Homeಅಂತರಾಷ್ಟ್ರೀಯಮೋದಿ ಗೆದ್ರೆ ಒಳ್ಳೇದು ಅಂತ ಪಾಕ್ ಪ್ರಧಾನಿ ಹೇಳಿದ್ಯಾಕೆ?

ಮೋದಿ ಗೆದ್ರೆ ಒಳ್ಳೇದು ಅಂತ ಪಾಕ್ ಪ್ರಧಾನಿ ಹೇಳಿದ್ಯಾಕೆ?

- Advertisement -
- Advertisement -

ಇಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್‍ಖಾನ್ ಅವರು ಹೇಳಿದ ಒಂದು ಮಾತು ಎಲ್ಲಾ ಕಡೆ ಸದ್ದು ಮಾಡ್ತಿದೆ. ಇದು ಪಾಕಿಸ್ತಾನದ ಜೊತೆಗೆ ಮೋದಿಗಿರುವ ಮ್ಯಾಚ್ ಫಿಕ್ಸಿಂಗ್ ಅಲ್ವಾ ಎಂತಲೂ, ಮೋದಿ ಗ್ಯಾಂಗೇ ತುಕ್ಡೇ ತುಕ್ಡೇ ಗ್ಯಾಂಗ್ ಎಂತಲೂ ನೆಟ್ಟಿಗರು ಜಡಾಯಿಸುತ್ತಿದ್ದಾರೆ. ಹಾಗಾದರೆ ಅವರ ಮಾತಿನ ಅರ್ಥ ಇಷ್ಟೇನಾ?

ನಿಜವಾಗಲೂ ಅಲ್ಲ. ಇಮ್ರಾನ್‍ಖಾನ್ ಹೇಳಿರುವ ಮಾತಿನ ಮುಂದುವರೆದ ಭಾಗ ಹೀಗಿದೆ. ಒಂದು ಬಲಪಂಥೀಯ ಸರ್ಕಾರ ಇದ್ದರೆ, ಶಾಂತಿ ಮಾತುಕತೆ ಸಾಧ್ಯ, ಕಾಶ್ಮೀರದ ಕುರಿತೂ ಚರ್ಚೆ ಮಾಡಬಹುದು ಎಂದು ಅವರು ಹೇಳಿದ್ದಾರೆ. ಈ ಮಾತಿಗೆ ಅರ್ಥ ಇದೆ. ಯಾವುದೇ ಎರಡು ದೇಶಗಳ ನಡುವೆ ಬಹಳ ಟೆನ್ಶನ್ ಇದ್ದರೆ, ಎರಡೂ ದೇಶಗಳಲ್ಲೂ ಅದರ ದುರುಪಯೋಗ ಮಾಡಿಕೊಳ್ಳುವ ಶಕ್ತಿಗಳು ಇದ್ದೇ ಇರುತ್ತವೆ. ಆ ದೇಶವನ್ನು ತೋರಿಸಿ ಇವರು, ಈ ದೇಶವನ್ನು ತೋರಿಸಿ ಅವರು ಹುಸಿ ರಾಷ್ಟ್ರೀಯವಾದ ಬಿತ್ತುತ್ತಾ ಇರುತ್ತಾರೆ. ದೇಶದೊಳಗೆ ತಾವು ಮಾಡುವ ಎಲ್ಲಾ ಅನ್ಯಾಯಗಳಿಗೂ ಅದನ್ನೊಂದು ಗುರಾಣಿಯಾಗಿ ಬಳಸುತ್ತಾ ಇರುತ್ತಾರೆ.

ಒಂದು ವೇಳೆ ಎರಡೂ ದೇಶಗಳಲ್ಲಿನ ಬಹುಸಂಖ್ಯಾತ ಜನರು ಭಿನ್ನ ಭಿನ್ನ ಧರ್ಮಕ್ಕೆ ಸೇರಿದ್ದರಂತೂ ಮುಗಿದೇ ಹೋಯಿತು, ಈ ನಕಲಿ ರಾಷ್ಟ್ರೀಯವಾದಿಗಳಿಗೆ ಹಬ್ಬ. ಪಾಕಿಸ್ತಾನ ಅಭಿವೃದ್ಧಿ ಹೊಂದದೇ ಈ ರೀತಿ ಹಾಳಾಗಿ ಹೋಗಿರುವುದರಲ್ಲಿ ಇದರ ಪ್ರಮುಖ ಪಾತ್ರ ಇದೆ. ಒಂದು ವೇಳೆ ಎರಡೂ ಕಡೆ, ಅಥವಾ ಒಂದು ಕಡೆ ಈ ನಕಲಿ ರಾಷ್ಟ್ರೀಯವಾದಿಗಳೇ ಅಧಿಕಾರಕ್ಕೆ ಬಂದು, ಅವರೇ ಮಾತುಕತೆಯಲ್ಲಿ ಭಾಗಿಯಾದರೆ?

ಈ ಸನ್ನಿವೇಶವನ್ನು ಊಹಿಸಿಕೊಳ್ಳಿ. ಇಂತಹ ಹುಸಿ ರಾಷ್ಟ್ರೀಯವಾದಿಗಳಲ್ಲದೇ, ಬೇರೆ ಒಂದು ಪಕ್ಷ ಅಧಿಕಾರದಲ್ಲಿರುತ್ತದೆ. ಅದು ಆ ಇನ್ನೊಂದು ರಾಷ್ಟ್ರದ ಜೊತೆಗೆ ಮಾತುಕತೆಗೆ ಕೂರುತ್ತದೆ. ಮಾತುಕತೆ ಎಂದ ಮೇಲೆ ಕೊಟ್ಟು ತೆಗೆದುಕೊಳ್ಳುವುದು ಇರುತ್ತದೆ. ಅದು ಸಾಧ್ಯವಾಗುವುದೇ ಇಲ್ಲ. ಏಕೆಂದರೆ ಅವರೇನಾದರೂ ಸ್ವಲ್ಪ ಆ ಕಡೆ ಈ ಕಡೆ ಮಾತಾಡಿದರೂ, ಶುರುವಾಗುತ್ತದೆ ‘ಇವರು ದೇಶದ ಹಿತಾಸಕ್ತಿಯನ್ನು ಬಲಿ ಕೊಟ್ಟರು. ಇವರು ಆ ಇನ್ನೊಂದು ದೇಶದ ಏಜೆಂಟರು’ ಇತ್ಯಾದಿ. ಒಂದು ವೇಳೆ ನಕಲಿ ರಾಷ್ಟ್ರೀಯವಾದಿಗಳೇ ಅಧಿಕಾರದಲ್ಲಿದ್ದರೆ? ಆ ಅಪಾಯ ಅಷ್ಟೊಂದು ಇರುವುದಿಲ್ಲ. ಅವರಿಗಿಂತ ಉಗ್ರ ನಕಲಿ ರಾಷ್ಟ್ರೀಯವಾದಿಗಳು ಯಾರಾದರೂ ಇದ್ದರೆ ಅವರು ಸ್ವಲ್ಪ ಕೂಗಾಡಬಹುದು ಅಷ್ಟೆ. ಈಗ ಮೋದಿ ವಿರುದ್ಧ ಪ್ರವೀಣ್ ತೊಗಾಡಿಯಾ ಕೂಗಾಡುತ್ತಿಲ್ಲವೇ? ಹಾಗೆ.

ವಾಜಪೇಯಿ ಕೇಂದ್ರದಲ್ಲಿ ಅಧಿಕಾರದಲ್ಲಿದ್ದ ದಿನಗಳನ್ನು ನೆನಪಿಸಿಕೊಳ್ಳಿ. ಯುದ್ಧಾನಂತರವೂ, ಯುದ್ಧಕ್ಕೆ ಕಾರಣನಾದ ಜನರಲ್ ಮುಷರಫ್ ಜೊತೆಗೇ ಮಾತುಕತೆ ನಡೆಸಿದರು. ಸಂಝೋತಾ ಎಕ್ಸ್‍ಪ್ರೆಸ್ ಬಿಟ್ಟರು. ಕಾಶ್ಮೀರವೂ ಚೆನ್ನಾಗಿತ್ತು.

ಆದರೆ ಇಮ್ರಾನ್ ಖಾನ್ ಮೋಸ ಹೋಗುತ್ತಿರುವುದು ಇಲ್ಲೇ. ಮೋದಿ ಮತ್ತು ವಾಜಪೇಯಿ ಒಂದೇ ಅಲ್ಲ. ಯಾವ ಕಾರಣಕ್ಕೂ ಎರಡೂ ದೇಶಗಳ ನಡುವಿನ ಸಮಸ್ಯೆ ಬಗೆಹರಿಯುವುದು ಅವರಿಗೆ ಬೇಕಿಲ್ಲ. ಆದರೂ ಒಂದು ಅವಕಾಶ ಇದೆ. ಏಕೆಂದರೆ, ಮೋದಿಯ ಪರಮಾಪ್ತರಾದ ಅಂಬಾನಿ ಮತ್ತು ಅದಾನಿಗಳಿಗೆ ಪಾಕಿಸ್ತಾನದಲ್ಲಿ ವ್ಯಾವಹಾರಿಕ ಸಂಬಂಧದ ಅಗತ್ಯವಿದೆ. ಚುನಾವಣೆ ಮುಗಿದ ನಂತರ ಪಾಕಿಸ್ತಾನವನ್ನು ಬಯ್ದು ಏನು ಪ್ರಯೋಜನ? ಆಗ ಬಿಸಿನೆಸ್ ಡೀಲ್ ಮಾಡಿಕೊಳ್ಳುವುದು. ನಂತರ ದೇಶದೊಳಗೆ ಜನವಿರೋಧಿ ಕೆಲಸವನ್ನೇ ಮುಂದುವರೆಸುವುದು. ಮತ್ತೆ ಚುನಾವಣೆ ಬರುವ ಹೊತ್ತಿಗೆ ‘ರಾಷ್ಟ್ರೀಯವಾದ’ ತರುವುದು.

ಇಲ್ಲೇ ಇನ್ನೊಂದು ಮಾತನ್ನೂ ಹೇಳಬೇಕು. ಇಮ್ರಾನ್‍ಖಾನ್ ಸಹಾ ಎಲ್ಲಿಯವರೆಗೆ ತಮ್ಮಲ್ಲಿ ಉಗ್ರರಿಲ್ಲ, ಉಗ್ರರಿಗೆ ಪ್ರೋತ್ಸಾಹ ಕೊಡುತ್ತಿಲ್ಲ ಎಂಬ ಸುಳ್ಳುಗಳನ್ನು ಹೇಳುತ್ತಿರುತ್ತಾರೋ ಅಲ್ಲಿಯವರೆಗೆ ಅವರ ಬಗ್ಗೆಯೂ ನಂಬಿಕೆ ಬರಲ್ಲ. ಅವರ ನೆಲದಿಂದ ಭಾರತದಲ್ಲಿ ಅಶಾಂತಿ, ಹಿಂಸೆಗಳಿಗೆ ಕಾರಣರಾಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳುವ ತನಕ, ಭಾರತದ ಮಟ್ಟಿಗೆ ಅವರೂ ಸಹಾ ಇನ್ನೊಬ್ಬ ಪಾಕ್ ಪ್ರಧಾನಿ ಅಷ್ಟೇ.

ಇವೆಲ್ಲಾ ಕಾರಣಗಳಿಂದ ಭಾರತ ಮತ್ತು ಪಾಕಿಸ್ತಾನಗಳು ಪರಸ್ಪರ ಸ್ನೇಹಭಾವದಿಂದ ಅಭಿವೃದ್ಧಿಯ ಕಡೆಗೆ ಗಮನ ಕೊಡುವ ವಿಚಾರ ಇನ್ನೂ ದೂರವೇ ಉಳಿದಿವೆ ಎಂಬುದೇ ವಿಷಾದಕರ ಸಂಗತಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...