Homeಕರ್ನಾಟಕಸಂಪುಟ ವಿಸ್ತರಣೆ: ಅಮಿತ್ ಶಾ ಬೆದರಿಕೆಗೂ ಬಗ್ಗದೆ ಆಕ್ರೋಶ ಹೊರಹಾಕಿದ ಅತೃಪ್ತರು!

ಸಂಪುಟ ವಿಸ್ತರಣೆ: ಅಮಿತ್ ಶಾ ಬೆದರಿಕೆಗೂ ಬಗ್ಗದೆ ಆಕ್ರೋಶ ಹೊರಹಾಕಿದ ಅತೃಪ್ತರು!

“ಸಾರ್ವಜನಿಕವಾಗಿ ಮಾಡುತ್ತಿರುವ ವಿವೇಚನೆಯಿಲ್ಲದ ಟೀಕೆಗಳನ್ನು ನಿಲ್ಲಿಸಬೇಕು. ನೆನಪಿಡಿ ಪಕ್ಷ ಮೊದಲು. ವಿವೇಚನೆಯಿಲ್ಲದ ಕೃತ್ಯಗಳಲ್ಲಿ ಭಾಗಿಯಾಗಬಾರದು. ಪಕ್ಷಕ್ಕಾಗಿ ದುಡಿಯಬೇಕು” ಎಂದು ಅಮಿತ್ ಶಾ ಎಚ್ಚರಿಸಿದ್ದರು.

- Advertisement -
- Advertisement -

ಸಚಿವ ಸಂಪುಟ ವಿಸ್ತರಣೆಯಿಂದ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ತಲೆದೋರಿತ್ತು. ಇದರೊಟ್ಟಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ವಿರುದ್ಧವೂ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಗೃಹ ಮಂತ್ರಿ ಅಮಿತ್ ಶಾ ಅತೃಪ್ತರಿಗೆ ಖಡಕ್ ಎಚ್ಚರಿಕೆ ನೀಡಿದ್ದರು. ಆದರೆ ಇದಾವುದಕ್ಕೂ ಬಗ್ಗದ ಅತೃಪ್ತರು ಮತ್ತೊಮ್ಮೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಶಾಸಕ ಮತ್ತು ಸಚಿವಾಕಾಂಕ್ಷಿ ಎಂ.ಪಿ.ರೇಣುಕಾಚಾರ್ಯ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಗೆ ದೂರು ನೀಡಿದ್ದಾರೆ. ಇನ್ನು ಶಾಸಕರಾದ ಜಿ.ಎಚ್‌.ತಿಪ್ಪಾರೆಡ್ಡಿ ಮತ್ತು ಕೆ. ಶಿವನಗೌಡ ನಾಯಕ್‌ ಬೆಂಗಳೂರಿನಲ್ಲಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಈಗಾಗಲೇ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಶಾಸಕರಾದ ಅರವಿಂದ ಬೆಲ್ಲದ ಮತ್ತು ಬಿ.ಸಿ.ನಾಗೇಶ್‌ (ತಿಪಟೂರು) ಜತೆ ಮಾತುಕತೆ ನಡೆಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅವರನ್ನು ಸಮಾಧಾನಪಡಿಸಿದ್ದಾರೆ.

ಅತೃಪ್ತ ಶಾಸಕರು ಒಂದೆಡೆ ಸೇರಿ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಸಿಕ್ಕಿದ ಬೆನ್ನಲ್ಲೇ ಯಡಿಯೂರಪ್ಪ ಅವರು ಬಸವರಾಜ ಬೊಮ್ಮಾಯಿ ಮೂಲಕ ಶಾಸಕರನ್ನು ಸಂಪರ್ಕಿಸಿ ಸಮಾಧಾನಗೊಳಿಸುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ಪ್ರಹ್ಲಾದ್ ಜೋಶಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, “ಸಚಿವ ಸಂಪುಟ ವಿಸ್ತರಣೆ ಮತ್ತು ಆ ಬಳಿಕ ನಡೆದ ರಾಜಕೀಯ ಬೆಳವಣಿಗಳ ಬಗ್ಗೆ ಮಾತನಾಡಿದ್ದೇನೆ. ಸೋತವರನ್ನು ಮಂತ್ರಿ ಮಾಡಿದ್ದು ಸರಿಯಲ್ಲ. ನನಗಿಂತಲೂ ಹಿರಿಯರಾದ ಹಲವು ಶಾಸಕರು ಇದ್ದಾರೆ. ಅವರನ್ನು ಮಂತ್ರಿ ಮಾಡಬಹುದಿತ್ತು ಎಂದು ಹೇಳಿದ್ದೇನೆ. ಯೋಗೇಶ್ವರ್ ಅವರನ್ನು ಮಂತ್ರಿ ಮಾಡಿದ್ದು ಸರಿಯಲ್ಲ ಎಂಬುದನ್ನು ಮುಖ್ಯಮಂತ್ರಿ ಮತ್ತು ವರಿಷ್ಠರಿಗೆ ಹೇಳಿದ್ದೆವು. ಯೋಗೇಶ್ವರ್‌ ಅವರಿಂದಲೇ ಬಿಜೆಪಿ ಸರ್ಕಾರ ಬಂದಿತು ಎಂಬುದನ್ನು ಒಪ್ಪಲು ಸಾಧ್ಯವಿಲ್ಲ” ಎಂದರು.

“ಈಗಿರುವ ಎಲ್ಲ 32 ಸಚಿವರನ್ನೂ ಕೈಬಿಟ್ಟು, ಹೊಸದಾಗಿ ಸಂಪುಟ ರಚಿಸಬೇಕು. ಕೈಬಿಟ್ಟವರಿಗೆ ಪಕ್ಷದ ಸಂಘಟನೆ ಹೊಣೆ ಮತ್ತು ಹಿರಿತನ ಆಧರಿಸಿ ಹೊಸಬರಿಗೆ ಅವಕಾಶ ನೀಡಬೇಕು” ಎಂದು ದೇವದುರ್ಗ ಶಾಸಕ ಶಿವನಗೌಡ ನಾಯಕ್ ಒತ್ತಾಯಿಸಿದ್ದಾರೆ

ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಕಾವು ಬಿಜೆಪಿ ಒಳಗೆ ಏರುತ್ತಲೇ ಇದೆ. ಒಬ್ಬರ ನಂತರ ಮತ್ತೊಬ್ಬರು ತಮ್ಮ ಅಸಮಾಧಾನವನ್ನು ನೇರವಾಗಿಯೇ ಹೊರಹಾಕುತ್ತಿದ್ದಾರೆ. ಬಿಜೆಪಿಗೆ ವಲಸೆ ಬಂದವರಲ್ಲಿಯೇ ಒಡಕುಂಟಾಗಿದೆ. ಇನ್ನು ಬಿಜೆಪಿಯ ಒಳಗೆ ಹಲವು ವರ್ಷಗಳಿಂದ ದುಡಿದವರಿಗೆ ಅವಕಾಶ ನೀಡಿಲ್ಲ ಎಂದು ಮೂಲ ಬಿಜೆಪಿಗರು ಆರೋಪಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಸಂಪುಟ ವಿಸ್ತರಣೆಯ ಕಾವು ಭಿನ್ನಮತವಾಗಿ ಮಾರ್ಪಟ್ಟು ಈಗ ಸ್ಫೋಟಗೊಂಡಿದೆ.

ಇದನ್ನೂ ಓದಿ: ಯಾವನಾದ್ರು *** ಮಗ ನನ್ನ ಕೇಳಿದ್ದೀರಾ: ರೈತರ ವಿರುದ್ಧ ನಾಲಿಗೆ ಹರಿಯಬಿಟ್ಟ ಮಾಧುಸ್ವಾಮಿ

ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಸ್ಥಾನ ಸಿಕ್ಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ವಿಶ್ವನಾಥ್, ಶಾಸಕ ಯತ್ನಾಳ್, ಶಾಸಕ ರೇಣುಕಾಚಾರ್ಯ ಸೇರಿದಂತೆ ಹತ್ತಾರು ನಾಯಕರು ಯಡಿಯೂರಪ್ಪನವರ ವಿರುದ್ಧ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಲಾಬಿ ಮಾಡಿದವರಿಗೆ ಸಚಿವ ಸ್ಥಾನ ಸಿಕ್ಕಿದೆ ಎಂದು ಆರೋಪಿಸಿದ್ದರು. ಸಿ.ಡಿ ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡಿದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಮತ್ತೆ ಕೆಲವರು ಕಿಡಿ ಕಾರಿದ್ದರು.

ಇವುಗಳನ್ನು ಗಮನಿಸಿದ ಯಡಿಯೂರಪ್ಪ, ನಿಮಗೆ ಅಸಮಾಧಾನವಿದ್ದರೆ ದೆಹಲಿಗೆ ಹೋಗಿ ದೂರು ನೀಡಿ ಎಂದು ಸಚಿವಾಕಾಂಕ್ಷಿಗಳಿಗೆ ಖಡಕ್ ಆಗಿ ಹೇಳಿದ್ದರು. ಈ ಬೆನ್ನಲ್ಲೇ ಅಮಿತ್ ಶಾ ನೀಡಿರುವ ಈ ಹೇಳಿಕೆ ಸಚಿವಾಕಾಂಕ್ಷಿಗಳಿಗೆ ಆಘಾತ ನೀಡಿದಂತಾಗಿತ್ತು.

ಕರ್ನಾಟಕ ಪ್ರವಾಸದಲ್ಲಿದ್ದ ಗೃಹ ಮಂತ್ರಿ ಅಮಿತ್ ಶಾ ಪಕ್ಷದ ನಾಯಕತ್ವದ ವಿರುದ್ಧ ಹೇಳಿಕೆ ನೀಡುತ್ತಿರುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದರು. “ಸಾರ್ವಜನಿಕವಾಗಿ ಮಾಡುತ್ತಿರುವ ವಿವೇಚನೆಯಿಲ್ಲದ ಟೀಕೆಗಳನ್ನು ನಿಲ್ಲಿಸಬೇಕು. ನೆನಪಿಡಿ ಪಕ್ಷ ಮೊದಲು. ವಿವೇಚನೆಯಿಲ್ಲದ ಕೃತ್ಯಗಳಲ್ಲಿ ಭಾಗಿಯಾಗಬಾರದು. ಪಕ್ಷಕ್ಕಾಗಿ ದುಡಿಯಬೇಕು” ಎಂದು ಎಚ್ಚರಿಸಿದ್ದರು.


ಇದನ್ನೂ ಓದಿ: ರಾಜ್ಯದಲ್ಲಿ ಟಿಆರ್‌ಪಿ ಹಗರಣ ಸುಳ್ಳು: ಯಾವುದೇ ದೂರು ದಾಖಲಾಗಿಲ್ಲ ಎಂದ ಸಿಸಿಬಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...