Homeಮುಖಪುಟತಮಿಳುನಾಡು ಚುನಾವಣೆ: ಡಿಎಂಕೆ ಒಕ್ಕೂಟಕ್ಕೆ ಸ್ಪಷ್ಟ ಬಹುಮತವೆಂದ ABP-ಸಿ ವೋಟರ್ ಸಮೀಕ್ಷೆ

ತಮಿಳುನಾಡು ಚುನಾವಣೆ: ಡಿಎಂಕೆ ಒಕ್ಕೂಟಕ್ಕೆ ಸ್ಪಷ್ಟ ಬಹುಮತವೆಂದ ABP-ಸಿ ವೋಟರ್ ಸಮೀಕ್ಷೆ

ಕಳೆದ ಲೋಕಸಭಾ ಚುನಾವಣೆಯಲ್ಲಿಯೂ ಡಿಎಂಕೆ ಮೈತ್ರಿಕೂಟವು ಒಟ್ಟು 39 ಸ್ಥಾನಗಳಲ್ಲಿ 38 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.

- Advertisement -
- Advertisement -

ಈ ವರ್ಷದ ಮೇ ತಿಂಗಳಿನಲ್ಲಿ ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದೆ. ಜಯಲಲಿತಾ ಮತ್ತು ಕರುಣಾನಿಧಿಯವರಿಲ್ಲದೆ ನಡೆಯುತ್ತಿರುವ ಮೊದಲ ಮಹಾ ಚುನಾವಣೆ ಇದಾಗಿದ್ದು ಆಡಳಿತರೂಡ AIMDMK ಒಕ್ಕೂಟವನ್ನು ಕಿತ್ತೊಗೆದು ಡಿಎಂಕೆ ಒಕ್ಕೂಟ ಸ್ಪಷ್ಟ ಬಹುಮತ ಗಳಿಸಲಿದೆ ಎಂದು ಚುನಾವಣಾ ಪೂರ್ವ ಸಮೀಕ್ಷೆಗಳು ಭವಿಷ್ಯ ನುಡಿದಿವೆ.

234 ಸದಸ್ಯ ಬಲದ ತಮಿಳುನಾಡು ವಿಧಾನಸಭೆಯಲ್ಲಿ ಡಿಎಂಕೆ-ಕಾಂಗ್ರೆಸ್ ಒಕ್ಕೂಟವು (ಯುಪಿಎ) 162 ಕ್ಷೇತ್ರಗಳಲ್ಲಿ ಜಯಗಳಿಸಲಿದೆ ಎಂದು ABP-ಸಿ ವೋಟರ್ ಸಮೀಕ್ಷೆ ಹೇಳಿದೆ. ಆಡಳಿತರೂಡ AIMDMK-ಬಿಜೆಪಿ (ಎನ್‌ಡಿಎ) ಒಕ್ಕೂಟವೇ ಕೇವಲ 64 ಸ್ಥಾನಗಳಿಗೆ ಕುಸಿಯಲಿದೆ ಎನ್ನಲಾಗಿದೆ.

2016 ರ ಚುನಾವಣೆಯಲ್ಲಿ ಆಡಳಿತರೂಡ ಎನ್‌ಡಿಎ 136 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದರೆ ಯುಪಿಎ 98 ಕ್ಷೇತ್ರಗಳಿಗೆ ತೃಪ್ತಿಪಟ್ಟುಕೊಂಡಿತ್ತು. ಈ ಬಾರಿಯ ಒಟ್ಟು ಮತಗಳಿಕೆಯಲ್ಲಿ ಡಿಎಂಕೆ ಒಕ್ಕೂಟವು ಶೇ.1.7 ರಷ್ಟು ಮತಗಳಿಕೆಯನ್ನು ಹೆಚ್ಚಿಸಿಕೊಳ್ಳಲಿದೆ ಎಂದು ಸಮೀಕ್ಷೆ ಹೇಳಿದೆ. 2016ರಲ್ಲಿ ಶೇ. 39.4 ರಷ್ಟು ಮತ ಪಡೆದಿದ್ದ ಅದು ಈ ಬಾರಿ ಶೇ. 41.1 ಗಳಿಸಲಿದೆ ಎನ್ನಲಾಗಿದೆ.

AIMDMK ಒಕ್ಕೂಟವು ಐದು ವರ್ಷಗಳ ಆಡಳಿತ ಪೂರೈಸುತ್ತಿದೆ. ಈ ಐದು ವರ್ಷಗಳಲ್ಲಿ ಹೇಳಿಕೊಳ್ಳುವಂತಹ ಗಮನಾರ್ಹ ಸಾಧನೆ ಕಂಡುಬಂದಿಲ್ಲ. ಅಲ್ಲದೇ ಅದು ತನ್ನೊಳಗೆ ಓ ಪನ್ನೀರಸೆಲ್ವಂ ಮತ್ತು ಎಡಪ್ಪಾಡಿ ಪಳನಿಸ್ವಾಮಿ ಗುಂಪುಗಳಾಗಿ ಒಡೆದುಹೋಗಿದೆ. ಹಾಗಾಗಿ ವಿಭಜಿತ AIMDMK ಒಕ್ಕೂಟದ ಎದುರು ಬಲಿಷ್ಠ ಡಿಎಂಕೆಗೆ ಜಯ ಸುಲಭ ಎಂದು ಸಮೀಕ್ಷೆ ಹೇಳಿದೆ.

ಕಳೆದ ಚುನಾವಣೆಯಂತೆಯೇ ಈ ಬಾರಿಯು AIMDMK ಒಕ್ಕೂಟವು ಬಿಜೆಪಿ ಜೊತೆ ಮೈತ್ರಿ ಮುಂದುವರೆಸುದಾಗಿದೆ ಘೋಷಿಸಿದೆ. ವೆಟ್ರಿವೇಲ್ ಯಾತ್ರೆಯ ಸಂಬಂಧ ಈ ಎರಡೂ ಪಕ್ಷಗಳ ನಡುವೆ ಭಿನ್ನಾಭಿಪ್ರಾಯವೇರ್ಪಟ್ಟಿತ್ತು. ಅದನ್ನು ಬಗೆಹರಿಸಿಕೊಂಡು ಒಟ್ಟಿಗೆ ಚುನಾವಣೆ ಎದುರಿಸಲು ಅವು ನಿರ್ಧರಿಸಿವೆ. ಅದೇ ರೀತಿಯಲ್ಲಿ ಡಿಎಂಕೆ ಮತ್ತು ಕಾಂಗ್ರೆಸ್ ನಡುವಿನ ಮೈತ್ರಿ ಸಹ ಮುಂದುವರೆಯಲಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಈ ಮೈತ್ರಿಯೂ ಒಟ್ಟು 39 ಸ್ಥಾನಗಳಲ್ಲಿ 38 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿತ್ತು.


ಇದನ್ನೂ ಓದಿ: ’ತಲೆಗಳನ್ನು ಕತ್ತರಿಸುವ ಸಮಯ’ – ಹಿಂಸಾಚಾರಕ್ಕೆ ಕರೆ ನೀಡಿದ ನಟಿ ಕಂಗನಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...