Homeಅಂಕಣಗಳುಚುನಾವಣಾ ಅಕ್ರಮ ತಡೆಯುವ ವಿಧಾನ ಸರಿಯಿದೆಯೇ?

ಚುನಾವಣಾ ಅಕ್ರಮ ತಡೆಯುವ ವಿಧಾನ ಸರಿಯಿದೆಯೇ?

- Advertisement -
- Advertisement -

ಚುನಾವಣಾ ಆಯೋಗ ಪೋಲೀಸ್ ಇಲಾಖೆ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಲ್ಲವೂ ಚುನಾವಣಾ ಭ್ರಷ್ಟಾಚಾರ ತಡೆಯುವುದರಲ್ಲಿ ಸೋತಿವೆ. ಇಲ್ಲವೇ ಚುನಾವಣೆಗೆ ನಿಲ್ಲುವ ಅಭ್ಯರ್ಥಿಗಳಿಗೆ ಸಹಾಯಕವಾಗಿವೆ ಎಂದು ಖಚಿತವಾಗಿ ಹೇಳಬಹುದು.

ನಾನು ನನ್ನ ಅನುಭವದಿಂದ ಈ ಗುರುತರ ಆಪಾದನೆಯನ್ನು ಮಾಡುತ್ತಿದ್ದೇನೆ. ದಿವಂಗತ ಪ್ರಭಾಕರ ರೆಡ್ಡಿ ಮತ್ತು ನಾನು ಕೂಡಿಕೊಂಡು ಕರ್ನಾಟಕ ಭ್ರಷ್ಟಾಚಾರ ನಿರ್ಮೂಲನಾ ಸಮಿತಿ ರಚಿಸಿದ್ದೆವು. ನಾವು ಒಮ್ಮೆ ರಾಜ್ಯದ ಚುನಾವಣಾ ಆಯೋಗದ ಕಚೇರಿ ಮುಂದೆ ಧರಣಿ ನಡೆಸಿದೆವು. ಆ ನಂತರ ಒಂದು ಡಿಮ್ಯಾಂಡ್ ಅವರ ಮುಂದಿಟ್ಟೆವು. ಡಿಮ್ಯಾಂಡ್ ಇದು – ನೀವು ಚುನಾವಣೆ ಸಮಯದಲ್ಲಿ ಇಷ್ಟು ಬ್ಯಾರಲ್ ಮದ್ಯ ಹಿಡಿದೆವು, ಇಷ್ಟು ಕೋಟಿ ಸಾಗಿಸುತ್ತಿದ್ದ ಹಣ ಜಪ್ತಿ ಮಾಡಿದೆವು, ಸೀರೆ-ಪಂಚೆ ಸಾವಿರ ಗಟ್ಟಲೆ ಹಿಡಿದೆವು, ಚಿನ್ನ-ಬೆಳ್ಳಿ ಸಾಮಾನು ಹಿಡಿದೆವು ಎಂದು ಚುನಾವಣೆ ಮುಗಿಯುವವರೆಗೆ ಪತ್ರಿಕೆಗೆ ವರದಿ ಮಾಡುತ್ತೀರಿ. ಆದರೆ ಮುಂದೆ ಹಿಡಿದ ಹಣ, ಮದ್ಯ, ಜವಳಿ, ಚಿನ್ನ-ಬೆಳ್ಳಿ ಸಾಮಾನುಗಳು ಏನಾದವು? ಎಲ್ಲಿ ಹೋದವು, ಹಿಡಿದವರನ್ನು ನ್ಯಾಯಾಲಯದ ಮುಂದೆ ನಿಲ್ಲಿಸಿದಿರಾ? ನೀವು ಹಿಡಿದವರಲ್ಲಿ ಎಷ್ಟು ಜನಕ್ಕೆ ಏನು ಶಿಕ್ಷೆಯಾಗಿದೆ? ಯಾವುದನ್ನೂ ನೀವು ಪ್ರಕಟಿಸುವುದಿಲ್ಲ. ಹಿಡಿದ ಎಲ್ಲ ಹಣ, ಮದ್ಯ ಇತರ ಸಾಮಗ್ರಿಗಳು ನಿಮ್ಮ ಮನೆಗಳಲ್ಲಿದೆಯೇ? ಖಜಾನೆಯಲ್ಲಿದೆಯೇ? ನ್ಯಾಯಾಲಯದ ವಶದಲ್ಲಿದೆಯೇ? ಪೋಲೀಸ್ ಠಾಣೆಗಳಲ್ಲಿದೆಯೇ? ಒಂದೂ ಗೊತ್ತಾಗುವುದಿಲ್ಲ. ಆದ್ದರಿಂದ ಪ್ರತಿ ಒಂದು ಸಾರಿ ಸಾರ್ವತ್ರಿಕ ಚುನಾವಣೆಗಳು ನಡೆದಾಗಲೂ ಈ ಕುರಿತು ಒಂದು ಶ್ವೇತ ಪತ್ರ ಹೊರಡಿಸಿ ಎಂದು ಪಟ್ಟು ಹಿಡಿದೆವು.

ಚುನಾವಣಾ ಕಚೇರಿಯವರು ಚುನಾವಣಾ ಸಂದರ್ಭದಲ್ಲಿ ಹಿಡಿಯಲಾದ ಎಲ್ಲವನ್ನೂ ನಾವು ಪೋಲೀಸರ ವಶಕ್ಕೆ ಕೊಡುತ್ತೇವೆ. ಅವರೇ ಕೇಸುಗಳನ್ನು ಹಾಕುತ್ತಾರೆ. ನಾನು ಎಲ್ಲಾ ಎಸ್‌ಪಿಗಳಿಗೆ ಪತ್ರ ಬರೆದು ನಿಮಗೆ ನೀವು ಕೇಳಿರುವ ಎಲ್ಲಾ ವಿವರಗಳನ್ನು ಕೊಡಲು ತಿಳಿಸುತ್ತೇನೆ ಎಂದು ಹೇಳಿ ಜವಾಬ್ದಾರಿಯಿಂದ ಜಾರಿಕೊಂಡರು. ನಾಲ್ಕಾರು ತಿಂಗಳ ಮೇಲೆ ನಮಗೆ ಎರಡು ಜಿಲ್ಲೆಗಳ ಎಸ್‌ಪಿಗಳಿಂದ ‘ನಮ್ಮ ಜಿಲ್ಲೆಯಲ್ಲಿ ಇಂತಹ ಪ್ರಸಂಗಗಳು ನಡೆದೇ ಇಲ್ಲ’ ಎಂಬ ಉತ್ತರ ಬಂದಿತ್ತು. ಉಳಿದ ಜಿಲ್ಲೆಗಳ ಯಾವ ಎಸ್‌ಪಿಯೂ ಉತ್ತರ ನೀಡುವ ಗೋಜಿಗೆ ಹೋಗಲಿಲ್ಲ. ಪೋಲೀಸ್ ವರಿಷ್ಠರ ಕಚೇರಿಗೆ ಹೋಗಿ ಅವರಿಗೆ ಎಸ್‌ಪಿಗಳ ಬೇಜವಬ್ದಾರಿಯುತ ಮೌನದ ಬಗೆಗೆ ತಿಳಿಸಿದೆವು.

ಮಾತುಕತೆಯೆಲ್ಲ ಆದಮೇಲೆ ಅವರು ತಿಳಿಸಿದ್ದು ಹೀಗೆ;- ‘ಚುನಾವಣೆಯ ಸಂದರ್ಭದಲ್ಲಿ ವಶಪಡಿಸಿಕೊಳ್ಳುವ ಎಲ್ಲಾ ಹಣವನ್ನು ಖಜಾನೆಗೆ ಕಟ್ಟಲಾಗುತ್ತದೆ, ಮದ್ಯವನ್ನು ನಾಶ ಮಾಡಲಾಗುತ್ತದೆ. ಆದರೆ ಇತರ ವಸ್ತುಗಳ ಬಗೆಗೆ ನಮಗೆ ಮಾಹಿತಿ ಇಲ್ಲ’ ಎಂದರು. ಜಪ್ತಿಯಾದ ಉಳಿಕೆ ಸಾಮಾನುಗಳು ಏನಾದವು? ಅದನ್ನು ಹೊಂದಿದ್ದವರ ಮೇಲೆ ಖಟ್ಲೆ ಹೂಡಲಾಯಿತೆ? ಅವರಿಗೆ ಶಿಕ್ಷೆ ಆಯಿತೆ? ಅವರು ಯಾವ ಅಭ್ಯರ್ಥಿಗಾಗಿ ಹಣ ತೆಗೆದುಕೊಂಡು ಹೋಗುತ್ತಿದ್ದರು? ಅಭ್ಯರ್ಥಿಯನ್ನು ನ್ಯಾಯಾಲಯದ ಮುಂದೆ ನಿಲ್ಲಿಸಲಾಯಿತೆ? ಅವರಿಗಾದ ಶಿಕ್ಷೆ ಏನು? ಇದರ ಮಾಹಿತಿಯನ್ನು ಯಾರೂ ಒದಗಿಸಲಿಲ್ಲ.

ಅಂದರೆ ಚುನಾವಣೆಯ ಸಂದರ್ಭದಲ್ಲಿ ಯಾವತ್ತೂ ನಡೆಯುವ ಪ್ರಹಸನ ಇದು. ಚುನಾವಣಾ ಆಯೋಗ ಚುನಾವಣೆಯ ಸಂದರ್ಭದಲ್ಲಿ ನಡೆಯುವ ದುರ್ವ್ಯವಹಾರಗಳನ್ನು ತಡೆಗಟ್ಟುವ ಹೊಣೆಗಾರಿಕೆಯಿಂದ ನುಣುಚಿಕೊಳ್ಳುತ್ತದೆ ಎಂಬುದಕ್ಕೆ ಇದಕ್ಕಿಂತ ಉತ್ತಮ ನಿದರ್ಶನ ಬೇಕೆ? ಚುನಾವಣಾ ಆಯೋಗಕ್ಕೆ, ಪೋಲಿಸರಿಗೆ, ಚುನಾವಣಾಧಿಕಾರಿಗಳಿಗೆ ನಿಜವಾಗಿ ಚುನಾವಣೆಯನ್ನು ಪರಿಶುದ್ಧಗೊಳಿಸಬೇಕೆಂಬ ಕಾತರವಿದ್ದಿದ್ದರೆ ಅವರು ಇಷ್ಟು ಬೇಜವಾಬ್ದಾರಿಯಿಂದ ನಡೆದುಕೊಳ್ಳುತ್ತಿರಲಿಲ್ಲ. ಚುನಾವಣೆಯನ್ನು ಸುಧಾರಿಸಬೇಕೆಂಬ ಉತ್ಕಟೇಚ್ಛೆ ಇವರಿಗೆಲ್ಲ ಇದ್ದಿದ್ದರೆ ಈ ಎಲ್ಲಾ ಬಗೆಯ ಭ್ರಷ್ಟಾಚಾರವನ್ನು ತಡೆಗಟ್ಟಲು ಅವರು ಆದ್ಯತೆ ನೀಡುತ್ತಿದ್ದರು. ಅವರೆಲ್ಲ ಕಾಟಾಚಾರಕ್ಕೆ, ಜನರ ಕಣ್ಣಿಗೆ ಮಣ್ಣೆರಚುವುದಕ್ಕೆ ಕಾಟಾಚಾರದ ತಪಾಸಣೆ ಮಾಡುತ್ತಾರೆ. ರಾಜಕೀಯ ಪಕ್ಷಗಳಿಗೆ ಚುನಾವಣಾ ಆಯೋಗದ ಹಾಗೂ ಪೋಲೀಸರ ಬೇಜವಾಬ್ದಾರಿತನ ಒಂದು ವರವಾಗಿ ಪರಿಣಮಿಸಿದೆ.

ನಾನು ಈ ಬಗೆಗೆ ಚುನಾವಣಾ ಆಯೋಗಕ್ಕೆ, ಒಂದು ಪತ್ರ ಬರೆದಿದ್ದೆ. ಅವರು ಆ ಪತ್ರಕ್ಕೆ ಉತ್ತರ ನೀಡುವ ಸೌಜನ್ಯವನ್ನು ತೋರಲಿಲ್ಲ.

ಚುನಾವಣಾ ಪದ್ದತಿಯಲ್ಲಿ ರೂಢಮೂಲ ಬದಲಾವಣೆಗಳನ್ನು ತರಬೇಕೆಂದು ನ್ಯಾ.ತಾರ್ಕುಂಡೆಯವರು ಮೊದಲುಗೊಂಡು ನೂರಾರು ಮಂದಿ ಸಲಹೆಗಳನ್ನು ನೀಡಿದ್ದಾರೆ. ಚುನಾವಣೆಯಲ್ಲಿ ಸುಧಾರಣೆ ಚುನಾವಣಾ ಆಯೋಗಕ್ಕೂ ಬೇಕಾಗಿಲ್ಲ, ಸರ್ಕಾರಕ್ಕೂ ಬೇಕಾಗಿಲ್ಲ. ಪಾರ್ಲಿಮೆಂಟ್ ಸದಸ್ಯರಿಗೆ ಈ ಸುಧಾರಣೆ ಆದರೆ ತಮಗೆ ಅಸ್ತಿತ್ವವಿಲ್ಲದೆ ಹೋಗುವುದೆಂಬ ಭಯವಿರುವುದರಿಂದ ಅವರು ಮೌನವನ್ನವಲಂಬಿಸುತ್ತಾರೆ.

ಶೇಷನ್ ಚುನಾವಣಾ ಆಯೋಗದ ಅಧ್ಯಕ್ಷರಾಗಿದ್ದಾಗ ಈಗ ಇರುವ ಕಾಯ್ದೆಗಳನ್ನೇ ಬಳಸಿಕೊಂಡು ಚುನಾವಣೆಯ ಅನೇಕ ಅಕ್ರಮಗಳನ್ನು ತಡೆದರು. ಪಾರ್ಲಿಮೆಂಟ್ ಸದಸ್ಯರಿಗೆ ಸರ್ಕಾರಗಳಿಗೆ ನಡುಕ ಹುಟ್ಟಿಸಿದ್ದರು. ಶೇಷನ್‌ರವರಾದ ಮೇಲೆ ಅಧಿಕಾರಕ್ಕೆ ಬಂದ ಯಾವ ಚುನಾವಣಾ ಆಯೋಗದ ಸದಸ್ಯರಿಗೂ ಶೇಷನ್‌ರವರ ಗಟ್ಸ್ ಇಲ್ಲವಾದ್ದರಿಂದ ಬದಲಾಗಿದ್ದ ಚುನಾವಣಾ ಪದ್ಧತಿ, ರಿವರ್ಸ್ಗೇರ್ ಹೊಡೆಯಿತು. ಅಪ್ಪ ಹಾಕಿದ ಆಲದಮರಕ್ಕೇ ನೇಣು ಹಾಕಿಕೊಳ್ಳುತ್ತಿದ್ದಾರೆ, ಶೇಷನ್ ನಂತರ ಬಂದ ಚುನಾವಣಾ ಆಯೋಗದ ಸದಸ್ಯರು.

ಸರ್ಕಾರ ನಡೆಸುವವರು ಯಾವ ಪಕ್ಷದವರಾದರೂ ಸರಿಯೇ ಚುನಾವಣೆಗೆ ಸ್ವಲ್ಪ ಮೊದಲು ತಮ್ಮ ಮಾತನ್ನು ಕೇಳುವ ಎಸ್‌ಪಿಗಳನ್ನು, ಜಿಲ್ಲಾಧಿಕಾರಿಗಳನ್ನು ತಮಗೆ ಬೇಕಾದ ಜಿಲ್ಲೆಗೆ ವರ್ಗಾಯಿಸುತ್ತಾರೆ. ಮುಖ್ಯವಾಗಿ ಎಸ್‌ಪಿಯ ಜವಾಬ್ದಾರಿ ಅವರ ಅಧೀನದ ಎಲ್ಲಾ ಠಾಣೆಗಳಿಗೂ ಫರ್ಮಾನು ನೀಡುವುದು. ಇಷ್ಟನೇ ನಂಬರ್ ಕಾರು ಅಥವಾ ಟ್ಯಾಕ್ಸಿ ನಮ್ಮ ಜಿಲ್ಲೆಗೆ ಬಂದರೆ ಅದರ ತಂಟೆಗೆ ಹೋಗಬಾರದು. ಚುನಾವಣೆ ಸಮಯದಲ್ಲಿ ಅವರು ಹಣ ತರಲಿ, ಏನೇ ತರಲಿ ಅದರ ತನಿಖೆ ಮಾಡಬಾರದು.

ಟ್ಯಾಕ್ಸಿಯಲ್ಲಿ ಮೈಸೂರಿಗೆ ಹೋಗುವಾಗ ಆ ಟ್ಯಾಕ್ಸಿ ಡ್ರೈವರ್ ತನ್ನ ಘನಂದಾರಿ ಕೆಲಸ ಕುರಿತು ನನಗೆ ಹೇಳಿದ ನನ್ನ ಹತ್ತಿರ ಹಣ ಕೊಟ್ಟು ಕಳಿಸುತ್ತಾರೆ. ಚುನಾವಣೆ ಸಂದರ್ಭದಲ್ಲಿ ಎಲ್ಲೂ ನನ್ನನ್ನು ತಡೆದು ಕಾರು ತಪಾಸಣೆ ಮಾಡುವ ಕೆಲಸ ನಡೆಯುವುದಿಲ್ಲ. ಅಲ್ಲಿಗೆ ಚುನಾವಣೆಗೆ ಸ್ವಲ್ಪ ಮೊದಲು ವರ್ಗಾವಣೆಯಾಗಿರುವಾಗ ಎಸ್‌ಪಿ ಎಲ್ಲಾ ಠಾಣೆಗಳಿಗೂ ನನ್ನ ಟ್ಯಾಕ್ಸಿ ಹಿಡಿಯದಂತೆ ತಾಕೀತು ಮಾಡಿರುತ್ತಾರೆ. ನಾನು ಆ ಸಂದರ್ಭದಲ್ಲಿ ನಾಲ್ಕಾರು ಸಲ ಜಿಲ್ಲಾ ಕೇಂದ್ರಗಳಿಗೆ ಹಣ ತೆಗೆದುಕೊಂಡು ಹೋಗಿ ತಲುಪಿಸಬೇಕಾಗುತ್ತದೆ ಎಂದು ಹೆಮ್ಮೆಯಿಂದ ಹೇಳಿದೆ.

ಈ ಲೇಖನ ಬರೆದ ಉದ್ದೇಶ ಇಷ್ಟೇ;- ಪ್ರತಿ ಒಂದು ಸಾರ್ವತ್ರಿಕ ಚುನಾವಣೆ ನಡೆದ ಒಂದು ವರ್ಷದ ಒಳಗೆ ಚುನಾವಣಾ ಆಯೋಗ ಒಂದು ಶ್ವೇತ ಪತ್ರ ಹೊರಡಿಸಿ ಅದನ್ನು ವ್ಯಾಪಕವಾಗಿ ಪ್ರಚಾರ ಮಾಡಬೇಕು. ಆ ಶ್ವೇತ ಪತ್ರದಲ್ಲಿ ಆ ವರ್ಷ ನಡೆದ ಚುನಾವಣೆ ಸಂದರ್ಭದಲ್ಲಿ ಆಗಿರುವ ಹಣಕಾಸಿನ ಇತರೆ ಸಾಮಗ್ರಿಗಳ ಸಾಗಾಣಿಕೆಯ ದಂಧೆಯಲ್ಲಿ ಸಿಕ್ಕಿಬಿದ್ದವರು ಯಾರು? ಯಾವ ಅಭ್ಯರ್ಥಿಗಾಗಿ ಆ ಹಣ ಸಾಗಾಣಿಕೆಯಾಯಿತು. ಅವರಿಗೆ ಶಿಕ್ಷೆ ಆಯಿತೇ ಮುಂತಾದ ವಿವರಗಳನ್ನು ಪ್ರಕಟಿಸಬೇಕು. ಮತದಾರರಿಗೆ ಇದು ಗೊತ್ತಾದರೆ ಅವರು ಜಾಗೃತರಾಗುತ್ತಾರೆ. ಚುನಾವಣೆಗೆ ನಿಲ್ಲುವ ಕ್ರಿಮಿನಲ್‌ಗಳ ಸಂಖ್ಯೆ ಇಳಿಮುಖವಾಗುತ್ತದೆ. ಚುನಾವಣಾ ಆಯೋಗ ಇದರ ಜೊತೆ ಜೊತೆಗೇ ಚುನಾವಣಾ ಪದ್ಧತಿಯಲ್ಲಿ ರೂಢಮೂಲ ಬದಲಾವಣೆ ಮಾಡಿದರೆ ಪ್ರಜಾಪ್ರಭುತ್ವ ಬಲಗೊಳ್ಳುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...