Homeಮುಖಪುಟದೆಹಲಿ ಗಲಭೆ ಮತ್ತು ರೈತ ಹೋರಾಟವನ್ನು ನಿಭಾಯಿಸುವಲ್ಲಿ ದೆಹಲಿ ಪೊಲೀಸರು ಉತ್ತೀರ್ಣ: ಅಮಿತ್ ಶಾ

ದೆಹಲಿ ಗಲಭೆ ಮತ್ತು ರೈತ ಹೋರಾಟವನ್ನು ನಿಭಾಯಿಸುವಲ್ಲಿ ದೆಹಲಿ ಪೊಲೀಸರು ಉತ್ತೀರ್ಣ: ಅಮಿತ್ ಶಾ

- Advertisement -
- Advertisement -

ಕಳೆದ ವರ್ಷ ಈಶಾನ್ಯ ದೆಹಲಿಯಲ್ಲಿ ಭುಗಿಲೆದ್ದ ಗಲಭೆ ಸೇರಿದಂತೆ, ಪ್ರಸ್ತುತ ರೈತರ ಆಂದೋಲನ ಮತ್ತು ಕೊರೊನಾ ಸಾಂಕ್ರಾಮಿಕವನ್ನು ಉತ್ತಮವಾಗಿ ನಿಭಾಯಿಸಿ ದೆಹಲಿ ಪೊಲೀಸರು ಸಾಧನೆ ಮಾಡಿದ್ದಾರೆ ಮತ್ತು ಈ ಪರೀಕ್ಷೆಗಳಲ್ಲಿ ಅವರು ಉತ್ತೀರ್ಣರಾಗಿದ್ದಾರೆ ಎಂದು ಗೃಹ ಸಚಿವ ಅಮಿತ್ ಶಾ ಮಂಗಳವಾರ ಶ್ಲಾಘಿಸಿದ್ದಾರೆ.

ದೆಹಲಿ ಪೊಲೀಸ್ ಪ್ರಧಾನ ಕಚೇರಿಯಲ್ಲಿ ಮಾತನಾಡಿದ ಅಮಿತ್ ಶಾ, “ನಾನು ಫೆಬ್ರವರಿ 2020 ರಲ್ಲಿ ಇಲ್ಲಿಗೆ ಬಂದಿದ್ದೆ. ಆ ಸಮಯದಲ್ಲಿ ಪೊಲೀಸರು ಯಾವಾಗಲೂ ಸಾರ್ವಜನಿಕರೊಂದಿಗೆ ಇದ್ದಾರೆ ಎಂದು ನಾನು ಹೇಳಿದ್ದೆ. ಇಂದು ಒಂದು ವರ್ಷವಾಗಿದೆ. ಹಿಂತಿರುಗಿ ನೋಡಿದರೆ ಸಾಂಕ್ರಾಮಿಕ ಸಮಯದಲ್ಲಿ ಪೊಲೀಸರು ಸಾರ್ವಜನಿಕ ನಂಬಿಕೆಯನ್ನು ಹೇಗೆ ಗೆದ್ದರು ಎಂದು ಕಾಣುತ್ತದೆ” ಎಂದು ಹೇಳಿದ್ದಾರೆ.

ಸಾಂದರ್ಭಿಕ ಚಿತ್ರ

ಇದನ್ನೂ ಓದಿ: ಸಚಿವ ಸ್ಥಾನದ ಆಸೆ ಕೈಬಿಡಿ: ಅತೃಪ್ತರಿಗೆ ಖಡಕ್ ಎಚ್ಚರಿಕೆ ನೀಡಿದ ಅಮಿತ್ ಶಾ!

“2020 ರಲ್ಲಿ ದೆಹಲಿ ಮತ್ತು ದೇಶ ಅನೇಕ ಸವಾಲುಗಳು ಎದುರಿಸಿದ್ದವು. ಈಶಾನ್ಯ ದೆಹಲಿ ಗಲಭೆಗಳು, ಲಾಕ್‌ಡೌನ್ ಮತ್ತು ಅನ್-ಲಾಕ್‌ ಪ್ರಕ್ರಿಯೆ, ವಲಸಿಗರು ಮನೆಗೆ ತಲುಪಲು ಸಹಾಯ ಮಾಡುವುದು ಮತ್ತು ರೈತರ ಆಂದೋಲನವನ್ನು ಶಾಂತಿಯುತವಾಗಿ ನಿರ್ವಹಿಸುವುದು ಸೇರಿದಂತೆ. ಈ ವರ್ಷದ ಎಲ್ಲಾ ಪರೀಕ್ಷೆಗಳಲ್ಲಿ ಪೊಲೀಸರು ಉತ್ತಮ ಸಾಧನೆ ಮಾಡಿದ್ದಾರೆ ಹಾಗೂ ಉತ್ತೀರ್ಣರಾಗಿದ್ದಾರೆ” ಎಂದು ಅವರು ಶ್ಲಾಘಿಸಿದ್ದಾರೆ.

ದೆಹಲಿ ಗಲಭೆ: ಪೊಲೀಸ್ ಮತ್ತು ವಿಶೇಶ ಅಪರಾದ ದಳದ ತನಿಖೆ ಅನ್ಯಾಯದಿಂದ ಕೂಡಿದೆ; ಕೇಜ್ರಿವಾಲ್‌ಗೆ ಭಾರತದಾದ್ಯಂತ ಗಣ್ಯರ ಪತ್ರ
ದೆಹಲಿ ಗಲಭೆಯ ನಂತರ (PC: AFP)

ಅಮಿತ್‌ ಶಾ, ಕೆಲವು ಪೊಲೀಸ್ ಸಿಬ್ಬಂದಿಯನ್ನು ಅವರ ಕಾರ್ಯಕ್ಷಮತೆಗಾಗಿ ಗೌರವಿಸಿದರು ಮತ್ತು ಕೊರೊನಾದಿಂದಾಗಿ ಪ್ರಾಣ ಕಳೆದುಕೊಂಡವರಿಗೆ ಗೌರವ ಸಲ್ಲಿಸಿದರು. ಗಣರಾಜ್ಯೋತ್ಸವದ ಮುನ್ನ ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಹಿರಿಯ ಪೊಲೀಸ್ ಅಧಿಕಾರಿಗಳ ಸಭೆಯ ಅಧ್ಯಕ್ಷತೆಯನ್ನೂ ಅವರು ವಹಿಸಿದ್ದರು.

“ಸವಾಲುಗಳನ್ನು ನಿಭಾಯಿಸುವ ಮೊದಲು ಅವುಗಳನ್ನು ಅರ್ಥಮಾಡಿಕೊಳ್ಳಬೇಕು. ಅದಕ್ಕೆ ಅನುಗುಣವಾಗಿ ಕಾರ್ಯನಿರ್ವಹಿಸುವ ರೀತಿಯಲ್ಲಿ ಬದಲಾವಣೆಗಳನ್ನು ತರಬೇಕಾಗುತ್ತದೆ. ಆಗ ಮಾತ್ರ ಸವಾಲುಗಳನ್ನು ಎದುರಿಸಲು ಸಾಧ್ಯವಾಗುತ್ತದೆ” ಎಂದು ಅಮಿತ್‌ ಶಾ ಹೇಳಿದ್ದಾರೆ.

2022 ರ ವೇಳೆಗೆ ದೇಶವು 75 ವರ್ಷಗಳ ಸ್ವಾತಂತ್ರ್ಯವನ್ನು ಆಚರಿಸಲಿದ್ದು, ಸುಧಾರಣೆ ಮತ್ತು ಉತ್ತಮ ಕಾರ್ಯಕ್ಷಮತೆಗಾಗಿ ಐದು ಗುರಿಗಳನ್ನು ನಿಗದಿಪಡಿಸುವಂತೆ ಪ್ರತಿ ಪೊಲೀಸ್ ಠಾಣೆಯನ್ನು ಕೇಳಿದ್ದಾರೆ.

ಇದನ್ನೂ ಓದಿ: ’ಅಮಿತ್ ಶಾ ಮನೆ ಮುಂದೆ ಈ ಇಬ್ಬರು ಪ್ರತಿಭಟಿಸುವಂತಿಲ್ಲ’: ದೆಹಲಿ ಪೊಲೀಸರ ’ವಿಚಿತ್ರ’ ನಿರ್ಧಾರ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...