Homeಮುಖಪುಟ‘ರಿಪಬ್ಲಿಕ್ ಟಿವಿಯನ್ನು ಸಸ್ಪೆಂಡ್ ಮಾಡಿ’- ಇಂಡಿಯನ್ ಬ್ರಾಡ್‌ಕಾಸ್ಟಿಂಗ್ ಫೌಂಡೇಶನ್‌ಗೆ ಒತ್ತಾಯ

‘ರಿಪಬ್ಲಿಕ್ ಟಿವಿಯನ್ನು ಸಸ್ಪೆಂಡ್ ಮಾಡಿ’- ಇಂಡಿಯನ್ ಬ್ರಾಡ್‌ಕಾಸ್ಟಿಂಗ್ ಫೌಂಡೇಶನ್‌ಗೆ ಒತ್ತಾಯ

- Advertisement -
- Advertisement -

ರಿಪಬ್ಲಿಕ್ ಟಿವಿ ಪ್ರಧಾನ ಸಂಪಾದಕ ಅರ್ನಾಬ್ ಗೋಸ್ವಾಮಿ ಮತ್ತು ಬಾರ್ಕ್‌‌ನ ಮಾಜಿ ಸಿಇಒ ಪಾರ್ಥೋ ದಾಸ್‌ಗುಪ್ತಾ ನಡುವಿನ ವಾಟ್ಸಾಪ್ ಚಾಟ್‌ಗಳು ಬಹಿರಂಗವಾಗಿದ್ದು, ಅದರಲ್ಲಿನ ಮಾತುಕತೆ ಭಾರಿ ವಿವಾದಕ್ಕೀಡಾಗಿದೆ. ಈ ಬಗ್ಗೆ ಜನವರಿ 18 ರಂದು ಹೇಳಿಕೆ ಬಿಡುಗಡೆ ಮಾಡಿರುವ ನ್ಯೂಸ್ ಬ್ರಾಡ್‌‌ಕಾಸ್ಟ್ ಅಸೋಸಿಯೇಷನ್(NBA), “ರೇಟಿಂಗ್‌ಗಳನ್ನು ತಿರುಚುವಲ್ಲಿ ಇವರಿಬ್ಬರ ಕೈವಾಡವಿರುವುದು ಈ ವಾಟ್ಸಪ್ ಚಾಟ್‌ಗಳಿಂದ ದೃಡಪಟ್ಟಿದೆಯಾದ್ದರಿಂದ ಭಾರತೀಯ ಬ್ರಾಡ್‌ಕಾಸ್ಟಿಂಗ್ ಫೌಂಡೇಷನ್‌ನಿಂದ ರಿಪಬ್ಲಿಕ್ ಟಿವಿಯನ್ನು ಹೊರಹಾಕಬೇಕು” ಎಂದು ಒತ್ತಾಯಿಸಿದೆ.

NBA ಪತ್ರಿಕಾ ಪ್ರಕಟಣೆಯು, ತಿಂಗಳು ತಿಂಗಳು ಇತರ ಚಾನೆಲ್‌ಗಳ ರೇಟಿಂಗ್‌ಳನ್ನು ತಿರುಚುವ ಮುಖಾಂತರ ರಿಪಬ್ಲಿಕ್ ಟಿವಿಗೆ ಪ್ರಯೋಜನ ಮಾಡಿಕೊಡಲಾಗಿದೆ. ಅರ್ನಾಬ್ ಮತ್ತು ಪಾರ್ಥೋ ದಾಸ್‌ಗುಪ್ತಾ ನಡುವೆ ಸಂದೇಶಗಳನ್ನು ವಿನಿಮಯ ಮಾಡಿಕೊಳ್ಳುವುದನ್ನು ನೋಡಿ ಆಘಾತವಾಯಿತು ಎಂದು ಅದು ಆತಂಕ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಸುಶಾಂತ್‌ ಸಿಂಗ್ ಕುರಿತು ವರದಿ: ರಿಪಬ್ಲಿಕ್‌ಟಿವಿ ಮತ್ತು ಟೈಮ್ಸ್‌ ನೌ‌ಗೆ ಛೀಮಾರಿ ಹಾಕಿದ ಬಾಂಬೆ ಹೈಕೋರ್ಟ್

ಈ ವಿಷಯದ ಬಗ್ಗೆ ನ್ಯಾಯಾಲಯ ಆದೇಶ ನೀಡುವವರೆಗೂ ಟಿವಿಯನ್ನು ಬಾರ್ಕ್ ರೇಟಿಂಗ್ ವ್ಯವಸ್ಥೆಯಿಂದ ಹೊರಗಿಡುವಂತೆ ಅಸೋಸಿಯೇಷನ್ ಕರೆ ನೀಡಿದೆ. “ರೇಟಿಂಗ್‌ಗಳ ತಿರುಚುವಿಕೆಗೆ ಸಂಬಂಧಿಸಿ ಪ್ರಕರಣವು ನ್ಯಾಯಾಲಯದಲ್ಲಿ ಬಾಕಿ ಇರುವವರೆಗೆ ರಿಪಬ್ಲಿಕ್ ಟಿವಿಯನ್ನು ಭಾರತೀಯ ಬ್ರಾಡ್‌ಕಾಸ್ಟಿಂಗ್ ಫೌಂಡೇಷನ್‌‌‌ ಸದಸ್ಯತ್ವವನ್ನು ತಕ್ಷಣದಿಂದಲೇ ಅಮಾನತುಗೊಳಿಸಬೇಕೆಂದು” ಅದು ಹೇಳಿದೆ.

“ಪ್ರಸ್ತುತ ವಾಟ್ಸಾಪ್ ಸಂದೇಶಗಳು ರೇಟಿಂಗ್‌ಗಳ ತಿರುಚುವಿಕೆಯನ್ನು ಪ್ರತಿಬಿಂಬಿಸುತ್ತದೆ ಮಾತ್ರವಲ್ಲದೆ, ವಿನಿಮಯವಾದ ಸಂದೇಶಗಳಲ್ಲಿ ಕಾರ್ಯದರ್ಶಿಗಳ ನೇಮಕ, ಕ್ಯಾಬಿನೆಟ್ ಪುನರ್ರಚನೆ, ಪ್ರಧಾನ ಮಂತ್ರಿಗಳ ಕಚೇರಿಗೆ ಪ್ರವೇಶ ಮತ್ತು ಮಾಹಿತಿ ಮತ್ತು ಪ್ರಸಾರ ಸಚಿವಾಲಯದ ಅಧಿಕಾರಿಗಳನ್ನು ನಿಯಂತ್ರಿಸುವ ಶಕ್ತಿಯಿದೆ ಎಂದು ತೋರಿಸುತ್ತದೆ” ಎಂದು ಅದು ಹೇಳಿದೆ.

ಬಾರ್ಕ್‌ನ‌ ತಿರುಚಿದ ಡೇಟಾದಿಂದಾಗಿ ಸುದ್ದಿ ಪ್ರಸಾರಕರಿಗೆ ಅಪಾರ ಆರ್ಥಿಕ ನಷ್ಟವಾಗಿದೆ. ಆದ್ದರಿಂದ ಕೌನ್ಸಿಲ್ ಇದಕ್ಕೆ ವಿವರಣೆಯನ್ನು ನೀಡಬೇಕು ಎಂದು NBA ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಆಕ್ಷೇಪಾರ್ಹ ಕಾರ್ಯಕ್ರಮ: ರಿಪಬ್ಲಿಕ್ ಟಿವಿಗೆ 20,000 ಪೌಂಡ್ ದಂಡ ವಿಧಿಸಿದ ಬ್ರಿಟನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...