Homeಮುಖಪುಟರಾಮ ಮಂದಿರ ದೇಣಿಗೆ ಸಂಗ್ರಹ ಮೆರವಣಿಗೆಯಲ್ಲಿ ಘರ್ಷಣೆ: ಗುಜರಾತಿನಲ್ಲಿ 40 ಜನರ ಬಂಧನ

ರಾಮ ಮಂದಿರ ದೇಣಿಗೆ ಸಂಗ್ರಹ ಮೆರವಣಿಗೆಯಲ್ಲಿ ಘರ್ಷಣೆ: ಗುಜರಾತಿನಲ್ಲಿ 40 ಜನರ ಬಂಧನ

- Advertisement -
- Advertisement -

ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ಭಾನುವಾರ ನಡೆದ ಹಿಂಸಾಚಾರದ ಬಗ್ಗೆ ತನಿಖೆ ನಡೆಸಲು ಮೂರು ಪ್ರಕರಣಗಳನ್ನು ದಾಖಲಿಸಿದ ನಂತರ, ಕನಿಷ್ಠ 40 ಜನರನ್ನು ಬಂಧಿಸಲಾಗಿದೆ. ಕೊಲೆ, ಗಲಭೆ, ಅಗ್ನಿಸ್ಪರ್ಶ ಮತ್ತು ಇತರ ಪಿತೂರಿ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕೆ ಹಣ ಸಂಗ್ರಹಿಸುವ ಮೆರವಣಿಗೆಯಲ್ಲಿ ಭಾನುವಾರ ಎರಡು ಸಮುದಾಯಗಳ ಸದಸ್ಯರ ನಡುವೆ ಘರ್ಷಣೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಲಪಂಥೀಯ ಗುಂಪು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಆಯೋಜಿಸಿದ್ದ ರ‍್ಯಾಲಿಯಲ್ಲಿ, “ಜೋರಾಗಿ ಧಾರ್ಮಿಕ ಘೋಷಣೆಗಳನ್ನು’ ಕೂಗಿದರು.. ಅದು ಮತ್ತೊಂದು ಸಮುದಾಯವನ್ನು ಕೆರಳಿಸಿತು” ಎಂದು ತಿಳಿಸಿರುವ ಪೊಲೀಸರು. “ಕತ್ತಿಗಳು, ರಾಡ್‌ಗಳು ಮತ್ತು ಬೆಂಕಿ ಹಚ್ಚುವಿಕೆಯ ಘಟನೆಗಳಿಗೆ ಇದು ಕಾರಣವಾಯಿತು’ ಒಂದು ದೂರಿನಲ್ಲಿ ದಾಖಲಾಗಿದೆ ಎಂದು ಗಾಯಗೊಂಡ ಪೋಲೀಸ್ ಒಬ್ಬರು ವಿವರಿಸಿದ್ದಾರೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಉಪಯೋಗಿಸುವುದು ಅನಿವಾರ್ಯವಾಯಿತು ಎಂದು ಕಚ್ (ಪೂರ್ವ) ಪೊಲೀಸ್ ವರಿಷ್ಠಾಧಿಕಾರಿ ಮಯೂರ್ ಪಾಟೀಲ್ ತಿಳಿಸಿದ್ದಾರೆ.

ರ‍್ಯಾಲಿಯ ನಂತರ, ಕಿಡಾನಾ ಗ್ರಾಮದಲ್ಲಿ ಘರ್ಷಣೆಯ ಸ್ಥಳದಿಂದ 200 ಮೀಟರ್ ದೂರದಲ್ಲಿ ಜಾರ್ಖಂಡ್‌ನ ವಲಸೆ ಕಾರ್ಮಿಕನ ಶವ ಪತ್ತೆಯಾಗಿದೆ, ಮತ್ತು ಆ ಹಿಂಸಾಚಾರದ ಭಾಗವಾಗಿ ಅವನು ಕೊಲ್ಲಲ್ಪಟ್ಟಿದ್ದಾನೆಯೇ ಎಂದು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ” ಎಂದು ಪಾಟೀಲ್ ಹೇಳಿದರು.

ಭಾನುವಾರ “ರಥಯಾತ್ರೆ” ನಡೆಸಲು ಈ ಗುಂಪಿಗೆ ಅಗತ್ಯವಾದ ಅನುಮತಿ ಇರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಮಧ್ಯಪ್ರದೇಶದ ಇಂದೋರ್, ಉಜ್ಜಯಿನಿ ಮತ್ತು ಮಾಂಡ್ಸೌರ್ ಜಿಲ್ಲೆಗಳು ಸೇರಿದಂತೆ ದೇಶದ ವಿವಿಧ ಭಾಗಗಳಿಂದ ರಾಮ್ ದೇವಾಲಯದ ನಿಧಿ ಸಂಗ್ರಹ ರ‍್ಯಾಲಿಗಳಲ್ಲಿ ಇದೇ ರೀತಿಯ ಘರ್ಷಣೆಗಳು ವರದಿಯಾಗಿವೆ.
ಅಯೋಧ್ಯ ರಾಮ್ ದೇವಾಲಯ ನಿರ್ಮಾಣಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ 1.11 ಲಕ್ಷ ರೂ. ಚೆಕ್ ಕಳಿಸುವುದರ ಜೊತೆಗೆ, ಪತ್ರವೊಂದನ್ನು ಬರೆದ ಕಾಂಗ್ರೆಸ್‌ನ ದಿಗ್ವಿಜಯ ಸಿಂಗ್ ಅವರು ಇತ್ತೀಚೆಗೆ ಈ ಸಮಸ್ಯೆಯನ್ನು ಎತ್ತಿ ತೋರಿಸಿದ್ದರು.

“ಲಾಠಿ ಮತ್ತು ಕತ್ತಿಗಳನ್ನು ಹೊತ್ತುಕೊಂಡು ಸಮುದಾಯವನ್ನು ಪ್ರಚೋದಿಸಲು ಘೋಷಣೆಗಳನ್ನು ಎತ್ತುವುದು ಯಾವುದೇ ಧಾರ್ಮಿಕ ಸಮಾರಂಭದ ಒಂದು ಭಾಗವಾಗಲು ಸಾಧ್ಯವಿಲ್ಲ. ಇಂತಹ ಬೆಳವಣಿಗೆಗಳು ಹಿಂದೂ ಧರ್ಮದ ಭಾಗವಾಗಲು ಸಾಧ್ಯವಿಲ್ಲ … ಇಂತಹ ಬೆಳವಣಿಗೆಗಳು ಸಾಮಾಜಿಕ ಸಾಮರಸ್ಯವನ್ನು ಹಾನಿಗೊಳಿಸುತ್ತವೆ. ಇತರ ಧಾರ್ಮಿಕ ಸಮುದಾಯಗಳು ದೇವಾಲಯ ನಿರ್ಮಾಣಕ್ಕೆ ವಿರುದ್ಧವಾಗಿಲ್ಲ. ಆದ್ದರಿಂದ, ದೇಶದ ಪ್ರಧಾನ ಮಂತ್ರಿಯಾಗಿ, ಶಸ್ತ್ರಾಸ್ತ್ರಗಳನ್ನು ಹೊತ್ತ ಜನರು ಇತರ ಸಮುದಾಯಗಳನ್ನು ಪ್ರಚೋದಿಸುವ ನಿಧಿಸಂಗ್ರಹ ಮೆರವಣಿಗೆಗಳನ್ನು ನಿಲ್ಲಿಸುವಂತೆ ನೀವು ರಾಜ್ಯಗಳಿಗೆ ನಿರ್ದೇಶಿಸಬೇಕು’ ಎಂದು ದಿಗ್ವಿಜಯ ಸಿಂಗ್ ಮತ್ತು ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.


ಇದನ್ನೂ ಓದಿ: ‘ರಿಪಬ್ಲಿಕ್ ಟಿವಿಯನ್ನು ಸಸ್ಪೆಂಡ್ ಮಾಡಿ’- ಇಂಡಿಯನ್ ಬ್ರಾಡ್‌ಕಾಸ್ಟಿಂಗ್ ಫೌಂಡೇಶನ್‌ಗೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...