Homeಕರ್ನಾಟಕಸಂಪುಟ ವಿಸ್ತರಣೆ: ಅಮಿತ್ ಶಾ ಬೆದರಿಕೆಗೂ ಬಗ್ಗದೆ ಆಕ್ರೋಶ ಹೊರಹಾಕಿದ ಅತೃಪ್ತರು!

ಸಂಪುಟ ವಿಸ್ತರಣೆ: ಅಮಿತ್ ಶಾ ಬೆದರಿಕೆಗೂ ಬಗ್ಗದೆ ಆಕ್ರೋಶ ಹೊರಹಾಕಿದ ಅತೃಪ್ತರು!

“ಸಾರ್ವಜನಿಕವಾಗಿ ಮಾಡುತ್ತಿರುವ ವಿವೇಚನೆಯಿಲ್ಲದ ಟೀಕೆಗಳನ್ನು ನಿಲ್ಲಿಸಬೇಕು. ನೆನಪಿಡಿ ಪಕ್ಷ ಮೊದಲು. ವಿವೇಚನೆಯಿಲ್ಲದ ಕೃತ್ಯಗಳಲ್ಲಿ ಭಾಗಿಯಾಗಬಾರದು. ಪಕ್ಷಕ್ಕಾಗಿ ದುಡಿಯಬೇಕು” ಎಂದು ಅಮಿತ್ ಶಾ ಎಚ್ಚರಿಸಿದ್ದರು.

- Advertisement -
- Advertisement -

ಸಚಿವ ಸಂಪುಟ ವಿಸ್ತರಣೆಯಿಂದ ರಾಜ್ಯ ಬಿಜೆಪಿಯಲ್ಲಿ ಅಸಮಾಧಾನ ತಲೆದೋರಿತ್ತು. ಇದರೊಟ್ಟಿಗೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ವಿರುದ್ಧವೂ ಹಲವರು ಆಕ್ರೋಶ ವ್ಯಕ್ತಪಡಿಸಿದ್ದರು. ಇದರ ಬೆನ್ನಲ್ಲೇ ಗೃಹ ಮಂತ್ರಿ ಅಮಿತ್ ಶಾ ಅತೃಪ್ತರಿಗೆ ಖಡಕ್ ಎಚ್ಚರಿಕೆ ನೀಡಿದ್ದರು. ಆದರೆ ಇದಾವುದಕ್ಕೂ ಬಗ್ಗದ ಅತೃಪ್ತರು ಮತ್ತೊಮ್ಮೆ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಶಾಸಕ ಮತ್ತು ಸಚಿವಾಕಾಂಕ್ಷಿ ಎಂ.ಪಿ.ರೇಣುಕಾಚಾರ್ಯ ಕೇಂದ್ರ ಸಚಿವ ಪ್ರಲ್ಹಾದ ಜೋಶಿಯವರಿಗೆ ದೂರು ನೀಡಿದ್ದಾರೆ. ಇನ್ನು ಶಾಸಕರಾದ ಜಿ.ಎಚ್‌.ತಿಪ್ಪಾರೆಡ್ಡಿ ಮತ್ತು ಕೆ. ಶಿವನಗೌಡ ನಾಯಕ್‌ ಬೆಂಗಳೂರಿನಲ್ಲಿ ತಮ್ಮ ಅಸಮಾಧಾನ ಹೊರಹಾಕಿದ್ದಾರೆ. ಈಗಾಗಲೇ ಸಚಿವ ಸ್ಥಾನ ಸಿಗದೇ ಅಸಮಾಧಾನಗೊಂಡಿರುವ ಶಾಸಕರಾದ ಅರವಿಂದ ಬೆಲ್ಲದ ಮತ್ತು ಬಿ.ಸಿ.ನಾಗೇಶ್‌ (ತಿಪಟೂರು) ಜತೆ ಮಾತುಕತೆ ನಡೆಸಿದ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಅವರನ್ನು ಸಮಾಧಾನಪಡಿಸಿದ್ದಾರೆ.

ಅತೃಪ್ತ ಶಾಸಕರು ಒಂದೆಡೆ ಸೇರಿ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಸಿಕ್ಕಿದ ಬೆನ್ನಲ್ಲೇ ಯಡಿಯೂರಪ್ಪ ಅವರು ಬಸವರಾಜ ಬೊಮ್ಮಾಯಿ ಮೂಲಕ ಶಾಸಕರನ್ನು ಸಂಪರ್ಕಿಸಿ ಸಮಾಧಾನಗೊಳಿಸುವ ಪ್ರಯತ್ನ ನಡೆಸಿದ್ದಾರೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ಸಂಪುಟ ವಿಸ್ತರಣೆ-ಸ್ಫೋಟಗೊಂಡ ಭಿನ್ನಮತ: ನಮ್ಮ ಭಿಕ್ಷೆಯಿಂದಲೇ ಯಡಿಯೂರಪ್ಪ ಸಿಎಂ ಆಗಿದ್ದು..!

ಪ್ರಹ್ಲಾದ್ ಜೋಶಿ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, “ಸಚಿವ ಸಂಪುಟ ವಿಸ್ತರಣೆ ಮತ್ತು ಆ ಬಳಿಕ ನಡೆದ ರಾಜಕೀಯ ಬೆಳವಣಿಗಳ ಬಗ್ಗೆ ಮಾತನಾಡಿದ್ದೇನೆ. ಸೋತವರನ್ನು ಮಂತ್ರಿ ಮಾಡಿದ್ದು ಸರಿಯಲ್ಲ. ನನಗಿಂತಲೂ ಹಿರಿಯರಾದ ಹಲವು ಶಾಸಕರು ಇದ್ದಾರೆ. ಅವರನ್ನು ಮಂತ್ರಿ ಮಾಡಬಹುದಿತ್ತು ಎಂದು ಹೇಳಿದ್ದೇನೆ. ಯೋಗೇಶ್ವರ್ ಅವರನ್ನು ಮಂತ್ರಿ ಮಾಡಿದ್ದು ಸರಿಯಲ್ಲ ಎಂಬುದನ್ನು ಮುಖ್ಯಮಂತ್ರಿ ಮತ್ತು ವರಿಷ್ಠರಿಗೆ ಹೇಳಿದ್ದೆವು. ಯೋಗೇಶ್ವರ್‌ ಅವರಿಂದಲೇ ಬಿಜೆಪಿ ಸರ್ಕಾರ ಬಂದಿತು ಎಂಬುದನ್ನು ಒಪ್ಪಲು ಸಾಧ್ಯವಿಲ್ಲ” ಎಂದರು.

“ಈಗಿರುವ ಎಲ್ಲ 32 ಸಚಿವರನ್ನೂ ಕೈಬಿಟ್ಟು, ಹೊಸದಾಗಿ ಸಂಪುಟ ರಚಿಸಬೇಕು. ಕೈಬಿಟ್ಟವರಿಗೆ ಪಕ್ಷದ ಸಂಘಟನೆ ಹೊಣೆ ಮತ್ತು ಹಿರಿತನ ಆಧರಿಸಿ ಹೊಸಬರಿಗೆ ಅವಕಾಶ ನೀಡಬೇಕು” ಎಂದು ದೇವದುರ್ಗ ಶಾಸಕ ಶಿವನಗೌಡ ನಾಯಕ್ ಒತ್ತಾಯಿಸಿದ್ದಾರೆ

ರಾಜ್ಯದಲ್ಲಿ ಸಂಪುಟ ವಿಸ್ತರಣೆಯ ಕಾವು ಬಿಜೆಪಿ ಒಳಗೆ ಏರುತ್ತಲೇ ಇದೆ. ಒಬ್ಬರ ನಂತರ ಮತ್ತೊಬ್ಬರು ತಮ್ಮ ಅಸಮಾಧಾನವನ್ನು ನೇರವಾಗಿಯೇ ಹೊರಹಾಕುತ್ತಿದ್ದಾರೆ. ಬಿಜೆಪಿಗೆ ವಲಸೆ ಬಂದವರಲ್ಲಿಯೇ ಒಡಕುಂಟಾಗಿದೆ. ಇನ್ನು ಬಿಜೆಪಿಯ ಒಳಗೆ ಹಲವು ವರ್ಷಗಳಿಂದ ದುಡಿದವರಿಗೆ ಅವಕಾಶ ನೀಡಿಲ್ಲ ಎಂದು ಮೂಲ ಬಿಜೆಪಿಗರು ಆರೋಪಿಸುತ್ತಿದ್ದಾರೆ. ಒಟ್ಟಿನಲ್ಲಿ ಈ ಸಂಪುಟ ವಿಸ್ತರಣೆಯ ಕಾವು ಭಿನ್ನಮತವಾಗಿ ಮಾರ್ಪಟ್ಟು ಈಗ ಸ್ಫೋಟಗೊಂಡಿದೆ.

ಇದನ್ನೂ ಓದಿ: ಯಾವನಾದ್ರು *** ಮಗ ನನ್ನ ಕೇಳಿದ್ದೀರಾ: ರೈತರ ವಿರುದ್ಧ ನಾಲಿಗೆ ಹರಿಯಬಿಟ್ಟ ಮಾಧುಸ್ವಾಮಿ

ಸಚಿವ ಸಂಪುಟ ವಿಸ್ತರಣೆಯಲ್ಲಿ ತಮಗೆ ಸ್ಥಾನ ಸಿಕ್ಕಿಲ್ಲ ಎಂದು ವಿಧಾನ ಪರಿಷತ್ ಸದಸ್ಯ ವಿಶ್ವನಾಥ್, ಶಾಸಕ ಯತ್ನಾಳ್, ಶಾಸಕ ರೇಣುಕಾಚಾರ್ಯ ಸೇರಿದಂತೆ ಹತ್ತಾರು ನಾಯಕರು ಯಡಿಯೂರಪ್ಪನವರ ವಿರುದ್ಧ ಬಹಿರಂಗವಾಗಿ ಆಕ್ರೋಶ ವ್ಯಕ್ತಪಡಿಸಿದ್ದರು. ಲಾಬಿ ಮಾಡಿದವರಿಗೆ ಸಚಿವ ಸ್ಥಾನ ಸಿಕ್ಕಿದೆ ಎಂದು ಆರೋಪಿಸಿದ್ದರು. ಸಿ.ಡಿ ಇಟ್ಟುಕೊಂಡು ಬ್ಲಾಕ್‌ಮೇಲ್ ಮಾಡಿದವರಿಗೆ ಸಚಿವ ಸ್ಥಾನ ನೀಡಲಾಗಿದೆ ಎಂದು ಮತ್ತೆ ಕೆಲವರು ಕಿಡಿ ಕಾರಿದ್ದರು.

ಇವುಗಳನ್ನು ಗಮನಿಸಿದ ಯಡಿಯೂರಪ್ಪ, ನಿಮಗೆ ಅಸಮಾಧಾನವಿದ್ದರೆ ದೆಹಲಿಗೆ ಹೋಗಿ ದೂರು ನೀಡಿ ಎಂದು ಸಚಿವಾಕಾಂಕ್ಷಿಗಳಿಗೆ ಖಡಕ್ ಆಗಿ ಹೇಳಿದ್ದರು. ಈ ಬೆನ್ನಲ್ಲೇ ಅಮಿತ್ ಶಾ ನೀಡಿರುವ ಈ ಹೇಳಿಕೆ ಸಚಿವಾಕಾಂಕ್ಷಿಗಳಿಗೆ ಆಘಾತ ನೀಡಿದಂತಾಗಿತ್ತು.

ಕರ್ನಾಟಕ ಪ್ರವಾಸದಲ್ಲಿದ್ದ ಗೃಹ ಮಂತ್ರಿ ಅಮಿತ್ ಶಾ ಪಕ್ಷದ ನಾಯಕತ್ವದ ವಿರುದ್ಧ ಹೇಳಿಕೆ ನೀಡುತ್ತಿರುವವರಿಗೆ ಖಡಕ್ ಎಚ್ಚರಿಕೆ ನೀಡಿದ್ದರು. “ಸಾರ್ವಜನಿಕವಾಗಿ ಮಾಡುತ್ತಿರುವ ವಿವೇಚನೆಯಿಲ್ಲದ ಟೀಕೆಗಳನ್ನು ನಿಲ್ಲಿಸಬೇಕು. ನೆನಪಿಡಿ ಪಕ್ಷ ಮೊದಲು. ವಿವೇಚನೆಯಿಲ್ಲದ ಕೃತ್ಯಗಳಲ್ಲಿ ಭಾಗಿಯಾಗಬಾರದು. ಪಕ್ಷಕ್ಕಾಗಿ ದುಡಿಯಬೇಕು” ಎಂದು ಎಚ್ಚರಿಸಿದ್ದರು.


ಇದನ್ನೂ ಓದಿ: ರಾಜ್ಯದಲ್ಲಿ ಟಿಆರ್‌ಪಿ ಹಗರಣ ಸುಳ್ಳು: ಯಾವುದೇ ದೂರು ದಾಖಲಾಗಿಲ್ಲ ಎಂದ ಸಿಸಿಬಿ ಪೊಲೀಸರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...