Homeಮುಖಪುಟರಾಮ ಮಂದಿರ ದೇಣಿಗೆ ಸಂಗ್ರಹ ಮೆರವಣಿಗೆಯಲ್ಲಿ ಘರ್ಷಣೆ: ಗುಜರಾತಿನಲ್ಲಿ 40 ಜನರ ಬಂಧನ

ರಾಮ ಮಂದಿರ ದೇಣಿಗೆ ಸಂಗ್ರಹ ಮೆರವಣಿಗೆಯಲ್ಲಿ ಘರ್ಷಣೆ: ಗುಜರಾತಿನಲ್ಲಿ 40 ಜನರ ಬಂಧನ

- Advertisement -
- Advertisement -

ಗುಜರಾತ್‌ನ ಕಚ್ ಜಿಲ್ಲೆಯಲ್ಲಿ ಭಾನುವಾರ ನಡೆದ ಹಿಂಸಾಚಾರದ ಬಗ್ಗೆ ತನಿಖೆ ನಡೆಸಲು ಮೂರು ಪ್ರಕರಣಗಳನ್ನು ದಾಖಲಿಸಿದ ನಂತರ, ಕನಿಷ್ಠ 40 ಜನರನ್ನು ಬಂಧಿಸಲಾಗಿದೆ. ಕೊಲೆ, ಗಲಭೆ, ಅಗ್ನಿಸ್ಪರ್ಶ ಮತ್ತು ಇತರ ಪಿತೂರಿ ಆರೋಪದ ಮೇಲೆ ಬಂಧಿಸಲಾಗಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಅಯೋಧ್ಯೆಯಲ್ಲಿ ರಾಮ ದೇವಾಲಯ ನಿರ್ಮಾಣಕ್ಕೆ ಹಣ ಸಂಗ್ರಹಿಸುವ ಮೆರವಣಿಗೆಯಲ್ಲಿ ಭಾನುವಾರ ಎರಡು ಸಮುದಾಯಗಳ ಸದಸ್ಯರ ನಡುವೆ ಘರ್ಷಣೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬಲಪಂಥೀಯ ಗುಂಪು ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಆಯೋಜಿಸಿದ್ದ ರ‍್ಯಾಲಿಯಲ್ಲಿ, “ಜೋರಾಗಿ ಧಾರ್ಮಿಕ ಘೋಷಣೆಗಳನ್ನು’ ಕೂಗಿದರು.. ಅದು ಮತ್ತೊಂದು ಸಮುದಾಯವನ್ನು ಕೆರಳಿಸಿತು” ಎಂದು ತಿಳಿಸಿರುವ ಪೊಲೀಸರು. “ಕತ್ತಿಗಳು, ರಾಡ್‌ಗಳು ಮತ್ತು ಬೆಂಕಿ ಹಚ್ಚುವಿಕೆಯ ಘಟನೆಗಳಿಗೆ ಇದು ಕಾರಣವಾಯಿತು’ ಒಂದು ದೂರಿನಲ್ಲಿ ದಾಖಲಾಗಿದೆ ಎಂದು ಗಾಯಗೊಂಡ ಪೋಲೀಸ್ ಒಬ್ಬರು ವಿವರಿಸಿದ್ದಾರೆ.

ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಅಶ್ರುವಾಯು ಉಪಯೋಗಿಸುವುದು ಅನಿವಾರ್ಯವಾಯಿತು ಎಂದು ಕಚ್ (ಪೂರ್ವ) ಪೊಲೀಸ್ ವರಿಷ್ಠಾಧಿಕಾರಿ ಮಯೂರ್ ಪಾಟೀಲ್ ತಿಳಿಸಿದ್ದಾರೆ.

ರ‍್ಯಾಲಿಯ ನಂತರ, ಕಿಡಾನಾ ಗ್ರಾಮದಲ್ಲಿ ಘರ್ಷಣೆಯ ಸ್ಥಳದಿಂದ 200 ಮೀಟರ್ ದೂರದಲ್ಲಿ ಜಾರ್ಖಂಡ್‌ನ ವಲಸೆ ಕಾರ್ಮಿಕನ ಶವ ಪತ್ತೆಯಾಗಿದೆ, ಮತ್ತು ಆ ಹಿಂಸಾಚಾರದ ಭಾಗವಾಗಿ ಅವನು ಕೊಲ್ಲಲ್ಪಟ್ಟಿದ್ದಾನೆಯೇ ಎಂದು ಕಂಡುಹಿಡಿಯಲು ಪೊಲೀಸರು ಪ್ರಯತ್ನಿಸುತ್ತಿದ್ದಾರೆ” ಎಂದು ಪಾಟೀಲ್ ಹೇಳಿದರು.

ಭಾನುವಾರ “ರಥಯಾತ್ರೆ” ನಡೆಸಲು ಈ ಗುಂಪಿಗೆ ಅಗತ್ಯವಾದ ಅನುಮತಿ ಇರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ.

ಮಧ್ಯಪ್ರದೇಶದ ಇಂದೋರ್, ಉಜ್ಜಯಿನಿ ಮತ್ತು ಮಾಂಡ್ಸೌರ್ ಜಿಲ್ಲೆಗಳು ಸೇರಿದಂತೆ ದೇಶದ ವಿವಿಧ ಭಾಗಗಳಿಂದ ರಾಮ್ ದೇವಾಲಯದ ನಿಧಿ ಸಂಗ್ರಹ ರ‍್ಯಾಲಿಗಳಲ್ಲಿ ಇದೇ ರೀತಿಯ ಘರ್ಷಣೆಗಳು ವರದಿಯಾಗಿವೆ.
ಅಯೋಧ್ಯ ರಾಮ್ ದೇವಾಲಯ ನಿರ್ಮಾಣಕ್ಕಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ 1.11 ಲಕ್ಷ ರೂ. ಚೆಕ್ ಕಳಿಸುವುದರ ಜೊತೆಗೆ, ಪತ್ರವೊಂದನ್ನು ಬರೆದ ಕಾಂಗ್ರೆಸ್‌ನ ದಿಗ್ವಿಜಯ ಸಿಂಗ್ ಅವರು ಇತ್ತೀಚೆಗೆ ಈ ಸಮಸ್ಯೆಯನ್ನು ಎತ್ತಿ ತೋರಿಸಿದ್ದರು.

“ಲಾಠಿ ಮತ್ತು ಕತ್ತಿಗಳನ್ನು ಹೊತ್ತುಕೊಂಡು ಸಮುದಾಯವನ್ನು ಪ್ರಚೋದಿಸಲು ಘೋಷಣೆಗಳನ್ನು ಎತ್ತುವುದು ಯಾವುದೇ ಧಾರ್ಮಿಕ ಸಮಾರಂಭದ ಒಂದು ಭಾಗವಾಗಲು ಸಾಧ್ಯವಿಲ್ಲ. ಇಂತಹ ಬೆಳವಣಿಗೆಗಳು ಹಿಂದೂ ಧರ್ಮದ ಭಾಗವಾಗಲು ಸಾಧ್ಯವಿಲ್ಲ … ಇಂತಹ ಬೆಳವಣಿಗೆಗಳು ಸಾಮಾಜಿಕ ಸಾಮರಸ್ಯವನ್ನು ಹಾನಿಗೊಳಿಸುತ್ತವೆ. ಇತರ ಧಾರ್ಮಿಕ ಸಮುದಾಯಗಳು ದೇವಾಲಯ ನಿರ್ಮಾಣಕ್ಕೆ ವಿರುದ್ಧವಾಗಿಲ್ಲ. ಆದ್ದರಿಂದ, ದೇಶದ ಪ್ರಧಾನ ಮಂತ್ರಿಯಾಗಿ, ಶಸ್ತ್ರಾಸ್ತ್ರಗಳನ್ನು ಹೊತ್ತ ಜನರು ಇತರ ಸಮುದಾಯಗಳನ್ನು ಪ್ರಚೋದಿಸುವ ನಿಧಿಸಂಗ್ರಹ ಮೆರವಣಿಗೆಗಳನ್ನು ನಿಲ್ಲಿಸುವಂತೆ ನೀವು ರಾಜ್ಯಗಳಿಗೆ ನಿರ್ದೇಶಿಸಬೇಕು’ ಎಂದು ದಿಗ್ವಿಜಯ ಸಿಂಗ್ ಮತ್ತು ಅವರ ಬೆಂಬಲಿಗರು ಸಾಮಾಜಿಕ ಜಾಲತಾಣದಲ್ಲಿ ಬರೆದಿದ್ದಾರೆ.


ಇದನ್ನೂ ಓದಿ: ‘ರಿಪಬ್ಲಿಕ್ ಟಿವಿಯನ್ನು ಸಸ್ಪೆಂಡ್ ಮಾಡಿ’- ಇಂಡಿಯನ್ ಬ್ರಾಡ್‌ಕಾಸ್ಟಿಂಗ್ ಫೌಂಡೇಶನ್‌ಗೆ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...