HomeಚಳವಳಿNIAಯಿಂದ ಸಮನ್ಸ್‌ ಪಡೆದಿದ್ದ 'ಖಾಲ್ಸಾ ಏಡ್‌' ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

NIAಯಿಂದ ಸಮನ್ಸ್‌ ಪಡೆದಿದ್ದ ‘ಖಾಲ್ಸಾ ಏಡ್‌’ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನ!

ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮ ನಿರ್ದೇಶನಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ವಿಚಾರಣೆ ಮುಂದೂಡಿದೆ.

- Advertisement -
- Advertisement -

ಕಳೆದ ಎರಡು ತಿಂಗಳಿಂದ ದೆಹಲಿ ಗಡಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಬೆನ್ನೆಲುಬಿನಂತಿರುವ ಖಾಲ್ಸಾ ಏಡ್‌ ಎಂಬ ಅಂತಾರಾಷ್ಟ್ರೀಯ ಸೇವಾ ಸಂಸ್ಥೆ 2021ರ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮನಿರ್ದೇಶನಗೊಂಡಿದೆ. ಈ ಸಂಸ್ಥೆಗೆ ದೇಣಿಗೆ ಹರಿದು ಬರುತ್ತಿರುವ ಹಿನ್ನೆಲೆಯನ್ನು ಪ್ರಶ್ನಿಸಿ ರಾಷ್ಟ್ರೀಯ ತನಿಖಾ ದಳ(NIA)ವು ಜನವರಿ 16 ರಂದು ಸಮನ್ಸ್‌ ನೀಡಿತ್ತು.

ಕೆನಡಾದ ಸಂಸದರಾದ ಉಪಲ್‌ ಅವರು ಖಾಲ್ಸಾ ಸಂಸ್ಥೆಯನ್ನು ನಾಮನಿರ್ದೇಶನಕ್ಕೆ ಮನವಿ ಮಾಡಿ ಜನವರಿ 14 ರಂದು ಪತ್ರ ಬರೆದಿದ್ದರು.

ಇದನ್ನೂ ಓದಿ: ’ರೈತ ಹೋರಾಟಕ್ಕೆ ಹೆಗಲು ಕೊಟ್ಟು ನಿಂತಿದೆ ಖಾಲ್ಸಾ ಏಡ್‌ ಸೇವಾ ಸಂಸ್ಥೆ’

ಇಂಗ್ಲೆಂಡಿನ ಮೂಲದ ಖಾಲ್ಸಾ ಏಡ್‌ ಸಂಸ್ಥೆ 1999 ರಲ್ಲಿ ರವೀಂದರ್‌ ಸಿಂಗ್‌ ಅವರಿಂದ ಸ್ಥಾಪನೆಯಾಯಿತು. ಸಿಖ್‌ ಸಮುದಾಯದ ಈ ಸಂಸ್ಥೆಯು ನಿಧಾನವಾಗಿ ವಿಶ್ವದಾದ್ಯಂತ ತನ್ನ ಸೇವಾ ಚಟುವಟಿಕೆಗಳನ್ನು ವಿಸ್ತರಿಸಿದೆ. “ಮನುಕುಲವನ್ನು ಒಂದೆಂದು ಭಾವಿಸಿ, ಮಾನವೀಯತೆಯ ಸೇವೆ” ಮಾಡುವುದು ಈ ಸಂಸ್ಥೆಯ ಧ್ಯೇಯ.

ಕೆನಡಾ, ಆಸ್ಟ್ರೇಲಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ ನಿರಂತರವಾಗಿ ಚಟುವಟಿಕೆಗಳನ್ನು ನಡೆಸಿಕೊಂಡು ಬರುತ್ತಿರುವ ಖಾಲ್ಸಾ ಏಡ್‌, ಪ್ರವಾಹ ಸೇರಿದಂತೆ ಯಾವುದೇ ರೀತಿಯ ನೈಸರ್ಗಿಕ ವಿಕೋಪ ಸಂದರ್ಭದಲ್ಲಿ ಎಲ್ಲ ರೀತಿಯ ನೆರವನ್ನು ಒದಗಿಸಿದೆ.

ಇಲ್ಲಿ ಉಲ್ಲೇಖಿಸಬಹುದಾದ ಕೆಲವು ನೆರವಿನ ಚಟುವಟಿಕೆಗಳು ಇಂತಿವೆ

  • 1999ರ ಟರ್ಕಿ ಭೂಕಂಪದ ವೇಳೆ ಸಂತ್ರಸ್ತರಿಗೆ ಮೂಲ ಸೌಕರ್ಯ.
  • 2000 ದಲ್ಲಿ ಒರಿಸಾದಲ್ಲಿ ಚಂಡಮಾರುತದಿಂದ ಉಂಟಾದ ಅನಾಹುತದ ರಕ್ಷಣಾ ಕಾರ್ಯಕ್ಕೆ ಸ್ವಯಂ ಸೇವಕರ ರವಾನೆ
  • ಆಫ್‌ಘಾನಿಸ್ತಾನದಲ್ಲಿ 2003 ರಲ್ಲಿ ಶೈಕ್ಷಣಿಕ ಉದ್ದೇಶಕ್ಕಾಗಿ ಉಪಕರಣ ಹಾಗೂ ಆರ್ಥಿಕ ನೆರವು.
  • 2016 ರಲ್ಲಿ ಲಂಡನ್‌ನಲ್ಲಿ ಉಂಟಾದ ಪ್ರವಾಹದಿಂದಾಗಿ ಸಂತ್ರಸ್ತರಿಗೆ ಶಿಬಿರಗಳ ಸ್ಥಾಪನೆ ಮತ್ತು ನೆರವು.
  • ಬಾಂಗ್ಲಾ-ಮಯನ್ಮಾರ್‌ ಗಡಿಯಲ್ಲಿದ್ದ ರೊಹಿಂಗ್ಯಾ ನಿರಾಶ್ರಿತರಿಗೆ ಸೇವೆ.
  • 2018 ರಲ್ಲಿ ಇಡೀ ಕೇರಳವನ್ನು ನಡುಗಿಸಿದ ಪ್ರವಾಹದ ವೇಳೆ ಅತಿ ದೊಡ್ಡ ನೆರವಿನ ಕಾರ್ಯವನ್ನು ನಡೆಸಿದ ಹೆಗ್ಗಳಿಕೆ ಖಾಲ್ಸಾ ಸಂಸ್ಥೆಯದ್ದು.

ಈಗ ಪಂಜಾಬಿನಿಂದ ಆರಂಭವಾಗಿ ಕೃಷಿ ನೀತಿಗಳ ವಿರುದ್ಧ ನಡೆಯುತ್ತಿರುವ ಭಾರಿ ಹೋರಾಟಕ್ಕೆ ಸಂಪೂರ್ಣ ಬೆಂಬಲ ಒದಗಿಸಿದ್ದು, ಬಟ್ಟೆ, ಊಟ, ವೈದ್ಯಕೀಯ ನೆರವು ಸೇರಿದಂತೆ ಎಲ್ಲ ರೀತಿಯಲ್ಲೂ ಬೆಂಬಲಕ್ಕೆ ನಿಂತಿದ್ದೆ. ಸರ್ಕಾರ ವಿರುದ್ಧದ ಹೋರಾಟಕ್ಕೆ ಈ ರೀತಿಯಲ್ಲಿ ಬೆನ್ನಿಗೆ ನಿಂತ ಕಾರಣಕ್ಕೆ ಭಯೋತ್ಪಾದಕ ಸಂಸ್ಥೆ ಎಂದು ದೂಷಿಸಿದ್ದು ಅಲ್ಲದೆ, ವಿಚಾರಣೆಗೆ ಕರೆದಿತ್ತು.

ಇದನ್ನೂ ಓದಿ: ಭಯೋತ್ಪಾದಕ ಸಂಘಟನೆಗಳ ನಂಟಿನ ಆರೋಪ: ರೈತ ಹೋರಾಟಗಾರರಿಗೆ NIA ನೋಟಿಸ್

ಆದರೆ ನೊಬೆಲ್‌ ಶಾಂತಿ ಪುರಸ್ಕಾರಕ್ಕೆ ನಾಮ ನಿರ್ದೇಶನಗೊಂಡ ಹಿನ್ನೆಲೆಯಲ್ಲಿ ರಾಷ್ಟ್ರೀಯ ತನಿಖಾ ದಳ ವಿಚಾರಣೆ ಮುಂದೂಡಿದೆ.

ಈ ವರದಿ ‘ಮಾಸ್ ಮೀಡಿಯಾ ಫೌಂಡೇಷನ್’ ನಿಯೋಜಿಸಿರುವ ವಿಶೇಷ ದೆಹಲಿ ತಂಡದಿಂದ ಪಡೆದ ಮಾಹಿತಿ ಆಧರಿಸಿ, ಸಿದ್ಧಪಡಿಸಿದೆ


ಇದನ್ನೂ ಓದಿ: ರೈತ ಹೊಸ ಬೆಳೆಯನ್ನು ಬೆಳೆಯಬಲ್ಲ…. ಹೊಸ ನಗರವನ್ನು ಸೃಷ್ಟಿಸಬಲ್ಲ…!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...