Homeಅಂತರಾಷ್ಟ್ರೀಯಮೊದಲ ದಿನವೇ ವಲಸೆ, ಹವಾಮಾನ ಬದಲಾವಣೆ, ಕೋವಿಡ್ ನಿರ್ವಹಣೆಯ ನೀತಿಗಳ ಬದಲಾವಣೆಗೆ ಸಹಿ ಹಾಕಿದ ಬೈಡನ್!

ಮೊದಲ ದಿನವೇ ವಲಸೆ, ಹವಾಮಾನ ಬದಲಾವಣೆ, ಕೋವಿಡ್ ನಿರ್ವಹಣೆಯ ನೀತಿಗಳ ಬದಲಾವಣೆಗೆ ಸಹಿ ಹಾಕಿದ ಬೈಡನ್!

- Advertisement -
- Advertisement -

ಅಮೆರಿಕದ ನೂತನ ಅಧ್ಯಕ್ಷರಾದ ಅಧಿಕಾರ ವಹಿಸಿಕೊಂಡ ಮೊದಲ ದಿನವೇ ಜೋ ಬೈಡನ್, ಟ್ರಂಪ್  ಆಡಳಿತವು ಜಾರಿಗೆ ತಂದಿದ್ದ ಹಲವು ನೀತಿಗಳಲ್ಲಿ ಬದಲಾವಣೆ ತರುವುದಕ್ಕಾಗಿ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿದ್ದಾರೆ. ವಲಸೆ, ಹವಾಮಾನ ಬದಲಾವಣೆ, ಕೋವಿಡ್ ನಿರ್ವಹಣೆ ಮತ್ತು ಜನಾಂಗೀಯ ಸಮಾನಯತೆಯ ವಿಷಯಗಳಲ್ಲಿ ಮಹತ್ವದ ತಿದ್ದುಪಡಿಗೆ ಮುಂದಾಗಿದ್ದಾರೆ.

ಕ್ಯಾಪಿಟಲ್ ಕಚೇರಿಯ ಅಧಿಕಾರ ಹಿಡಿದ ನಂತರ ಎರಡು ಪ್ರಮುಖ ನಿರ್ದೇಶನಗಳು ಮತ್ತು 15 ಕಾರ್ಯನಿರ್ವಾಹಕ ಕ್ರಮಗಳಿಗೆ ಬೈಡನ್ ಸಹಿ ಹಾಕಿದ್ದಾರೆ. ಕಳೆದ ನಾಲ್ಕು ವರ್ಷಗಳಲ್ಲಿ ಟ್ರಂಪ್ ಆಡಳಿತ ಜಾರಿಗೆ ತಂದ ಹಲವು ನೀತಿಗಳಲ್ಲಿ ಬದಲಾವಣೆಗೆ ಬೈಡನ್ ಒತ್ತುನೀಡಿದ್ದಾರೆ. ಇಂದಿನಂತೆ ಆರಂಭಿಸಲು ಬೇರೆ ಸಮಯವಿಲ್ಲ ಎಂದು ಪತ್ರಕರ್ತರ ಪ್ರಶ್ನೆಗಳಿಗೆ ಬೈಡನ್ ಉತ್ತರಿಸಿದ್ದಾರೆ.

ಕೋವಿಡ್ ಸಾಂಕ್ರಾಮಿಕವನ್ನು ಎದುರಿಸುವುದನ್ನು ಟ್ರಂಪ್ ಆಡಳಿತ ತನ್ನ ಮೊದಲ ಆದ್ಯತೆಯನ್ನಾಗಿಸಿಕೊಂಡಿದೆ. ಮುಂದಿನ ನೂರು ದಿನಗಳ ಕಾಲ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸಲು ಬೈಡನ್ ಮನವಿ ಮಾಡಿದ್ದಾರೆ. ಹೊಸ ಫೆಡರಲ್ ಕಚೇರಿಯನ್ನು ರಚಿಸುವುದು ಮತ್ತು ಜಾಗತಿಕ ಆರೋಗ್ಯ ಸುರಕ್ಷತೆ ಮತ್ತು ರಕ್ಷಣೆಗಾಗಿ ಟ್ರಂಪ್ ಆಡಳಿತದಲ್ಲಿ ಮುಚ್ಚಿರುವ ಶ್ವೇತಭವನದ ರಾಷ್ಟ್ರೀಯ ಭದ್ರತಾ ಮಂಡಳಿಯ ನಿರ್ದೇಶನಾಲಯವನ್ನು ಪುನಃಸ್ಥಾಪಿಸಲು ಬೈಡನ್ ಮುಂದಾಗಿದ್ದಾರೆ.

ವಲಸೆ ವಿಚಾರದಲ್ಲಿ ಬೈಡನ್ ಮಹತ್ವದ ಹೆಜ್ಜೆಯಿಟ್ಟಿದ್ದಾರೆ. 2012ರಲ್ಲಿ ಜಾರಿಗೆ ತಂದ ಬಾಲ್ಯದ ವಲಸೆಯ ಹಕ್ಕುಗಳನ್ನು ರಕ್ಷಿಸಲು ಮುಂದಾಗಿದ್ದಾರೆ. ಇದರಿಂದ ಲಕ್ಷಾಂತರ ಜನರನ್ನು ಗಡೀಪಾರು ಮಾಡುವಿಕೆಯಿಂದ ರಕ್ಷಿಸಲಾಗುತ್ತದೆ. ಅಲ್ಲದೆ ಅಂತರ್ಯುದ್ಧ ಮತ್ತು ಎಬೋಲಾ ದಾಳಿಯಿಂದ ಪಲಾಯನ ಮಾಡಿದ ಲೈಬೀರಿಯನ್ನರಿಗೆ ತಾತ್ಕಾಲಿಕ ಕಾನೂನು ಸ್ಥಾನಮಾನವನ್ನು ಜೂನ್ 2022 ರವರೆಗೆ ವಿಸ್ತರಿಸುವುದಾಗಿ ಅವರ ಆದೇಶಗಳಲ್ಲಿ ತಿಳಿಸಲಾಗಿದೆ.

ಇದಲ್ಲದೆ ಹವಾಮಾನ ಬದಲಾವಣೆ ಮತ್ತು ಜನಾಂಗೀಯ ಸಮಾನತೆಗಾಗಿನ ಹಲವು ಆದೇಶಗಳಿಗೆ ಬೈಡನ್ ಸಹಿ ಹಾಕಿದ್ದಾರೆ.


ಇದನ್ನೂ ಓದಿ: ಅಮೆರಿಕದ 46 ನೇ ಅಧ್ಯಕ್ಷರಾಗಿ ಜೋ ಬೈಡೆನ್ – ಯಾರಿವರು? ; ಸಂಕ್ಷಿಪ್ತ ಪರಿಚಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...