Homeಮುಖಪುಟರಾಮ ಮಂದಿರ ದೇಣಿಗೆ ಸಂಗ್ರಹ ಮೆರವಣಿಗೆಯಲ್ಲಿ ಘರ್ಷಣೆ: ಗುಜರಾತಿನಲ್ಲಿ 40 ಜನರ ಬಂಧನ

ರಾಮ ಮಂದಿರ ದೇಣಿಗೆ ಸಂಗ್ರಹ ಮೆರವಣಿಗೆಯಲ್ಲಿ ಘರ್ಷಣೆ: ಗುಜರಾತಿನಲ್ಲಿ 40 ಜನರ ಬಂಧನ

- Advertisement -
- Advertisement -

ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ಭಾನುವಾರ ನಡೆದ ಹಿಂಸಾಚಾರದ ಬಗ್ಗೆ ತನಿಖೆ ನಡೆಸಲು ಮೂರು ಪ್ರಕರಣಗಳನ್ನು ದಾಖಲಿಸಿದ ನಂತರ, ಕನಿಷ್ಠ 40 ಜನರನ್ನು ಬಂಧಿಸಲಾಗಿದೆ. ಕೊಲೆ, ಗಲಭೆ, ಅಗ್ನಿಸ್ಪರ್ಶ ಮತ್ತು ಇತರ ಪಿತೂರಿ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕೆ ಹಣ ಸಂಗ್ರಹಿಸುವ ಮೆರವಣಿಗೆಯಲ್ಲಿ ಭಾನುವಾರ ಎರಡು ಸಮುದಾಯಗಳ ಸದಸ್ಯರ ನಡುವೆ ಘರ್ಷಣೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಲಪಂಥೀಯ ಗುಂಪು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಆಯೋಜಿಸಿದ್ದ ರ‍್ಯಾಲಿಯಲ್ಲಿ, “ಜೋರಾಗಿ ಧಾರ್ಮಿಕ ಘೋಷಣೆಗಳನ್ನು’ ಕೂಗಿದರು.. ಅದು ಮತ್ತೊಂದು ಸಮುದಾಯವನ್ನು ಕೆರಳಿಸಿತು” ಎಂದು ತಿಳಿಸಿರುವ ಪೊಲೀಸರು. “ಕತ್ತಿಗಳು, ರಾಡ್‌ಗಳು ಮತ್ತು ಬೆಂಕಿ ಹಚ್ಚುವಿಕೆಯ ಘಟನೆಗಳಿಗೆ ಇದು ಕಾರಣವಾಯಿತು’ ಒಂದು ದೂರಿನಲ್ಲಿ ದಾಖಲಾಗಿದೆ ಎಂದು ಗಾಯಗೊಂಡ ಪೋಲೀಸ್ ಒಬ್ಬರು ವಿವರಿಸಿದ್ದಾರೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಉಪಯೋಗಿಸುವುದು ಅನಿವಾರ್ಯವಾಯಿತು ಎಂದು ಕಚ್ (ಪೂರ್ವ) ಪೊಲೀಸ್ ವರಿಷ್ಠಾಧಿಕಾರಿ ಮಯೂರ್ ಪಾಟೀಲ್ ತಿಳಿಸಿದ್ದಾರೆ.

ರ‍್ಯಾಲಿಯ ನಂತರ, ಕಿಡಾನಾ ಗ್ರಾಮದಲ್ಲಿ ಘರ್ಷಣೆಯ ಸ್ಥಳದಿಂದ 200 ಮೀಟರ್ ದೂರದಲ್ಲಿ ಜಾರ್ಖಂಡ್‌ನ ವಲಸೆ ಕಾರ್ಮಿಕನ ಶವ ಪತ್ತೆಯಾಗಿದೆ, ಮತ್ತು ಆ ಹಿಂಸಾಚಾರದ ಭಾಗವಾಗಿ ಅವನು ಕೊಲ್ಲಲ್ಪಟ್ಟಿದ್ದಾನೆಯೇ ಎಂದು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ” ಎಂದು ಪಾಟೀಲ್ ಹೇಳಿದರು.

ಭಾನುವಾರ “ರಥಯಾತ್ರೆ” ನಡೆಸಲು ಈ ಗುಂಪಿಗೆ ಅಗತ್ಯವಾದ ಅನುಮತಿ ಇರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಮಧ್ಯಪ್ರದೇಶದ ಇಂದೋರ್, ಉಜ್ಜಯಿನಿ ಮತ್ತು ಮಾಂಡ್ಸೌರ್ ಜಿಲ್ಲೆಗಳು ಸೇರಿದಂತೆ ದೇಶದ ವಿವಿಧ ಭಾಗಗಳಿಂದ ರಾಮ್ ದೇವಾಲಯದ ನಿಧಿ ಸಂಗ್ರಹ ರ‍್ಯಾಲಿಗಳಲ್ಲಿ ಇದೇ ರೀತಿಯ ಘರ್ಷಣೆಗಳು ವರದಿಯಾಗಿವೆ.
ಅಯೋಧ್ಯ ರಾಮ್ ದೇವಾಲಯ ನಿರ್ಮಾಣಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ 1.11 ಲಕ್ಷ ರೂ. ಚೆಕ್ ಕಳಿಸುವುದರ ಜೊತೆಗೆ, ಪತ್ರವೊಂದನ್ನು ಬರೆದ ಕಾಂಗ್ರೆಸ್‌ನ ದಿಗ್ವಿಜಯ ಸಿಂಗ್ ಅವರು ಇತ್ತೀಚೆಗೆ ಈ ಸಮಸ್ಯೆಯನ್ನು ಎತ್ತಿ ತೋರಿಸಿದ್ದರು.

“ಲಾಠಿ ಮತ್ತು ಕತ್ತಿಗಳನ್ನು ಹೊತ್ತುಕೊಂಡು ಸಮುದಾಯವನ್ನು ಪ್ರಚೋದಿಸಲು ಘೋಷಣೆಗಳನ್ನು ಎತ್ತುವುದು ಯಾವುದೇ ಧಾರ್ಮಿಕ ಸಮಾರಂಭದ ಒಂದು ಭಾಗವಾಗಲು ಸಾಧ್ಯವಿಲ್ಲ. ಇಂತಹ ಬೆಳವಣಿಗೆಗಳು ಹಿಂದೂ ಧರ್ಮದ ಭಾಗವಾಗಲು ಸಾಧ್ಯವಿಲ್ಲ … ಇಂತಹ ಬೆಳವಣಿಗೆಗಳು ಸಾಮಾಜಿಕ ಸಾಮರಸ್ಯವನ್ನು ಹಾನಿಗೊಳಿಸುತ್ತವೆ. ಇತರ ಧಾರ್ಮಿಕ ಸಮುದಾಯಗಳು ದೇವಾಲಯ ನಿರ್ಮಾಣಕ್ಕೆ ವಿರುದ್ಧವಾಗಿಲ್ಲ. ಆದ್ದರಿಂದ, ದೇಶದ ಪ್ರಧಾನ ಮಂತ್ರಿಯಾಗಿ, ಶಸ್ತ್ರಾಸ್ತ್ರಗಳನ್ನು ಹೊತ್ತ ಜನರು ಇತರ ಸಮುದಾಯಗಳನ್ನು ಪ್ರಚೋದಿಸುವ ನಿಧಿಸಂಗ್ರಹ ಮೆರವಣಿಗೆಗಳನ್ನು ನಿಲ್ಲಿಸುವಂತೆ ನೀವು ರಾಜ್ಯಗಳಿಗೆ ನಿರ್ದೇಶಿಸಬೇಕು’ ಎಂದು ದಿಗ್ವಿಜಯ ಸಿಂಗ್ ಮತ್ತು ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.


ಇದನ್ನೂ ಓದಿ: ‘ರಿಪಬ್ಲಿಕ್ ಟಿವಿಯನ್ನು ಸಸ್ಪೆಂಡ್ ಮಾಡಿ’- ಇಂಡಿಯನ್ ಬ್ರಾಡ್‌ಕಾಸ್ಟಿಂಗ್ ಫೌಂಡೇಶನ್‌ಗೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...