Homeಕರ್ನಾಟಕಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! - ಕಾರಣ ಏನು?

ಲಸಿಕೆ ಪಡೆದುಕೊಳ್ಳಲು ಹಿಂಜರಿಯುತ್ತಿರುವ ರಾಜ್ಯದ ವೈದ್ಯ ಸಮೂಹ! – ಕಾರಣ ಏನು?

ಆರೋಗ್ಯ ಕಾರ್ಯಕರ್ತರ ಮೇಲೆ ಕೋವಾಕ್ಸಿನ್ ಅನ್ನು "ಪ್ರಾಯೋಗಿಕ ಆಧಾರದ ಮೇಲೆ" ಬಳಸುವುದು ಖಂಡನೀಯ ಎಂದು ಕೆಎಆರ್‌ಡಿ (ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್) ಅಧ್ಯಕ್ಷ ಡಾ. ದಯಾನಂದ್ ಸಾಗರ್ ಹೇಳಿದ್ದಾರೆ.

- Advertisement -
- Advertisement -

ತಮಗೆ ನೀಡುವ ಕೊವಿಡ್ ಲಸಿಕೆ ಯಾವುದಿರಬೇಕು (ಸದ್ಯ ಕೊವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಎರಡೇ ಆಯ್ಕೆ) ಎಂಬ ಆಯ್ಕೆಯನ್ನು ಆರೋಗ್ಯ ಕಾರ್ಯಕರ್ತರಿಗೆ ನೀಡಬೇಕು ಎಂದು ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್ (KARD) ಸರ್ಕಾರವನ್ನು ಆಗ್ರಹಿಸಿದೆ.

KARD, ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಕೆ. ಸುಧಾಕರ್ ಅವರಿಗೆ ಬರೆದ ಪತ್ರದಲ್ಲಿ, “ರಾಜ್ಯದ ಹಲವಾರು ಜಿಲ್ಲೆಗಳ ನಿವಾಸಿ (ರೆಸಿಡೆಂಟ್) ವೈದ್ಯರು ಲಸಿಕೆ ವಿಷಯದಲ್ಲಿ ತಮಗೆ ತಾರತಮ್ಯ ಮಾಡಲಾಗುತ್ತಿದೆ ಎಂದು ಭಾವಿಸಿದ್ದಾರೆ. ಪ್ರಸ್ತುತ, ಕೊವ್ಯಾಕ್ಸಿನ್ ಅನ್ನು ಚಿಕ್ಕಮಗಳೂರು, ಹಾಸನ, ಬಳ್ಳಾರಿ, ಶಿವಮೊಗ್ಗ, ಚಿಕ್ಕಬಳ್ಳಾಪುರ ಮತ್ತು ದಾವಣಗೆರೆಯ ಜಿಲ್ಲಾ ಆಸ್ಪತ್ರೆಗಳಲ್ಲಿ ಮಾತ್ರ ನೀಡಲಾಗುತ್ತಿದೆ” ಎಂದು ಬರೆದಿದ್ದಾರೆ.

ಈ ಜಿಲ್ಲೆಗಳ ನಿವಾಸಿ ವೈದ್ಯರಿಗೆ ಮತ್ತು ಆರೋಗ್ಯ ಕಾರ್ಯಕರ್ತರಿಗೆ ಮಾತ್ರ ಕೊವ್ಯಾಕ್ಸಿನ್ ಲಸಿಕೆ ನೀಡಲಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ಆದರೆ ಕರ್ನಾಟಕದ ಇತರ ಕೇಂದ್ರಗಳು ಕೋವಿಶೀಲ್ಡ್ ಪಡೆಯುತ್ತಿವೆ.

“ಕೊವಾಕ್ಸಿನ್ ಸ್ವೀಕರಿಸುವ ಮೊದಲು ಕೋವಾಕ್ಸಿನ್‌ನ ವೈದ್ಯಕೀಯ ಪರಿಣಾಮಕಾರಿತ್ವವನ್ನು ಇನ್ನೂ ಸ್ಥಾಪಿಸಲಾಗಿಲ್ಲ ಎಂದು ತಿಳಿಸುವ ಜವಾಬ್ದಾರಿಯನ್ನು ನಮ್ಮ ಮೇಲೆ ಹೊರಿಸಲಾಗಿದ್ದು, ಆ ರೀತಿಯ ಪತ್ರವನ್ನು ನಮ್ಮಿಂದ ಬರೆಸಿಕೊಳ್ಳಲಾಗಿದೆ” ಎಂದು ವೈದ್ಯಕೀಯ ಸಚಿವರಿಗೆ ಬರೆದ ಪತ್ರದಲ್ಲಿ ವೈದ್ಯರು ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ಲಸಿಕೆ ಪಡೆದಿದ್ದ ವ್ಯಕ್ತಿ ಸಾವು: ಸಾವಿಗೆ ಲಸಿಕೆ ಕಾರಣವಲ್ಲ ಎಂದ ಸಚಿವ ಸುಧಾಕರ್

ಲಸಿಕೆ ವಿತರಣೆಯಲ್ಲಿನ ಜವಾಬ್ದಾರಿ ಮತ್ತು ವ್ಯತ್ಯಾಸಗಳು ಬಹಳ ಅನುಮಾನಾಸ್ಪದವೆನಿಸುತ್ತದೆ. ಮತ್ತು ಕೊವ್ಯಾಕ್ಸಿನ್ ಲಸಿಕೆ ಪಡೆಯುವಲ್ಲಿ ನಿವಾಸಿ ವೈದ್ಯರು (ರೆಸಿಡೆಂಟ್ ಡಾಕ್ಟರ್‍ಸ್) ಹಿಂಜರಿಯುತ್ತಿದ್ದಾರೆ. ಶಿವಮೊಗ್ಗ, ಹಾಸನ, ಚಾಮರಾಜನಗರ ಮತ್ತು ಬಳ್ಳಾರಿಯಲ್ಲಿನ ವೈದ್ಯಕೀಯ ಕಾಲೇಜುಗಳ ನಿವಾಸಿ ವೈದ್ಯರು (ರೆಸಿಡೆಂಟ್ ಡಾಕ್ಟರ್‍ಸ್), “ಮೂರನೇ ಹಂತದ ಟ್ರಯಲ್ಸ್ ಪೂರ್ಣಗೊಳಿಸದ ಲಸಿಕೆಯನ್ನು ನೀಡಲು ತೀರ್ಮಾನಿಸಿದ ಸರ್ಕಾರದ ಕ್ರಮ ಕಳವಳಕಾರಿಯಾಗಿದೆ” ಎಂದು ದೂರಿದ್ದಾರೆ.

ಆರೋಗ್ಯ ಕಾರ್ಯಕರ್ತರ ಮೇಲೆ ಕೋವಾಕ್ಸಿನ್ ಅನ್ನು “ಪ್ರಾಯೋಗಿಕ ಆಧಾರದ ಮೇಲೆ” ಬಳಸುವುದು ಖಂಡನೀಯ ಎಂದು ಕೆಎಆರ್‌ಡಿ (ಕರ್ನಾಟಕ ಅಸೋಷಿಯೇಷನ್ ಆಫ್ ರೆಸಿಡೆನ್ಸಿಯಲ್ ಡಾಕ್ಟರ್‍ಸ್) ಅಧ್ಯಕ್ಷ ಡಾ. ದಯಾನಂದ್ ಸಾಗರ್ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ಹೇಳಿದ್ದಾರೆ.

ಇದಲ್ಲದೆ, ನಮ್ಮಿಂದ ಸಹಿ ಹಾಕುವ ಕಾರ್ಯವನ್ನು ಅನುಮಾನಾಸ್ಪದವಾಗಿ ಮಾಡಿಸಲಾಗಿದೆ. ಅದರಲ್ಲಿನ ಪದಪುಂಜ ಗೊಂದಲದಿಂದ ಕೂಡಿವೆ. ಇದಕ್ಕೆ ಬದಲಾಗಿ, ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಆಯ್ಕೆ ಮಾಡುವ ಆಯ್ಕೆಯನ್ನು ನೀಡಬೇಕು. ಕನಿಷ್ಟ ಮಧ್ಯಂತರ ವಿಶ್ಲೇಷಣೆಯ ಹಂತವನ್ನು ದಾಟಿದ ಲಸಿಕೆಗಳನ್ನು ಸರ್ಕಾರ ನೀಡಬೇಕು ಎಂದು ಅವರು ಹೇಳಿದ್ದಾರೆ. ಕೋವಾಕ್ಸಿನ್‌ನ ಮಧ್ಯಂತರ ವಿಶ್ಲೇಷಣಾ ವರದಿ ಲಭ್ಯವಿಲ್ಲದ ಕಾರಣ ಕೋವಿಶೀಲ್ಡ್‌ಗೆ ಆದ್ಯತೆ ಹೆಚ್ಚಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಉತ್ತರ ಪ್ರದೇಶ: ಕೊರೊನಾ ಲಸಿಕೆ ಪಡೆದ ಆಸ್ಪತ್ರೆಯ ಉದ್ಯೋಗಿ ಸಾವು

ಆದಾಗ್ಯೂ, ಭಾರತದ ಡ್ರಗ್ಸ್ ಕಂಟ್ರೋಲರ್ ಜನರಲ್ ನೀಡಿದ ಅನುಮತಿಯನ್ನು ಉಲ್ಲೇಖಿಸುತ್ತಿರುವ ಆರೋಗ್ಯ ಸಚಿವ ಸುಧಾಕರ್, “ಎರಡೂ ಲಸಿಕೆಗಳು ವಿಶ್ವಾಸಾರ್ಹ, ಆರೋಗ್ಯ ಕಾರ್ಯಕರ್ತರು ಯಾವುದೇ ಆತಂಕವಿಲ್ಲದೆ ಕೊವಾಕ್ಸಿನ್ ತೆಗೆದುಕೊಳ್ಳಬಹುದು” ಎಂದು ಹೇಳುತ್ತಿದ್ದಾರೆ.

ಇದರ ನಡುವೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯು ಬಹಿರಂಗಪಡಿಸಿದ ಮಾಹಿತಿಯು ವ್ಯಾಕ್ಸಿನೇಷನ್ ಚಾಲನೆಯ ಮೊದಲ ಮೂರು ದಿನಗಳಲ್ಲಿ 55,550 ಫಲಾನುಭವಿ ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ಹಾಕಲಾಗಿದೆ ಎಂದು ಹೇಳಿದೆ.

ಸೋಮವಾರ ನಡೆದ ಕೋವಿಡ್ -19 ವ್ಯಾಕ್ಸಿನೇಷನ್ ಚಾಲನೆಯಲ್ಲಿ ಕರ್ನಾಟಕವು ಒಟ್ಟಾರೆ ಶೇಕಡಾ 47 ರಷ್ಟು ವ್ಯಾಪ್ತಿಯನ್ನು ವರದಿ ಮಾಡಿದೆ, ಇದು ಭಾನುವಾರ ಮತ್ತು ಶನಿವಾರದಂದು ನಡೆದ ವ್ಯಾಕಿನೇಷನ್ (ಕ್ರಮವಾಗಿ ಶೇ. 58.4 ಮತ್ತು ಶೇ, 63) ಪ್ರಮಾಣಕ್ಕಿಂತ ಕಡಿಮೆಯಾಗಿದೆ.


ಇದನ್ನೂ ಓದಿ: ದೆಹಲಿಯಲ್ಲಿ ಕೊರೊನಾ ಲಸಿಕೆ: 51 ಪ್ರತಿಕೂಲ ಪರಿಣಾಮ ಪ್ರಕರಣ, ಒಬ್ಬರ ಸ್ಥಿತಿ ಗಂಭೀರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...