್ಯಲ್ಲಿ ಇತ್ತು. ಅದನ್ನೊಂದು ಸುದ್ದಿಯೇ ಅಲ್ಲ ಎಂಬಂತೆ ಪಕ್ಕಕ್ಕೆ ತಳ್ಳಿದ್ದಷ್ಟೇ ಅಲ್ಲದೇ, ಆತನ ವಿರುದ್ಧ ವರದಿ ಮಾಡಬಾರದೆಂಬ ಸಂವಿಧಾನ ವಿರೋಧಿ ತೀರ್ಪು ಬಂದ ಮೇಲೆ ಅದನ್ನು ಪ್ರಶ್ನಿಸಲೂ ಹೋಗಲಿಲ್ಲ. ಸ್ವಲ್ಪ ಕಾಲದ ನಂತರ ಇಂಡಿಯನ್ ಎಕ್ಸ್ ಪ್ರೆಸ್ ಸಂಪಾದಕೀಯ ತೀರ್ಪನ್ನು ಪ್ರಶ್ನಿಸಿತು, ಇನ್ನೂ ಒಂದು ವಾರದ ನಂತರ ಪ್ರಜಾವಾಣಿ ಮತ್ತು ಡೆಕ್ಕನ್ ಹೆರಾಲ್ಡಾಗಳು ಬರೆದವು.

ಒಂದು ವೇಳೆ ಸದರಿ ವ್ಯಕ್ತಿ ಬ್ರಾಹ್ಮಣನಾಗಿರದೇ ಇದ್ದಲ್ಲಿ ಏನಾಗುತ್ತಿತ್ತು? ಆ ವ್ಯಕ್ತಿಯನ್ನು ಚುನಾವಣಾ ಕಣದಿಂದ ನಿವೃತ್ತಗೊಳಿಸುವ ಮಟ್ಟಿಗೆ ಕೂಗಾಟ ನಡೆದಿರುತ್ತಿತ್ತು. ಇಂತಹ ಒಂದಲ್ಲಾ, ಎರಡಲ್ಲಾ, ನೂರಲ್ಲಾ ಸಾವಿರ ಉದಾಹರಣೆಗಳನ್ನು ನೋಡಬಹುದು.

ಈ ಪ್ರಮಾಣದ ಜಾತಿ ರಾಜಕಾರಣವನ್ನು ಮಾಧ್ಯಮಗಳಲ್ಲಿ ಕುಳಿತಿರುವವರು ಮಾಡುತ್ತಿದ್ದಾರೆ. ಬಹಳ ಕ್ಷುದ್ರವಾದ ನಡವಳಿಕೆಯನ್ನು ಇವರೆಲ್ಲರೂ ತೋರಿಸುತ್ತಿದ್ದಾರೆ. ಇದು ಪ್ರಜಾಪ್ರಭುತ್ವದ ದೃಷ್ಟಿಯಿಂದ ಬಹಳ ಅಪಾಯಕಾರಿ. ಈ ಕುರಿತು ಚರ್ಚೆ ನಡೆಯದಿದ್ದರೆ ಅದು ಇನ್ನೂ ಅಪಾಯಕಾರಿ. ನ್ಯಾಯಪಥ-ನಮ್ಮ ಗೌರಿ ಪತ್ರಿಕೆ ಮತ್ತು https://naanugauri.com ಈ ಚರ್ಚೆಯನ್ನು ಗಂಭೀರವಾಗಿ ಮತ್ತು ಆರೋಗ್ಯಕರವಾಗಿ ನಡೆಸಲು ತೀರ್ಮಾನಿಸಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...