Homeಅಂತರಾಷ್ಟ್ರೀಯರೂಪಾಂತರಿ ವೈರಸ್‌ ಮೂಲ ವೈರಸ್‌ಗಿಂತ ಶೇ. 50-70 ರಷ್ಟು ವೇಗವಾಗಿ ಹರಡುತ್ತದೆ: WHO ಕಳವಳ

ರೂಪಾಂತರಿ ವೈರಸ್‌ ಮೂಲ ವೈರಸ್‌ಗಿಂತ ಶೇ. 50-70 ರಷ್ಟು ವೇಗವಾಗಿ ಹರಡುತ್ತದೆ: WHO ಕಳವಳ

2020ರ ಡಿಸೆಂಬರ್‌ ಮಧ್ಯ ಭಾಗದಲ್ಲಿ ಬ್ರಿಟನ್‌ನಲ್ಲಿ ರೂಪಾಂತರಗೊಂಡ ವೈರಸ್‌ ಪತ್ತೆಯಾಗಿತ್ತು. ಇದು ಮೂಲ ಕೊರೊನಾ ವೈರಸ್‌ಗಿಂತ ಶೇ.50ರಿಂದ ಶೇ.70ರಷ್ಟು ಹೆಚ್ಚು ವೇಗವಾಗಿ ಹರಡುತ್ತದೆ ಎಂದು WHO ಅಭಿಪ್ರಾಯ ಪಟ್ಟಿದೆ.

- Advertisement -
- Advertisement -

“ಬ್ರಿಟನ್‌ನಲ್ಲಿ ಪತ್ತೆಯಾದ ರೂಪಾಂತರಿ ಕೊರೊನಾ ವೈರಸ್‌ ಈಗ ಜಗತ್ತಿನ 60 ರಾಷ್ಟ್ರಗಳಲ್ಲಿ ಹರಡಿದೆ” ಎಂದು ವಿಶ್ವ ಆರೋಗ್ಯ ಸಂಸ್ಥೆ(WHO) ಕಳವಳ ವ್ಯಕ್ತಪಡಿಸಿದೆ. ಕಳೆದ ಒಂದು ವಾರದಲ್ಲಿ ರೂಪಾಂತರಿ ವೈರಸ್‌ ಪತ್ತೆಯಾಗಿರುವ ರಾಷ್ಟ್ರಗಳ ಪಟ್ಟಿಗೆ ಹೊಸದಾಗಿ 10 ದೇಶಗಳು ಸೇರ್ಪಡೆಯಾಗಿವೆ.

ಜಗತ್ತಿನಾದ್ಯಂತ ಕೊರೊನಾದಿಂದಾಗಿ 20 ಲಕ್ಷಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈಗಾಗಲೆ ಕೆಲವು ದೇಶಗಳು ಕೊರೊನಾ ವೈರಸ್‌ಗೆ ಲಸಿಕೆಯನ್ನು ಕಂಡುಹಿಡಿದಿವೆ. ಆದರೆ ಅವು ಇನ್ನೂ ಸಮರ್ಪಕವಾಗಿ ಪೂರಕವಾಗುತ್ತಿಲ್ಲ. ಹೀಗಿರುವಾಗ ಈ ಹೊಸ ರೂಪಾಂತರಿ ಕೊರನಾ ವೈರಸ್ ಮತ್ತೊಂದು ಆತಂಕವನ್ನು ಸೃಷ್ಟಿಸಿದ್ದು, ಇದು ಹರಡದಂತೆ ತಡೆಯುವುದು ಹೇಗೆ ಎಂಬುದು ಮತ್ತಷ್ಟು ಆತಂಕಕ್ಕೀಡು ಮಾಡಿದೆ.

ಬ್ರಿಟನ್‌ ರೀತಿಯೇ ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ರೂಪಾಂತರಿ ವೈರಸ್‌, ಅತಿ ವೇಗವಾಗಿ ಹರಡಬಲ್ಲದಾಗಿದೆ. ಆ ವೈರಸ್‌ 23 ರಾಷ್ಟ್ರಗಳಲ್ಲಿ ಪತ್ತೆಯಾಗಿದೆ ಎಂದು WHO ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ಕೋವಿಡ್ ಲಸಿಕೆಯಷ್ಟೇ ಸಾಕೆ? ಭವಿಷ್ಯದ ಸಾಂಕ್ರಾಮಿಕಗಳನ್ನು ಎದುರಿಸಲು ನಾವು ಸಜ್ಜಾಗಿದ್ದೇವೆಯೆ?

ಕೊರೊನಾ ಸೋಂಕಿನಿಂದಾಗಿ ಕಳೆದ 7 ದಿನಗಳಲ್ಲಿ ಜಗತ್ತಿನಾದ್ಯಂತ ಸುಮಾರು 93,000 ಮಂದಿ ಸಾವಿಗೀಡಾಗಿದ್ದರೆ. ಇದೇ ಅವಧಿಯಲ್ಲಿ 47 ಲಕ್ಷ ಹೊಸ ಪ್ರಕರಣಗಳು ದಾಖಲಾಗಿವೆ ಎಂದು ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

2020ರ ಡಿಸೆಂಬರ್‌ ಮಧ್ಯ ಭಾಗದಲ್ಲಿ ಬ್ರಿಟನ್‌ನಲ್ಲಿ ರೂಪಾಂತರಗೊಂಡ ವೈರಸ್‌ ಪತ್ತೆಯಾಗಿತ್ತು. ಇದು ಮೂಲ ಕೊರೊನಾ ವೈರಸ್‌ಗಿಂತ ಶೇ.50ರಿಂದ ಶೇ.70ರಷ್ಟು ಹೆಚ್ಚು ವೇಗವಾಗಿ ಹರಡುತ್ತದೆ ಎಂದು WHO ಅಭಿಪ್ರಾಯ ಪಟ್ಟಿದೆ.

ಎರಡೂ ರೀತಿಯ ರೂಪಾಂತರಗೊಂಡ ವೈರಸ್‌ ವೇಗವಾಗಿ ಹರಡಬಹುದಾಗಿದ್ದರೂ ಸಹ, ಅವು ಪ್ರಾಣಕ್ಕೆ ಹೆಚ್ಚು ಅಪಾಯಕಾರಿಯಾಗಬಹುದೆಂದು ಪರಿಗಣಿಸಿಲ್ಲ. ಈಗ ಅಭಿವೃದ್ಧಿಪಡಿಸಿರುವ ಲಸಿಕೆಯು ಬ್ರಿಟನ್‌ನಲ್ಲಿ ಪತ್ತೆಯಾಗಿರುವ ಬಿ117 ವೈರಸ್‌ ತಡೆಯುವುದರಲ್ಲಿಯೂ ಪರಿಣಾಮಕಾರಿಯಾಗಿದೆ ಎಂದು ಫೈಝರ್‌ ಮತ್ತು ಜರ್ಮನಿಯ ಬಯೊ ಎನ್‌ಟೆಕ್‌ ಹೇಳಿವೆ.


ಇದನ್ನೂ ಓದಿ: ಪ್ರಯೋಗ ಪೂರೈಸದ ಲಸಿಕೆಗೆ ತರಾತುರಿಯಲ್ಲಿ ಅನುಮತಿ ನೀಡಲಾಗಿದೆಯೆ?: ಅಘಾತಕಾರಿ ಮಾಹಿತಿ ಬಿಚ್ಚಿಟ್ಟ ಆರ್‌ಟಿಐ ಕಾರ್ಯಕರ್ತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...