Homeಅಂಕಣಗಳುಓಡಿಒಪಿ: ಎಲ್ಲದರೊಳಗು ಸ್ವತಂತ್ರ ಬೇಕು ಅಂದ್ರ ಹೆಂಗ? 1947ರೊಳಗ ಸಿಕ್ಕದಲ್ಲಾ ಸಾಕು

ಓಡಿಒಪಿ: ಎಲ್ಲದರೊಳಗು ಸ್ವತಂತ್ರ ಬೇಕು ಅಂದ್ರ ಹೆಂಗ? 1947ರೊಳಗ ಸಿಕ್ಕದಲ್ಲಾ ಸಾಕು

ಕೇಂದ್ರ ಕೃಷಿ ಮಂತ್ರಿ ನರೇಂದ್ರ ಸಿಂಗ್ ತೋಮರ. ಪ್ರಧಾನಿಯವರ ಹೆಸರನ್ನೇ ಇಟ್ಟುಕೊಂಡ ಈ ಸಚಿವರು ಅವರ ಹಂಗೇನೇ ಒಂದು ಆನ್‌ಲೈನ್ ಭಾಷಣ ಮಾಡಿದರು. ಅದರೊಳಗ ನಾವು ಈಗ ಏನು ಮಾಡಲಿಕ್ಕ ಹೊಂಟೆವಿ ಅಂದ್ರ ಅದು ಬಹಳ ಮುಖ್ಯ ಅದ. ಅದು ರೈತರಿಗೆ ಒಳ್ಳೆಯದಾಗತದ. ಅದನ್ನು ಎಲ್ಲರೂ ಸ್ವಾಗತಿಸಬೇಕು, ಅಂತ ಅಂದ್ರು. ಅದು ಎನಪಾ ಅಂದ್ರ ಒನ್ ಡಿಸ್ಟ್ರಿಕ್ಟ್ ಒನ್ ಕ್ರಾಪ್ ಅರ್ಥಾತ್ ಒಂದು ಜಿಲ್ಲೆ ಒಂದು ಬೆಳೆ .

- Advertisement -
- Advertisement -

ಕೋವಿಡ್ ಅನ್ನೋದು ಜನರಿಗೆ ಭಾರಿ ಕಷ್ಟ ಕೊಡುವ ಭೂತ ಆಗಿದ್ದರೂ, ಸರ್ಕಾರಕ್ಕ ದೇವರು ಕೊಟ್ಟ ವರ ಆಗಿಬಿಟ್ಟದ.

ಮೊದಲಿಗೆಲ್ಲಾ ಏನಾದರೂ ಸರ್ಕಾರಿ ಯೋಜನೆ, ಕಾರ್ಯಕ್ರಮ ಮಾಡೋದಿದ್ದರ ಅದಕ್ಕೊಂದು ದೊಡ್ಡ ಪೆಂಡಾಲ ಹಾಕಿ, ಮೈಕು ಸೆಟ್ಟು ತಂದು, ಅದರಾಗ ಎಸ್.ಪಿ ಬಾಲಸುಬ್ರಮಣ್ಯಂ ಹಾಡು ಹಾಕಿಸಿ, ಮೈದಾನದಾಗ ಕುರ್ಚಿ ಹಾಕಿ, ಆ ಕುರ್ಚಿ ಮ್ಯಾಲೆ ಕೂಡಲಿಕ್ಕೆ ಸಾವಿರಾರು ಜನನ ಹಿಡಕೊಂಡು ಬಂದು ಕೂಡಿಸಿ, ಅವರಿಗೆ ಊಟದ ವ್ಯವಸ್ಥಾ ಮಾಡಿ, ಇಷ್ಟೆಲ್ಲಾ ಮಾಡಿದ ಮ್ಯಾಲೆ ಭಾಷಣ ಮಾಡೋರನ್ನ ಕರಕೊಂಡು ಬಂದು ಅವರಿಗೆ ಭಾಷಣ ಬರದುಕೊಟ್ಟು, ಅವರ ಕಡೆ ಮಾತು ಆಡಿಸಿ, ಸಾಲಿ ಹುಡುಗರ ಕಡೆ ಸ್ವಾಗತ ಗೀತೆ ಹೇಳಿಸಿ, ಉದ್ದನ ಜಡೆ ಹುಡುಗಿಯರ ಕಡೆ ಬಹುಮಾನದ ತಾಟು ಕೊಟ್ಟು, ಐದಾರು ಸರತೆ ಅಡ್ಡಾಡಿಸಿ, ಕಡಿಕೆ ಕನ್ನಡ ಸಾಲಿ ಮಾಸ್ಟರ್ ಕಡೆ ಅಭಿನಂದನಾ ಭಾಷಣ ಮಾಡಿಸಿ, ಅವರು ಎಲ್ಲಾರಿಗೆ ಧನ್ಯವಾದ ಹೇಳಿ ಜೈ ಹಿಂದ್ ಜೈ ಕರ್ನಾಟಕ ಹೇಳಿದ ಮ್ಯಾಲೆ ಕಾರ್ಯಕ್ರಮ ಮುಗುದ ಹೋಗತಿತ್ತು.

ಈಗ ಈ ಕೊರೊನಾ ರಾಕ್ಷಸನ ಸಲುವಾಗಿ ಎಲ್ಲಾ ಆಫ್‌ಲೈನ್ (ಅಂದ್ರ ಮೈದಾನದ ಒಳಗ ಎಲ್ಲಾರ ಮುಂದ ಖುಲ್ಲಮ ಖುಲ್ಲ ಕಾರ್ಯಕ್ರಮ) ಬಂದ್ ಆಗಿ ಬರೆ ಆನ್‌ಲೈನ್ (ಅಂದ್ರ ಬಾಗಿಲು ಮುಚ್ಚಿಕೊಂಡು ಕಂಪ್ಯೂಟರ್‌ದಾಗ ಮಾತಾಡೋದು) ಚಾಲೂ ಆಗಿಬಿಟ್ಟಾವು.

ಮೈದಾನದ ಕಾರ್ಯಕ್ರಮ ಆದರ ಪೇಪರ್, ಟಿವಿಯವರು ಬರತಿದ್ದರು, ಭಾಷಣ ಕೇಳತಿದ್ದರು, ಎನಾರ ಸುದ್ದಿ ಆಗತಿತ್ತು. ಈಗ ಮುಚ್ಚಿದ ಬಾಗಲ ಹಿಂದ ಏನು ನಡಿತದೋ ಏನೋ, ಗೊತ್ತಿಲ್ಲ. ಅವರು ಇದು ಸುದ್ದಿ ಅಂತ ಹೇಳಿದ್ದು, ಇದನ್ನ ಬರೀರಿ, ಇದನ್ನ ಬರಿಬೇಡ್ರಿ, ಅಂತ ಫರ್ಮಾನು ಹೊರಡಿಸಿಬಿಟ್ಟರ ಆತು. ಅದೇ ಸುದ್ದಿ. ಕಾರ್ಯಕ್ರಮ ಮುಗದು ಧನ್ಯವಾದ ಅಂತ ಹೇಳೋ ಮೊದಲೇ ಅದರ ಸುದ್ದಿ ನಮ್ಮ ಸಾಮಾಜಿಕ ಜಾಲತಾಣದಾಗ ಬಂದುಬಿಟ್ಟಿರತದ. ಅದಕ್ಕಿಂತ ಮೊದಲ ಅದರ ಪರ-ವಿರೋಧದ ಚರ್ಚೆ ಆರಂಭ ಆಗಿ ದೋಸ್ತರ ನಡುವೆ ಜಗಳ ಆಗಿಬಿಟ್ಟಿರತದ. ಇಂತಹುದೆ ಒಂದು ಆನ್‌ಲೈನ್ ಕಾರ್ಯಕ್ರಮ ದೆಹಲಿಯ ದಂತ ಗೋಪುರದ ಯಾವುದೋ ಒಂದು ಕೋಣೆಯ ಒಂದು ಮುಚ್ಚಿದ ಬಾಗಿಲ ಹಿಂದೆ ನಡೆಯಿತು. ಅದರ ಹೆಸರು ಓಡಿಒಪಿ. ಅದನ್ನ ಮಾಡಿ ಓಡಿಹೋದವರು ಕೇಂದ್ರ ಕೃಷಿ ಮಂತ್ರಿ ನರೇಂದ್ರ ಸಿಂಗ್ ತೋಮರ. ಪ್ರಧಾನಿಯವರ ಹೆಸರನ್ನೇ ಇಟ್ಟುಕೊಂಡ ಈ ಸಚಿವರು ಅವರ ಹಂಗೇನೇ ಒಂದು ಆನ್‌ಲೈನ್ ಭಾಷಣ ಮಾಡಿದರು.

ಅದರೊಳಗ ನಾವು ಈಗ ಏನು ಮಾಡಲಿಕ್ಕ ಹೊಂಟೆವಿ ಅಂದ್ರ ಅದು ಬಹಳ ಮುಖ್ಯ ಅದ. ಅದು ರೈತರಿಗೆ ಒಳ್ಳೆಯದಾಗತದ. ಅದನ್ನು ಎಲ್ಲರೂ ಸ್ವಾಗತಿಸಬೇಕು, ಅಂತ ಅಂದ್ರು. ಅದು ಎನಪಾ ಅಂದ್ರ ಒನ್ ಡಿಸ್ಟ್ರಿಕ್ಟ್ ಒನ್ ಕ್ರಾಪ್ ಅರ್ಥಾತ್ ಒಂದು ಜಿಲ್ಲೆ ಒಂದು ಬೆಳೆ.

ಅದೇ ಧಾಟಿಯೊಳಗ ನಮ್ಮ ತೆರೆಯ ಮೇಲಿನ ಕೌರವ ಹಾಗೂ ತೆರೆಯ ಹಿಂದಿನ ನಾಯಕನಾದ ಬಸನಗೌಡ ಚನ್ನ ಬಸನಗೌಡ ಪಾಟೀಲ್, ಕೃಷಿ ಮಂತ್ರಿಗಳು ಸಾಕಿನ ಹೀರೆಕೆರೂರು – ಬ್ಯಾಡಗಿಲ್ಲಿ ಒಂದು ಖತರನಾಕ ಡೈಲಾಗ್ ಹೊಡೆದರು. ರೈತರು ವೀಕ್ ಮೈಂಡ್ ಆಗಿ ಸೆಲ್ಫ್ ಸೂಯಿಸೈಡ್ ಮಾಡಿಕೊಳತಾರ ಅಂತ ಒಂದು ಬಿಟ್ಟು ಎರಡು ಸಾರಿ ಹೇಳಿದರು. ಅದಕ್ಕೆ ಸರ್ಕಾರದ ನೀತಿ ಕಾರಣ ಅಲ್ಲ ಅಂತನೂ ಹೇಳಿದರು.

PC : KNN India

ಇವೆಲ್ಲ ಬಿಡಿ. ಅವರು ಹೇಳಿದ ದೊಡ್ಡ ಮಾತು ಅಂದ್ರ ಓಡಿಒಪಿ ಅನ್ನುವುದು ರೈತರ ಕಲ್ಯಾಣಕ್ಕಾಗಿ ಆಕಾಶದಿಂದ ಇಳಿದುಬಂದ ಯೋಜನೆ ಅಂತ.

ಹಂಗಾರ ಈ ಯೋಜನೆ ಏನು? ಎಲ್ಲಿಂದ ಬಂತು? ಇದರಾಗ ಒಂದು ಮಾತು ಎನಪಾ ಅಂದ್ರ ಖಾಸಗಿ ಕಂಪನಿಯವರು ನಾವು ಈ ವರ್ಷ ಈ ಆಹಾರ ಖಾದ್ಯವನ್ನು ಪ್ಲಾಸ್ಟಿಕ್ ಚೀಲದೊಳಗ ಪ್ಯಾಕ್ ಮಾಡಿ ಮಾರಾಟ ಮಾಡಬೇಕು ಅಂತ ಮಾಡೇವಿ ಅಂತ ಸರ್ಕಾರಕ್ಕ ಹೇಳತಾರ. ಸರಕಾರ ಜಿ ಹಾಂ ಅಂತ ಹೇಳಿ ರೈತರಿಗೆ ಇದನ್ನ ಬೆಳೆಯಿರಿ ಅಂತ ಹೇಳತದ. ಸರಕಾರ ಹೇಳತದ ಅಂತ ನಮ್ಮವರು ಬೆಳಿತಾರ. ಅದನ್ನ ಆ ಕಂಪನಿಯವರು ಖರೀದಿ ಮಾಡಿ ಅದನ್ನ ಒಣಗಿಸಿ, ಉಪ್ಪು ಖಾರ ಹಾಕಿ ಮಾರಾಟ ಮಾಡತಾರ. ಇದರೊಳಗ ಪ್ಲಾಸ್ಟಿಕ್ ಚೀಲ ಮಾಡಿದವರು ಒಬ್ಬರು, ಆಹಾರ ಧಾನ್ಯ ಬೆಳೆದವರು ಇನ್ನೊಬ್ಬರು, ಉಪ್ಪು ಖಾರ ಹಾಕುವ ಜಾಬ್ ವರ್ಕ್ ಮಾಡಿವರು ಮತ್ತೊಬ್ಬರು. ಆದರ ಫಾಯದಾ ಮಾಡಿಕೊಂಡವರು ಮಾತ್ರ ಸರ್ಕಾರದ ಗೆಳೆಯರಾಗಿರುವ ಕಂಪನಿಯವರು.

ಆ ಕಂಪನಿಗಳಿಗೆ ಬಹಳ ಓಡಾಟ ಆಗಬಾರದು. ಅವರಿಗೆ ಬ್ಯಾರೆ ಬ್ಯಾರೆ ಊರಿನ ನೀರು ಕುಡಿದು ನೆಗಡಿ-ಕೆಮ್ಮ ಆಗಬಾರದು ಅಂತ ಸರ್ಕಾರದವರು ಒಂದು ಜಿಲ್ಲೆಗೆ ಒಂದು ಬೆಳೆ ಸಿಗೋ ಹಂಗ ಆಗಬೇಕು ಅಂತ ಹೇಳಿ ರೈತರಿಗೆ ಈ ಯೋಜನೆ ತೊಗೊಂಡು ಬಂದಾರ.

ರೈತರು ಎನಂದರೂ ಶ್ರಮ ಜೀವಿಗಳು, ಬಿಸಿಲು-ಮಳೆ-ಚಳಿ-ಗಾಳಿ ಒಳಗ ಕೆಲಸ ಮಾಡಿ ಅಭ್ಯಾಸ ಇದ್ದವರು. ಪಾಪ, ಕಂಪನಿ ಒಳಗ ಕೆಲಸ ಮಾಡೋ ಎಂಬಿಎಗಳಿಗೆ ಜಮೀನಿಗೆ ಹೋಗು ಅಂದ್ರ ಹೆಂಗ? ಕೆಲಸ ಮಾಡೋ ಮುಂದ ಅವರ ಸೂಟು-ಬೂಟು ಟೈ ತೆಗೆದು ಇಡಲಿಕ್ಕೆ ಜಮೀನು ಒಳಗ ಶುಭ್ರ ವಾದ ಸ್ವಚ್ಛ ಜಾಗ ಎಲ್ಲೆ ಸಿಗಬೇಕು?

ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದ ಕೃಷಿ ಸಚಿವ ಬಿ.ಸಿ.ಪಾಟೀಲ್
ಬಿ.ಸಿ. ಪಾಟೀಲ್.

ಸರಕಾರ ಹೇಳಿದ ಹಂಗ ಕೇಳಿದರ ಸರಕಾರ ಎಲ್ಲಾ ರೀತಿಯ ತರಬೇತಿ-ಸಹಕಾರ ಕೊಡತದ. ಅಮೆರಿಕ-ಯೂರೋಪುನಲ್ಲಿ ಓದಿ ಓಡೋಡಿ ಬಂದ, ತಮ್ಮ ಜೀವನದಲ್ಲಿ ಕೇವಲ ಯೂಟ್ಯೂಬುಗಳಲ್ಲಿ ಮಾತ್ರ ಜಮೀನು ನೋಡಿ ಎಲ್ಲಾ ಕಲೆ ಕಲಿತುಕೊಂಡಿರುವ ಕೃಷಿ ಪಂಡಿತರು ತಲೆತಲಾಂತರದಿಂದ ಕೃಷಿ ಮಾಡುತ್ತಿರುವ ರೈತರಿಗೆ ತರಬೇತಿ ಕೊಡತಾರ. ಪೂರ್ತಿ ಇಂಗ್ಲಿಷಿನಲ್ಲಿ ಮಾತ ಆಡೋದಿಲ್ಲ. ನಡುನಡುವೆ ಕನ್ನಡ ಮಾತು ಅಡತಾರ. ‘ನಾ ಹೇಳ್ತಾ ಇರೋದು ತಿಳಿತಲ್ಲಾ, ಇಟ್ ಈಸ್ ವೆರೀ ಸಿಂಪಲ್’ ಅಂತ ಎಲ್ಲಾ ಕನ್ನಡ ಮಾತಾಡತಾರ.

ಕಂಪನಿಯವರು ಬೀಜ ಕೊಡತಾರ, ಗೊಬ್ಬರ ಕೊಡತಾರ, ಸಾಲ ಕೊಡತಾರ, ಡ್ರಿಪ್ ಇರಿಗೇಷನ್ ಕೊಡತಾರ, ಅವರ ಮಾತು ಕೇಳಿದರ ಇಸ್ರೇಲಿಗೆ ಕರಕೊಂಡು ಹೋಗತಾರ.

ಹಂಗ ಅಂತ ಯಾರಾದರೂ ರೈತರು ಅವರ ಮಾತು ಕೇಳಲೆ ಇಲ್ಲ ಅಂದ್ರ ಏನು ಮಾಡತಾರ? ಏನು ಮಾಡೋದಿಲ್ಲ. ಬಹಳ ಅಂದ್ರ ಸರಳ ಸಾಲ ಸಿಗಲಿಕ್ಕೆ ಇಲ್ಲ, ಬೀಜ ಗೊಬ್ಬರ ಕಷ್ಟ ಆಗಬಹುದು, ಬೆಳೆ ವಿಮೆ ಕಷ್ಟ ಆಗಬಹುದು, ಅಷ್ಟ. ಅಥವಾ ರೈತರಿಗೆ ತಮಗೆ ಬೇಕಾದ ಬೆಳೆ ಬೆಳಿಯಲಿಕ್ಕೆ ಆಗಲಿಕ್ಕಿಲ್ಲ. ಎಲ್ಲದರೊಳಗು ಸ್ವತಂತ್ರ ಬೇಕು ಅಂದ್ರ ಹೆಂಗ? 1947ರೊಳಗ ಸಿಕ್ಕದಲ್ಲಾ ಸಾಕು.

ರೊಕ್ಕ ಅನ್ನೋದು ಎಲ್ಲಕ್ಕಿಂತ ದೊಡ್ಡದು. ಸ್ವಾತಂತ್ರ ಯಾರಿಗೆ ಬೇಕು? ಅಷ್ಟೂ ಗೊತ್ತಿಲ್ಲ ಅಂದ್ರ ಹೆಂಗ?


ಇದನ್ನೂ ಓದಿ: ಟ್ರ್ಯಾಕ್ಟರ್ ರ್‍ಯಾಲಿಗೆ ಪೊಲೀಸರ ಕೆಲವು ಷರತ್ತುಗಳು: ಒಪ್ಪದ ರೈತ ಸಂಘಟನೆಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...