Homeಅಂತರಾಷ್ಟ್ರೀಯಮೋದಿ ಗೆದ್ರೆ ಒಳ್ಳೇದು ಅಂತ ಪಾಕ್ ಪ್ರಧಾನಿ ಹೇಳಿದ್ಯಾಕೆ?

ಮೋದಿ ಗೆದ್ರೆ ಒಳ್ಳೇದು ಅಂತ ಪಾಕ್ ಪ್ರಧಾನಿ ಹೇಳಿದ್ಯಾಕೆ?

- Advertisement -
- Advertisement -

ಇಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್‍ಖಾನ್ ಅವರು ಹೇಳಿದ ಒಂದು ಮಾತು ಎಲ್ಲಾ ಕಡೆ ಸದ್ದು ಮಾಡ್ತಿದೆ. ಇದು ಪಾಕಿಸ್ತಾನದ ಜೊತೆಗೆ ಮೋದಿಗಿರುವ ಮ್ಯಾಚ್ ಫಿಕ್ಸಿಂಗ್ ಅಲ್ವಾ ಎಂತಲೂ, ಮೋದಿ ಗ್ಯಾಂಗೇ ತುಕ್ಡೇ ತುಕ್ಡೇ ಗ್ಯಾಂಗ್ ಎಂತಲೂ ನೆಟ್ಟಿಗರು ಜಡಾಯಿಸುತ್ತಿದ್ದಾರೆ. ಹಾಗಾದರೆ ಅವರ ಮಾತಿನ ಅರ್ಥ ಇಷ್ಟೇನಾ?

ನಿಜವಾಗಲೂ ಅಲ್ಲ. ಇಮ್ರಾನ್‍ಖಾನ್ ಹೇಳಿರುವ ಮಾತಿನ ಮುಂದುವರೆದ ಭಾಗ ಹೀಗಿದೆ. ಒಂದು ಬಲಪಂಥೀಯ ಸರ್ಕಾರ ಇದ್ದರೆ, ಶಾಂತಿ ಮಾತುಕತೆ ಸಾಧ್ಯ, ಕಾಶ್ಮೀರದ ಕುರಿತೂ ಚರ್ಚೆ ಮಾಡಬಹುದು ಎಂದು ಅವರು ಹೇಳಿದ್ದಾರೆ. ಈ ಮಾತಿಗೆ ಅರ್ಥ ಇದೆ. ಯಾವುದೇ ಎರಡು ದೇಶಗಳ ನಡುವೆ ಬಹಳ ಟೆನ್ಶನ್ ಇದ್ದರೆ, ಎರಡೂ ದೇಶಗಳಲ್ಲೂ ಅದರ ದುರುಪಯೋಗ ಮಾಡಿಕೊಳ್ಳುವ ಶಕ್ತಿಗಳು ಇದ್ದೇ ಇರುತ್ತವೆ. ಆ ದೇಶವನ್ನು ತೋರಿಸಿ ಇವರು, ಈ ದೇಶವನ್ನು ತೋರಿಸಿ ಅವರು ಹುಸಿ ರಾಷ್ಟ್ರೀಯವಾದ ಬಿತ್ತುತ್ತಾ ಇರುತ್ತಾರೆ. ದೇಶದೊಳಗೆ ತಾವು ಮಾಡುವ ಎಲ್ಲಾ ಅನ್ಯಾಯಗಳಿಗೂ ಅದನ್ನೊಂದು ಗುರಾಣಿಯಾಗಿ ಬಳಸುತ್ತಾ ಇರುತ್ತಾರೆ.

ಒಂದು ವೇಳೆ ಎರಡೂ ದೇಶಗಳಲ್ಲಿನ ಬಹುಸಂಖ್ಯಾತ ಜನರು ಭಿನ್ನ ಭಿನ್ನ ಧರ್ಮಕ್ಕೆ ಸೇರಿದ್ದರಂತೂ ಮುಗಿದೇ ಹೋಯಿತು, ಈ ನಕಲಿ ರಾಷ್ಟ್ರೀಯವಾದಿಗಳಿಗೆ ಹಬ್ಬ. ಪಾಕಿಸ್ತಾನ ಅಭಿವೃದ್ಧಿ ಹೊಂದದೇ ಈ ರೀತಿ ಹಾಳಾಗಿ ಹೋಗಿರುವುದರಲ್ಲಿ ಇದರ ಪ್ರಮುಖ ಪಾತ್ರ ಇದೆ. ಒಂದು ವೇಳೆ ಎರಡೂ ಕಡೆ, ಅಥವಾ ಒಂದು ಕಡೆ ಈ ನಕಲಿ ರಾಷ್ಟ್ರೀಯವಾದಿಗಳೇ ಅಧಿಕಾರಕ್ಕೆ ಬಂದು, ಅವರೇ ಮಾತುಕತೆಯಲ್ಲಿ ಭಾಗಿಯಾದರೆ?

ಈ ಸನ್ನಿವೇಶವನ್ನು ಊಹಿಸಿಕೊಳ್ಳಿ. ಇಂತಹ ಹುಸಿ ರಾಷ್ಟ್ರೀಯವಾದಿಗಳಲ್ಲದೇ, ಬೇರೆ ಒಂದು ಪಕ್ಷ ಅಧಿಕಾರದಲ್ಲಿರುತ್ತದೆ. ಅದು ಆ ಇನ್ನೊಂದು ರಾಷ್ಟ್ರದ ಜೊತೆಗೆ ಮಾತುಕತೆಗೆ ಕೂರುತ್ತದೆ. ಮಾತುಕತೆ ಎಂದ ಮೇಲೆ ಕೊಟ್ಟು ತೆಗೆದುಕೊಳ್ಳುವುದು ಇರುತ್ತದೆ. ಅದು ಸಾಧ್ಯವಾಗುವುದೇ ಇಲ್ಲ. ಏಕೆಂದರೆ ಅವರೇನಾದರೂ ಸ್ವಲ್ಪ ಆ ಕಡೆ ಈ ಕಡೆ ಮಾತಾಡಿದರೂ, ಶುರುವಾಗುತ್ತದೆ ‘ಇವರು ದೇಶದ ಹಿತಾಸಕ್ತಿಯನ್ನು ಬಲಿ ಕೊಟ್ಟರು. ಇವರು ಆ ಇನ್ನೊಂದು ದೇಶದ ಏಜೆಂಟರು’ ಇತ್ಯಾದಿ. ಒಂದು ವೇಳೆ ನಕಲಿ ರಾಷ್ಟ್ರೀಯವಾದಿಗಳೇ ಅಧಿಕಾರದಲ್ಲಿದ್ದರೆ? ಆ ಅಪಾಯ ಅಷ್ಟೊಂದು ಇರುವುದಿಲ್ಲ. ಅವರಿಗಿಂತ ಉಗ್ರ ನಕಲಿ ರಾಷ್ಟ್ರೀಯವಾದಿಗಳು ಯಾರಾದರೂ ಇದ್ದರೆ ಅವರು ಸ್ವಲ್ಪ ಕೂಗಾಡಬಹುದು ಅಷ್ಟೆ. ಈಗ ಮೋದಿ ವಿರುದ್ಧ ಪ್ರವೀಣ್ ತೊಗಾಡಿಯಾ ಕೂಗಾಡುತ್ತಿಲ್ಲವೇ? ಹಾಗೆ.

ವಾಜಪೇಯಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ದಿನಗಳನ್ನು ನೆನಪಿಸಿಕೊಳ್ಳಿ. ಯುದ್ಧಾನಂತರವೂ, ಯುದ್ಧಕ್ಕೆ ಕಾರಣನಾದ ಜನರಲ್ ಮುಷರಫ್ ಜೊತೆಗೇ ಮಾತುಕತೆ ನಡೆಸಿದರು. ಸಂಝೋತಾ ಎಕ್ಸ್‍ಪ್ರೆಸ್ ಬಿಟ್ಟರು. ಕಾಶ್ಮೀರವೂ ಚೆನ್ನಾಗಿತ್ತು.

ಆದರೆ ಇಮ್ರಾನ್ ಖಾನ್ ಮೋಸ ಹೋಗುತ್ತಿರುವುದು ಇಲ್ಲೇ. ಮೋದಿ ಮತ್ತು ವಾಜಪೇಯಿ ಒಂದೇ ಅಲ್ಲ. ಯಾವ ಕಾರಣಕ್ಕೂ ಎರಡೂ ದೇಶಗಳ ನಡುವಿನ ಸಮಸ್ಯೆ ಬಗೆಹರಿಯುವುದು ಅವರಿಗೆ ಬೇಕಿಲ್ಲ. ಆದರೂ ಒಂದು ಅವಕಾಶ ಇದೆ. ಏಕೆಂದರೆ, ಮೋದಿಯ ಪರಮಾಪ್ತರಾದ ಅಂಬಾನಿ ಮತ್ತು ಅದಾನಿಗಳಿಗೆ ಪಾಕಿಸ್ತಾನದಲ್ಲಿ ವ್ಯಾವಹಾರಿಕ ಸಂಬಂಧದ ಅಗತ್ಯವಿದೆ. ಚುನಾವಣೆ ಮುಗಿದ ನಂತರ ಪಾಕಿಸ್ತಾನವನ್ನು ಬಯ್ದು ಏನು ಪ್ರಯೋಜನ? ಆಗ ಬಿಸಿನೆಸ್ ಡೀಲ್ ಮಾಡಿಕೊಳ್ಳುವುದು. ನಂತರ ದೇಶದೊಳಗೆ ಜನವಿರೋಧಿ ಕೆಲಸವನ್ನೇ ಮುಂದುವರೆಸುವುದು. ಮತ್ತೆ ಚುನಾವಣೆ ಬರುವ ಹೊತ್ತಿಗೆ ‘ರಾಷ್ಟ್ರೀಯವಾದ’ ತರುವುದು.

ಇಲ್ಲೇ ಇನ್ನೊಂದು ಮಾತನ್ನೂ ಹೇಳಬೇಕು. ಇಮ್ರಾನ್‍ಖಾನ್ ಸಹಾ ಎಲ್ಲಿಯವರೆಗೆ ತಮ್ಮಲ್ಲಿ ಉಗ್ರರಿಲ್ಲ, ಉಗ್ರರಿಗೆ ಪ್ರೋತ್ಸಾಹ ಕೊಡುತ್ತಿಲ್ಲ ಎಂಬ ಸುಳ್ಳುಗಳನ್ನು ಹೇಳುತ್ತಿರುತ್ತಾರೋ ಅಲ್ಲಿಯವರೆಗೆ ಅವರ ಬಗ್ಗೆಯೂ ನಂಬಿಕೆ ಬರಲ್ಲ. ಅವರ ನೆಲದಿಂದ ಭಾರತದಲ್ಲಿ ಅಶಾಂತಿ, ಹಿಂಸೆಗಳಿಗೆ ಕಾರಣರಾಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವ ತನಕ, ಭಾರತದ ಮಟ್ಟಿಗೆ ಅವರೂ ಸಹಾ ಇನ್ನೊಬ್ಬ ಪಾಕ್ ಪ್ರಧಾನಿ ಅಷ್ಟೇ.

ಇವೆಲ್ಲಾ ಕಾರಣಗಳಿಂದ ಭಾರತ ಮತ್ತು ಪಾಕಿಸ್ತಾನಗಳು ಪರಸ್ಪರ ಸ್ನೇಹಭಾವದಿಂದ ಅಭಿವೃದ್ಧಿಯ ಕಡೆಗೆ ಗಮನ ಕೊಡುವ ವಿಚಾರ ಇನ್ನೂ ದೂರವೇ ಉಳಿದಿವೆ ಎಂಬುದೇ ವಿಷಾದಕರ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...